ಪುತ್ತೂರು: ಲಾಕ್ಡೌನ್ ಸಂದರ್ಭ ಎಲ್ಲಾ ಅಡಿಕೆ ಖರೀದಿ ಕೇಂದ್ರಗಳೂ ಅನಿವಾರ್ಯವಾಗಿ ಮುಚ್ಚಲ್ಪಟ್ಟಿತ್ತು. ಹೀಗಾಗಿ ದಕ್ಷಿಣ ಕನ್ನಡ ಹಾಗೂ ಕಾಸರಗೋಡು ಸಹಿತ ರಾಜ್ಯದ ಅಡಿಕೆ ಬೆಳೆಗಾರರಿಗೆ ಸಂಕಷ್ಟವಾಗಿತ್ತು. ಇದೀಗ ಕ್ಯಾಂಪ್ಕೋ, ದಕ್ಷಿಣ ಕನ್ನಡ ಜಿಲ್ಲೆ ಹಾಗೂ ಕಾಸರಗೋಡಿನಲ್ಲಿ ಅಡಿಕೆ ಖರೀದಿಗೆ ಮುಂದಾಗಿದೆ. ಈ ಮೂಲಕ ಅಡಿಕೆ ಬೆಳೆಗಾರರಿಗೆ ನೈತಿಕ ಧೈರ್ಯ ತುಂಬಿದೆ. ಇದಕ್ಕಾಗಿ ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘವು ಕ್ಯಾಂಪ್ಕೋಗೆ ಕೃತಜ್ಞತೆ ಸಲ್ಲಿಸುತ್ತದೆ ಎಂದು ಸಂಘದ ಅಧ್ಯಕ್ಷ ಅಶೋಕ್ ಕಿನಿಲ ತಿಳಿಸಿದ್ದಾರೆ.
ಲಾಕ್ಡೌನ್ ಸಂದರ್ಭ ಎಲ್ಲಿಯೂ ಅಡಿಕೆ ಖರೀದಿ ನಡೆಸಲು ಸಾಧ್ಯವಾಗಿಲ್ಲ. ದಕ್ಷಿಣ ಕನ್ನಡ , ಕಾಸರಗೋಡು, ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಅಡಿಕೆಯೇ ಪ್ರಮುಖ ಬೆಳೆಯಾಗಿದೆ. ಅಡಿಕೆ ಬೆಳೆಗಾರರು ಅಡಿಕೆಯನ್ನೇ ನಂಬಿ ಬದುಕು ಸಾಗಿಸುತ್ತಿದ್ದಾರೆ. ಇವರಿಗೆ ಅಡಿಕೆ ಮಾರಾಟ ಮಾಡದೇ ಯಾವುದೇ ವ್ಯವಹಾರ ಮಾಡಲು ಕಷ್ಟದ ಸನ್ನಿವೇಶ ಇತ್ತು. ಇದರ ಜೊತೆಗೆ ಉತ್ತರ ಭಾರತದಲ್ಲೂ ಅಡಿಕೆ ಮಾರಾಟ ಆಗದ ಸ್ಥಿತಿ ಕಂಡುಬಂದಿತ್ತು. ಬೇಡಿಕೆ ಇದ್ದರೂ ಪೂರೈಕೆ ಕಷ್ಟದ ಸ್ಥಿತಿ ಇದೆ.
ಮುಂದಿನ ದಿನಗಳಲ್ಲಿ ಇತರ ಎಲ್ಲಾ ಕೃಷಿ ಉತ್ಪನ್ನ ಖರೀದಿಗೆ ಅನುಕೂಲ ವಾತಾವರಣವನ್ನು ಆಡಳಿತ ಹಾಗೂ ಸಹಕಾರ ಸಂಘಗಳಿಂದ ಸೃಷ್ಟಿಯಾಗುವಂತಾಗಬೇಕು ಹಾಗೂ ಗ್ರಾಮೀಣ ಭಾಗದಲ್ಲೂ ಅಡಿಕೆ ಖರೀದಿ ಕೇಂದ್ರದ ಕ್ಯಾಂಪ್ಕೋ ಶಾಖೆಗಳಲ್ಲಿ ಕನಿಷ್ಟ ಒಂದು ದಿನದ ವ್ಯವಸ್ಥೆಯಾಗಬೇಕು ಎಂದು ಸಂಘದ ಅಧ್ಯಕ್ಷ ಅಶೋಕ್ ಕಿನಿಲ ಹಾಗೂ ಕಾರ್ಯದರ್ಶಿ ಮಹೇಶ್ ಪುಚ್ಚಪ್ಪಾಡಿ ಒತ್ತಾಯಿಸಿದ್ದಾರೆ.
ರಾಜ್ಯಕ್ಕೆ ಮುಂಗಾರು ಪ್ರವೇಶಿಸಿದರೂ ಅದರ ಬಲ ಇನ್ನೂ ದುರ್ಬಲವಾಗಿದೆ. ಕರಾವಳಿಯಲ್ಲಿ ಜೂನ್ 8ರಿಂದ…
ನಾರ್ವೆ ಚೆಸ್ 2026 ಟೂರ್ನಿಯನ್ನು ಗೆದ್ದ ಮೊದಲ ಭಾರತೀಯ ಆಟಗಾರ ಎಂಬ ಇತಿಹಾಸವನ್ನು…
ಆಸ್ಟ್ರೇಲಿಯಾದಲ್ಲಿ ವರೋವಾ ಮೈಟ್ ಹಾವಳಿಯಿಂದ ಜೇನುನೊಣಗಳ ಸಂಖ್ಯೆ ತೀವ್ರವಾಗಿ ಕುಸಿಯುತ್ತಿದ್ದು, ಆಹಾರ ಬೆಳೆಗಳ…
ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಜೂನ್ 6ರಂದು ಕಾಸರಗೋಡು ಜಿಲ್ಲೆಯ ಎಲ್ಲಾ ಶಿಕ್ಷಣ…
ಮಲೆನಾಡಿನ ಕೃಷಿ ಸಮಸ್ಯೆಗಳನ್ನು ಪ್ರವಾಸೋದ್ಯಮದ ಅವಕಾಶಗಳಾಗಿ ಪರಿವರ್ತಿಸುವ ಹೊಸ ಪರಿಕಲ್ಪನೆಯನ್ನು ಪ್ರಬಂಧ ಅಂಬುತೀರ್ಥ…
ಮಹಾರಾಷ್ಟ್ರ FDA ದಾಳಿಯಲ್ಲಿ 14 ಮಂದಿ ಬಂಧನವಾಗಿದ್ದು, ₹32 ಲಕ್ಷ ಮೌಲ್ಯದ ನಿಷೇಧಿತ…