Advertisement
ಕೃಷಿ

ಅಡಿಕೆ ನಳ್ಳಿ ಬೀಳುವ ಸಮಸ್ಯೆ | ಅಡಿಕೆ ತೋಟಗಳಿಗೆ ಸಿಪಿಸಿಆರ್ ಐ ವಿಜ್ಞಾನಿಗಳ ತಂಡ ಭೇಟಿ

Share
ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆ ಸೇರಿದಂತೆ ಕಾಸರಗೋಡು ಜಿಲ್ಲೆಯ ಅಡಿಕೆ ತೋಟಗಳಲ್ಲಿ  ಎಳೆ ಅಡಿಕೆ ಬೀಳುವುದು ಹಾಗೂ ಸಿಂಗಾರ  ಒಣಗುವ ಸಮಸ್ಯೆ  ಈ ಬಾರಿ ವಿಪರೀತವಾಗಿ ಕಂಡುಬಂದಿತ್ತು. ಕಳೆದ 2 ವರ್ಷಗಳಿಂದ  ಈ ಸಮಸ್ಯೆ ಇದೆ ಎಂದು ಅಡಿಕೆ ಬೆಳೆಗಾರರು ತಿಳಿಸಿದ್ದರು. ಈ ಹಿನ್ನೆಲೆಯಲ್ಲಿ  ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘವು ವಿಟ್ಲದ ಸಿಪಿಸಿಆರ್ ಐ ವಿಜ್ಞಾನಿಗಳ ಗಮನಕ್ಕೆ ತಂದು, ಈ ಬಗ್ಗೆ ಸೂಕ್ತವಾದ ಅಧ್ಯಯನ ಹಾಗೂ ಪರಿಹಾರ ಮಾರ್ಗ ಅಗತ್ಯವಾಗಿದೆ ಎಂದು ಅಡಿಕೆ ಬೆಳೆಗಾರರ ಪರವಾಗಿ ತಿಳಿಸಿತ್ತು.
ಇದಕ್ಕೆ  ಸ್ಪಂದಿಸಿದ ವಿಜ್ಞಾನಿಗಳ ತಂಡ ಸುಳ್ಯ, ಪುತ್ತೂರು, ಕಡಬ ಪ್ರದೇಶದ ಕೆಲವು ಅಡಿಕೆ ತೋಟಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಬಿದ್ದಿರುವ ಅಡಿಕೆ ಸ್ಯಾಂಪಲ್ ಗಳ ಸಂಗ್ರಹಿಸಿ ಮಾಹಿತಿ ಸಂಗ್ರಹಿಸಿದ್ದಾರೆ. ಈ ಬಗ್ಗೆ ಅಧ್ಯಯನ ನಡೆಸುತ್ತಿದ್ದಾರೆ. ವಿಜ್ಞಾನಿಗಳ ತಂಡದಲ್ಲಿ   ಸಸ್ಯ  ಸಂತಾನೋತ್ಪತ್ತಿ ವಿಜ್ಞಾನಿ ಡಾ. ಎನ್. ಆರ್. ನಾಗರಾಜ, ಕೃಷಿ ಕೀಟಶಾಸ್ತ್ರ   ವಿಜ್ಞಾನಿ ಡಾ. ಶಿವಾಜಿ ಹೌಸ್ರಾವ್ ಥೂಬ್,  ಸಸ್ಯ ರೋಗಶಾಸ್ತ್ರ  ವಿಜ್ಞಾನಿ  ಡಾ. ಆರ್. ಥವಾ ಪ್ರಕಾಶ ಪಾಂಡಿಯನ್ ಮತ್ತು ಹಿರಿಯ ತಾಂತ್ರಿಕ ಅಧಿಕಾರಿ ಸಂತೋಷ್ ಕುಮಾರ್ ಭಾಗವಹಿಸಿದ್ದರು. ಅಡಿಕೆ ಬೆಳೆಗಾರರ ಸಂಘದ ಅಧ್ಯಕ್ಷ ಅಶೋಕ್ ಕಿನಿಲ, ಕಾರ್ಯದರ್ಶಿ ಮಹೇಶ್ ಪುಚ್ಚಪ್ಪಾಡಿ ಮೊದಲಾದವರು ಜೊತೆಗಿದ್ದರು.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮಂಗಳೂರು ಅಡಿಕೆ ಮಾರುಕಟ್ಟೆ | ಸ್ಥಿರತೆಯಿಂದ ಏರಿಕೆಯತ್ತ ಮುಖ ಮಾಡಿದ ಧಾರಣೆ

ಅಡಿಕೆ ಮಾರುಕಟ್ಟೆ ಸ್ಥಿರದಿಂದ ಏರಿಕೆಯತ್ತ ಸಾಗುತ್ತಿದೆ. ಜೂನ್-ಜುಲೈನಲ್ಲಿ ಬೆಲೆ ಹೆಚ್ಚಾಗುವ ಸಾಧ್ಯತೆ ಇದೆ.

17 hours ago

ಜನಗಣತಿ 2026 – ಏಪ್ರಿಲ್ 1ರಿಂದ ಸ್ವಯಂ-ಎಣಿಕೆ ಆರಂಭ – ಸಹಕರಿಸಲು ಜಿಲ್ಲಾಧಿಕಾರಿ ಕರೆ

ಏಪ್ರಿಲ್ 1ರಿಂದ 15ರವರೆಗೆ ಸ್ವಯಂ-ಎಣಿಕೆ ಆರಂಭವಾಗಿದೆ. ಏಪ್ರಿಲ್ 16ರಿಂದ ಮನೆಗಳಿಗೆ ಭೇಟಿ ನೀಡಿ…

17 hours ago

ಹವಾಮಾನ ವರದಿ | 01-04-2026 | ಕರಾವಳಿ-ಮಲೆನಾಡಿನಲ್ಲಿ ಗುಡುಗು ಮಳೆ ಮುಂದುವರಿಕೆ – ಏ.10 ರಿಂದ ಮತ್ತೆ ಮಳೆ ಚುರುಕು ಸಾಧ್ಯತೆ!

ಏಪ್ರಿಲ್ 4ರವರೆಗೆ ಮಳೆ ಮುಂದುವರಿಯಲಿದೆ, ಬಳಿಕ ತಾತ್ಕಾಲಿಕ ಕಡಿಮೆ. ಏಪ್ರಿಲ್ 10ರಿಂದ ಮತ್ತೆ…

1 day ago

ಮಳೆಯ ನಡುವೆಯೂ ಉರಿಯುವ ಬಿಸಿಲು..! ಏಪ್ರಿಲ್–ಜೂನ್‌ನಲ್ಲಿ ಹವಾಮಾನ ಸವಾಲು..!

ಏಪ್ರಿಲ್‌ನಲ್ಲಿ ಮಳೆ ಹೆಚ್ಚಾದರೂ ಬಿಸಿಲು ಕಡಿಮೆಯಾಗುವುದಿಲ್ಲ ಎಂದು IMD ಎಚ್ಚರಿಸಿದೆ. ಏಪ್ರಿಲ್–ಜೂನ್ ಅವಧಿಯಲ್ಲಿ…

2 days ago

ಗ್ಯಾಸ್ ಸಿಲಿಂಡರ್ ಕೊರತೆ ಪರಿಣಾಮ : ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆ

ಗ್ಯಾಸ್ ಸಿಲಿಂಡರ್ ಕೊರತೆಯಿಂದ ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆಯಾಗಿದೆ. ಕೇಂದ್ರದ ನೀತಿಗಳ…

2 days ago

ಹಸಿರು ಅಮೋನಿಯಾ ಒಪ್ಪಂದಗಳು | ಭಾರತದ ಇಂಧನ ಭದ್ರತೆಗೆ ಹೊಸ ಬಲ..! 2030 ಗುರಿಗೆ ವೇಗ

ಹಸಿರು ಅಮೋನಿಯಾ ಒಪ್ಪಂದಗಳು ಭಾರತದ ಇಂಧನ ಭದ್ರತೆಗೆ ದೊಡ್ಡ ಬಲ ನೀಡಲಿವೆ. 2030ರೊಳಗೆ…

2 days ago