ಮಂಗಳೂರು: ಚಾಲಿ ಅಡಿಕೆ ಧಾರಣೆ ಏರುತ್ತಿದೆ. ದಿನದಿಂದ ದಿನಕ್ಕೆ ಧಾರಣೆ ಏರಿಕೆಯ ಹಾದಿಯಲ್ಲಿದೆ. ಮಂಗಳವಾರ ಮತ್ತೆ 5 ರೂಪಾಯಿ ಹೊಸ ಅಡಿಕೆಗೆ ಏರಿಕೆಯಾಗಿ 325 ರೂಪಾಯಿಗೆ ಖರೀದಿಯಾಗುವ ಮೂಲಕ ಇದುವರೆಗಿನ ಧಾರಣೆಯಲ್ಲಿ ಸಾರ್ವಕಾಲಿಕ ದಾಖಲೆಯತ್ತ ಸಾಗಿತು. ಹೀಗಾದರೂ ಅಡಿಕೆ ಮಾರುಕಟ್ಟೆಗೆ ಬರುತ್ತಿಲ್ಲ. ಬೇಡಿಕೆ ತಡೆಯಲಾಗುತ್ತಿಲ್ಲ.. ಇದು ಅಡಿಕೆ ಮಾರುಕಟ್ಟೆಯ ಈಗಿನ ಸ್ಥಿತಿ.
ಅಡಿಕೆ ಧಾರಣೆ 300 ರೂಪಾಯಿ ದಾಟಿದ ಬಳಿಕ ಇದೀಗ ವಿದೇಶದ ಅಡಿಕೆ ಕಳ್ಳದಾರಿಯ ಮೂಲಕ ಹೇಗಾದರೂ ತರುವ ಪ್ರಯತ್ನ ನಡೆಯುತ್ತಲೇ ಇದೆ. ಎರಡು ದಿನಗಳ ಹಿಂದೆ 1500 ಕ್ಕೂ ಹೆಚ್ಚು ಚೀಲ ಅಡಿಕೆ ಪತ್ತೆಯಾಗಿತ್ತು. ಇದೀಗ ರೈಲಿನ ಮೂಲಕ ಸಾಗಾಟ ನಡೆಸುತ್ತಿದ್ದ ಪ್ರಕರಣ ಬೆಳಕಿಗೆ ಬಂದಿದೆ. ಇದನ್ನು ರೈಲ್ವೇ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಕಳೆದ 2 ದಿನಗಳಿಂದ ಇದರ ಮಾಲಕರು ಪತ್ತೆಯಾಗಿಲ್ಲ. ಸುಮಾರು 800 ಚೀಲ ಅಡಿಕೆ ಈಗ ಗುವಹಾಟಿ ರೈಲ್ವೇ ನಿಲ್ದಾಣದಲ್ಲಿದೆ.
ಅಸ್ಸಾಂ ಗುವಹಾಟಿ ರೈಲು ನಿಲ್ದಾಣದಲ್ಲಿ 3 ಬೋಗಿಗಳಲ್ಲಿದ್ದ ಸರಕು ತಪಾಸಣೆ ವೇಳೆ ಅಡಿಕೆ ಇರುವುದು ರೈಲ್ವೇ ಪೊಲೀಸರಿಗೆ ಪತ್ತೆಯಾಗಿದೆ.ಯಾವುದೇ ದಾಖಲೆ ಇರಲಿಲ್ಲ ಹಾಗೂ ಜಿ ಎಸ್ ಟಿ ಬಗ್ಗೆಯೂ ಯಾವುದೇ ದಾಖಲೆ ಇಲ್ಲ ಹೀಗಾಗಿ ತನಿಖೆ ನಡೆಸಲಾಗುತ್ತಿದೆ ಎಂದು ರೈಲ್ವೇ ಪೊಲೀಸರು ತಿಳಿಸಿದ್ದಾರೆ. ಮೇಲ್ನೋಟಕ್ಕೆ ಇದು ಬರ್ಮಾದಿಂದ ಬಂದಿರುವ ಕಳಪೆ ಗುಣಮಟ್ಟದ ಅಡಿಕೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ನವದೆಹಲಿಗೆ ತೆರಳುವ ಸರಕು ರೈಲಿನ ಮೂರು ವಿಭಾಗಗಳನ್ನು ಗುವಾಹಟಿ ರೈಲ್ವೆ ನಿಲ್ದಾಣದಲ್ಲಿ ವಶಕ್ಕೆ ಪಡೆದ ಅಧಿಕಾರಿಗಳು ಪರಿಶೀಲನೆ ನಡೆಸಿದಾಗ ದಿಮಾಪುರದಲ್ಲಿ ತುಂಬಿಸಿರುವುದು ಬೆಳಕಿಗೆ ಬಂದಿದೆ. ಎರಡು ದಿನಗಳ ಹಿಂದೆ ನಾಗಾಲ್ಯಾಂಡ್ ಮೂಲಕ ದಿಮಾಪುರಕ್ಕೆ ಬಂದಿರುವ ಅಡಿಕೆಯನ್ನು ವಶಕ್ಕೆ ಪಡೆಯಲಾಗಿತ್ತು. ರವಾನೆಗೆ ಸಂಬಂಧಿಸಿದ ದಾಖಲೆಗಳ ತನಿಖೆ ನಡೆಯುತ್ತಿದೆ. ಈಶಾನ್ಯ ರಾಜ್ಯಗಳಿಂದ ದೇಶದ ಬೇರೆಡೆಗೆ ಅಡಿಕೆ ಕಳ್ಳಸಾಗಣೆ ಮಾಡುವುದು ಹೊಸತಲ್ಲ, ಆದರೆ ಈ ಬಾರಿ ಯಾವುದೇ ಅಕ್ರಮವಾಗದಂತೆ ಪೊಲೀಸರು , ಅರೆ ಸೇನಾ ಪಡೆ ಬಿಗಿ ತಪಾಸಣೆ ನಡೆಸುತ್ತಿದೆ.
ಜೋಯಿಡಾದಲ್ಲಿ ನಡೆದ ಹಲಸು ಉತ್ಸವದಲ್ಲಿ 50ಕ್ಕೂ ಹೆಚ್ಚು ಮೌಲ್ಯವರ್ಧಿತ ಹಲಸಿನ ಉತ್ಪನ್ನಗಳು ಪ್ರದರ್ಶನಗೊಂಡು…
ಕ್ಯಾಂಪ್ಕೋ ಸಂಸ್ಥಾಪಕ ವಾರಣಾಶಿ ಸುಬ್ರಾಯ ಭಟ್ ಅವರ ಜನ್ಮಕ್ಕೆ 99 ವರ್ಷಗಳು ಪೂರ್ಣಗೊಂಡಿದ್ದು,…
ರಾಜ್ಯಕ್ಕೆ ಮುಂಗಾರು ಪ್ರವೇಶಿಸಿದರೂ ಅದರ ಬಲ ಇನ್ನೂ ದುರ್ಬಲವಾಗಿದೆ. ಕರಾವಳಿಯಲ್ಲಿ ಜೂನ್ 8ರಿಂದ…
ನಾರ್ವೆ ಚೆಸ್ 2026 ಟೂರ್ನಿಯನ್ನು ಗೆದ್ದ ಮೊದಲ ಭಾರತೀಯ ಆಟಗಾರ ಎಂಬ ಇತಿಹಾಸವನ್ನು…
ಆಸ್ಟ್ರೇಲಿಯಾದಲ್ಲಿ ವರೋವಾ ಮೈಟ್ ಹಾವಳಿಯಿಂದ ಜೇನುನೊಣಗಳ ಸಂಖ್ಯೆ ತೀವ್ರವಾಗಿ ಕುಸಿಯುತ್ತಿದ್ದು, ಆಹಾರ ಬೆಳೆಗಳ…
ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಜೂನ್ 6ರಂದು ಕಾಸರಗೋಡು ಜಿಲ್ಲೆಯ ಎಲ್ಲಾ ಶಿಕ್ಷಣ…