ಸುಳ್ಯ: ಅಡಿಕೆ ಧಾರಣೆ ಏರಿಕೆಯ ಹಾದಿಯಲ್ಲಿದೆ. ದಿನದಿಂದ ದಿನಕ್ಕೆ ಅಡಿಕೆ ಧಾರಣೆ ಉತ್ತಮವಾಗಿದೆ. ಕಳೆದ ವರ್ಷದ ಕೊಳೆರೋಗದ ಪರಿಣಾಮ ಹಾಗೂ ಮಾರುಕಟ್ಟೆಯಲ್ಲಿ ಅಡಿಕೆಯ ಕೊರತೆಯ ಕಾರಣದಿಂದ ಈಗ ಧಾರಣೆ ಏರುಹಾದಿಯಲ್ಲಿದೆ. ಇದರ ಜೊತೆಗೇ ಈಗ ಕಳ್ಳರ ಭಯವೂ ಆರಂಭವಾಗಿದೆ. ಹೀಗಾಗಿ ಗ್ರಾಮೀಣ ಭಾಗಗಳಲ್ಲಿ ರಾತ್ರಿ ವೇಳೆ ಪೊಲೀಸ್ ಬೀಟ್ ವ್ಯವಸ್ಥೆ ಬಲಗೊಳ್ಳಬೇಕು ಎಂಬ ಬೇಡಿಕೆ ವ್ಯಕ್ತವಾಗುತ್ತಿದೆ.
ಅಡಿಕೆ ಸೇರಿದಂತೆ ಯಾವುದೇ ಕೃಷಿ ವಸ್ತುಗಳ ಧಾರಣೆ ಏರಿದಂತೆ ಆ ವಸ್ತುಗಳ ಕಳ್ಳತನವೂ ಹೆಚ್ಚಾಗುತ್ತದೆ. ಕಳೆದ ಬಾರಿಯೂ ಧಾರಣೆ ಏರಿದ ನಂತರ ಕಳ್ಳರ ಭಯವೂ ಹೆಚ್ಚಾಗಿತ್ತು. ವಿಟ್ಲ, ಪುತ್ತೂರು ಪ್ರದೇಶದಲ್ಲಿ ಅಡಿಕೆ ಗೋಡೌನ್ ಗಳಿಂದ ಕಳ್ಳತನವಾದ ವರದಿಯಾಗಿದೆ. ಕಳ್ಳರೂ ಸೆರೆಯಾಗಿದ್ದಾರೆ. ಈ ಬಾರಿಯೂ ಕಳ್ಳರ ಭಯ ಶುರುವಾಗಿದೆ. ರಾತ್ರಿ ವೇಳೆ ಅನುಮಾಸ್ಪದವಾಗಿ ಓಮ್ನಿ ಕಾರುಗಳು, ಪಿಕ್ ಅಪ್ ಗಳು ತಿರುಗಾಡಲು ಶುರುವಾಗಿದೆ ಎಂಬ ವದಂತಿ ಇದೆ. ಹೀಗಾಗಿ ಬೆಳೆಗಾರರು ಹಾಗೂ ವ್ಯಾಪಾರಿಗಳ ಹಿತದೃಷ್ಠಿಯಿಂದ ಅಲ್ಲಲ್ಲಿ ಸಿಸಿ ಕ್ಯಾಮಾರಗಳು ಸುಸ್ಥಿತಿಯಲ್ಲಿಡುವಂತೆ ಮಾಡುವುದು ಸೇರಿದಂತೆ ಕೃಷಿಕರು, ವ್ಯಾಪಾರಿಗಳು ಸಂಶಯ ಕಂಡುಬಂದರೆ ತಕ್ಷಣವೇ ಎಚ್ಚೆತ್ತು ಸ್ಥಳೀಯ ತಂಡ ಮಾಡಿ ಪೊಲೀಸರಿಗೆ ಮಾಹಿತಿ ನೀಡುವ ಕೆಲಸ ಆಗಬೇಕಾಗಿದೆ. ಇದರ ಜೊತೆಗೆ ಪೊಲೀಸ್ ಬೀಟ್ ಗಳು ಬಲಗೊಳ್ಳಬೇಕು ಹಾಗೂ ರಾತ್ರಿ ವೇಳೆ ತಪಾಸಣೆ ಆರಂಭವಾಗಬೇಕು ಎಂದು ಸಾರ್ವಜನಿಕರು ಒತ್ತಾಯ ಮಾಡಿದ್ದಾರೆ. ಈಚೆಗೆ ಸುಳ್ಯ ತಾಲೂಕಿನ ಪಂಜದಲ್ಲಿ ಅನುಮಾಸ್ಪದವಾಗಿ ತಿರುಗಾಡುತ್ತಿದ್ದ ಕಾರೊಂದರ ಬಗ್ಗೆ ಸ್ಥಳಿಯರು ಪೊಲೀಸರಿಗೆ ಮಾಹಿತಿ ನೀಡಿದ್ದರು.
2050ರ ವೇಳೆಗೆ ಮಳೆಯ ತೀವ್ರತೆ ಮತ್ತು ನಗರೀಕರಣದ ಪರಿಣಾಮವಾಗಿ ಭಾರತದ ಹಲವು ಗುಡ್ಡ…
ಅಕಾಲದ ಹಸಿವು ಮತ್ತು ಅಸಮಯದ ನಿದ್ದೆ ದೇಹದ ಯಂತ್ರದಲ್ಲಿ ಸಮಸ್ಯೆಯ ಸಂಕೇತ ಎಂದು…
ಸುಳ್ಯ ತಾಲೂಕಿನ ಮಲೆನಾಡು ಭಾಗದಲ್ಲಿ ಎರಡು ದಿನಗಳ ವಿರಾಮದ ಬಳಿಕ ಮತ್ತೆ ಭಾರೀ…
ದೇಶದ ಅಡಿಕೆ ಉತ್ಪಾದನೆ ಹಾಗೂ ಬೆಳೆ ವಿಸ್ತೀರ್ಣದಲ್ಲಿ ಕರ್ನಾಟಕವೇ ಅಗ್ರಸ್ಥಾನದಲ್ಲಿದೆ ಎಂದು ಕೇಂದ್ರ…
ವಿದೇಶದಿಂದ ಕಳಪೆ ಅಡಿಕೆ ಆಮದು ನಿಯಂತ್ರಿಸಿ ದೇಶೀಯ ಅಡಿಕೆ ಬೆಳೆಗಾರರನ್ನು ರಕ್ಷಿಸುವಂತೆ ಸಂಸದ…
ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್ 12ರವರೆಗೆ ಬಿಟ್ಟುಬಿಟ್ಟು ಮಳೆಯಾಗುವ ಸಾಧ್ಯತೆ ಇದೆ. ಜಪಾನ್ ಸಮೀಪದ…