Advertisement
ಸುದ್ದಿಗಳು

ಅಡಿಕೆ ಬೆಳೆಗಾರರಿಗೂ ಧಾರಣೆಯ ಲಾಕ್ಡೌನ್ ? | ಕಾಂಗ್ರೆಸ್ ಮುಖಂಡ ವೆಂಕಪ್ಪ ಗೌಡ ಪ್ರಶ್ನೆ

Share

ಸುಳ್ಯ: ಲಾಕ್ಡೌನ್ ಹಿನ್ನೆಲೆಯಲ್ಲಿ ಅಡಿಕೆ , ಕೊಕೋವನ್ನು  ಕ್ಯಾಂಪ್ಕೋ ಸಂಸ್ಥೆ ಹಾಗೂ ಗೇರು ಬೀಜವನ್ನು ಸಹಕಾರಿ ಸಂಸ್ಥೆಗಳು ಖರೀದಿ ಮಾಡಲು ದಕ ಜಿಲ್ಲಾಡಳಿತ ಜವಾಬ್ದಾರಿ ವಹಿಸಿಕೊಟ್ಟಿರುದು ಶ್ಲಾಘನೀಯ. ಈ ಮೂಲಕ ಖರೀದಿ ಮಾಡುತ್ತಿರುವುದೂ ಅಭಿನಂದನೀಯ. ಆದರೆ ಅಡಿಕೆಗೆ 250 ರೂಪಾಯಿ ಹಾಗೂ ಗೇರುಬೀಜಕ್ಕೆ 70 ರೂಪಾಯಿಗೆ ಕಡಿಮೆಯಾಗದಂತೆ ಖರೀದಿ ಮಾಡಲು ನಿರ್ಧರಿಸಿತ್ತು. ಆದರೆ ಇಂದು ಅದೇ ಎಪಿಎಂಸಿ ಯಾರ್ಡ್ ನಲ್ಲಿ ಖಾಸಗಿ ವ್ಯಾಪಾರಿಗಳು ಅಡಿಕೆ ಹಾಗೂ ಕೊಕೋ, ಗೇರುಬೀಜ ಉತ್ತಮ ದರದಲ್ಲಿ  ಖರೀದಿ ಮಾಡುತ್ತಿದ್ದಾರೆ. ಅಡಿಕೆ ಬೆಳೆಗಾರರಿಗೆ ಧಾರಣೆಯಲ್ಲೂ ಲಾಕ್ಡೌನ್ ಇದೆಯೇ ಎಂದು ಕಾಂಗ್ರೆಸ್ ಮುಖಂಡ ವೆಂಕಪ್ಪ ಗೌಡ ಹೇಳಿದ್ದಾರೆ.

Advertisement

ಈ ಹಿಂದೆ ಅಡಿಕೆ ಕೆಜಿಗೆ 250 ರೂಪಾಯಿಗೆ ಕಡಿಮೆಯಾಗದಂತೆ ಹಾಗೂ ಗೇರುಬೀಜ 70 ರೂಪಾಯಿಗೆ ಕಡಿಮೆಯಾಗದಂತೆ ಖರೀದಿ ಮಾಡಲು ಈ ಹಿಂದೆ ಸಂಸ್ಥೆಗಳು ನಿರ್ಧರಿಸಿತ್ತು. ಇಂದು ಸುಳ್ಯ ಎಪಿಎಂಸಿ ಯಾರ್ಡ್ ನಲ್ಲಿ ಕ್ಯಾಂಪ್ಕೋ ಅಡಿಕೆಗೆ 250 – 255  ರೂಪಾಯಿ ದರಲ್ಲಿ ಖರೀದಿ ಮಾಡಿದರೆ  ಅದೇ ಯಾರ್ಡನಲ್ಲಿದ್ದ ಖಾಸಗಿ ವ್ಯಾಪಾರಿಗಳು 265  ರೂಪಾಯಿಗೆ ಖರೀದಿ ಮಾಡುತ್ತಿದ್ದಾರೆ. ಅದೇ ರೀತಿ ಗೇರು ಬೀಜಕ್ಕೆ ರೂ 85 ಕ್ಕೆ ಖರೀದಿ ಮಾಡಲಾಗುತ್ತಿದೆ.ಇದಕ್ಕೆ ರೈತಾಪಿ ವರ್ಗದವರು ಏನು ಹೇಳಬೇಕು ?. ಇದೂ ಲಾಕ್ಡೌನ್ ? ಎಂದು ಪ್ರಶ್ನಿಸಿದ್ದಾರೆ.

ಇದೆಲ್ಲಾ ಇದ್ದರೂ ಜನಪ್ರತಿನಿಧಿಗಳು ಇದಕ್ಕೂ ಅವರಿಗೂ ಸಂಬಂಧವೇ ಇಲ್ಲದಂತೆ ಕೂತಿರುದು ಸರಿಯೇ ?. ಇದೊಂದು ಸರಕಾರೀ ಸಂಸ್ಥೆಯಾಗಿದ್ದು ರೈತರನ್ನು ದರೋಡೆ ಮಾಡಿದಂತೆ ಅಲ್ವೇ ?  ಬೆಳೆಗಾರರಿಗೆ ಮಾಡುವ ಅನ್ಯಾಯ ಅಲ್ಲವೇ ? ವಾರಾಣಸಿ ಸುಬ್ರಾಯ ಭಟ್ ಅವರ ನೇತೃತ್ವದಲ್ಲಿ ಅಂದು ಹುಟ್ಟು ಹಾಕಿದ ಸಂಸ್ಥೆಯ ಉದ್ದೇಶ ರೈತ ಸಂಕಷ್ಟದಲ್ಲಿದ್ದಾಗ ಅವನ ಸಹಾಯಕ್ಕೆ ಧಾವಿಸಬೇಕು ಎಂಬುದಾಗಿತ್ತು.  ಆದರೆ  ಈಗಿನ ಆಡಳಿತದಲ್ಲಿ ಅದರ ಧ್ಯೇಯೋದ್ದೇಶ  ಬದಲಾಯಿತೇ ? ಈ ಸಂಕಷ್ಟ ಕಾಲದಲ್ಲೂ ರೈತರ ಶೋಷಣೆಯೇ ? ಇದನ್ನು ಕೇಳುವ ಸ್ವಭಾವದ ಜನಪ್ರತಿನಿಧಿಗಳು ಸುಳ್ಯಕ್ಕೆ ಇಲ್ಲದಂತಾಗಿರುದು ನಮ್ಮ ದುರಂತವೇ ಸರಿ ಎಂದು ವೆಂಕಪ್ಪ ಗೌಡ ಹೇಳಿದ್ದಾರೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕರಾವಳಿಯಲ್ಲಿ ಅಕಾಲಿಕ ಮಳೆ ಅಬ್ಬರ | ಸುಬ್ರಹ್ಮಣ್ಯದ ಬಳಿ 42 ಮಿಮೀ, ಅಡಿಕೆ ಬೆಳೆಗಾರರಿಗೆ ಸಂಕಷ್ಟ

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಹಲವೆಡೆ ಶನಿವಾರ ಸಂಜೆ ಅಕಾಲಿಕ ಮಳೆಯಾಗಿದ್ದು,…

9 hours ago

ಹವಾಮಾನ ವರದಿ | 21-02-2026 | ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಲಕ್ಷಣ | ಎಲ್ಲೆಲ್ಲಾ ಮಳೆ ಇದೆ…? ಎಷ್ಟು ದಿನ ಮಳೆ ಸಾಧ್ಯತೆ…?

ಕರ್ನಾಟಕದಲ್ಲಿ ಫೆಬ್ರುವರಿ 27ರವರೆಗೆ ಬಿಸಿಲಿನ ಜೊತೆಗೆ ತುಂತುರು ಮತ್ತು ಗುಡುಗು ಮಳೆಯ ಮುನ್ಸೂಚನೆ.…

15 hours ago

ಮಿಶ್ರ ಕೃಷಿಯತ್ತ ಮಲೆನಾಡಿನ ರೈತನ ಹೆಜ್ಜೆ ಅನಿವಾರ್ಯ

ಮಲೆನಾಡಿನಲ್ಲಿ ಅಡಿಕೆ ರೈತರು ಮಿಶ್ರ ಕೃಷಿಯತ್ತ ಮುಖ ಮಾಡುತ್ತಿದ್ದಾರೆ. ಹವಾಮಾನ ಬದಲಾವಣೆ, ಬೆಲೆ…

19 hours ago

ನಂದಿನಿ ಉತ್ಪನ್ನಗಳ ವಿರುದ್ಧದ ವದಂತಿ ನಂಬಬೇಡಿ : ಗ್ರಾಹಕರಿಗೆ ಕೆಎಂಎಫ್ ಮನವಿ

ನಂದಿನಿ ಹಾಲು ಮತ್ತು ಉತ್ಪನ್ನಗಳು ಸೇವನೆಗೆ ಸಂಪೂರ್ಣ ಸುರಕ್ಷಿತವೆಂದು ಕೆಎಂಎಫ್ ಸ್ಪಷ್ಟನೆ ನೀಡಿದೆ.…

19 hours ago

ರೈತರಿಗೆ ಗನ್ ಪರವಾನಗಿ : ಶೀಘ್ರದಲ್ಲೇ ಆನ್ಲೈನ್ ವ್ಯವಸ್ಥೆ ಜಾರಿ – ಜಿಲ್ಲಾಧಿಕಾರಿ ದರ್ಶನ್ ಎಚ್.ವಿ

ರೈತರಿಗೆ ಗನ್ ಪರವಾನಗಿ ಹಾಗೂ ನವೀಕರಣ ಪ್ರಕ್ರಿಯೆಯನ್ನು ಸುಲಭಗೊಳಿಸಲು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ…

19 hours ago

ಮಂಗಳೂರು ಅಡಿಕೆ ಮಾರುಕಟ್ಟೆ ‘ಸೈಕಲಾಜಿಕಲ್ ಬಫರ್’ ಹಂತಕ್ಕೆ…!

ಮಂಗಳೂರಿನ ಅಡಿಕೆ ಮಾರುಕಟ್ಟೆಯು ಪ್ರಸ್ತುತ ಕೇವಲ ಬೆಲೆ ಏರಿಳಿತದ ಕೇಂದ್ರವಾಗಿ ಉಳಿದಿಲ್ಲ; ಬದಲಾಗಿ…

1 day ago