Advertisement
ಸುದ್ದಿಗಳು

ಅಡಿಕೆ ಖರೀದಿ ಆರಂಭ : ಅಡಿಕೆ ಬೆಳೆಗಾರರ ಸಂಘದಿಂದ ಕ್ಯಾಂಪ್ಕೋಗೆ ಕೃತಜ್ಞತೆ

Share

ಪುತ್ತೂರು: ಲಾಕ್ಡೌನ್ ಸಂದರ್ಭ ಎಲ್ಲಾ ಅಡಿಕೆ ಖರೀದಿ ಕೇಂದ್ರಗಳೂ ಅನಿವಾರ್ಯವಾಗಿ ಮುಚ್ಚಲ್ಪಟ್ಟಿತ್ತು. ಹೀಗಾಗಿ ದಕ್ಷಿಣ ಕನ್ನಡ ಹಾಗೂ ಕಾಸರಗೋಡು ಸಹಿತ ರಾಜ್ಯದ ಅಡಿಕೆ ಬೆಳೆಗಾರರಿಗೆ ಸಂಕಷ್ಟವಾಗಿತ್ತು. ಇದೀಗ ಕ್ಯಾಂಪ್ಕೋ, ದಕ್ಷಿಣ ಕನ್ನಡ ಜಿಲ್ಲೆ ಹಾಗೂ ಕಾಸರಗೋಡಿನಲ್ಲಿ ಅಡಿಕೆ ಖರೀದಿಗೆ ಮುಂದಾಗಿದೆ. ಈ ಮೂಲಕ ಅಡಿಕೆ ಬೆಳೆಗಾರರಿಗೆ ನೈತಿಕ ಧೈರ್ಯ ತುಂಬಿದೆ. ಇದಕ್ಕಾಗಿ ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘವು ಕ್ಯಾಂಪ್ಕೋಗೆ ಕೃತಜ್ಞತೆ ಸಲ್ಲಿಸುತ್ತದೆ ಎಂದು ಸಂಘದ ಅಧ್ಯಕ್ಷ ಅಶೋಕ್ ಕಿನಿಲ  ತಿಳಿಸಿದ್ದಾರೆ.

Advertisement

ಲಾಕ್ಡೌನ್ ಸಂದರ್ಭ ಎಲ್ಲಿಯೂ ಅಡಿಕೆ ಖರೀದಿ ನಡೆಸಲು ಸಾಧ್ಯವಾಗಿಲ್ಲ. ದಕ್ಷಿಣ ಕನ್ನಡ , ಕಾಸರಗೋಡು, ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಅಡಿಕೆಯೇ ಪ್ರಮುಖ ಬೆಳೆಯಾಗಿದೆ. ಅಡಿಕೆ ಬೆಳೆಗಾರರು ಅಡಿಕೆಯನ್ನೇ ನಂಬಿ ಬದುಕು ಸಾಗಿಸುತ್ತಿದ್ದಾರೆ. ಇವರಿಗೆ ಅಡಿಕೆ ಮಾರಾಟ ಮಾಡದೇ ಯಾವುದೇ ವ್ಯವಹಾರ ಮಾಡಲು ಕಷ್ಟದ ಸನ್ನಿವೇಶ ಇತ್ತು. ಇದರ ಜೊತೆಗೆ ಉತ್ತರ ಭಾರತದಲ್ಲೂ ಅಡಿಕೆ ಮಾರಾಟ ಆಗದ ಸ್ಥಿತಿ ಕಂಡುಬಂದಿತ್ತು. ಬೇಡಿಕೆ ಇದ್ದರೂ ಪೂರೈಕೆ ಕಷ್ಟದ ಸ್ಥಿತಿ ಇದೆ.

ಮುಂದಿನ ದಿನಗಳಲ್ಲಿ ಇತರ ಎಲ್ಲಾ ಕೃಷಿ ಉತ್ಪನ್ನ ಖರೀದಿಗೆ ಅನುಕೂಲ ವಾತಾವರಣವನ್ನು ಆಡಳಿತ ಹಾಗೂ ಸಹಕಾರ ಸಂಘಗಳಿಂದ ಸೃಷ್ಟಿಯಾಗುವಂತಾಗಬೇಕು ಹಾಗೂ ಗ್ರಾಮೀಣ ಭಾಗದಲ್ಲೂ ಅಡಿಕೆ ಖರೀದಿ ಕೇಂದ್ರದ ಕ್ಯಾಂಪ್ಕೋ ಶಾಖೆಗಳಲ್ಲಿ ಕನಿಷ್ಟ ಒಂದು ದಿನದ ವ್ಯವಸ್ಥೆಯಾಗಬೇಕು ಎಂದು ಸಂಘದ ಅಧ್ಯಕ್ಷ ಅಶೋಕ್ ಕಿನಿಲ ಹಾಗೂ ಕಾರ್ಯದರ್ಶಿ ಮಹೇಶ್ ಪುಚ್ಚಪ್ಪಾಡಿ ಒತ್ತಾಯಿಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ವಿದ್ಯುತ್ ದರ ಶಾಕ್..! ಸಣ್ಣ ಕೈಗಾರಿಕೆಗಳಿಗೆ ಭಾರೀ ಹೊರೆ – ಉಮಾ ರೆಡ್ಡಿ ಎಚ್ಚರಿಕೆ

ವಿದ್ಯುತ್ ದರ ಏರಿಕೆ ಮತ್ತು ಹಿಂಬದಿ ಬಿಲ್ಲಿಂಗ್ ಕ್ರಮದಿಂದ ಸಣ್ಣ ಮತ್ತು ಮಧ್ಯಮ…

4 hours ago

ಮುಳಬಾಗಿಲಿನಲ್ಲಿ ಹೋಟೆಲ್ ಮೇಲೆ ದಾಳಿ : 30 ಲೀಟರ್ ಹಳೆಯ ತುಪ್ಪ ಜಪ್ತಿ, ದಂಡ

ಮುಳಬಾಗಿಲಿನ ಹೋಟೆಲ್ ಮೇಲೆ ದಾಳಿ ನಡೆಸಿ 30 ಲೀಟರ್ ಅವಧಿ ಮೀರಿದ ತುಪ್ಪ…

4 hours ago

ರೈತರಿಗೆ ಗುಡ್ ನ್ಯೂಸ್..! ತೊಗರಿ ಖರೀದಿ ಅವಧಿ ಮೇ 15ರವರೆಗೆ ವಿಸ್ತರಣೆ

ತೊಗರಿ ಬೆಳೆಗಾರರ ಹಿತಕ್ಕಾಗಿ ಖರೀದಿ ಅವಧಿಯನ್ನು ಮೇ 15ರವರೆಗೆ ವಿಸ್ತರಿಸಲಾಗಿದೆ. ಇದರಿಂದ ರೈತರಿಗೆ…

4 hours ago

ವಿಜಯಪುರದಲ್ಲಿ ತಾಪಮಾನ ಹೆಚ್ಚಳ : ಜಿಲ್ಲಾಸ್ಪತ್ರೆಯಲ್ಲಿ 10 ಬೆಡ್ AC ವಾರ್ಡ್ ಸಿದ್ಧ

ವಿಜಯಪುರದಲ್ಲಿ ಬಿಸಿಲಿನ ತೀವ್ರತೆ ಹೆಚ್ಚಳ ಹಿನ್ನೆಲೆ ಜಿಲ್ಲಾಸ್ಪತ್ರೆಯಲ್ಲಿ 10 ಬೆಡ್ ವಿಶೇಷ ವಾರ್ಡ್…

4 hours ago

ಹೊಸರುಚಿ | ಗುಜ್ಜೆ ಮಂಚೂರಿ – ಕರಾವಳಿಯ ಸಾಂಪ್ರದಾಯಿಕ ರುಚಿಗೆ ಚೈನೀಸ್ ಟ್ವಿಸ್ಟ್

ಗುಜ್ಜೆ ಬಳಸಿ ತಯಾರಿಸುವ ಮಂಚೂರಿ ರುಚಿಕರ ಫ್ಯೂಷನ್ ತಿನಿಸಾಗಿದೆ. ಮನೆಯಲ್ಲಿ ಸುಲಭವಾಗಿ ಮಾಡುವ…

14 hours ago

ಕಾವೇರಿ ತೀರ ಅಪಾಯ ಎಚ್ಚರಿಕೆ: ಬಲಮುರಿ-ಎಡಮುರಿ ಪ್ರವಾಸಕ್ಕೆ ತಾತ್ಕಾಲಿಕ ನಿಷೇಧ

ಬಲಮುರಿ, ಎಡಮುರಿ ಕಾವೇರಿ ತೀರಗಳಿಗೆ ಪ್ರವಾಸಿಗರ ಪ್ರವೇಶವನ್ನು ತಾತ್ಕಾಲಿಕವಾಗಿ ನಿಷೇಧಿಸಲಾಗಿದೆ. ಮುಳುಗು ಪ್ರಕರಣಗಳು…

1 day ago