Advertisement
MIRROR FOCUS

ಅಡಿಕೆ ಮರ ಏರಲು ಬೈಕ್ ಯಂತ್ರ…! , ಯಂತ್ರ ಸಿದ್ಧಪಡಿಸಿದ ಅಡಿಕೆ ಬೆಳೆಗಾರ

Share
ಅಡಿಕೆ ಮರ ಏರಲು ವಿವಿಧ ಪ್ರಯತ್ನವಾಗುತ್ತಿದೆ. ಅಡಿಕೆ ಬೆಳೆಗಾರರ ಬಹುದೊಡ್ಡ ಸಮಸ್ಯೆ ಹಾಗೂ ಪರಿಹಾರಕ್ಕಾಗಿ ಕಾತರದಿಂದ ಕಾಯುವ ಸ್ಥಿತಿ ಇದೆ. ಇದೀಗ ಅಡಿಕೆ ಬೆಳೆಗಾರ  ಗಣಪತಿ ಭಟ್ ಅವರು ಹೊಸದೊಂದು ಯಂತ್ರವನ್ನು ಅಭಿವೃದ್ಧಿಪಡಿಸಿದ್ದಾರೆ. ಅದು ಬೈಕ್ ಮಾದರಿಯ ಯಂತ್ರ.  ಇದರ ಮೇಲೆ ಕುಳಿತ ವ್ಯಕ್ತಿ ಅತ್ಯಂತ ಸುಲಭವಾಗಿ ಅಡಿಕೆ ಮರದ ತುದಿಯನ್ನು ತಲುಪಿ ಅಡಿಕೆ ಕೊಯ್ಯಬಹುದು ಹಾಗೂ ಔಷಧಿಯನ್ನು ಸಿಂಪಡಿಸಬಹುದು.
ಮಳೆಗಾದಲ್ಲಿ ಅಡಿಕೆ ಮರಕ್ಕೆ ಔಷಧಿ ಸಿಂಪಡಣೆ ಮಾಡಲು ಮತ್ತು ವರ್ಷದ ಅಂತ್ಯದಲ್ಲಿ ಅಡಿಕೆ ಕೊಯ್ಯಲು ಅಡಿಕೆ ಮರವನ್ನು ಹತ್ತುವುದು ಅನಿವಾರ್ಯ ಕೆಲಸ.  ಕಾರ್ಮಿಕರು ತಮ್ಮ ಕಾಲಿನ ಸುತ್ತ ಹಗ್ಗವನ್ನು ಕಟ್ಟಿ ಮತ್ತು ಕೈಯಲ್ಲಿ ಒಂದು ತುಂಡು ಬಟ್ಟೆ ಸುತ್ತಿದ ಹಗ್ಗವನ್ನು ಹಿಡಿದುಕೊಂಡು ತೆಂಗಿನ ಮರ ಅಥವಾ ಅಡಿಕೆ ಮರವನ್ನು ಹತ್ತುತ್ತಾರೆ. ಅವರಿಗೆ ಯಾವುದೇ ರಕ್ಷಾ ಕವಚ ಇರುವುದಿಲ್ಲ.  ಕೈತಪ್ಪಿದರೆ ಕೆಳಕ್ಕೆ ಬೀಳುವ ಅಪಾಯ ಅಪಾರ ಪ್ರಮಾಣದಲ್ಲಿದೆ. ಈ ರೀತಿ ಬಿದ್ದವರು ಮತ್ತೆ ಏಳಲಾಗದ ಸ್ಥಿತಿ ತಲುಪಿದ ಉದಾಹರಣೆಯೂ ಸಾಕಷ್ಟಿದೆ. ಇದಕ್ಕಾಗಿ ವಿವಿಧ ಪ್ರಯತ್ನ ನಡೆಯುತ್ತಿದೆ.ಅಡಿಕೆ ಮರ ಬೆಳೆಸಲು ರೈತರು ಹಾಕುವ ಶ್ರಮವೆಲ್ಲಾ ಮಳೆಗಾಲದಲ್ಲಿ ಅತ್ಯಧಿಕ ಮಳೆಯ ಕಾರಣದಿಂದಾಗಿ ಕೊಳೆರೋಗ ಬಾಧಿಸಿ ನಾಶವಾಗುತ್ತದೆ, ಜೊತೆಗೆ ನುರಿತ ಕಾರ್ಮಿಕರ ಕೊರತೆಯಿಂದ ಬೆಳೆ ನಾಶವಾಗುತ್ತದೆ.
ಇದೀಗ ಬಂಟ್ವಾಳ ತಾಲೂಕಿನ ಸಜೀಪಮೂಡ ಗ್ರಾಮದ ಗಣಪತಿ ಭಟ್ ಮೋಟಾರ್ ಮಾದರಿಯ ಯಂತ್ರವನ್ನು ಅಭಿವೃದ್ಧಿಪಡಿಸಿದ್ದಾರೆ. ಈ ಯಂತ್ರದ ಮೂಲಕ ಅಡಿಕೆ ಮರ ಹತ್ತುವ ದೃಶ್ಯವುಳ್ಳ ವೀಡಿಯೋ ಈಗಾಗಲೇ ಸಾಮಾಜಿಕ ಜಾಲತಾಣಗಳಲ್ಲಿ  ವೈರಲ್ ಆಗಿದೆ. ಬೆಳೆಗಾರರಲ್ಲಿ  ಹೊಸ ಭರವಸೆ ಮೂಡಿಸಿದೆ.
ಸಹಕಾರ : news13.in
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹೊಸರುಚಿ | ಹಲಸಿನ ಕಾಯಿ ಬೋಂಡಾ ರೆಸಿಪಿ – ಇದು ರುಚಿಕರ ಗ್ರಾಮೀಣ ಸ್ನ್ಯಾಕ್

ಹಲಸಿನ ಕಾಯಿ ಬಳಸಿ ಸುಲಭವಾಗಿ ಮಾಡುವ ಕರಕರೆ ಬೋಂಡಾ – ಸಾಮಾನ್ಯ ಬೋಂಡಾ…

1 hour ago

ಜೀವನಪ್ರೀತಿ

ಜೀವನವೆಂದರೆ ಕೇವಲ ಉಸಿರಾಟವಲ್ಲ; ಅದು ಅನುಭವಗಳ ಹೂಗುಚ್ಛ, ಭಾವನೆಗಳ ಹಬ್ಬ, ತತ್ತ್ವದ ಹಾದಿ.…

2 hours ago

ಗೋವಾದಲ್ಲಿ ಗೇರು ಕೃಷಿಗೆ ಕೋತಿಗಳ ಉಪಟಳ | ಕರಾವಳಿ ಕರ್ನಾಟಕದ ಗೇರು ಕೃಷಿಗೆ ಮುನ್ನೆಚ್ಚರಿಕೆಯ ಸಂದೇಶ ?

ಗೋವಾದಲ್ಲಿ ಗೇರು ತೋಟಗಳ ಮೇಲೆ ಕೋತಿಗಳ ದಾಳಿ ಆರಂಭವಾಗಿದೆ. ಇದು ಕರಾವಳಿ ಕರ್ನಾಟಕದ…

2 hours ago

ಅಂಕದ “ಸುರಕ್ಷತೆ”ಯಾ? ಬದುಕಿನ “ಸುರಕ್ಷತೆ”ಯಾ? – ಗ್ರಾಮೀಣ ಶಿಕ್ಷಣದ ಮಣ್ಣಿನ ಸತ್ವ ಕಳೆದುಕೊಳ್ಳದಿರೋಣ

ಗ್ರಾಮೀಣ ಮಕ್ಕಳಿಗೆ ಮಣ್ಣಿನ ಪಾಠ, ಬದುಕಿನ ಶಿಕ್ಷಣ ಮತ್ತು ಅಂಕದ ಶಿಕ್ಷಣದ ನಡುವಿನ…

2 hours ago

ಜಾಗತಿಕ ಕೋಕೋ ಬೆಲೆ ಕುಸಿತ | ಘಾನಾದಲ್ಲಿ ಕೋಕೋ ದರ ಭಾರೀ ಇಳಿಕೆ

ಜಾಗತಿಕ ಕೋಕೋ ಬೆಲೆಗಳು ಒಂದು ವರ್ಷದ ಅವಧಿಯಲ್ಲಿ ಅರ್ಧದಷ್ಟು ಕುಸಿದಿರುವ ಹಿನ್ನೆಲೆಯಲ್ಲಿ ಪಶ್ಚಿಮ…

2 hours ago

ಭಾರತ–ಬಾಂಗ್ಲಾದೇಶ ಗಡಿಯಲ್ಲಿ ನಿಪಾ ಆತಂಕ | ಹರಡುವಿಕೆ ಅಪಾಯ ‘ಕಡಿಮೆ’ ಎಂದ WHO

ಭಾರತ ಮತ್ತು ಬಾಂಗ್ಲಾದೇಶದಲ್ಲಿ ಮೂರು ನಿಪಾ ಪ್ರಕರಣಗಳು ದೃಢಪಟ್ಟಿದ್ದರೂ, ಜಾಗತಿಕ ಹಾಗೂ ಪ್ರಾದೇಶಿಕ…

2 hours ago