ಸುದ್ದಿಗಳು

ಅಡಿಕೆ ಬೆಳೆಗಾರರಿಗೆ ಆತಂಕದ ಅಗತ್ಯವಿಲ್ಲ : ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಪುತ್ತೂರು: ಕೊರೊನಾ ವೈರಸ್ ಹರಡುವುದು ತಡೆಯಲು ಸರಕಾರಗಳು ಕಟ್ಟುನಿಟ್ಟಿನ ಆದೇಶ ಮಾಡಿವೆ. ಲಾಕ್ಡೌನ್ ಸಹಿತ ವಿವಿಧ ಮಾರ್ಗಸೂಚಿಗಳನ್ನು ತಿಳಿಸಿದೆ. ಇದನ್ನು ಅನುಸರಿಸಬೇಕಾದ್ದು ದೇಶದ ಎಲ್ಲರ ಜವಾಬ್ದಾರಿ. ಇದು ಪ್ರತಿಯೊಬ್ಬ ನಾಗರಿಕನ ಉಳಿವಿಗಾಗಿ. ಇಂತಹ ಸಂದರ್ಭದಲ್ಲಿ ಅಡಿಕೆ , ಗುಟ್ಕಾ ಸಂಪೂರ್ಣವಾಗಿ ಶಾಶ್ವತ ನಿಷೇಧ ಮೊದಲಾದ ಹೇಳಿಕೆಗಳು, ಸಾಮಾಜಿಕ ಜಾಲತಾಣಗಳಲ್ಲಿ ಬರುವ ಯಾವುದೇ ವದಂತಿಗಳಿಗೆ, ಅಪಪ್ರಚಾರಗಳಿಗೆ ಕಿವಿಗೊಡಬೇಕಾಗಿಲ್ಲ, ಆತಂಕಕ್ಕೆ ಒಳಗಾಗಬೇಕಾಗಿಲ್ಲ ಎಂದು ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘ ತಿಳಿಸಿದೆ.

Advertisement
Advertisement

ದೇಶದ ಹಿತದ ಸಂದರ್ಭದಲ್ಲಿ ಪ್ರತೀ ಬೆಳೆಗಾರರ ಪಾತ್ರವೂ ಬಹುಮುಖ್ಯವಾಗಿದೆ. ಅಡಿಕೆ ಬೆಳೆಯುವ ಪ್ರದೇಶಗಳಂತೆಯೇ ಅಡಿಕೆ ಬಳಕೆಯ ಪ್ರದೇಶದಲ್ಲೂ ಈಗ ಕೊರೊನಾ ವೈರಸ್ ಭೀತಿ ಇದೆ. ಹೀಗಾಗಿ ಅಲ್ಲಿನ ರಾಜ್ಯ ಸರಕಾರಗಳು ವೈರಸ್ ಹರಡುವುದು ತಡೆಗೆ ಬೇಕಾದ ಕ್ರಮಗಳನ್ನು ಕೈಗೊಳ್ಳುತ್ತವೆ. ಇದರಲ್ಲಿ ತಿಂದು ಉಗುಳುವುದೂ ಸೇರಿದೆ. ಈ ಸಂದರ್ಭ ತಾತ್ಕಾಲಿಕವಾಗಿ ಅಂತಹ ವಸ್ತುಗಳ ಮಾರಾಟ ನಿಷೇಧ ಇರುತ್ತದೆ. ಇದೇ ಅಂತಿಮವಲ್ಲ ಎಂಬ ವಿಶ್ವಾಸ ಎಲ್ಲರಿಗೂ ಇದೆ. ಈ ಬಗ್ಗೆ ಜನಪ್ರತಿನಿಧಿಗಳು, ಸಂಸ್ಥೆಗಳು, ಅಡಿಕೆ ಬೆಳೆಯುವ ಪ್ರದೇಶದ ಸಂಸದರುಗಳು ಸರಕಾರದ ಗಮನಕ್ಕೆ ಈಗಾಗಲೇ ತಂದಿದ್ದಾರೆ.

ಈಗ ದಕ್ಷಿಣ ಕನ್ನಡ, ಕಾಸರಗೋಡಿನಲ್ಲಿ ಅಡಿಕೆ ಖರೀದಿಗೆ ಕ್ಯಾಂಪ್ಕೋ ಹಾಗೂ ಶಿರಸಿಯಲ್ಲಿ ಟಿಎಸ್‍ಎಸ್ ಮುಂದೆ ಬಂದಿದೆ. ಈ ಮೂಲಕ ಅಡಿಕೆ ಬೆಳೆಗಾರರಿಗೆ ಧೈರ್ಯವನ್ನೂ ತುಂಬಿದ್ದಾರೆ. ಈ ಸಂದರ್ಭದಲ್ಲಿ ಆರ್ಥಿಕವಾಗಿ ಯಾರಿಗೆ ಈಗ ತಕ್ಷಣದ ಅಗತ್ಯ ಇದೆಯೋ ಅಂತಹವರು ಅಡಿಕೆ ಮಾರಾಟ ಮಾಡಿದರೆ ಮಧ್ಯಮ ಹಾಗೂ ಬಡವರ್ಗದ ಮಂದಿಗೆ ಸಹಕಾರವಾಗುತ್ತದೆ. ಮುಂದೆ ಲಾಕ್ಡೌನ್ ಮುಗಿದ ತಕ್ಷಣವೇ ಅಡಿಕೆ ಮಾರುಕಟ್ಟೆ ಸಹಜ ಸ್ಥಿತಿಗೆ ಬರುತ್ತದೆ ಎನ್ನಲು ಸಾಧ್ಯವಿಲ್ಲ. ಈಗಿನ ಪರಿಸ್ಥಿತಿಗಿಂತ ಸುಧಾರಣೆಯಾಗಲಿದೆ. ಲಾಕ್ಡೌನ್ ಮುಗಿದ ಬಳಿಕ ಅಡಿಕೆಯನ್ನು ಒಮ್ಮೆಲೇ ಮಾರುಕಟ್ಟೆಗೆ ಬಿಡದೇ ಇದ್ದರೆ ಕೆಲವೇ ಸಮಯಗಳಲ್ಲಿ ಅಡಿಕೆ ಮಾರುಕಟ್ಟೆ ಸಹಜ ಸ್ಥಿತಿಗೆ ಬರಲಿದೆ. ಅಡಿಕೆ ಬೆಳೆಗಾರರಿಗೆ ಯಾವುದೇ ತೊಂದರೆಯಾಗದಂತೆ ಸೂಕ್ತ ಕ್ರಮ ಕೈಗೊಳ್ಳಲು ಸರಕಾರವನ್ನು, ಜನಪ್ರತಿನಿಧಿಗಳನ್ನು ಒತ್ತಾಯ ಮಾಡಲಾಗುವುದು ಎಂದು ಎಂದು ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘ ಮಾಡುತ್ತಿದೆ ಎಂದು ಸಂಘದ ಅಧ್ಯಕ್ಷ ಅಶೋಕ್ ಕಿನಿಲ ತಿಳಿಸಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 09-06-2025 | ಜೂನ್ 10 ರಿಂದ ಮಳೆಯ ಪ್ರಮಾಣ ಹೆಚ್ಚಾಗುವ ನಿರೀಕ್ಷೆ ಇದೆ | ಮುಂದಿನ 10 ದಿನಗಳವರೆಗೂ ಉತ್ತಮ ಮಳೆ ಸಾಧ್ಯತೆ|

ಅರಬ್ಬಿ ಸಮುದ್ರದ ಮೇಲ್ಮೈ ಸುಳಿಗಾಳೀಯು ಪಶ್ಚಿಮಾಭಿಮುಖವಾಗಿ ಚಲಿಸುತ್ತಿದ್ದು, ಇದೇ ಸಂದರ್ಭದಲ್ಲಿ ಬಂಗಾಳಕೊಲ್ಲಿಯಲ್ಲೂ ಸಣ್ಣ…

8 hours ago

ಅಡಿಕೆಯ ಮೌಲ್ಯವರ್ಧಿತ ಉತ್ಪನ್ನಗಳು

ಭಾರತದಲ್ಲಿ ಉತ್ಪಾದನೆ ಆಗುತ್ತಿರುವ ಒಟ್ಟು ಅಡಿಕೆಯ ಪ್ರಮಾಣ ಸುಮಾರು ಹದಿನಾರು ಲಕ್ಷ ಟನ್,…

10 hours ago

ವಿಶ್ವದ ಅತೀ ಎತ್ತರದ ಚೆನಾಬ್ ರೈಲ್ವೆ ಸೇತುವೆ ನಿರ್ಮಾಣ | ಬೆಂಗಳೂರಿನ ಜಿ.ಮಾಧವಿ ಲತಾ ಪ್ರಮುಖ ಪಾತ್ರ | ಭೂತಾಂತ್ರಿಕ ಸಲಹೆಗಾರರಾಗಿ 17 ವರ್ಷಗಳ ಕಾಲ ಕೊಡುಗೆ

1,486 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾದ ಚೆನಾಬ್ ಸೇತುವೆಯನ್ನು ಸರ್ಕಾರವು "ಇತ್ತೀಚಿನ ಇತಿಹಾಸದಲ್ಲಿ…

12 hours ago

ಇಂದಿನಿಂದ ಕರಾವಳಿ-ಮಲೆನಾಡು ಜಿಲ್ಲೆಗಳಲ್ಲಿ ಮಳೆ

ರಾಜ್ಯದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಇಂದಿನಿಂದ ಮಳೆ ಆರಂಭವಾಗಲಿದೆ. ಅಲ್ಲಲ್ಲಿ ಸಾಧಾರಣ…

13 hours ago

ಮೃಗಶಿರ ನಕ್ಷತ್ರಕ್ಕೆ ಸೂರ್ಯನ ಪ್ರವೇಶ | ಈ ಮೂರು ರಾಶಿಗಳ ಅದೃಷ್ಟ..!

ಹೆಚ್ಚಿನ ಮಾಹಿತಿಗಾಗಿ ರಾಯರ ಪರವ ಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕತೆ 9535156490

13 hours ago

ಬದುಕು ಪುರಾಣ | ಅಂದು ಒಬ್ಬ ಬಕಾಸುರ.. ಇಂದು?

ಭೋಜನವೆಂದರೆ ಉದರಾಗ್ನಿಯನ್ನು ತಣಿಸುವ ಯಜ್ಞ. ಉದರಾಗ್ನಿಗೆ ಖಾದ್ಯಗಳೇ ಆಜ್ಯಗಳು. ಯಜ್ಞವೆಂದಾಗ ಶ್ರದ್ಧೆ, ಭಕ್ತಿ ಮತ್ತು…

1 day ago