Advertisement
MIRROR FOCUS

ಅಡಿಕೆ ಧಾರಣೆ ಮತ್ತೆ ಜಿಗಿತ | ಬೆಳೆಗಾರರಿಗೆ ಮತ್ತಷ್ಟು ಭರವಸೆ | ರೈಲಲ್ಲಿ ಬಂದ ಅಡಿಕೆಯೂ ವಶವಾಯ್ತು..! ಬರ್ಮಾ ಅಡಿಕೆಗೆ ಮತ್ತೆ ಕತ್ತರಿ ಹಾಕಿದ ರೈಲ್ವೇ ಪೊಲೀಸರು |

Share

ಮಂಗಳೂರು: ಚಾಲಿ ಅಡಿಕೆ ಧಾರಣೆ ಏರುತ್ತಿದೆ. ದಿನದಿಂದ ದಿನಕ್ಕೆ ಧಾರಣೆ ಏರಿಕೆಯ ಹಾದಿಯಲ್ಲಿದೆ. ಮಂಗಳವಾರ ಮತ್ತೆ 5 ರೂಪಾಯಿ ಹೊಸ ಅಡಿಕೆಗೆ ಏರಿಕೆಯಾಗಿ 325 ರೂಪಾಯಿಗೆ ಖರೀದಿಯಾಗುವ ಮೂಲಕ  ಇದುವರೆಗಿನ ಧಾರಣೆಯಲ್ಲಿ ಸಾರ್ವಕಾಲಿಕ ದಾಖಲೆಯತ್ತ ಸಾಗಿತು. ಹೀಗಾದರೂ ಅಡಿಕೆ ಮಾರುಕಟ್ಟೆಗೆ ಬರುತ್ತಿಲ್ಲ. ಬೇಡಿಕೆ ತಡೆಯಲಾಗುತ್ತಿಲ್ಲ.. ಇದು ಅಡಿಕೆ ಮಾರುಕಟ್ಟೆಯ ಈಗಿನ ಸ್ಥಿತಿ.

ಅಡಿಕೆ ಧಾರಣೆ 300 ರೂಪಾಯಿ ದಾಟಿದ ಬಳಿಕ ಇದೀಗ ವಿದೇಶದ ಅಡಿಕೆ ಕಳ್ಳದಾರಿಯ ಮೂಲಕ ಹೇಗಾದರೂ ತರುವ ಪ್ರಯತ್ನ ನಡೆಯುತ್ತಲೇ ಇದೆ. ಎರಡು ದಿನಗಳ ಹಿಂದೆ 1500 ಕ್ಕೂ ಹೆಚ್ಚು ಚೀಲ ಅಡಿಕೆ ಪತ್ತೆಯಾಗಿತ್ತು. ಇದೀಗ ರೈಲಿನ ಮೂಲಕ ಸಾಗಾಟ ನಡೆಸುತ್ತಿದ್ದ ಪ್ರಕರಣ ಬೆಳಕಿಗೆ ಬಂದಿದೆ. ಇದನ್ನು ರೈಲ್ವೇ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಕಳೆದ 2 ದಿನಗಳಿಂದ ಇದರ ಮಾಲಕರು ಪತ್ತೆಯಾಗಿಲ್ಲ. ಸುಮಾರು 800 ಚೀಲ ಅಡಿಕೆ ಈಗ ಗುವಹಾಟಿ ರೈಲ್ವೇ ನಿಲ್ದಾಣದಲ್ಲಿದೆ.

ಅಸ್ಸಾಂ  ಗುವಹಾಟಿ ರೈಲು ನಿಲ್ದಾಣದಲ್ಲಿ 3 ಬೋಗಿಗಳಲ್ಲಿದ್ದ ಸರಕು ತಪಾಸಣೆ ವೇಳೆ ಅಡಿಕೆ ಇರುವುದು  ರೈಲ್ವೇ ಪೊಲೀಸರಿಗೆ ಪತ್ತೆಯಾಗಿದೆ.ಯಾವುದೇ ದಾಖಲೆ ಇರಲಿಲ್ಲ ಹಾಗೂ ಜಿ ಎಸ್ ಟಿ ಬಗ್ಗೆಯೂ ಯಾವುದೇ ದಾಖಲೆ ಇಲ್ಲ ಹೀಗಾಗಿ ತನಿಖೆ ನಡೆಸಲಾಗುತ್ತಿದೆ ಎಂದು ರೈಲ್ವೇ ಪೊಲೀಸರು ತಿಳಿಸಿದ್ದಾರೆ. ಮೇಲ್ನೋಟಕ್ಕೆ ಇದು ಬರ್ಮಾದಿಂದ ಬಂದಿರುವ ಕಳಪೆ ಗುಣಮಟ್ಟದ ಅಡಿಕೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.  ನವದೆಹಲಿಗೆ ತೆರಳುವ ಸರಕು ರೈಲಿನ ಮೂರು ವಿಭಾಗಗಳನ್ನು ಗುವಾಹಟಿ ರೈಲ್ವೆ ನಿಲ್ದಾಣದಲ್ಲಿ  ವಶಕ್ಕೆ ಪಡೆದ ಅಧಿಕಾರಿಗಳು ಪರಿಶೀಲನೆ ನಡೆಸಿದಾಗ  ದಿಮಾಪುರದಲ್ಲಿ ತುಂಬಿಸಿರುವುದು  ಬೆಳಕಿಗೆ ಬಂದಿದೆ. ಎರಡು ದಿನಗಳ ಹಿಂದೆ ನಾಗಾಲ್ಯಾಂಡ್ ಮೂಲಕ ದಿಮಾಪುರಕ್ಕೆ ಬಂದಿರುವ ಅಡಿಕೆಯನ್ನು ವಶಕ್ಕೆ ಪಡೆಯಲಾಗಿತ್ತು.  ರವಾನೆಗೆ ಸಂಬಂಧಿಸಿದ ದಾಖಲೆಗಳ ತನಿಖೆ ನಡೆಯುತ್ತಿದೆ. ಈಶಾನ್ಯ ರಾಜ್ಯಗಳಿಂದ ದೇಶದ ಬೇರೆಡೆಗೆ  ಅಡಿಕೆ ಕಳ್ಳಸಾಗಣೆ ಮಾಡುವುದು ಹೊಸತಲ್ಲ, ಆದರೆ ಈ ಬಾರಿ ಯಾವುದೇ ಅಕ್ರಮವಾಗದಂತೆ ಪೊಲೀಸರು , ಅರೆ ಸೇನಾ ಪಡೆ ಬಿಗಿ ತಪಾಸಣೆ ನಡೆಸುತ್ತಿದೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಯುವಕರ ಮೊದಲ ಆದ್ಯತೆ ಏನಿರಬೇಕು? ರಾಜಕೀಯವಲ್ಲ, ಆರ್ಥಿಕ ಸ್ವಾವಲಂಬನೆ!

ಯುವಕರ ಮೊದಲ ಆದ್ಯತೆ ರಾಜಕೀಯವಲ್ಲ, ಕೌಶಲ್ಯ ಮತ್ತು ಆರ್ಥಿಕ ಸ್ವಾವಲಂಬನೆ ಆಗಿರಬೇಕು ಎಂಬುದು…

2 days ago

ಹವಾಮಾನ ವರದಿ | 15-07-2026 | ರಾಜ್ಯದಲ್ಲಿ ಮಳೆ ಯಾಕೆ ಕಡಿಮೆಯಾಗಿದೆ ? ಜುಲೈ 16 ರಿಂದ ಎಲ್ಲೆಲ್ಲಿ ಮಳೆ ಆರಂಭವಾಗಲಿದೆ?

ಜುಲೈ 16ರಿಂದ ಕರಾವಳಿ ಹಾಗೂ ಮಲೆನಾಡಿನ ಕೆಲವು ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆ…

3 days ago

ಕರ್ನಾಟಕದ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್…! ಕಾರಣ..?

ರಾಜ್ಯದ ಕರಾವಳಿ ಹಾಗೂ ಒಳನಾಡಿನ ಕೆಲವು ಜಿಲ್ಲೆಗಳಿಗೆ IMD ಯೆಲ್ಲೋ ಅಲರ್ಟ್ ಘೋಷಿಸಿದೆ.…

3 days ago

ಕಸದ ತೆಂಗಿನಕಾಯಿಯೂ ಈಗ ರೈತರ ಸಂಪತ್ತು…! ಭುವನೇಶ್ವರದ ‘ವೇಸ್ಟ್ ಟು ವೆಲ್ತ್’ ಮಾದರಿ

ಭುವನೇಶ್ವರದಲ್ಲಿ ಪ್ರತಿದಿನ ಸಾವಿರಾರು ತೆಂಗಿನಕಾಯಿ ತ್ಯಾಜ್ಯವನ್ನು ಕೊಕೊಪೀಟ್, ಹಗ್ಗ ಹಾಗೂ ಚಾಪೆಗಳಾಗಿ ಪರಿವರ್ತಿಸಿ…

4 days ago

ರಾಜ್ಯದಲ್ಲಿ ಬರದ ಛಾಯೆ- ರೈತರಿಗೆ ಎಕರೆಗೆ ₹50 ಸಾವಿರ ಪರಿಹಾರ ನೀಡಿ

ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರಿಗೆ ಎಕರೆಗೆ ₹50 ಸಾವಿರ…

4 days ago

ಹುಲಿ-ಚಿರತೆ ಹಾವಳಿ ನಿಯಂತ್ರಣಕ್ಕೆ ಆಗ್ರಹ – ಚಾಮರಾಜನಗರದಲ್ಲಿ ಅರಣ್ಯ ಇಲಾಖೆ ವಿರುದ್ಧ ರೈತ ಸಂಘಟನೆಗಳ ಪ್ರತಿಭಟನೆ

ಚಾಮರಾಜನಗರ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಹುಲಿ-ಚಿರತೆ ಹಾವಳಿಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತ…

4 days ago