ಸುದ್ದಿಗಳು

ಅಡಿಕೆ ಧಾರಣೆ ಏರಿಕೆಯೂ… ಕಳ್ಳರ ಭಯವೂ….!

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಸುಳ್ಯ: ಅಡಿಕೆ ಧಾರಣೆ ಏರಿಕೆಯ ಹಾದಿಯಲ್ಲಿದೆ. ದಿನದಿಂದ ದಿನಕ್ಕೆ ಅಡಿಕೆ ಧಾರಣೆ ಉತ್ತಮವಾಗಿದೆ. ಕಳೆದ ವರ್ಷದ ಕೊಳೆರೋಗದ ಪರಿಣಾಮ ಹಾಗೂ ಮಾರುಕಟ್ಟೆಯಲ್ಲಿ  ಅಡಿಕೆಯ ಕೊರತೆಯ ಕಾರಣದಿಂದ ಈಗ ಧಾರಣೆ ಏರುಹಾದಿಯಲ್ಲಿದೆ. ಇದರ ಜೊತೆಗೇ ಈಗ ಕಳ್ಳರ ಭಯವೂ ಆರಂಭವಾಗಿದೆ. ಹೀಗಾಗಿ ಗ್ರಾಮೀಣ ಭಾಗಗಳಲ್ಲಿ  ರಾತ್ರಿ ವೇಳೆ ಪೊಲೀಸ್ ಬೀಟ್ ವ್ಯವಸ್ಥೆ ಬಲಗೊಳ್ಳಬೇಕು ಎಂಬ ಬೇಡಿಕೆ ವ್ಯಕ್ತವಾಗುತ್ತಿದೆ.

Advertisement
Advertisement

ಅಡಿಕೆ ಸೇರಿದಂತೆ ಯಾವುದೇ ಕೃಷಿ ವಸ್ತುಗಳ ಧಾರಣೆ ಏರಿದಂತೆ ಆ ವಸ್ತುಗಳ ಕಳ್ಳತನವೂ ಹೆಚ್ಚಾಗುತ್ತದೆ. ಕಳೆದ ಬಾರಿಯೂ ಧಾರಣೆ ಏರಿದ ನಂತರ ಕಳ್ಳರ ಭಯವೂ ಹೆಚ್ಚಾಗಿತ್ತು. ವಿಟ್ಲ, ಪುತ್ತೂರು ಪ್ರದೇಶದಲ್ಲಿ  ಅಡಿಕೆ ಗೋಡೌನ್ ಗಳಿಂದ ಕಳ್ಳತನವಾದ ವರದಿಯಾಗಿದೆ. ಕಳ್ಳರೂ ಸೆರೆಯಾಗಿದ್ದಾರೆ. ಈ ಬಾರಿಯೂ ಕಳ್ಳರ ಭಯ ಶುರುವಾಗಿದೆ. ರಾತ್ರಿ ವೇಳೆ ಅನುಮಾಸ್ಪದವಾಗಿ ಓಮ್ನಿ ಕಾರುಗಳು, ಪಿಕ್ ಅಪ್ ಗಳು ತಿರುಗಾಡಲು ಶುರುವಾಗಿದೆ ಎಂಬ ವದಂತಿ ಇದೆ. ಹೀಗಾಗಿ ಬೆಳೆಗಾರರು ಹಾಗೂ ವ್ಯಾಪಾರಿಗಳ ಹಿತದೃಷ್ಠಿಯಿಂದ  ಅಲ್ಲಲ್ಲಿ ಸಿಸಿ ಕ್ಯಾಮಾರಗಳು ಸುಸ್ಥಿತಿಯಲ್ಲಿಡುವಂತೆ ಮಾಡುವುದು ಸೇರಿದಂತೆ ಕೃಷಿಕರು, ವ್ಯಾಪಾರಿಗಳು ಸಂಶಯ ಕಂಡುಬಂದರೆ ತಕ್ಷಣವೇ ಎಚ್ಚೆತ್ತು ಸ್ಥಳೀಯ ತಂಡ ಮಾಡಿ ಪೊಲೀಸರಿಗೆ ಮಾಹಿತಿ ನೀಡುವ ಕೆಲಸ ಆಗಬೇಕಾಗಿದೆ. ಇದರ ಜೊತೆಗೆ ಪೊಲೀಸ್ ಬೀಟ್ ಗಳು ಬಲಗೊಳ್ಳಬೇಕು ಹಾಗೂ ರಾತ್ರಿ ವೇಳೆ ತಪಾಸಣೆ ಆರಂಭವಾಗಬೇಕು ಎಂದು ಸಾರ್ವಜನಿಕರು ಒತ್ತಾಯ ಮಾಡಿದ್ದಾರೆ. ಈಚೆಗೆ ಸುಳ್ಯ ತಾಲೂಕಿನ ಪಂಜದಲ್ಲಿ ಅನುಮಾಸ್ಪದವಾಗಿ ತಿರುಗಾಡುತ್ತಿದ್ದ ಕಾರೊಂದರ ಬಗ್ಗೆ ಸ್ಥಳಿಯರು ಪೊಲೀಸರಿಗೆ ಮಾಹಿತಿ ನೀಡಿದ್ದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ರಾಜ್ಯದ ವಿವಿಧೆಡೆ ಮಳೆ –  ಬಹುತೇಕ ಜಲಾಶಯಗಳು ಭರ್ತಿ

ರಾಜ್ಯದ ವಿವಿಧೆಡೆ ಮಳೆಯಾಗುತ್ತಿದ್ದು ನದಿಗಳು ತುಂಬಿ ಹರಿಯುತ್ತಿವೆ. ಬಹುತೇಕ ಜಲಾಶಯಗಳು ಭರ್ತಿಯಾಗಿವೆ.  ಕೊಡಗಿನ…

2 hours ago

ನಿರಂತರ 170 ಗಂಟೆಗಳ ಕಾಲ ಭರತನಾಟ್ಯ ಪ್ರದರ್ಶನ | ವಿಶ್ವ ದಾಖಲೆ ಸಾಧನೆ ಮಾಡಿದ ಮಂಗಳೂರಿನ ರೆಮೋನಾ ಪಿರೇರಾ

ನಿರಂತರ 170 ಗಂಟೆಗಳ ಕಾಲ ಭರತನಾಟ್ಯ ಪ್ರದರ್ಶನ ನೀಡಿದ ಮಂಗಳೂರಿನ ರೆಮೋನಾ ಪಿರೇರಾ,…

2 hours ago

ಕಳೆದ 11 ವರ್ಷಗಳಲ್ಲಿ ಕೃಷಿ ಕ್ಷೇತ್ರದಲ್ಲಿ ಅಗಾಧ ಬೆಳವಣಿಗೆ | ಲೋಕಸಭೆಯಲ್ಲಿ ಕೇಂದ್ರ ಕೃಷಿ  ಸಚಿವರ  ಹೇಳಿಕೆ

ಕಳೆದ 11 ವರ್ಷಗಳಲ್ಲಿ ಕೃಷಿ ಕ್ಷೇತ್ರದಲ್ಲಿ ಅಗಾಧ ಬೆಳವಣಿಗೆಯಾಗಿದ್ದು, ಕೃಷಿಕರ ಹಿತದೃಷ್ಟಿಯಿಂದ ಕೇಂದ್ರ…

2 hours ago

ಬಿಎಸ್ ಎನ್ ಎಲ್  ಪರಿಶೀಲನಾ ಸಭೆ | ʻಬಿಎಸ್ಎನ್ಎಲ್‌ʼ ಸೇವೆಗಳ ಸುಧಾರಣೆಗೆ ಕ್ರಮ

ಕೇಂದ್ರ ಸಂವಹನ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ, ದೆಹಲಿಯಲ್ಲಿ ʻಭಾರತ್ ಸಂಚಾರ್ ನಿಗಮ್ ಲಿಮಿಟೆಡ್ʼನ-…

2 hours ago

ನಾಡಿನೆಲ್ಲೆಡೆ ನಾಗರಪಂಚಮಿ ಸಂಭ್ರಮ | ಸುಬ್ರಹ್ಮಣ್ಯ ಕ್ಷೇತ್ರಗಳಲ್ಲಿ ವಿಶೇಷ ಪೂಜೆ

ರಾಜ್ಯದೆಲ್ಲೆಡೆ ಇಂದು ನಾಗರಪಂಚಮಿಯನ್ನು ಸಡಗರ ಸಂಭ್ರಮದಿಂದ ಆಚರಿಸಲಾಯಿತು. ದಕ್ಷಿಣ ಕನ್ನಡ ಜಿಲ್ಲೆ ಸೇರಿದಂತೆ…

2 hours ago

ಕೊಪ್ಪಳ ಜಿಲ್ಲೆಯಲ್ಲಿ 3 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆ | ರಸಗೊಬ್ಬರಕ್ಕೆ ಆತಂಕ ಪಡುವ ಅಗತ್ಯವಿಲ್ಲ

ಕೊಪ್ಪಳ ಜಿಲ್ಲೆಯಲ್ಲಿ ಜುಲೈ ಅಂತ್ಯದವರಿಗೆ 2 ಲಕ್ಷ ಹೆಕ್ಟೇರ್ ಪ್ರದೇಶದ ಬಿತ್ತನೆಯ ಗುರಿ…

3 hours ago