ಅಡಿಕೆ ಬೆಳೆಗಾರರು ಧೈರ್ಯವಾಗಿರಿ – ಅ ಭಾ ಅ ಬೆ ಸಂಘ

March 20, 2020
11:23 AM

ಪುತ್ತೂರು: ದೇಶದಾದ್ಯಂತ ಕೊರೊನಾ ಭೀತಿ ಎದುರಾಗಿದೆ. ಆರೋಗ್ಯ ತುರ್ತುಪರಿಸ್ಥಿತಿಗೆ ಸರಕಾರ ಕರೆ ನೀಡಿದೆ. ದೇಶದ ಎಲ್ಲರೂ ಸಹಕರಿಸಬೇಕಿದೆ. ಈ ಸಂದರ್ಭ ಅಡಿಕೆ ಮಾರುಕಟ್ಟೆ ಮೇಲೆ ಸಹಜವಾಗಿಯೇ ಸ್ವಲ್ಪ ಪ್ರಮಾಣದ ಪರಿಣಾಮ ಇರುತ್ತದೆ. ಬೆಳೆಗಾರರು ಈ ಸಂದರ್ಭದಲ್ಲೂ ಅಗತ್ಯವಾಗಿ ಸಹಕರಿಸಬೇಕಿದೆ. ಆದರೆ ಕೆಲವೇ ದಿನದಲ್ಲಿ ಮಾರುಕಟ್ಟೆ ಏರಿಕೆ ಕಾಣಲಿದೆ. ಬೆಳೆಗಾರರು ಧೈರ್ಯ ತಾಳಬೇಕಿದೆ, ಸರಕಾರದ ಜೊತೆ ಕೈಜೋಡಿಸಬೇಕಿದೆ ಎಂದು ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘದ ಅಧ್ಯಕ್ಷ ಅಶೋಕ್ ಕಿನಿಲ ಹಾಗೂ ಕಾರ್ಯದರ್ಶಿ ಮಹೇಶ್ ಪುಚ್ಚಪ್ಪಾಡಿ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

Advertisement
Advertisement

ಕೊರೊನಾ ಭೀತಿ ಸಮರ್ಥವಾಗಿ ಎದುರಿಸಲು ಸರಕಾರಗಳು ಈಗ ಸಮಾರೋಪಾದಿಯ ಕ್ರಮ ಕೈಗೊಂಡಿದೆ. ದೇಶದ ಜನರ ಆರೋಗ್ಯದ ಹಿತಕ್ಕಾಗಿ ಎಲ್ಲರೂ ಸರಕಾರದ ಜೊತೆ ಕೈ ಜೋಡಿಸಬೇಕಿದೆ. ಹೀಗಿರುವಾಗ ಸಹಜವಾಗಿಯೇ ಆರ್ಥಿಕ ಸ್ಥಿತಿಯ ಮೇಲೂ ಪರಿಣಾಮ ಬೀರುತ್ತದೆ. ಈ ಕಾರಣದಿಂದ ಅಡಿಕೆ ಮಾರುಕಟ್ಟೆ ಮೇಲೂ ಸ್ವಲ್ಪ ಪರಿಣಾಮ ಬೀರಬಹುದು. ಧಾರಣೆಯಲ್ಲಿ ಏರಿಳಿತ ಕಾಣಬಹುದು. ಈ ಸಂದರ್ಭ ಬೆಳೆಗಾರರು ಭಯದಿಂದ ಅಡಿಕೆಯನ್ನು ಒಮ್ಮೆಲೇ ಮಾರುಕಟ್ಟೆಗೆ ಬಿಡುವ ಕಾರ್ಯ ಮಾಡದೆ ಅಗತ್ಯಕ್ಕೆ ತಕ್ಕಂತೆ ಮಾರುಕಟ್ಟೆಗೆ ನೀಡಿದರೆ ಧಾರಣೆಯಲ್ಲಿನ ಏರಿಳಿತ ತಡೆಯಬಹುದಾಗಿದೆ. ಮಾರ್ಚ್ ಅಂತ್ಯದ ವೇಳೆಗೆ ಸಹಜವಾಗಿಯೇ ಅಡಿಕೆ ಮಾರುಕಟ್ಟೆ ಇಳಿಕೆಯ ಹಾದಿಯಲ್ಲಿರುತ್ತದೆ. ಈಗ ಕೊರೊನಾ ಭೀತಿ ನಿವಾರಣೆಯ ಬಳಿಕ ಅಡಿಕೆ ಮಾರುಕಟ್ಟೆ ಏರಿಕೆ ಕಾಣಬಹುದಾಗಿದೆ. ಬೆಳೆಗಾರರು ಈಗ ಭಯ ಹಾಗೂ ಗೊಂದಲಗಳಿಂದ ಮುಕ್ತವಾಗಿ ಅಡಿಕೆ ಮಾರುಕಟ್ಟೆ ಸ್ಥಿರತೆಗೆ ಸಹಕರಿಸುವುದು ಹಾಗೂ ಕೊರೊನಾ ಭೀತಿ ನಿವಾರಣೆ ಜೊತೆಗೆ ಸರಕಾರದ ಜೊತೆ ಕೈಜೋಡಿಸಬೇಕಿದೆ ಎಂದು ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘದ ಅಧ್ಯಕ್ಷ ಅಶೋಕ್ ಕಿನಿಲ ಹಾಗೂ ಕಾರ್ಯದರ್ಶಿ ಮಹೇಶ್ ಪುಚ್ಚಪ್ಪಾಡಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advertisement

Advertisement

Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಪ್ರವಾಸಿಗರು ಚಾರಣ, ನದಿ ತೀರ ಹೋಗದಂತೆ  ಸೂಚನೆ
May 27, 2025
10:57 PM
by: ದ ರೂರಲ್ ಮಿರರ್.ಕಾಂ
ಕೇರಳದಾದ್ಯಂತ ತೀವ್ರಗೊಂಡ ನೈಋತ್ಯ ಮಾನ್ಸೂನ್ | ಪೆರಿಯಾರ್ ನದಿಯ ನೀರಿನ ಮಟ್ಟ ಏರಿಕೆ | ಆಲುವಾ ಶಿವ ದೇವಾಲಯದಲ್ಲಿ ನೀರು |
May 27, 2025
1:31 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 27-05-2025 | ಜೂ.3 ರವರೆಗೂ ಮಳೆ | ಮೇ.28 ರಿಂದ ಮತ್ತೆ ಮಳೆ ಚುರುಕು | ಮಳೆಯ ತೀವ್ರತೆ ಕಡಿಮೆ |
May 27, 2025
12:41 PM
by: ಸಾಯಿಶೇಖರ್ ಕರಿಕಳ
ಭಾರತದಲ್ಲಿ ಅಡಿಕೆಯ ಬಳಕೆ ಹೇಗೆ..? ಯಾವುದೆಲ್ಲಾ ವಿಭಾಗಗಳು ಇವೆ..? ಮಾರುಕಟ್ಟೆ ಹೇಗೆ..?
May 27, 2025
12:28 PM
by: ಡಾ|ವಿಘ್ನೇಶ್ವರ ಭಟ್‌ ವರ್ಮುಡಿ

You cannot copy content of this page - Copyright -The Rural Mirror

Join Our Group