MIRROR FOCUS

ಅಡಿಕೆ ಧಾರಣೆ ಜಿಗಿತ | ಮಾರುಕಟ್ಟೆ ಮೇಲೆ ಹಿಡಿತ | ಅಡಿಕೆ ಬೆಳೆಗಾರರಿಗೆ ಖುಷಿಯ ಜೊತೆಗೆ ಆತಂಕ…!

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಅಡಿಕೆ ಧಾರಣೆ ಏರುತ್ತಿದೆ. ಈ ಬಾರಿ ಕೊರೊನಾ ಕಾರಣದಿಂದ ಅಡಿಕೆ ಬೆಳೆಯ ನಿಜವಾದ ಸಮಸ್ಯೆ ಏನು ಎಂಬುದು ಸೂಕ್ಷ್ಮವಾಗಿ ಅರ್ಥ ಮಾಡಿದರೆ ತಿಳಿಯುತ್ತದೆ. ಪ್ರತೀ ಬಾರಿ ಗುಟ್ಕಾ ನಿಷೇಧ ಎಂದಾಗ ಅಡಿಕೆ ಬೆಳೆಗಾರರು ಭಯಗೊಳ್ಳುತ್ತಿದ್ದರು. ಈ ಬಾರಿ ಗುಟ್ಕಾ ನಿಷೇಧವಾದರೂ ಅಡಿಕೆಗೆ ಬೇಡಿಕೆ ಇದೆ. ಅಡಿಕೆ ಧಾರಣೆ ಏರಿಕೆಯಾಗುತ್ತಿದೆ. ಎಲ್ಲೂ ದಾಸ್ತಾನು ಇಲ್ಲ. ಅಂದರೆ ಅಡಿಕೆ ಕಳ್ಳ ದಾರಿಯ ಮೂಲಕ ಭಾರತದೊಳಗೆ ಬರಲು ಸಾಧ್ಯವಾಗುತ್ತಿಲ್ಲ. ಹೀಗಾಗಿ ರಾಜಕಾರಣಿಗಳು ಎಷ್ಟೇ ಹೇಳಿದರೂ , ಯಾರು ಎಷ್ಟೇ ವಿಶ್ಲೇಷಣೆ ಮಾಡಿದರೂ ಅಡಿಕೆ ಆಮದು ತಡೆಗೆ ಸೂಕ್ತ ಕ್ರಮ ಆಗಲೇಬೇಕಿದೆ. ಅಡಿಕೆ ಬೆಳೆಗಾರರು ಗುಟ್ಕಾ ನಿಷೇಧಕ್ಕಲ್ಲ, ಅಡಿಕೆ ಆಮದು ಬಗ್ಗೆ ಭಯ ಪಡಬೇಕಿದೆ. ಇದರ ತಡೆಗೆ ಸೂಕ್ತ ಕ್ರಮ ಅಗತ್ಯವಿದೆ.

Advertisement
Advertisement

ಪುತ್ತೂರು: ಅಡಿಕೆ ಮಾರುಕಟ್ಟೆ ಏರಿಕೆ ಕಂಡಿದೆ. 300 ರೂಪಾಯಿ ಕಳೆದು ಬುಧವಾರ ಮತ್ತೆ ಧಾರಣೆ ಏರಿಕೆಯಾಗಿದೆ. ಹೊಸ ಅಡಿಕೆ 310 ಹಾಗೂ ಹಳೆ ಅಡಿಕೆ  325 ರೂಪಾಯಿಗೆ ಕ್ಯಾಂಪ್ಕೋ ಖರೀದಿ ಮಾಡುತ್ತಿದೆ.

ಖಾಸಗಿ ವಲಯದಲ್ಲೂ ಧಾರಣೆ ಏರಿಕೆಯಾಗಿದೆ. ಹೊಸ ಅಡಿಕೆ 325 ಹಾಗೂ ಹಳೆ ಅಡಿಕೆ 340 ರೂಪಾಯಿಗೆ ಖರೀದಿ ನಡೆಸಿದೆ. ಹಾಗಿದ್ದರೂ ಅಡಿಕೆ ಮಾರುಕಟ್ಟೆ ನಿರೀಕ್ಷಿತ ಪ್ರಮಾಣದಲ್ಲಿ ಬರುತ್ತಿಲ್ಲ.ಬೇಡಿಕೆ ಏರುತ್ತಿದೆ. ಸಹಜವಾಗಿಯೇ ಧಾರಣೆ ಏರಿಕೆಯಾಗಿದೆ.

ಕೊರೊನಾ ಇಫೆಕ್ಟ್ ಇದು. ಕೊರೊನಾ ಕಾರಣದಿಂದ ಅಡಿಕೆ ಮಾರುಕಟ್ಟೆಗೆ ಬಿಡಲು ಕನಿಷ್ಟ ಎರಡು ತಿಂಗಳು ಬೆಳೆಗಾರರಿಗೆ ಸಾಧ್ಯವಾಗಿಲ್ಲ. ಇದೇ ಹೊತ್ತಿಗೆ ಅಕ್ರಮವಾಗಿ ಆಮದಾಗುತ್ತಿದ್ದ ಅಡಿಕೆಗಳೂ ಭಾರತದ ಒಳ ಬರಲು ಸಾಧ್ಯವಾಗಿಲ್ಲ. ಪ್ರತೀ ಬಾರಿಯೂ ಅಡಿಕೆ ಆಮದು ನಿಷೇಧ ಎಂದರೂ ಅಡಿಕೆ ಕಳ್ಳದಾರಿ ಮೂಲಕ ಬರುತ್ತಲೇ ಇತ್ತು. ಎಷ್ಟೇ ಹೇಳಿದರೂ ಅಡಿಕೆ ಕಳ್ಳ ದಾರಿಯ ಮೂಲಕ ಬರ್ಮಾ, ಬಾಂಗ್ಲಾದೇಶದಿಂದ ಬರುತ್ತಿತ್ತು. ಹೀಗಾಗಿ ಭಾರತದ ಅಡಿಕೆಗೆ ಧಾರಣೆ ಇಳಿಕೆಯಾಗುತ್ತಿತ್ತು. ಈ ಬಾರಿ ಅಡಿಕೆ ಕಳ್ಳದಾರಿಗೆ ಬ್ರೇಕ್ ಬಿದ್ದಿದೆ. ಹಾಗಾಗಿ ಮುಂಬಯಿ, ಉತ್ತರಪ್ರದೇಶ, ಗುಜರಾತ್  ಸೇರಿದಂತೆ ಉತ್ತರ ಭಾರತದಿಂದ ಅಡಿಕೆಗೆ ಬೇಡಿಕೆ ವ್ಯಕ್ತವಾಗಿದೆ. ಕೊರೊನಾ ಕಾರಣದಿಂದ ಉತ್ತರಭಾರತದಲ್ಲಿ ಇದ್ದ ಅಡಿಕೆ ದಾಸ್ತಾನು ಖಾಲಿಯಾಗಿದೆ.

ಈ ಕಡೆ ಕಳೆದ ವರ್ಷದ ಫಸಲಿನ ಕಾರಣದಿಂದ ಅಡಿಕೆ ಬೆಳೆ ಕಡಿಮೆ ಇದೆ. ಹೀಗಾಗಿ ಧಾರಣೆ ಎಷ್ಟೇ ಆದರೂ ಅಡಿಕೆ ಮಾರುಕಟ್ಟೆಗೆ ನೀಡುವ ಪ್ರಮಾಣ ಕಡಿಮೆಯೇ ಆಗಿದೆ. ಧಾರಣೆ ಏರಿಕೆಯಾಗುತ್ತಲೇ ಇದೆ. ಅಡಿಕೆ ಬೆಳೆಗಾರರು ಇನ್ನು ದೃಢ ನಿಲುವು ಮಾಡಿದರೆ ಅಡಿಕೆ ಮಾರುಕಟ್ಟೆ ಈ ಬಾರಿ ಏರಿಕೆಯಾಗುವುದು ನಿಶ್ಚಿತ. ಆದರೆ ಇನ್ನೊಂದು ಕಡೆ ಆತಂಕವೂ ಇದೆ. ಧಾರಣೆ ಎಗ್ಗಿಲ್ಲದೆ ಸಾಗಿದರೆ ಭವಿಷ್ಯದಲ್ಲಿ ಅಡಿಕೆ ಮಾರುಕಟ್ಟೆ ಮೇಲೆ ಪರಿಣಾಮ ಬೀರಲಿದೆ. ಧಾರಣೆ ಏರಿಕೆ ಒಂದು ಹಂತದವರೆಗೆ ಮಾತ್ರವೇ ಉತ್ತಮ. ಅಧಿಕ ಪ್ರಮಾಣದಲ್ಲಿ ಏರಿಕೆಯಾದರೆ ಮಾರುಕಟ್ಟೆ ಸ್ಥಿರತೆ ಕಷ್ಟಸಾಧ್ಯವಿದೆ. ಹೀಗಾಗಿ ಅಡಿಕೆ ಬೆಳೆಗಾರರು ಭವಿಷ್ಯದ ಮಾರುಕಟ್ಟೆ ಬಗ್ಗೆಯೂ ಯೋಚಿಸಿ ನೂತನ ಯೋಜನೆ ರೂಪಿಸಬೇಕು ಎಂದು ಅಡಿಕೆ ಬೆಳೆಗಾರ ರಘುನಾಥ ರಾವ್ ಹೇಳುತ್ತಾರೆ.

Advertisement

ಅಡಿಕೆ ಮಾರುಕಟ್ಟೆ ಏರಿಕೆಯಾಗಿದೆ. ಇದಕ್ಕೆ ಪ್ರಮುಖ ಕಾರಣ ಉತ್ತರ ಭಾರತದಲ್ಲಿ ಅಡಿಕೆ ದಾಸ್ತಾನು ಕೊರತೆ. ಹೀಗಾಗಿ ಈಗ ಅಡಿಕೆ ಬೆಳೆಗಾರರು ಎಚ್ಚರಿಕೆ ನಡೆ , ಯೋಜನೆ ರೂಪಿಸಿಕೊಂಡು ಅಡಿಕೆ ಮಾರುಕಟ್ಟೆ ಬಿಟ್ಟರೆ ಧಾರಣೆಯನ್ನು ಕೆಲವು ಸಮಯದವರೆಗೆ ಹಿಡಿದಿರಿಸಬಹುದು. – ಅಶೋಕ್ ಕಿನಿಲ, ಅಧ್ಯಕ್ಷರು, ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘ

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮರೆತುಹೋದ ಮನೆಮಾತು ಮರಳಿ ನೆನಪಿಸಲು ಸ್ವಭಾಷಾ ಚಾತುರ್ಮಾಸ್ಯ : ರಾಘವೇಶ್ವರ ಶ್ರೀ

ಮರೆತುಹೋದ ಮನೆಮಾತನ್ನು ಮರಳಿ ನೆನಪಿಸುವ ಉದ್ದೇಶದಿಂದ ಈ ಬಾರಿಯ ಚಾತುರ್ಮಾಸ್ಯವನ್ನು ಸ್ವಭಾಷಾ ಚಾತುರ್ಮಾಸ್ಯ…

4 minutes ago

ಗಜಲಕ್ಷ್ಮೀ ರಾಜಯೋಗ – ಕೆಲವು ರಾಶಿಯವರಿಗೆ ಅದೃಷ್ಟ- ಸಿಗುವುದು ಯಶಸ್ಸು

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

8 minutes ago

ರಬ್ಬರ್‌ ಆಮದು | ರಬ್ಬರ್‌ ಬೆಳೆಗಾರರಿಗೆ ತರಲಿದೆ ಧಾರಣೆ ಸಂಕಷ್ಟ

ದೇಶದಲ್ಲಿ ರಬ್ಬರ್‌ ಉತ್ಪಾದನೆ ಹೆಚ್ಚಳದ ನಡುವೆ ಇದೀಗ ರಬ್ಬರ್‌ ಆಮದು ನೀತಿಯು ರಬ್ಬರ್‌…

10 hours ago

ಅಕ್ರಮವಾಗಿ ಅಡಿಕೆ ಸಾಗಣೆ ಪ್ರಕರಣ | ಪಶ್ಚಿಮ ಬಂಗಾಳದಲ್ಲಿ ಅಡಿಕೆ ವ್ಯಾಪಾರಿಯ ಬಂಧನ

ಅಕ್ರಮವಾಗಿ ಅಡಿಕೆ ಸಾಗಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳದ ಡಾರ್ಜಿಲಿಂಗ್ ಜಿಲ್ಲೆಯ ನಕ್ಸಲ್ಬರಿ…

10 hours ago

ಸುಳ್ಯದಲ್ಲಿ ಏಕೆ ಇದೆಲ್ಲಾ ಬಗೆಹರಿಯದ ಸಮಸ್ಯೆ…? | ರಸ್ತೆ-ವಿದ್ಯುತ್‌-ಸೇತುವೆಗಳು ಮರೀಚಿಕೆಯೇ..? |

ಸುಳ್ಯದ ಬಹುತೇಕ ಪ್ರದೇಶ ಅರಣ್ಯದಿಂದ ಕೂಡಿದೆ. ಮಲೆನಾಡು ತಪ್ಪಲು ಪ್ರದೇಶವಾದ್ದರಿಂದ ಮಳೆಯೂ ಹೆಚ್ಚು,…

11 hours ago

ಹವಾಮಾನ ವರದಿ | 24-06-2025 | ಬದಲಾಯ್ತು ಹವಾಮಾನ ಲಕ್ಷಣಗಳು | ಜೂ.28 ವರೆಗೂ ಉತ್ತಮ ಮಳೆ ನಿರೀಕ್ಷೆ |

ಬಂಗಾಳಕೊಲ್ಲಿಯ ಬಾಂಗ್ಲಾದೇಶ ಕರಾವಳಿಯಲ್ಲಿ ಸಣ್ಣ ಪ್ರಮಾಣದ ತಿರುಗುವಿಕೆಯ ಕಾರಣದಿಂದ ಮುಂಗಾರು ಸ್ವಲ್ಪ ಚುರುಕಾಗಿದ್ದು,…

19 hours ago