Advertisement
ಸುದ್ದಿಗಳು

ಅಡಿಕೆ ಬೆಳೆಗಾರರಿಗೂ ಧಾರಣೆಯ ಲಾಕ್ಡೌನ್ ? | ಕಾಂಗ್ರೆಸ್ ಮುಖಂಡ ವೆಂಕಪ್ಪ ಗೌಡ ಪ್ರಶ್ನೆ

Share

ಸುಳ್ಯ: ಲಾಕ್ಡೌನ್ ಹಿನ್ನೆಲೆಯಲ್ಲಿ ಅಡಿಕೆ , ಕೊಕೋವನ್ನು  ಕ್ಯಾಂಪ್ಕೋ ಸಂಸ್ಥೆ ಹಾಗೂ ಗೇರು ಬೀಜವನ್ನು ಸಹಕಾರಿ ಸಂಸ್ಥೆಗಳು ಖರೀದಿ ಮಾಡಲು ದಕ ಜಿಲ್ಲಾಡಳಿತ ಜವಾಬ್ದಾರಿ ವಹಿಸಿಕೊಟ್ಟಿರುದು ಶ್ಲಾಘನೀಯ. ಈ ಮೂಲಕ ಖರೀದಿ ಮಾಡುತ್ತಿರುವುದೂ ಅಭಿನಂದನೀಯ. ಆದರೆ ಅಡಿಕೆಗೆ 250 ರೂಪಾಯಿ ಹಾಗೂ ಗೇರುಬೀಜಕ್ಕೆ 70 ರೂಪಾಯಿಗೆ ಕಡಿಮೆಯಾಗದಂತೆ ಖರೀದಿ ಮಾಡಲು ನಿರ್ಧರಿಸಿತ್ತು. ಆದರೆ ಇಂದು ಅದೇ ಎಪಿಎಂಸಿ ಯಾರ್ಡ್ ನಲ್ಲಿ ಖಾಸಗಿ ವ್ಯಾಪಾರಿಗಳು ಅಡಿಕೆ ಹಾಗೂ ಕೊಕೋ, ಗೇರುಬೀಜ ಉತ್ತಮ ದರದಲ್ಲಿ  ಖರೀದಿ ಮಾಡುತ್ತಿದ್ದಾರೆ. ಅಡಿಕೆ ಬೆಳೆಗಾರರಿಗೆ ಧಾರಣೆಯಲ್ಲೂ ಲಾಕ್ಡೌನ್ ಇದೆಯೇ ಎಂದು ಕಾಂಗ್ರೆಸ್ ಮುಖಂಡ ವೆಂಕಪ್ಪ ಗೌಡ ಹೇಳಿದ್ದಾರೆ.

ಈ ಹಿಂದೆ ಅಡಿಕೆ ಕೆಜಿಗೆ 250 ರೂಪಾಯಿಗೆ ಕಡಿಮೆಯಾಗದಂತೆ ಹಾಗೂ ಗೇರುಬೀಜ 70 ರೂಪಾಯಿಗೆ ಕಡಿಮೆಯಾಗದಂತೆ ಖರೀದಿ ಮಾಡಲು ಈ ಹಿಂದೆ ಸಂಸ್ಥೆಗಳು ನಿರ್ಧರಿಸಿತ್ತು. ಇಂದು ಸುಳ್ಯ ಎಪಿಎಂಸಿ ಯಾರ್ಡ್ ನಲ್ಲಿ ಕ್ಯಾಂಪ್ಕೋ ಅಡಿಕೆಗೆ 250 – 255  ರೂಪಾಯಿ ದರಲ್ಲಿ ಖರೀದಿ ಮಾಡಿದರೆ  ಅದೇ ಯಾರ್ಡನಲ್ಲಿದ್ದ ಖಾಸಗಿ ವ್ಯಾಪಾರಿಗಳು 265  ರೂಪಾಯಿಗೆ ಖರೀದಿ ಮಾಡುತ್ತಿದ್ದಾರೆ. ಅದೇ ರೀತಿ ಗೇರು ಬೀಜಕ್ಕೆ ರೂ 85 ಕ್ಕೆ ಖರೀದಿ ಮಾಡಲಾಗುತ್ತಿದೆ.ಇದಕ್ಕೆ ರೈತಾಪಿ ವರ್ಗದವರು ಏನು ಹೇಳಬೇಕು ?. ಇದೂ ಲಾಕ್ಡೌನ್ ? ಎಂದು ಪ್ರಶ್ನಿಸಿದ್ದಾರೆ.

ಇದೆಲ್ಲಾ ಇದ್ದರೂ ಜನಪ್ರತಿನಿಧಿಗಳು ಇದಕ್ಕೂ ಅವರಿಗೂ ಸಂಬಂಧವೇ ಇಲ್ಲದಂತೆ ಕೂತಿರುದು ಸರಿಯೇ ?. ಇದೊಂದು ಸರಕಾರೀ ಸಂಸ್ಥೆಯಾಗಿದ್ದು ರೈತರನ್ನು ದರೋಡೆ ಮಾಡಿದಂತೆ ಅಲ್ವೇ ?  ಬೆಳೆಗಾರರಿಗೆ ಮಾಡುವ ಅನ್ಯಾಯ ಅಲ್ಲವೇ ? ವಾರಾಣಸಿ ಸುಬ್ರಾಯ ಭಟ್ ಅವರ ನೇತೃತ್ವದಲ್ಲಿ ಅಂದು ಹುಟ್ಟು ಹಾಕಿದ ಸಂಸ್ಥೆಯ ಉದ್ದೇಶ ರೈತ ಸಂಕಷ್ಟದಲ್ಲಿದ್ದಾಗ ಅವನ ಸಹಾಯಕ್ಕೆ ಧಾವಿಸಬೇಕು ಎಂಬುದಾಗಿತ್ತು.  ಆದರೆ  ಈಗಿನ ಆಡಳಿತದಲ್ಲಿ ಅದರ ಧ್ಯೇಯೋದ್ದೇಶ  ಬದಲಾಯಿತೇ ? ಈ ಸಂಕಷ್ಟ ಕಾಲದಲ್ಲೂ ರೈತರ ಶೋಷಣೆಯೇ ? ಇದನ್ನು ಕೇಳುವ ಸ್ವಭಾವದ ಜನಪ್ರತಿನಿಧಿಗಳು ಸುಳ್ಯಕ್ಕೆ ಇಲ್ಲದಂತಾಗಿರುದು ನಮ್ಮ ದುರಂತವೇ ಸರಿ ಎಂದು ವೆಂಕಪ್ಪ ಗೌಡ ಹೇಳಿದ್ದಾರೆ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 23-08-2026 | ಆಗಸ್ಟ್ 25 ರವರೆಗೆ ಮಳೆ – ಕರಾವಳಿ-ಮಲೆನಾಡಿನಲ್ಲಿ ಉತ್ತಮ ಮಳೆ ಸಾಧ್ಯತೆ

ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕಾಗಿದ್ದು, ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 25ರವರೆಗೆ ಮಳೆ…

2 hours ago

ಅಳಿವಿನಂಚಿನಲ್ಲಿದ್ದ ಪೆರಿಯಾರ್ ಹಸುವಿಗೆ ರಾಷ್ಟ್ರೀಯ ತಳಿ ಮಾನ್ಯತೆ – ಕೇರಳದ ಎರಡನೇ ದೇಶಿ ಗೋತಳಿ

ಅಳಿವಿನಂಚಿನಲ್ಲಿದ್ದ ಕೇರಳದ ಪೆರಿಯಾರ್ ಕುಳ್ಳನ್ ಹಸುವಿಗೆ ಭಾರತೀಯ ಕೃಷಿ ಸಂಶೋಧನಾ ಮಂಡಳಿಯ ರಾಷ್ಟ್ರೀಯ…

3 hours ago

ಪಿಒಪಿ ಗಣಪತಿಗೆ ಬ್ರೇಕ್..? ಕರಾವಳಿಯ 90–95% ಪರಿಸರ ಸ್ನೇಹಿ ಮಾದರಿ ರಾಜ್ಯಕ್ಕೆ ಪಾಠ

ರಾಜ್ಯದ ಗ್ರಾಮೀಣ ಪ್ರದೇಶಗಳಲ್ಲಿ ಪರಿಸರ ಸ್ನೇಹಿ ಗಣಪತಿ ಮೂರ್ತಿಗಳನ್ನೇ ಪ್ರತಿಷ್ಠಾಪಿಸಿ ಗಣೇಶೋತ್ಸವ ಆಚರಿಸುವಂತೆ…

5 hours ago

ಪಶ್ಚಿಮ ಘಟ್ಟ ಸಂರಕ್ಷಣೆ ಹೆಸರಿನಲ್ಲಿ ಕೃಷಿಕರಿಗೆ ನಿರ್ಬಂಧ ಬೇಡ – ಕಸ್ತೂರಿ ರಂಗನ್ ವರದಿ ಸಂಪೂರ್ಣ ತಿರಸ್ಕರಿಸಲು ಆಗ್ರಹ

ಪಶ್ಚಿಮ ಘಟ್ಟ ಸಂರಕ್ಷಣೆಯ ಹೆಸರಿನಲ್ಲಿ ಕೃಷಿಕರ ಜೀವನೋಪಾಯಕ್ಕೆ ನಿರ್ಬಂಧ ಹೇರಬಾರದು, ಕಸ್ತೂರಿ ರಂಗನ್…

5 hours ago

ಮುಂಗಾರು ಬೇಗನೆ ವಿದಾಯ ಹೇಳುತ್ತಿದೆಯೇ..? ಸೆಪ್ಟೆಂಬರ್‌ನಲ್ಲಿ ಮಳೆ ಕಡಿಮೆಯಾಗುವ ಮುನ್ಸೂಚನೆ..?

ಸೆಪ್ಟೆಂಬರ್ 5–10ರ ನಂತರ ದೇಶದ ಹಲವು ಭಾಗಗಳಲ್ಲಿ ಮುಂಗಾರು ಮಳೆ ಗಣನೀಯವಾಗಿ ಕಡಿಮೆಯಾಗುವ…

19 hours ago

ಹವಾಮಾನ ವರದಿ | 22-08-2026 | ಕರಾವಳಿಯಲ್ಲಿ ಮಳೆ ಇಳಿಕೆ, 26ರಿಂದ ಮತ್ತಷ್ಟು ದುರ್ಬಲವಾಗುವ ಸಾಧ್ಯತೆ

ಕರ್ನಾಟಕದಲ್ಲಿ ಆಗಸ್ಟ್ 23ರಿಂದ 25ರವರೆಗೆ ಹಲವೆಡೆ ಅಲ್ಲಲ್ಲಿ ಸಾಮಾನ್ಯ ಮಳೆಯಷ್ಟೇ ನಿರೀಕ್ಷಿಸಲಾಗಿದ್ದು, ಕರಾವಳಿ…

1 day ago