ಸುದ್ದಿಗಳು

ಅಡಿಕೆ ಧಾರಣೆ ಏರಿಕೆ | ಮತ್ತೆ ಅಸ್ಸಾಂನಲ್ಲಿ ಸಿಕ್ಕಿಬಿತ್ತು 1040 ಬ್ಯಾಗ್‌ ಅಡಿಕೆ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಮಂಗಳೂರು: ಅಡಿಕೆ ಧಾರಣೆ ಏರಿಕೆಯಲ್ಲಿ ಸಾಗಿದೆ.  ಅಧಿಕೃತವಾಗಿ ಹಳೆ ಅಡಿಕೆ ಧಾರಣೆ 350 ಹಾಗೂ ಹೊಸ ಅಡಿಕೆ ಧಾರಣೆ  340 ರೂಪಾಯಿ ಆಗಿದ್ದು ಖಾಸಗೀ ವಲಯದಲ್ಲಿ  ಹಳೆ ಅಡಿಕೆ 360 ಹಾಗೂ ಹೊಸ ಅಡಿಕೆ  350  ರೂಪಾಯಿಗೆ ಖರೀದಿ ನಡೆಸಲಾಗಿತ್ತು. ಇದೀಗ ಮತ್ತೆ ಅಡಿಕೆ ಧಾರಣೆ ಏರಿಕೆಯ ನಿರೀಕ್ಷೆ ಇದೆ. ಈ ನಡುವೆ ಅಸ್ಸಾಂನಲ್ಲಿ ಶುಕ್ರವಾರ 2 ಕೋಟಿ ರೂಪಾಯಿ ಮೌಲ್ಯದ ಸುಮಾರು  1040 ಬ್ಯಾಗ್‌ ಅಡಿಕೆ ವಶಪಡಿಸಿಕೊಳ್ಳಲಾಗಿದೆ.

Advertisement
Advertisement

ಅಸ್ಸಾಂ ಅರೆಸೇನಾ ಪಡೆಯು ಅಸ್ಸಾಂ ಸೇರಿದಂತೆ ದೇಶದ ಗಡಿಭಾಗದಲ್ಲಿ ತೀವ್ರ ತಪಾಸಣೆ ನಡೆಸುತ್ತಿದೆ. ಈ ಸಂದರ್ಭ ನಾಗಾಲ್ಯಾಂಡ್‌ ಮೂಲಕ ಒಳಬಂದ ಅಡಿಕೆಯನ್ನು ವಶಕ್ಕೆ ಪಡೆಯಲಾಗಿದೆ. ವಶಕ್ಕೆ ಪಡೆದ ಅಡಿಕೆಯನ್ನು  ದಿಮಾಪುರದ ಕಸ್ಟಮ್ ಪ್ರಿವೆಂಟಿವ್ ವಿಭಾಗದ ಅಧಿಕಾರಿಗಳಿಗೆ ಹಸ್ತಾಂತರಿಸಲಾಗಿದೆ ತನಿಖೆ ನಡೆಯುತ್ತಿದೆ. ಆರಂಭದ ತನಿಖೆಯಲ್ಲಿ ಮ್ಯಾನ್ಮಾರ್‌ ಪ್ರದೇಶದ ಅಡಿಕೆ ಇದಾಗಿದೆ ಎಂದು ತಿಳಿದುಬಂದಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಕಳೆದ ಕೆಲವು ಸಮಯಗಳಿಂದ ಅಡಿಕೆ ಆಮದು ಸಾಧ್ಯವಾಗುತ್ತಿಲ್ಲ. ಹೀಗಾಗಿ ಅಡಿಕೆ ಖರೀದಿದಾರರಿಗೆ ದೇಶದ ಅಡಿಕೆಯನ್ನೇ ಖರೀದಿ ಮಾಡಬೇಕಾಗಿದೆ. ಆದರೆ ಅಡಿಕೆ ಬೆಳೆಗಾರರು ಬೆಲೆ ಏರಿಕೆ ನಿರೀಕ್ಷೆಯ ಕಾರಣದಿಂದ ಅಡಿಕೆ ಮಾರುಕಟ್ಟೆಗೆ ಬಿಡುತ್ತಿಲ್ಲ. ಹೀಗಾಗಿ ಧಾರಣೆ ಏರಿಕೆಯಾಗುತ್ತಿದೆ. ಕಳೆದ ಎರಡು ವಾರಗಳಲ್ಲಿ ಅಡಿಕೆ ಖರೀದಿದಾರರು ಕಳ್ಳ ಸಾಗಾಣಿಕೆಯ ಮೂಲಕ ನಾಲಾಗ್ಯಾಂಡ್‌  ಮೂಲಕ  ಅಸ್ಸಾಂಗೆ ಅಡಿಕೆ ತರಿಸಿಕೊಂಡು ಈ ಮೂಲಕ ದೇಶದ ವಿವಿಧ ಕಡೆಗಳಿಗೆ ಅಡಿಕೆ ತರಿಸಿಕೊಳ್ಳುವ ಪ್ರಯತ್ನದಲ್ಲಿದ್ದರು. ಹೀಗಾಗಿ ದೇಶದ ಅಡಿಕೆ ಕಡೆಗೆ ಒಲವು ಕಡಿಮೆ ತೋರಿಸಿದ್ದರು. ಈ ಕಾರಣದಿಂದ ಅಡಿಕೆ ಧಾರಣೆ ಎರಡು ವಾರಗಳಿಂದ ಸ್ಥಿರವಾಗಿತ್ತು. ಆದರೆ ಆಮದು ಯೋಚನೆ ವಿಫಲವಾಗಿದೆ, ಸದ್ಯದ ಪರಿಸ್ಥಿತಿಯಲ್ಲಿ ಅಸ್ಸಾಂ ಗಡಿಭಾಗದಲ್ಲಿ ಅಸ್ಸಾಂ ಅರೆಸೇನಾ ಪಡೆ ಬಿಗಿ ಬಂದೋಬಸ್ತ್‌ ಕೈಗೊಂಡಿದೆ.  ಕಳೆದೊಂದು ವಾರದಿಂದ ಅಸ್ಸಾಂ ಗಡಿಭಾಗದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮದ್ದು ಗುಂಡುಗಳು ಪತ್ತೆಯಾಗಿರುವ ಕಾರಣ ಬಂದೋಬಸ್ತ್‌ ಬಿಗಿಗೊಳಿಸಿದೆ. ಹೀಗಾಗಿ ಅಡಿಕೆ ಆಮದು ಸದ್ಯಕ್ಕೆ ಕಷ್ಟವಾಗಿದೆ. ಈ ಕಾರಣದಿಂದ ಅಡಿಕೆ ಖರೀದಿದಾರರಿಗೆ ದೇಶದ ಅಡಿಕೆಯೇ ಅಗತ್ಯವಾಗಿದೆ.

ಅಡಿಕೆ ಧಾರಣೆ ಏರಿಕೆಯಾಗುವುದು ಖಚಿತ. ಆದರೆ ತಕ್ಷಣವೇ ಅಡಿಕೆ ಧಾರಣೆ 400  ರೂಪಾಯಿ ಆಗಲಾರದು. ಇದೇ ರೀತಿ ಮುಂದುವರಿದಿದೆ ನಿರೀಕ್ಷಿತ ಧಾರಣೆ ತಲಪುವುದು  ಖಚಿತ. ಒಂದು ವೇಳೆ ಅಡಿಕೆ ಆಮದಿಗೆ ಅವಕಾಶ ಸಿಕ್ಕಿದೆ ಅಥವಾ ಉತ್ತರ ಭಾರತದಲ್ಲಿ ಕೊರೋನಾ ಲಾಕ್ಡೌನ್‌ ಪರಿಸ್ಥಿತಿ ಉಂಟಾದರೆ ಸ್ವಲ್ಪ ಹಿನ್ನಡೆಯಾದೀತು. ಅಂತೂ ಈ ವರ್ಷ ಅಡಿಕೆ ಬೆಳೆಗಾರರಿಗೆ 300 +  ಅಡಿಕೆ ಧಾರಣೆ ನಿರೀಕ್ಷೆಯಲ್ಲಿರಬಹುದು ಎಂಬುದು ಮಾರುಕಟ್ಟೆ ವಿಶ್ಲೇಷಣೆ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮರೆತುಹೋದ ಮನೆಮಾತು ಮರಳಿ ನೆನಪಿಸಲು ಸ್ವಭಾಷಾ ಚಾತುರ್ಮಾಸ್ಯ : ರಾಘವೇಶ್ವರ ಶ್ರೀ

ಮರೆತುಹೋದ ಮನೆಮಾತನ್ನು ಮರಳಿ ನೆನಪಿಸುವ ಉದ್ದೇಶದಿಂದ ಈ ಬಾರಿಯ ಚಾತುರ್ಮಾಸ್ಯವನ್ನು ಸ್ವಭಾಷಾ ಚಾತುರ್ಮಾಸ್ಯ…

4 minutes ago

ಗಜಲಕ್ಷ್ಮೀ ರಾಜಯೋಗ – ಕೆಲವು ರಾಶಿಯವರಿಗೆ ಅದೃಷ್ಟ- ಸಿಗುವುದು ಯಶಸ್ಸು

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

8 minutes ago

ರಬ್ಬರ್‌ ಆಮದು | ರಬ್ಬರ್‌ ಬೆಳೆಗಾರರಿಗೆ ತರಲಿದೆ ಧಾರಣೆ ಸಂಕಷ್ಟ

ದೇಶದಲ್ಲಿ ರಬ್ಬರ್‌ ಉತ್ಪಾದನೆ ಹೆಚ್ಚಳದ ನಡುವೆ ಇದೀಗ ರಬ್ಬರ್‌ ಆಮದು ನೀತಿಯು ರಬ್ಬರ್‌…

10 hours ago

ಅಕ್ರಮವಾಗಿ ಅಡಿಕೆ ಸಾಗಣೆ ಪ್ರಕರಣ | ಪಶ್ಚಿಮ ಬಂಗಾಳದಲ್ಲಿ ಅಡಿಕೆ ವ್ಯಾಪಾರಿಯ ಬಂಧನ

ಅಕ್ರಮವಾಗಿ ಅಡಿಕೆ ಸಾಗಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳದ ಡಾರ್ಜಿಲಿಂಗ್ ಜಿಲ್ಲೆಯ ನಕ್ಸಲ್ಬರಿ…

10 hours ago

ಸುಳ್ಯದಲ್ಲಿ ಏಕೆ ಇದೆಲ್ಲಾ ಬಗೆಹರಿಯದ ಸಮಸ್ಯೆ…? | ರಸ್ತೆ-ವಿದ್ಯುತ್‌-ಸೇತುವೆಗಳು ಮರೀಚಿಕೆಯೇ..? |

ಸುಳ್ಯದ ಬಹುತೇಕ ಪ್ರದೇಶ ಅರಣ್ಯದಿಂದ ಕೂಡಿದೆ. ಮಲೆನಾಡು ತಪ್ಪಲು ಪ್ರದೇಶವಾದ್ದರಿಂದ ಮಳೆಯೂ ಹೆಚ್ಚು,…

11 hours ago

ಹವಾಮಾನ ವರದಿ | 24-06-2025 | ಬದಲಾಯ್ತು ಹವಾಮಾನ ಲಕ್ಷಣಗಳು | ಜೂ.28 ವರೆಗೂ ಉತ್ತಮ ಮಳೆ ನಿರೀಕ್ಷೆ |

ಬಂಗಾಳಕೊಲ್ಲಿಯ ಬಾಂಗ್ಲಾದೇಶ ಕರಾವಳಿಯಲ್ಲಿ ಸಣ್ಣ ಪ್ರಮಾಣದ ತಿರುಗುವಿಕೆಯ ಕಾರಣದಿಂದ ಮುಂಗಾರು ಸ್ವಲ್ಪ ಚುರುಕಾಗಿದ್ದು,…

19 hours ago