Advertisement
ಸುದ್ದಿಗಳು

ಅಡಿಕೆ ಧಾರಣೆ ಏರಿಕೆಯೂ… ಕಳ್ಳರ ಭಯವೂ….!

Share

ಸುಳ್ಯ: ಅಡಿಕೆ ಧಾರಣೆ ಏರಿಕೆಯ ಹಾದಿಯಲ್ಲಿದೆ. ದಿನದಿಂದ ದಿನಕ್ಕೆ ಅಡಿಕೆ ಧಾರಣೆ ಉತ್ತಮವಾಗಿದೆ. ಕಳೆದ ವರ್ಷದ ಕೊಳೆರೋಗದ ಪರಿಣಾಮ ಹಾಗೂ ಮಾರುಕಟ್ಟೆಯಲ್ಲಿ  ಅಡಿಕೆಯ ಕೊರತೆಯ ಕಾರಣದಿಂದ ಈಗ ಧಾರಣೆ ಏರುಹಾದಿಯಲ್ಲಿದೆ. ಇದರ ಜೊತೆಗೇ ಈಗ ಕಳ್ಳರ ಭಯವೂ ಆರಂಭವಾಗಿದೆ. ಹೀಗಾಗಿ ಗ್ರಾಮೀಣ ಭಾಗಗಳಲ್ಲಿ  ರಾತ್ರಿ ವೇಳೆ ಪೊಲೀಸ್ ಬೀಟ್ ವ್ಯವಸ್ಥೆ ಬಲಗೊಳ್ಳಬೇಕು ಎಂಬ ಬೇಡಿಕೆ ವ್ಯಕ್ತವಾಗುತ್ತಿದೆ.

ಅಡಿಕೆ ಸೇರಿದಂತೆ ಯಾವುದೇ ಕೃಷಿ ವಸ್ತುಗಳ ಧಾರಣೆ ಏರಿದಂತೆ ಆ ವಸ್ತುಗಳ ಕಳ್ಳತನವೂ ಹೆಚ್ಚಾಗುತ್ತದೆ. ಕಳೆದ ಬಾರಿಯೂ ಧಾರಣೆ ಏರಿದ ನಂತರ ಕಳ್ಳರ ಭಯವೂ ಹೆಚ್ಚಾಗಿತ್ತು. ವಿಟ್ಲ, ಪುತ್ತೂರು ಪ್ರದೇಶದಲ್ಲಿ  ಅಡಿಕೆ ಗೋಡೌನ್ ಗಳಿಂದ ಕಳ್ಳತನವಾದ ವರದಿಯಾಗಿದೆ. ಕಳ್ಳರೂ ಸೆರೆಯಾಗಿದ್ದಾರೆ. ಈ ಬಾರಿಯೂ ಕಳ್ಳರ ಭಯ ಶುರುವಾಗಿದೆ. ರಾತ್ರಿ ವೇಳೆ ಅನುಮಾಸ್ಪದವಾಗಿ ಓಮ್ನಿ ಕಾರುಗಳು, ಪಿಕ್ ಅಪ್ ಗಳು ತಿರುಗಾಡಲು ಶುರುವಾಗಿದೆ ಎಂಬ ವದಂತಿ ಇದೆ. ಹೀಗಾಗಿ ಬೆಳೆಗಾರರು ಹಾಗೂ ವ್ಯಾಪಾರಿಗಳ ಹಿತದೃಷ್ಠಿಯಿಂದ  ಅಲ್ಲಲ್ಲಿ ಸಿಸಿ ಕ್ಯಾಮಾರಗಳು ಸುಸ್ಥಿತಿಯಲ್ಲಿಡುವಂತೆ ಮಾಡುವುದು ಸೇರಿದಂತೆ ಕೃಷಿಕರು, ವ್ಯಾಪಾರಿಗಳು ಸಂಶಯ ಕಂಡುಬಂದರೆ ತಕ್ಷಣವೇ ಎಚ್ಚೆತ್ತು ಸ್ಥಳೀಯ ತಂಡ ಮಾಡಿ ಪೊಲೀಸರಿಗೆ ಮಾಹಿತಿ ನೀಡುವ ಕೆಲಸ ಆಗಬೇಕಾಗಿದೆ. ಇದರ ಜೊತೆಗೆ ಪೊಲೀಸ್ ಬೀಟ್ ಗಳು ಬಲಗೊಳ್ಳಬೇಕು ಹಾಗೂ ರಾತ್ರಿ ವೇಳೆ ತಪಾಸಣೆ ಆರಂಭವಾಗಬೇಕು ಎಂದು ಸಾರ್ವಜನಿಕರು ಒತ್ತಾಯ ಮಾಡಿದ್ದಾರೆ. ಈಚೆಗೆ ಸುಳ್ಯ ತಾಲೂಕಿನ ಪಂಜದಲ್ಲಿ ಅನುಮಾಸ್ಪದವಾಗಿ ತಿರುಗಾಡುತ್ತಿದ್ದ ಕಾರೊಂದರ ಬಗ್ಗೆ ಸ್ಥಳಿಯರು ಪೊಲೀಸರಿಗೆ ಮಾಹಿತಿ ನೀಡಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಯುವಕರ ಮೊದಲ ಆದ್ಯತೆ ಏನಿರಬೇಕು? ರಾಜಕೀಯವಲ್ಲ, ಆರ್ಥಿಕ ಸ್ವಾವಲಂಬನೆ!

ಯುವಕರ ಮೊದಲ ಆದ್ಯತೆ ರಾಜಕೀಯವಲ್ಲ, ಕೌಶಲ್ಯ ಮತ್ತು ಆರ್ಥಿಕ ಸ್ವಾವಲಂಬನೆ ಆಗಿರಬೇಕು ಎಂಬುದು…

5 hours ago

ಹವಾಮಾನ ವರದಿ | 15-07-2026 | ರಾಜ್ಯದಲ್ಲಿ ಮಳೆ ಯಾಕೆ ಕಡಿಮೆಯಾಗಿದೆ ? ಜುಲೈ 16 ರಿಂದ ಎಲ್ಲೆಲ್ಲಿ ಮಳೆ ಆರಂಭವಾಗಲಿದೆ?

ಜುಲೈ 16ರಿಂದ ಕರಾವಳಿ ಹಾಗೂ ಮಲೆನಾಡಿನ ಕೆಲವು ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆ…

13 hours ago

ಕರ್ನಾಟಕದ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್…! ಕಾರಣ..?

ರಾಜ್ಯದ ಕರಾವಳಿ ಹಾಗೂ ಒಳನಾಡಿನ ಕೆಲವು ಜಿಲ್ಲೆಗಳಿಗೆ IMD ಯೆಲ್ಲೋ ಅಲರ್ಟ್ ಘೋಷಿಸಿದೆ.…

20 hours ago

ಕಸದ ತೆಂಗಿನಕಾಯಿಯೂ ಈಗ ರೈತರ ಸಂಪತ್ತು…! ಭುವನೇಶ್ವರದ ‘ವೇಸ್ಟ್ ಟು ವೆಲ್ತ್’ ಮಾದರಿ

ಭುವನೇಶ್ವರದಲ್ಲಿ ಪ್ರತಿದಿನ ಸಾವಿರಾರು ತೆಂಗಿನಕಾಯಿ ತ್ಯಾಜ್ಯವನ್ನು ಕೊಕೊಪೀಟ್, ಹಗ್ಗ ಹಾಗೂ ಚಾಪೆಗಳಾಗಿ ಪರಿವರ್ತಿಸಿ…

2 days ago

ರಾಜ್ಯದಲ್ಲಿ ಬರದ ಛಾಯೆ- ರೈತರಿಗೆ ಎಕರೆಗೆ ₹50 ಸಾವಿರ ಪರಿಹಾರ ನೀಡಿ

ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರಿಗೆ ಎಕರೆಗೆ ₹50 ಸಾವಿರ…

2 days ago

ಹುಲಿ-ಚಿರತೆ ಹಾವಳಿ ನಿಯಂತ್ರಣಕ್ಕೆ ಆಗ್ರಹ – ಚಾಮರಾಜನಗರದಲ್ಲಿ ಅರಣ್ಯ ಇಲಾಖೆ ವಿರುದ್ಧ ರೈತ ಸಂಘಟನೆಗಳ ಪ್ರತಿಭಟನೆ

ಚಾಮರಾಜನಗರ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಹುಲಿ-ಚಿರತೆ ಹಾವಳಿಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತ…

2 days ago