Advertisement
MIRROR FOCUS

ಅಡಿಕೆ ಮರ ಏರಲು ಬೈಕ್ ಯಂತ್ರ…! , ಯಂತ್ರ ಸಿದ್ಧಪಡಿಸಿದ ಅಡಿಕೆ ಬೆಳೆಗಾರ

Share
ಅಡಿಕೆ ಮರ ಏರಲು ವಿವಿಧ ಪ್ರಯತ್ನವಾಗುತ್ತಿದೆ. ಅಡಿಕೆ ಬೆಳೆಗಾರರ ಬಹುದೊಡ್ಡ ಸಮಸ್ಯೆ ಹಾಗೂ ಪರಿಹಾರಕ್ಕಾಗಿ ಕಾತರದಿಂದ ಕಾಯುವ ಸ್ಥಿತಿ ಇದೆ. ಇದೀಗ ಅಡಿಕೆ ಬೆಳೆಗಾರ  ಗಣಪತಿ ಭಟ್ ಅವರು ಹೊಸದೊಂದು ಯಂತ್ರವನ್ನು ಅಭಿವೃದ್ಧಿಪಡಿಸಿದ್ದಾರೆ. ಅದು ಬೈಕ್ ಮಾದರಿಯ ಯಂತ್ರ.  ಇದರ ಮೇಲೆ ಕುಳಿತ ವ್ಯಕ್ತಿ ಅತ್ಯಂತ ಸುಲಭವಾಗಿ ಅಡಿಕೆ ಮರದ ತುದಿಯನ್ನು ತಲುಪಿ ಅಡಿಕೆ ಕೊಯ್ಯಬಹುದು ಹಾಗೂ ಔಷಧಿಯನ್ನು ಸಿಂಪಡಿಸಬಹುದು.
ಮಳೆಗಾದಲ್ಲಿ ಅಡಿಕೆ ಮರಕ್ಕೆ ಔಷಧಿ ಸಿಂಪಡಣೆ ಮಾಡಲು ಮತ್ತು ವರ್ಷದ ಅಂತ್ಯದಲ್ಲಿ ಅಡಿಕೆ ಕೊಯ್ಯಲು ಅಡಿಕೆ ಮರವನ್ನು ಹತ್ತುವುದು ಅನಿವಾರ್ಯ ಕೆಲಸ.  ಕಾರ್ಮಿಕರು ತಮ್ಮ ಕಾಲಿನ ಸುತ್ತ ಹಗ್ಗವನ್ನು ಕಟ್ಟಿ ಮತ್ತು ಕೈಯಲ್ಲಿ ಒಂದು ತುಂಡು ಬಟ್ಟೆ ಸುತ್ತಿದ ಹಗ್ಗವನ್ನು ಹಿಡಿದುಕೊಂಡು ತೆಂಗಿನ ಮರ ಅಥವಾ ಅಡಿಕೆ ಮರವನ್ನು ಹತ್ತುತ್ತಾರೆ. ಅವರಿಗೆ ಯಾವುದೇ ರಕ್ಷಾ ಕವಚ ಇರುವುದಿಲ್ಲ.  ಕೈತಪ್ಪಿದರೆ ಕೆಳಕ್ಕೆ ಬೀಳುವ ಅಪಾಯ ಅಪಾರ ಪ್ರಮಾಣದಲ್ಲಿದೆ. ಈ ರೀತಿ ಬಿದ್ದವರು ಮತ್ತೆ ಏಳಲಾಗದ ಸ್ಥಿತಿ ತಲುಪಿದ ಉದಾಹರಣೆಯೂ ಸಾಕಷ್ಟಿದೆ. ಇದಕ್ಕಾಗಿ ವಿವಿಧ ಪ್ರಯತ್ನ ನಡೆಯುತ್ತಿದೆ.ಅಡಿಕೆ ಮರ ಬೆಳೆಸಲು ರೈತರು ಹಾಕುವ ಶ್ರಮವೆಲ್ಲಾ ಮಳೆಗಾಲದಲ್ಲಿ ಅತ್ಯಧಿಕ ಮಳೆಯ ಕಾರಣದಿಂದಾಗಿ ಕೊಳೆರೋಗ ಬಾಧಿಸಿ ನಾಶವಾಗುತ್ತದೆ, ಜೊತೆಗೆ ನುರಿತ ಕಾರ್ಮಿಕರ ಕೊರತೆಯಿಂದ ಬೆಳೆ ನಾಶವಾಗುತ್ತದೆ.
ಇದೀಗ ಬಂಟ್ವಾಳ ತಾಲೂಕಿನ ಸಜೀಪಮೂಡ ಗ್ರಾಮದ ಗಣಪತಿ ಭಟ್ ಮೋಟಾರ್ ಮಾದರಿಯ ಯಂತ್ರವನ್ನು ಅಭಿವೃದ್ಧಿಪಡಿಸಿದ್ದಾರೆ. ಈ ಯಂತ್ರದ ಮೂಲಕ ಅಡಿಕೆ ಮರ ಹತ್ತುವ ದೃಶ್ಯವುಳ್ಳ ವೀಡಿಯೋ ಈಗಾಗಲೇ ಸಾಮಾಜಿಕ ಜಾಲತಾಣಗಳಲ್ಲಿ  ವೈರಲ್ ಆಗಿದೆ. ಬೆಳೆಗಾರರಲ್ಲಿ  ಹೊಸ ಭರವಸೆ ಮೂಡಿಸಿದೆ.
ಸಹಕಾರ : news13.in
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅತಿವೃಷ್ಟಿ, ಬರ, ಹೀಟ್‌ ವೇವ್‌ಗಳಿಗೆ ಯಾರು ಕಾರಣ? ಐಐಟಿ ದೆಹಲಿ ಅಧ್ಯಯನದಿಂದ ಕುತೂಹಲಕಾರಿ ಮಾಹಿತಿ!

ಭಾರತದಲ್ಲಿ ಹೆಚ್ಚುತ್ತಿರುವ ಅತಿವೃಷ್ಟಿ, ಬರ ಮತ್ತು ಉಷ್ಣ ಅಲೆಗಳಂತಹ ತೀವ್ರ ಹವಾಮಾನ ಘಟನೆಗಳಿಗೆ…

8 hours ago

ದಕ್ಷಿಣ ಕನ್ನಡಕ್ಕೆ ಕೈಗಾರಿಕಾ ಬಲ : ಗಂಜಿಮಠ ಪ್ಲಾಸ್ಟಿಕ್ ಪಾರ್ಕ್ ಕಾಮಗಾರಿ ಪರಿಶೀಲಿಸಿದ ಸಂಸದ ಬ್ರಿಜೇಶ್ ಚೌಟ

ಗಂಜಿಮಠದ 104 ಎಕರೆ ಪ್ಲಾಸ್ಟಿಕ್ ಪಾರ್ಕ್ ಯೋಜನೆಗೆ ಮತ್ತೆ ವೇಗ ಸಿಕ್ಕಿದ್ದು, ಸಂಸದ…

21 hours ago

Gen Z ಮತದಾರರತ್ತ ಬಿಜೆಪಿ ಕಣ್ಣು- 18-25 ವಯೋಮಾನದ ಯುವಕರಿಗಾಗಿ ‘ತರುಣ ಮೋರ್ಚಾ’ ರಚನೆಗೆ ಚಿಂತನೆ

18-25 ವರ್ಷ ವಯಸ್ಸಿನ Gen Z ಯುವಕರನ್ನು ಸೆಳೆಯಲು ಬಿಜೆಪಿ ‘ತರುಣ ಮೋರ್ಚಾ’…

22 hours ago

ವಿಯೆಟ್ನಾಂನಲ್ಲಿ ಅಡಿಕೆ ಬೆಲೆ ಕುಸಿತ – ಚೀನಾದ ಬೇಡಿಕೆ ಇಳಿಕೆಯಿಂದ ರೈತರಿಗೆ ಸಂಕಷ್ಟ! – ಭಾರತದ ಅಡಿಕೆ ಮಾರುಕಟ್ಟೆಗೆ ಏನು ಎಚ್ಚರಿಕೆ..?

ವಿಯೆಟ್ನಾಂನಲ್ಲಿ ಅಡಿಕೆ ಬೆಲೆ ದಾಖಲೆಯ ಮಟ್ಟದಿಂದ ಭಾರೀ ಕುಸಿತ ಕಂಡಿದ್ದು, ಚೀನಾದ ಖರೀದಿ…

22 hours ago

ಹವಾಮಾನ ವರದಿ | 17-06-2026 | ಜೂನ್ 21 ರವರೆಗೆ ಕರಾವಳಿಯಲ್ಲಿ ಅಲ್ಪ ಮಳೆ, ಎಲ್ ನಿನೋ ಹಿನ್ನೆಲೆ ರೈತರಿಗೆ ನೀರು ಸಂಗ್ರಹದ ಸಲಹೆ

ಕರ್ನಾಟಕದಲ್ಲಿ ಮುಂಗಾರು ಇನ್ನೂ ಪೂರ್ಣ ಪ್ರಮಾಣದಲ್ಲಿ ಚುರುಕುಗೊಂಡಿಲ್ಲ. ಎಲ್ ನಿನೋ ಪ್ರಭಾವದಿಂದ ಮಳೆಯ…

1 day ago

ಎಲ್ ನಿನೋ ಪರಿಣಾಮ – 10 ರಾಜ್ಯಗಳಲ್ಲಿ ಜಾಗೃತಿ ಅಭಿಯಾನ

2026ರ ಖಾರಿಫ್ ಹಂಗಾಮಿಗೆ ಸಿದ್ಧತೆ ಪರಿಶೀಲಿಸಿದ ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್…

1 day ago