Advertisement
MIRROR FOCUS

ಅಡಿಕೆ ಮರ ಏರಲು ಬೈಕ್ ಯಂತ್ರ…! , ಯಂತ್ರ ಸಿದ್ಧಪಡಿಸಿದ ಅಡಿಕೆ ಬೆಳೆಗಾರ

Share
ಅಡಿಕೆ ಮರ ಏರಲು ವಿವಿಧ ಪ್ರಯತ್ನವಾಗುತ್ತಿದೆ. ಅಡಿಕೆ ಬೆಳೆಗಾರರ ಬಹುದೊಡ್ಡ ಸಮಸ್ಯೆ ಹಾಗೂ ಪರಿಹಾರಕ್ಕಾಗಿ ಕಾತರದಿಂದ ಕಾಯುವ ಸ್ಥಿತಿ ಇದೆ. ಇದೀಗ ಅಡಿಕೆ ಬೆಳೆಗಾರ  ಗಣಪತಿ ಭಟ್ ಅವರು ಹೊಸದೊಂದು ಯಂತ್ರವನ್ನು ಅಭಿವೃದ್ಧಿಪಡಿಸಿದ್ದಾರೆ. ಅದು ಬೈಕ್ ಮಾದರಿಯ ಯಂತ್ರ.  ಇದರ ಮೇಲೆ ಕುಳಿತ ವ್ಯಕ್ತಿ ಅತ್ಯಂತ ಸುಲಭವಾಗಿ ಅಡಿಕೆ ಮರದ ತುದಿಯನ್ನು ತಲುಪಿ ಅಡಿಕೆ ಕೊಯ್ಯಬಹುದು ಹಾಗೂ ಔಷಧಿಯನ್ನು ಸಿಂಪಡಿಸಬಹುದು.
ಮಳೆಗಾದಲ್ಲಿ ಅಡಿಕೆ ಮರಕ್ಕೆ ಔಷಧಿ ಸಿಂಪಡಣೆ ಮಾಡಲು ಮತ್ತು ವರ್ಷದ ಅಂತ್ಯದಲ್ಲಿ ಅಡಿಕೆ ಕೊಯ್ಯಲು ಅಡಿಕೆ ಮರವನ್ನು ಹತ್ತುವುದು ಅನಿವಾರ್ಯ ಕೆಲಸ.  ಕಾರ್ಮಿಕರು ತಮ್ಮ ಕಾಲಿನ ಸುತ್ತ ಹಗ್ಗವನ್ನು ಕಟ್ಟಿ ಮತ್ತು ಕೈಯಲ್ಲಿ ಒಂದು ತುಂಡು ಬಟ್ಟೆ ಸುತ್ತಿದ ಹಗ್ಗವನ್ನು ಹಿಡಿದುಕೊಂಡು ತೆಂಗಿನ ಮರ ಅಥವಾ ಅಡಿಕೆ ಮರವನ್ನು ಹತ್ತುತ್ತಾರೆ. ಅವರಿಗೆ ಯಾವುದೇ ರಕ್ಷಾ ಕವಚ ಇರುವುದಿಲ್ಲ.  ಕೈತಪ್ಪಿದರೆ ಕೆಳಕ್ಕೆ ಬೀಳುವ ಅಪಾಯ ಅಪಾರ ಪ್ರಮಾಣದಲ್ಲಿದೆ. ಈ ರೀತಿ ಬಿದ್ದವರು ಮತ್ತೆ ಏಳಲಾಗದ ಸ್ಥಿತಿ ತಲುಪಿದ ಉದಾಹರಣೆಯೂ ಸಾಕಷ್ಟಿದೆ. ಇದಕ್ಕಾಗಿ ವಿವಿಧ ಪ್ರಯತ್ನ ನಡೆಯುತ್ತಿದೆ.ಅಡಿಕೆ ಮರ ಬೆಳೆಸಲು ರೈತರು ಹಾಕುವ ಶ್ರಮವೆಲ್ಲಾ ಮಳೆಗಾಲದಲ್ಲಿ ಅತ್ಯಧಿಕ ಮಳೆಯ ಕಾರಣದಿಂದಾಗಿ ಕೊಳೆರೋಗ ಬಾಧಿಸಿ ನಾಶವಾಗುತ್ತದೆ, ಜೊತೆಗೆ ನುರಿತ ಕಾರ್ಮಿಕರ ಕೊರತೆಯಿಂದ ಬೆಳೆ ನಾಶವಾಗುತ್ತದೆ.
ಇದೀಗ ಬಂಟ್ವಾಳ ತಾಲೂಕಿನ ಸಜೀಪಮೂಡ ಗ್ರಾಮದ ಗಣಪತಿ ಭಟ್ ಮೋಟಾರ್ ಮಾದರಿಯ ಯಂತ್ರವನ್ನು ಅಭಿವೃದ್ಧಿಪಡಿಸಿದ್ದಾರೆ. ಈ ಯಂತ್ರದ ಮೂಲಕ ಅಡಿಕೆ ಮರ ಹತ್ತುವ ದೃಶ್ಯವುಳ್ಳ ವೀಡಿಯೋ ಈಗಾಗಲೇ ಸಾಮಾಜಿಕ ಜಾಲತಾಣಗಳಲ್ಲಿ  ವೈರಲ್ ಆಗಿದೆ. ಬೆಳೆಗಾರರಲ್ಲಿ  ಹೊಸ ಭರವಸೆ ಮೂಡಿಸಿದೆ.
ಸಹಕಾರ : news13.in
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

25 ಸಾವಿರ ವರ್ಷಗಳ ಹಿಂದೆಯೇ ಅಡಿಕೆ ಬಳಕೆ ? ಪುರಾತನ ಹಲ್ಲುಗಳಲ್ಲಿ ಸಿಕ್ಕಿದ ಸುಳಿವು

ಇಂಡೋನೇಷ್ಯಾದ ಸುಲವೆಸಿಯಲ್ಲಿ ಪತ್ತೆಯಾದ ಸುಮಾರು 25,000 ವರ್ಷಗಳ ಹಿಂದಿನ ಮಾನವ ಹಲ್ಲುಗಳಲ್ಲಿ ಅಡಿಕೆ…

7 hours ago

“ಹನುಮಾನ್ ಅಂಶ್‌” ಬಾಕ್ಸ್ ಆಫೀಸ್ ದಾಖಲೆ – 40ನೇ ದಿನವೂ ₹8.25 ಕೋಟಿ – ಪಠಾಣ್‌, ಛಾವಾ, ಉರಿ ದಾಖಲೆ ಮೀರಿಸಿದ ಸಿನಿಮಾ

‘ಹನುಮಾನ್ ಅಂಶ್’ ಸಿನಿಮಾ 40ನೇ ದಿನವೂ ₹8.25 ಕೋಟಿ ಗಳಿಸಿ ಬಾಕ್ಸ್ ಆಫೀಸ್‌ನಲ್ಲಿ…

9 hours ago

ಮುಂಗಾರು ಹಿಂದೆ ಸರಿಯಲು ಸಜ್ಜು – ಸೆ.17ರಿಂದ ಪಶ್ಚಿಮ ರಾಜಸ್ಥಾನದಲ್ಲಿ ಆರಂಭವಾಗುವ ಸಾಧ್ಯತೆ

ನೈಋತ್ಯ ಮುಂಗಾರು ಹಿಂದೆ ಸರಿಯಲು ಪೂರಕ ಪರಿಸ್ಥಿತಿಗಳು ನಿರ್ಮಾಣವಾಗುತ್ತಿದ್ದು, ಸೆ.17ರ ವೇಳೆಗೆ ಪಶ್ಚಿಮ…

15 hours ago

ಹವಾಮಾನ ವರದಿ | 16-09-2026 | ಕರಾವಳಿಯಲ್ಲಿ ಸೆಖೆ, ಸಂಜೆ ಅಲ್ಲಲ್ಲಿ ಮಳೆ ನಿರೀಕ್ಷೆ

ಕರ್ನಾಟಕದ ಹಲವು ಭಾಗಗಳಲ್ಲಿ ಸೆ.17ರಂದು ಸಂಜೆ ಹಾಗೂ ರಾತ್ರಿ ಅಲ್ಲಲ್ಲಿ ಸಾಮಾನ್ಯ ಮಳೆಯ…

16 hours ago

ಕೋಲಾರ ಸಮೀಪ 10 ಟನ್ ಸಿಂಥೆಟಿಕ್‌ ಅಡಿಕೆ ವಶ…!?

ಕೋಲಾರದಿಂದ ಬೆಂಗಳೂರಿಗೆ ಸಾಗಿಸಲಾಗುತ್ತಿದ್ದ ಸುಮಾರು 10 ಟನ್ ಸಿಂಥೆಟಿಕ್‌ ಅಡಿಕೆಯನ್ನು ಅಧಿಕಾರಿಗಳು ವಶಪಡಿಸಿಕೊಂಡಿರುವುದಾಗಿ…

23 hours ago

ಮಂಗಳೂರಿನ ಸಚಿವ ಸಂಪುಟ ಸಭೆ | ‘ಅಡಿಕೆ ಜೈವಿಕ ಆರ್ಥಿಕತೆ ಮಿಷನ್’ ಘೋಷಣೆಗೆ ಆಗ್ರಹ

ಮಂಗಳೂರಿನಲ್ಲಿ ಸೆ.18ರಂದು ನಡೆಯಲಿರುವ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಅಡಿಕೆ ಬೆಳೆಗಾರರ ಸಮಸ್ಯೆಗಳಿಗೆ…

1 day ago