ಸುಳ್ಯ: ಅಡಿಕೆ ಧಾರಣೆ ಏರಿಕೆಯ ಹಾದಿಯಲ್ಲಿದೆ. ದಿನದಿಂದ ದಿನಕ್ಕೆ ಅಡಿಕೆ ಧಾರಣೆ ಉತ್ತಮವಾಗಿದೆ. ಕಳೆದ ವರ್ಷದ ಕೊಳೆರೋಗದ ಪರಿಣಾಮ ಹಾಗೂ ಮಾರುಕಟ್ಟೆಯಲ್ಲಿ ಅಡಿಕೆಯ ಕೊರತೆಯ ಕಾರಣದಿಂದ ಈಗ ಧಾರಣೆ ಏರುಹಾದಿಯಲ್ಲಿದೆ. ಇದರ ಜೊತೆಗೇ ಈಗ ಕಳ್ಳರ ಭಯವೂ ಆರಂಭವಾಗಿದೆ. ಹೀಗಾಗಿ ಗ್ರಾಮೀಣ ಭಾಗಗಳಲ್ಲಿ ರಾತ್ರಿ ವೇಳೆ ಪೊಲೀಸ್ ಬೀಟ್ ವ್ಯವಸ್ಥೆ ಬಲಗೊಳ್ಳಬೇಕು ಎಂಬ ಬೇಡಿಕೆ ವ್ಯಕ್ತವಾಗುತ್ತಿದೆ.
ಅಡಿಕೆ ಸೇರಿದಂತೆ ಯಾವುದೇ ಕೃಷಿ ವಸ್ತುಗಳ ಧಾರಣೆ ಏರಿದಂತೆ ಆ ವಸ್ತುಗಳ ಕಳ್ಳತನವೂ ಹೆಚ್ಚಾಗುತ್ತದೆ. ಕಳೆದ ಬಾರಿಯೂ ಧಾರಣೆ ಏರಿದ ನಂತರ ಕಳ್ಳರ ಭಯವೂ ಹೆಚ್ಚಾಗಿತ್ತು. ವಿಟ್ಲ, ಪುತ್ತೂರು ಪ್ರದೇಶದಲ್ಲಿ ಅಡಿಕೆ ಗೋಡೌನ್ ಗಳಿಂದ ಕಳ್ಳತನವಾದ ವರದಿಯಾಗಿದೆ. ಕಳ್ಳರೂ ಸೆರೆಯಾಗಿದ್ದಾರೆ. ಈ ಬಾರಿಯೂ ಕಳ್ಳರ ಭಯ ಶುರುವಾಗಿದೆ. ರಾತ್ರಿ ವೇಳೆ ಅನುಮಾಸ್ಪದವಾಗಿ ಓಮ್ನಿ ಕಾರುಗಳು, ಪಿಕ್ ಅಪ್ ಗಳು ತಿರುಗಾಡಲು ಶುರುವಾಗಿದೆ ಎಂಬ ವದಂತಿ ಇದೆ. ಹೀಗಾಗಿ ಬೆಳೆಗಾರರು ಹಾಗೂ ವ್ಯಾಪಾರಿಗಳ ಹಿತದೃಷ್ಠಿಯಿಂದ ಅಲ್ಲಲ್ಲಿ ಸಿಸಿ ಕ್ಯಾಮಾರಗಳು ಸುಸ್ಥಿತಿಯಲ್ಲಿಡುವಂತೆ ಮಾಡುವುದು ಸೇರಿದಂತೆ ಕೃಷಿಕರು, ವ್ಯಾಪಾರಿಗಳು ಸಂಶಯ ಕಂಡುಬಂದರೆ ತಕ್ಷಣವೇ ಎಚ್ಚೆತ್ತು ಸ್ಥಳೀಯ ತಂಡ ಮಾಡಿ ಪೊಲೀಸರಿಗೆ ಮಾಹಿತಿ ನೀಡುವ ಕೆಲಸ ಆಗಬೇಕಾಗಿದೆ. ಇದರ ಜೊತೆಗೆ ಪೊಲೀಸ್ ಬೀಟ್ ಗಳು ಬಲಗೊಳ್ಳಬೇಕು ಹಾಗೂ ರಾತ್ರಿ ವೇಳೆ ತಪಾಸಣೆ ಆರಂಭವಾಗಬೇಕು ಎಂದು ಸಾರ್ವಜನಿಕರು ಒತ್ತಾಯ ಮಾಡಿದ್ದಾರೆ. ಈಚೆಗೆ ಸುಳ್ಯ ತಾಲೂಕಿನ ಪಂಜದಲ್ಲಿ ಅನುಮಾಸ್ಪದವಾಗಿ ತಿರುಗಾಡುತ್ತಿದ್ದ ಕಾರೊಂದರ ಬಗ್ಗೆ ಸ್ಥಳಿಯರು ಪೊಲೀಸರಿಗೆ ಮಾಹಿತಿ ನೀಡಿದ್ದರು.
ಶಾಲಾ–ಕಾಲೇಜುಗಳ ಬಳಿ ಧೂಮಪಾನ ವಸ್ತು ಮಾರಾಟ ಮಾಡಿದರೆ ಲೈಸನ್ಸ್ ರದ್ದು ಮಾಡಲು ಪೊಲೀಸ್…
ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮ ಅಗತ್ಯವಾಗಿದೆ. ನೀರು ಹೆಚ್ಚು…
ರೈತರಿಗೆ ನ್ಯಾಯ ಕೊಡಲು MSPಗೆ ವೈಜ್ಞಾನಿಕ ಆಧಾರ ಅಗತ್ಯ ಎಂದು ಕೋಡಿಹಳ್ಳಿ ಚಂದ್ರಶೇಖರ್…
ವಿಟ್ಲದಲ್ಲಿ ₹12 ಕೋಟಿ ವೆಚ್ಚದ ಕ್ಯಾಂಪ್ಕೊ ನೂತನ ಕಟ್ಟಡಕ್ಕೆ ಮಾರ್ಚ್ 27ರಂದು ಶಂಕುಸ್ಥಾಪನೆ…
ದೇಶದ 651 ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ಹೆಚ್ಚು ದುರ್ಬಲವೆಂದು…
26.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ರಾಜ್ಯದ ವಿವಿಧ…