Advertisement
MIRROR FOCUS

ಅಡಿಕೆ ಧಾರಣೆ ಮತ್ತೆ ಜಿಗಿತ | ಬೆಳೆಗಾರರಿಗೆ ಮತ್ತಷ್ಟು ಭರವಸೆ | ರೈಲಲ್ಲಿ ಬಂದ ಅಡಿಕೆಯೂ ವಶವಾಯ್ತು..! ಬರ್ಮಾ ಅಡಿಕೆಗೆ ಮತ್ತೆ ಕತ್ತರಿ ಹಾಕಿದ ರೈಲ್ವೇ ಪೊಲೀಸರು |

Share

ಮಂಗಳೂರು: ಚಾಲಿ ಅಡಿಕೆ ಧಾರಣೆ ಏರುತ್ತಿದೆ. ದಿನದಿಂದ ದಿನಕ್ಕೆ ಧಾರಣೆ ಏರಿಕೆಯ ಹಾದಿಯಲ್ಲಿದೆ. ಮಂಗಳವಾರ ಮತ್ತೆ 5 ರೂಪಾಯಿ ಹೊಸ ಅಡಿಕೆಗೆ ಏರಿಕೆಯಾಗಿ 325 ರೂಪಾಯಿಗೆ ಖರೀದಿಯಾಗುವ ಮೂಲಕ  ಇದುವರೆಗಿನ ಧಾರಣೆಯಲ್ಲಿ ಸಾರ್ವಕಾಲಿಕ ದಾಖಲೆಯತ್ತ ಸಾಗಿತು. ಹೀಗಾದರೂ ಅಡಿಕೆ ಮಾರುಕಟ್ಟೆಗೆ ಬರುತ್ತಿಲ್ಲ. ಬೇಡಿಕೆ ತಡೆಯಲಾಗುತ್ತಿಲ್ಲ.. ಇದು ಅಡಿಕೆ ಮಾರುಕಟ್ಟೆಯ ಈಗಿನ ಸ್ಥಿತಿ.

ಅಡಿಕೆ ಧಾರಣೆ 300 ರೂಪಾಯಿ ದಾಟಿದ ಬಳಿಕ ಇದೀಗ ವಿದೇಶದ ಅಡಿಕೆ ಕಳ್ಳದಾರಿಯ ಮೂಲಕ ಹೇಗಾದರೂ ತರುವ ಪ್ರಯತ್ನ ನಡೆಯುತ್ತಲೇ ಇದೆ. ಎರಡು ದಿನಗಳ ಹಿಂದೆ 1500 ಕ್ಕೂ ಹೆಚ್ಚು ಚೀಲ ಅಡಿಕೆ ಪತ್ತೆಯಾಗಿತ್ತು. ಇದೀಗ ರೈಲಿನ ಮೂಲಕ ಸಾಗಾಟ ನಡೆಸುತ್ತಿದ್ದ ಪ್ರಕರಣ ಬೆಳಕಿಗೆ ಬಂದಿದೆ. ಇದನ್ನು ರೈಲ್ವೇ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಕಳೆದ 2 ದಿನಗಳಿಂದ ಇದರ ಮಾಲಕರು ಪತ್ತೆಯಾಗಿಲ್ಲ. ಸುಮಾರು 800 ಚೀಲ ಅಡಿಕೆ ಈಗ ಗುವಹಾಟಿ ರೈಲ್ವೇ ನಿಲ್ದಾಣದಲ್ಲಿದೆ.

ಅಸ್ಸಾಂ  ಗುವಹಾಟಿ ರೈಲು ನಿಲ್ದಾಣದಲ್ಲಿ 3 ಬೋಗಿಗಳಲ್ಲಿದ್ದ ಸರಕು ತಪಾಸಣೆ ವೇಳೆ ಅಡಿಕೆ ಇರುವುದು  ರೈಲ್ವೇ ಪೊಲೀಸರಿಗೆ ಪತ್ತೆಯಾಗಿದೆ.ಯಾವುದೇ ದಾಖಲೆ ಇರಲಿಲ್ಲ ಹಾಗೂ ಜಿ ಎಸ್ ಟಿ ಬಗ್ಗೆಯೂ ಯಾವುದೇ ದಾಖಲೆ ಇಲ್ಲ ಹೀಗಾಗಿ ತನಿಖೆ ನಡೆಸಲಾಗುತ್ತಿದೆ ಎಂದು ರೈಲ್ವೇ ಪೊಲೀಸರು ತಿಳಿಸಿದ್ದಾರೆ. ಮೇಲ್ನೋಟಕ್ಕೆ ಇದು ಬರ್ಮಾದಿಂದ ಬಂದಿರುವ ಕಳಪೆ ಗುಣಮಟ್ಟದ ಅಡಿಕೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.  ನವದೆಹಲಿಗೆ ತೆರಳುವ ಸರಕು ರೈಲಿನ ಮೂರು ವಿಭಾಗಗಳನ್ನು ಗುವಾಹಟಿ ರೈಲ್ವೆ ನಿಲ್ದಾಣದಲ್ಲಿ  ವಶಕ್ಕೆ ಪಡೆದ ಅಧಿಕಾರಿಗಳು ಪರಿಶೀಲನೆ ನಡೆಸಿದಾಗ  ದಿಮಾಪುರದಲ್ಲಿ ತುಂಬಿಸಿರುವುದು  ಬೆಳಕಿಗೆ ಬಂದಿದೆ. ಎರಡು ದಿನಗಳ ಹಿಂದೆ ನಾಗಾಲ್ಯಾಂಡ್ ಮೂಲಕ ದಿಮಾಪುರಕ್ಕೆ ಬಂದಿರುವ ಅಡಿಕೆಯನ್ನು ವಶಕ್ಕೆ ಪಡೆಯಲಾಗಿತ್ತು.  ರವಾನೆಗೆ ಸಂಬಂಧಿಸಿದ ದಾಖಲೆಗಳ ತನಿಖೆ ನಡೆಯುತ್ತಿದೆ. ಈಶಾನ್ಯ ರಾಜ್ಯಗಳಿಂದ ದೇಶದ ಬೇರೆಡೆಗೆ  ಅಡಿಕೆ ಕಳ್ಳಸಾಗಣೆ ಮಾಡುವುದು ಹೊಸತಲ್ಲ, ಆದರೆ ಈ ಬಾರಿ ಯಾವುದೇ ಅಕ್ರಮವಾಗದಂತೆ ಪೊಲೀಸರು , ಅರೆ ಸೇನಾ ಪಡೆ ಬಿಗಿ ತಪಾಸಣೆ ನಡೆಸುತ್ತಿದೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

“ಜಾಕ್‌ಫ್ರೂಟ್‌ ಹಬ್ಬ”ಕ್ಕೆ ಜನಸಾಗರ – 50 ಕ್ಕೂ ಹೆಚ್ಚು ಹಲಸಿನ ಮೌಲ್ಯವರ್ಧಿತ ಉತ್ಪನ್ನಗಳ ಪ್ರದರ್ಶನ

ಜೋಯಿಡಾದಲ್ಲಿ ನಡೆದ ಹಲಸು ಉತ್ಸವದಲ್ಲಿ 50ಕ್ಕೂ ಹೆಚ್ಚು ಮೌಲ್ಯವರ್ಧಿತ ಹಲಸಿನ ಉತ್ಪನ್ನಗಳು ಪ್ರದರ್ಶನಗೊಂಡು…

8 hours ago

ಕ್ಯಾಂಪ್ಕೋ ಬ್ರಹ್ಮ ವಾರಣಾಶಿ ಸುಬ್ರಾಯ ಭಟ್‌ ಜನ್ಮಶತಮಾನೋತ್ಸವ ವರ್ಷ – ಅಡಿಕೆ ಬೆಳೆಗಾರರ ಬದುಕು ಬದಲಿಸಿದ ಮಹಾನ್ ದಾರ್ಶನಿಕ

ಕ್ಯಾಂಪ್ಕೋ ಸಂಸ್ಥಾಪಕ ವಾರಣಾಶಿ ಸುಬ್ರಾಯ ಭಟ್‌ ಅವರ ಜನ್ಮಕ್ಕೆ 99 ವರ್ಷಗಳು ಪೂರ್ಣಗೊಂಡಿದ್ದು,…

9 hours ago

ಹವಾಮಾನ ವರದಿ | 06-06-2026 | ಮುಂಗಾರು ಬಂದರೂ ಮಳೆ ಇಲ್ಲ! – ಕರ್ನಾಟಕದಲ್ಲಿ ಮುಂದಿನ ವಾರದ ಹವಾಮಾನ ಹೇಗಿರಲಿದೆ?

ರಾಜ್ಯಕ್ಕೆ ಮುಂಗಾರು ಪ್ರವೇಶಿಸಿದರೂ ಅದರ ಬಲ ಇನ್ನೂ ದುರ್ಬಲವಾಗಿದೆ. ಕರಾವಳಿಯಲ್ಲಿ ಜೂನ್ 8ರಿಂದ…

18 hours ago

ಭಾರತದ ಚೆಸ್ ಇತಿಹಾಸದಲ್ಲಿ ಹೊಸ ಅಧ್ಯಾಯ – ನಾರ್ವೆ ಚೆಸ್ ಕಿರೀಟ ಗೆದ್ದ ಮೊದಲ ಭಾರತೀಯ ಪ್ರಜ್ಞಾನಂದ

ನಾರ್ವೆ ಚೆಸ್ 2026 ಟೂರ್ನಿಯನ್ನು ಗೆದ್ದ ಮೊದಲ ಭಾರತೀಯ ಆಟಗಾರ ಎಂಬ ಇತಿಹಾಸವನ್ನು…

22 hours ago

ಜೇನುಗೂಡುಗಳ ಕೊರತೆಯಿಂದ ಪರಾಗಸ್ಪರ್ಶ ವ್ಯವಸ್ಥೆ ಮೇಲೆ ಪರಿಣಾಮ ; ಕೃಷಿ ಕ್ಷೇತ್ರದಲ್ಲಿ ಆತಂಕ – ಆಹಾರ ಬೆಳೆ ಉತ್ಪಾದನೆಗೆ ಸಂಕಷ್ಟದ ಎಚ್ಚರಿಕೆ

ಆಸ್ಟ್ರೇಲಿಯಾದಲ್ಲಿ ವರೋವಾ ಮೈಟ್ ಹಾವಳಿಯಿಂದ ಜೇನುನೊಣಗಳ ಸಂಖ್ಯೆ ತೀವ್ರವಾಗಿ ಕುಸಿಯುತ್ತಿದ್ದು, ಆಹಾರ ಬೆಳೆಗಳ…

1 day ago

ಕಾಸರಗೋಡು ಜಿಲ್ಲೆಯಲ್ಲಿ ನಾಳೆ ಶಾಲಾ-ಕಾಲೇಜುಗಳಿಗೆ ರಜೆ – ರೆಡ್ ಅಲರ್ಟ್ ಹಿನ್ನೆಲೆ ಮುನ್ನೆಚ್ಚರಿಕಾ ಕ್ರಮ

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಜೂನ್ 6ರಂದು ಕಾಸರಗೋಡು ಜಿಲ್ಲೆಯ ಎಲ್ಲಾ ಶಿಕ್ಷಣ…

1 day ago