Advertisement
ಸುದ್ದಿಗಳು

ಅಡಿಕೆ ಬೆಳೆಗಾರರಿಗೆ ಆತಂಕದ ಅಗತ್ಯವಿಲ್ಲ : ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘ

Share

ಪುತ್ತೂರು: ಕೊರೊನಾ ವೈರಸ್ ಹರಡುವುದು ತಡೆಯಲು ಸರಕಾರಗಳು ಕಟ್ಟುನಿಟ್ಟಿನ ಆದೇಶ ಮಾಡಿವೆ. ಲಾಕ್ಡೌನ್ ಸಹಿತ ವಿವಿಧ ಮಾರ್ಗಸೂಚಿಗಳನ್ನು ತಿಳಿಸಿದೆ. ಇದನ್ನು ಅನುಸರಿಸಬೇಕಾದ್ದು ದೇಶದ ಎಲ್ಲರ ಜವಾಬ್ದಾರಿ. ಇದು ಪ್ರತಿಯೊಬ್ಬ ನಾಗರಿಕನ ಉಳಿವಿಗಾಗಿ. ಇಂತಹ ಸಂದರ್ಭದಲ್ಲಿ ಅಡಿಕೆ , ಗುಟ್ಕಾ ಸಂಪೂರ್ಣವಾಗಿ ಶಾಶ್ವತ ನಿಷೇಧ ಮೊದಲಾದ ಹೇಳಿಕೆಗಳು, ಸಾಮಾಜಿಕ ಜಾಲತಾಣಗಳಲ್ಲಿ ಬರುವ ಯಾವುದೇ ವದಂತಿಗಳಿಗೆ, ಅಪಪ್ರಚಾರಗಳಿಗೆ ಕಿವಿಗೊಡಬೇಕಾಗಿಲ್ಲ, ಆತಂಕಕ್ಕೆ ಒಳಗಾಗಬೇಕಾಗಿಲ್ಲ ಎಂದು ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘ ತಿಳಿಸಿದೆ.

ದೇಶದ ಹಿತದ ಸಂದರ್ಭದಲ್ಲಿ ಪ್ರತೀ ಬೆಳೆಗಾರರ ಪಾತ್ರವೂ ಬಹುಮುಖ್ಯವಾಗಿದೆ. ಅಡಿಕೆ ಬೆಳೆಯುವ ಪ್ರದೇಶಗಳಂತೆಯೇ ಅಡಿಕೆ ಬಳಕೆಯ ಪ್ರದೇಶದಲ್ಲೂ ಈಗ ಕೊರೊನಾ ವೈರಸ್ ಭೀತಿ ಇದೆ. ಹೀಗಾಗಿ ಅಲ್ಲಿನ ರಾಜ್ಯ ಸರಕಾರಗಳು ವೈರಸ್ ಹರಡುವುದು ತಡೆಗೆ ಬೇಕಾದ ಕ್ರಮಗಳನ್ನು ಕೈಗೊಳ್ಳುತ್ತವೆ. ಇದರಲ್ಲಿ ತಿಂದು ಉಗುಳುವುದೂ ಸೇರಿದೆ. ಈ ಸಂದರ್ಭ ತಾತ್ಕಾಲಿಕವಾಗಿ ಅಂತಹ ವಸ್ತುಗಳ ಮಾರಾಟ ನಿಷೇಧ ಇರುತ್ತದೆ. ಇದೇ ಅಂತಿಮವಲ್ಲ ಎಂಬ ವಿಶ್ವಾಸ ಎಲ್ಲರಿಗೂ ಇದೆ. ಈ ಬಗ್ಗೆ ಜನಪ್ರತಿನಿಧಿಗಳು, ಸಂಸ್ಥೆಗಳು, ಅಡಿಕೆ ಬೆಳೆಯುವ ಪ್ರದೇಶದ ಸಂಸದರುಗಳು ಸರಕಾರದ ಗಮನಕ್ಕೆ ಈಗಾಗಲೇ ತಂದಿದ್ದಾರೆ.

ಈಗ ದಕ್ಷಿಣ ಕನ್ನಡ, ಕಾಸರಗೋಡಿನಲ್ಲಿ ಅಡಿಕೆ ಖರೀದಿಗೆ ಕ್ಯಾಂಪ್ಕೋ ಹಾಗೂ ಶಿರಸಿಯಲ್ಲಿ ಟಿಎಸ್‍ಎಸ್ ಮುಂದೆ ಬಂದಿದೆ. ಈ ಮೂಲಕ ಅಡಿಕೆ ಬೆಳೆಗಾರರಿಗೆ ಧೈರ್ಯವನ್ನೂ ತುಂಬಿದ್ದಾರೆ. ಈ ಸಂದರ್ಭದಲ್ಲಿ ಆರ್ಥಿಕವಾಗಿ ಯಾರಿಗೆ ಈಗ ತಕ್ಷಣದ ಅಗತ್ಯ ಇದೆಯೋ ಅಂತಹವರು ಅಡಿಕೆ ಮಾರಾಟ ಮಾಡಿದರೆ ಮಧ್ಯಮ ಹಾಗೂ ಬಡವರ್ಗದ ಮಂದಿಗೆ ಸಹಕಾರವಾಗುತ್ತದೆ. ಮುಂದೆ ಲಾಕ್ಡೌನ್ ಮುಗಿದ ತಕ್ಷಣವೇ ಅಡಿಕೆ ಮಾರುಕಟ್ಟೆ ಸಹಜ ಸ್ಥಿತಿಗೆ ಬರುತ್ತದೆ ಎನ್ನಲು ಸಾಧ್ಯವಿಲ್ಲ. ಈಗಿನ ಪರಿಸ್ಥಿತಿಗಿಂತ ಸುಧಾರಣೆಯಾಗಲಿದೆ. ಲಾಕ್ಡೌನ್ ಮುಗಿದ ಬಳಿಕ ಅಡಿಕೆಯನ್ನು ಒಮ್ಮೆಲೇ ಮಾರುಕಟ್ಟೆಗೆ ಬಿಡದೇ ಇದ್ದರೆ ಕೆಲವೇ ಸಮಯಗಳಲ್ಲಿ ಅಡಿಕೆ ಮಾರುಕಟ್ಟೆ ಸಹಜ ಸ್ಥಿತಿಗೆ ಬರಲಿದೆ. ಅಡಿಕೆ ಬೆಳೆಗಾರರಿಗೆ ಯಾವುದೇ ತೊಂದರೆಯಾಗದಂತೆ ಸೂಕ್ತ ಕ್ರಮ ಕೈಗೊಳ್ಳಲು ಸರಕಾರವನ್ನು, ಜನಪ್ರತಿನಿಧಿಗಳನ್ನು ಒತ್ತಾಯ ಮಾಡಲಾಗುವುದು ಎಂದು ಎಂದು ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘ ಮಾಡುತ್ತಿದೆ ಎಂದು ಸಂಘದ ಅಧ್ಯಕ್ಷ ಅಶೋಕ್ ಕಿನಿಲ ತಿಳಿಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಡಿಕೆ ಎಲೆ ಚುಕ್ಕಿ ರೋಗ ನಿರ್ವಹಣೆ | ಗುತ್ತಿಗಾರಿನ ಪ್ರಾತ್ಯಕ್ಷಿಕೆ ತೋಟಕ್ಕೆ ಸಿಪಿಸಿಆರ್‌ಐ ನಿರ್ದೇಶಕರ ಭೇಟಿ | ವೈಜ್ಞಾನಿಕ ಕ್ರಮಗಳು ರೈತರಿಗೆ ಆಶಾಕಿರಣ

ಅಡಿಕೆ ಎಲೆಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್‌ಐ ಪ್ರಾತ್ಯಕ್ಷಿಕೆ ಮುಂದುವರಿದಿದೆ. ವೈಜ್ಞಾನಿಕ ಕ್ರಮಗಳು ಮತ್ತು…

3 hours ago

ದೇಶದ ಹಲವು ರಾಜ್ಯಗಳಲ್ಲಿ ಭಾರಿ ಮಳೆ – ಆಲಿಕಲ್ಲು ಮಳೆಯಿಂದ ರೈತರ ಬೆಳೆ ನಷ್ಟ

ದೇಶದ ಹಲವು ರಾಜ್ಯಗಳಲ್ಲಿ ಭಾರಿ ಮಳೆ ಮತ್ತು ಆಲಿಕಲ್ಲು ಮಳೆಯಿಂದ ಬೆಳೆಗಳಿಗೆ ಹಾನಿಯಾಗಿದೆ.…

15 hours ago

ಹವಾಮಾನ ವರದಿ | 05-04-2026 | ರಾಜ್ಯದಲ್ಲಿ ಮಳೆ ಕಡಿಮೆಯ ಸೂಚನೆ – ಕರಾವಳಿ-ಮಲೆನಾಡಿನಲ್ಲಿ ತುಂತುರು ಮಳೆ, ರಾಜ್ಯಾದ್ಯಂತ ಬಿಸಿಲು ಏರಿಕೆ..!

ಕರ್ನಾಟಕದಲ್ಲಿ ಏಪ್ರಿಲ್ 6ರಿಂದ ಮಳೆ ಕಡಿಮೆಯಾಗಲಿದೆ. ರಾಜ್ಯಾದ್ಯಂತ ಬಿಸಿಲು ಮತ್ತು ತಾಪಮಾನ ಏರಿಕೆ…

1 day ago

ಸಾರ್ವಜನಿಕ ಸ್ಥಳಗಳಲ್ಲಿ ಶಿಸ್ತು ಮತ್ತು ನಾಗರಿಕ ಸಂಸ್ಕೃತಿ – ಸಮಾಜದ ನಿಜವಾದ ಅಳತೆ

ಸಾರ್ವಜನಿಕ ಸ್ಥಳಗಳಲ್ಲಿ ಶಿಸ್ತು ಸಮಾಜದ ನಿಜವಾದ ಸಂಸ್ಕೃತಿಯನ್ನು ತೋರಿಸುತ್ತದೆ. ಸಣ್ಣ ಸಣ್ಣ ಸರಿಯಾದ…

2 days ago

ಗುಜ್ಜೆ-ಕಡಲೆ ಗಸಿ – ಸರಳ ಪದಾರ್ಥಗಳಿಂದ ಸೊಗಸಾದ ಸಾಂಪ್ರದಾಯಿಕ ಸವಿರುಚಿ!

ಗುಜ್ಜೆ ಮತ್ತು ಕಡಲೆ ಬಳಸಿ ತಯಾರಿಸುವ ಸಾಂಪ್ರದಾಯಿಕ ಗಸಿ ರುಚಿಕರ ಆಹಾರ. ಚಪಾತಿ…

3 days ago