Advertisement
ಸುದ್ದಿಗಳು

ಅಡಿಕೆ ಬೆಳೆಗಾರರು ಧೈರ್ಯವಾಗಿರಿ – ಅ ಭಾ ಅ ಬೆ ಸಂಘ

Share

ಪುತ್ತೂರು: ದೇಶದಾದ್ಯಂತ ಕೊರೊನಾ ಭೀತಿ ಎದುರಾಗಿದೆ. ಆರೋಗ್ಯ ತುರ್ತುಪರಿಸ್ಥಿತಿಗೆ ಸರಕಾರ ಕರೆ ನೀಡಿದೆ. ದೇಶದ ಎಲ್ಲರೂ ಸಹಕರಿಸಬೇಕಿದೆ. ಈ ಸಂದರ್ಭ ಅಡಿಕೆ ಮಾರುಕಟ್ಟೆ ಮೇಲೆ ಸಹಜವಾಗಿಯೇ ಸ್ವಲ್ಪ ಪ್ರಮಾಣದ ಪರಿಣಾಮ ಇರುತ್ತದೆ. ಬೆಳೆಗಾರರು ಈ ಸಂದರ್ಭದಲ್ಲೂ ಅಗತ್ಯವಾಗಿ ಸಹಕರಿಸಬೇಕಿದೆ. ಆದರೆ ಕೆಲವೇ ದಿನದಲ್ಲಿ ಮಾರುಕಟ್ಟೆ ಏರಿಕೆ ಕಾಣಲಿದೆ. ಬೆಳೆಗಾರರು ಧೈರ್ಯ ತಾಳಬೇಕಿದೆ, ಸರಕಾರದ ಜೊತೆ ಕೈಜೋಡಿಸಬೇಕಿದೆ ಎಂದು ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘದ ಅಧ್ಯಕ್ಷ ಅಶೋಕ್ ಕಿನಿಲ ಹಾಗೂ ಕಾರ್ಯದರ್ಶಿ ಮಹೇಶ್ ಪುಚ್ಚಪ್ಪಾಡಿ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಕೊರೊನಾ ಭೀತಿ ಸಮರ್ಥವಾಗಿ ಎದುರಿಸಲು ಸರಕಾರಗಳು ಈಗ ಸಮಾರೋಪಾದಿಯ ಕ್ರಮ ಕೈಗೊಂಡಿದೆ. ದೇಶದ ಜನರ ಆರೋಗ್ಯದ ಹಿತಕ್ಕಾಗಿ ಎಲ್ಲರೂ ಸರಕಾರದ ಜೊತೆ ಕೈ ಜೋಡಿಸಬೇಕಿದೆ. ಹೀಗಿರುವಾಗ ಸಹಜವಾಗಿಯೇ ಆರ್ಥಿಕ ಸ್ಥಿತಿಯ ಮೇಲೂ ಪರಿಣಾಮ ಬೀರುತ್ತದೆ. ಈ ಕಾರಣದಿಂದ ಅಡಿಕೆ ಮಾರುಕಟ್ಟೆ ಮೇಲೂ ಸ್ವಲ್ಪ ಪರಿಣಾಮ ಬೀರಬಹುದು. ಧಾರಣೆಯಲ್ಲಿ ಏರಿಳಿತ ಕಾಣಬಹುದು. ಈ ಸಂದರ್ಭ ಬೆಳೆಗಾರರು ಭಯದಿಂದ ಅಡಿಕೆಯನ್ನು ಒಮ್ಮೆಲೇ ಮಾರುಕಟ್ಟೆಗೆ ಬಿಡುವ ಕಾರ್ಯ ಮಾಡದೆ ಅಗತ್ಯಕ್ಕೆ ತಕ್ಕಂತೆ ಮಾರುಕಟ್ಟೆಗೆ ನೀಡಿದರೆ ಧಾರಣೆಯಲ್ಲಿನ ಏರಿಳಿತ ತಡೆಯಬಹುದಾಗಿದೆ. ಮಾರ್ಚ್ ಅಂತ್ಯದ ವೇಳೆಗೆ ಸಹಜವಾಗಿಯೇ ಅಡಿಕೆ ಮಾರುಕಟ್ಟೆ ಇಳಿಕೆಯ ಹಾದಿಯಲ್ಲಿರುತ್ತದೆ. ಈಗ ಕೊರೊನಾ ಭೀತಿ ನಿವಾರಣೆಯ ಬಳಿಕ ಅಡಿಕೆ ಮಾರುಕಟ್ಟೆ ಏರಿಕೆ ಕಾಣಬಹುದಾಗಿದೆ. ಬೆಳೆಗಾರರು ಈಗ ಭಯ ಹಾಗೂ ಗೊಂದಲಗಳಿಂದ ಮುಕ್ತವಾಗಿ ಅಡಿಕೆ ಮಾರುಕಟ್ಟೆ ಸ್ಥಿರತೆಗೆ ಸಹಕರಿಸುವುದು ಹಾಗೂ ಕೊರೊನಾ ಭೀತಿ ನಿವಾರಣೆ ಜೊತೆಗೆ ಸರಕಾರದ ಜೊತೆ ಕೈಜೋಡಿಸಬೇಕಿದೆ ಎಂದು ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘದ ಅಧ್ಯಕ್ಷ ಅಶೋಕ್ ಕಿನಿಲ ಹಾಗೂ ಕಾರ್ಯದರ್ಶಿ ಮಹೇಶ್ ಪುಚ್ಚಪ್ಪಾಡಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕೋಲಾರ ಸಮೀಪ 10 ಟನ್ ಸಿಂಥೆಟಿಕ್‌ ಅಡಿಕೆ ವಶ…!?

ಕೋಲಾರದಿಂದ ಬೆಂಗಳೂರಿಗೆ ಸಾಗಿಸಲಾಗುತ್ತಿದ್ದ ಸುಮಾರು 10 ಟನ್ ಸಿಂಥೆಟಿಕ್‌ ಅಡಿಕೆಯನ್ನು ಅಧಿಕಾರಿಗಳು ವಶಪಡಿಸಿಕೊಂಡಿರುವುದಾಗಿ…

4 hours ago

ಮಂಗಳೂರಿನ ಸಚಿವ ಸಂಪುಟ ಸಭೆ | ‘ಅಡಿಕೆ ಜೈವಿಕ ಆರ್ಥಿಕತೆ ಮಿಷನ್’ ಘೋಷಣೆಗೆ ಆಗ್ರಹ

ಮಂಗಳೂರಿನಲ್ಲಿ ಸೆ.18ರಂದು ನಡೆಯಲಿರುವ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಅಡಿಕೆ ಬೆಳೆಗಾರರ ಸಮಸ್ಯೆಗಳಿಗೆ…

12 hours ago

ಮಳೆಗೆ ಬೆಂಗಳೂರು ತತ್ತರ – ಸಂಜೆ ಏಕಾಏಕಿ ಸುರಿದ ಧಾರಾಕಾರ ಮಳೆಗೆ ರಸ್ತೆಗಳು ಜಲಾವೃತ

ಬೆಂಗಳೂರಿನಲ್ಲಿ ಮಂಗಳವಾರ ಸಂಜೆ ಏಕಾಏಕಿ ಸುರಿದ ಭಾರೀ ಮಳೆಗೆ ಹಲವು ರಸ್ತೆಗಳು ಜಲಾವೃತವಾಗಿ…

13 hours ago

ಹವಾಮಾನ ವರದಿ | 15-09-2026 | ಕರ್ನಾಟಕದಲ್ಲಿ ಮಳೆ ಮತ್ತೆ ಚುರುಕಾಗುವ ಸೂಚನೆ

ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.16ರಿಂದ ಮಲೆನಾಡು, ಸೆ.17ರಿಂದ ಉತ್ತರ ಒಳನಾಡಿನಲ್ಲಿ ಮೋಡ…

23 hours ago

ಹವಾಮಾನ ವರದಿ | 14-09-2026 | ಸೆ.18ರ ಬಳಿಕ ಮಳೆ ಚಿತ್ರಣ ಬದಲಾಗಬಹುದೇ?

ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.18ರಿಂದ ಮಳೆಯ ವ್ಯಾಪ್ತಿ ಹೆಚ್ಚಾಗುವ ಸೂಚನೆಗಳಿವೆ. ಸೆ.19ರಿಂದ…

2 days ago