Advertisement
MIRROR FOCUS

ಅಡಿಕೆ ಮರ ಏರಲು ಬೈಕ್ ಯಂತ್ರ…! , ಯಂತ್ರ ಸಿದ್ಧಪಡಿಸಿದ ಅಡಿಕೆ ಬೆಳೆಗಾರ

Share
ಅಡಿಕೆ ಮರ ಏರಲು ವಿವಿಧ ಪ್ರಯತ್ನವಾಗುತ್ತಿದೆ. ಅಡಿಕೆ ಬೆಳೆಗಾರರ ಬಹುದೊಡ್ಡ ಸಮಸ್ಯೆ ಹಾಗೂ ಪರಿಹಾರಕ್ಕಾಗಿ ಕಾತರದಿಂದ ಕಾಯುವ ಸ್ಥಿತಿ ಇದೆ. ಇದೀಗ ಅಡಿಕೆ ಬೆಳೆಗಾರ  ಗಣಪತಿ ಭಟ್ ಅವರು ಹೊಸದೊಂದು ಯಂತ್ರವನ್ನು ಅಭಿವೃದ್ಧಿಪಡಿಸಿದ್ದಾರೆ. ಅದು ಬೈಕ್ ಮಾದರಿಯ ಯಂತ್ರ.  ಇದರ ಮೇಲೆ ಕುಳಿತ ವ್ಯಕ್ತಿ ಅತ್ಯಂತ ಸುಲಭವಾಗಿ ಅಡಿಕೆ ಮರದ ತುದಿಯನ್ನು ತಲುಪಿ ಅಡಿಕೆ ಕೊಯ್ಯಬಹುದು ಹಾಗೂ ಔಷಧಿಯನ್ನು ಸಿಂಪಡಿಸಬಹುದು.
ಮಳೆಗಾದಲ್ಲಿ ಅಡಿಕೆ ಮರಕ್ಕೆ ಔಷಧಿ ಸಿಂಪಡಣೆ ಮಾಡಲು ಮತ್ತು ವರ್ಷದ ಅಂತ್ಯದಲ್ಲಿ ಅಡಿಕೆ ಕೊಯ್ಯಲು ಅಡಿಕೆ ಮರವನ್ನು ಹತ್ತುವುದು ಅನಿವಾರ್ಯ ಕೆಲಸ.  ಕಾರ್ಮಿಕರು ತಮ್ಮ ಕಾಲಿನ ಸುತ್ತ ಹಗ್ಗವನ್ನು ಕಟ್ಟಿ ಮತ್ತು ಕೈಯಲ್ಲಿ ಒಂದು ತುಂಡು ಬಟ್ಟೆ ಸುತ್ತಿದ ಹಗ್ಗವನ್ನು ಹಿಡಿದುಕೊಂಡು ತೆಂಗಿನ ಮರ ಅಥವಾ ಅಡಿಕೆ ಮರವನ್ನು ಹತ್ತುತ್ತಾರೆ. ಅವರಿಗೆ ಯಾವುದೇ ರಕ್ಷಾ ಕವಚ ಇರುವುದಿಲ್ಲ.  ಕೈತಪ್ಪಿದರೆ ಕೆಳಕ್ಕೆ ಬೀಳುವ ಅಪಾಯ ಅಪಾರ ಪ್ರಮಾಣದಲ್ಲಿದೆ. ಈ ರೀತಿ ಬಿದ್ದವರು ಮತ್ತೆ ಏಳಲಾಗದ ಸ್ಥಿತಿ ತಲುಪಿದ ಉದಾಹರಣೆಯೂ ಸಾಕಷ್ಟಿದೆ. ಇದಕ್ಕಾಗಿ ವಿವಿಧ ಪ್ರಯತ್ನ ನಡೆಯುತ್ತಿದೆ.ಅಡಿಕೆ ಮರ ಬೆಳೆಸಲು ರೈತರು ಹಾಕುವ ಶ್ರಮವೆಲ್ಲಾ ಮಳೆಗಾಲದಲ್ಲಿ ಅತ್ಯಧಿಕ ಮಳೆಯ ಕಾರಣದಿಂದಾಗಿ ಕೊಳೆರೋಗ ಬಾಧಿಸಿ ನಾಶವಾಗುತ್ತದೆ, ಜೊತೆಗೆ ನುರಿತ ಕಾರ್ಮಿಕರ ಕೊರತೆಯಿಂದ ಬೆಳೆ ನಾಶವಾಗುತ್ತದೆ.
ಇದೀಗ ಬಂಟ್ವಾಳ ತಾಲೂಕಿನ ಸಜೀಪಮೂಡ ಗ್ರಾಮದ ಗಣಪತಿ ಭಟ್ ಮೋಟಾರ್ ಮಾದರಿಯ ಯಂತ್ರವನ್ನು ಅಭಿವೃದ್ಧಿಪಡಿಸಿದ್ದಾರೆ. ಈ ಯಂತ್ರದ ಮೂಲಕ ಅಡಿಕೆ ಮರ ಹತ್ತುವ ದೃಶ್ಯವುಳ್ಳ ವೀಡಿಯೋ ಈಗಾಗಲೇ ಸಾಮಾಜಿಕ ಜಾಲತಾಣಗಳಲ್ಲಿ  ವೈರಲ್ ಆಗಿದೆ. ಬೆಳೆಗಾರರಲ್ಲಿ  ಹೊಸ ಭರವಸೆ ಮೂಡಿಸಿದೆ.
ಸಹಕಾರ : news13.in
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಜಗತ್ತು ನಮ್ಮ ಜೊತೆಗಿದೆ ಎಂಬ ಭ್ರಮೆ

ಜಗತ್ತು ಸದಾ ನಮ್ಮ ಜೊತೆಗಿರುತ್ತದೆ ಎಂಬ ನಿರೀಕ್ಷೆಗಿಂತ, ಪರಿಸ್ಥಿತಿ ಬದಲಾದರೂ ನಮ್ಮ ದಾರಿಯಲ್ಲಿ…

7 hours ago

ತೆಂಗಿನ ಎಣ್ಣೆಯಿಂದ ವಿಮಾನದ ಇಂಧನ ? ಜೆಟ್‌ ಎಂಜಿನ್‌ ಪರೀಕ್ಷೆಯಲ್ಲಿ ಕುತೂಹಲ ಮೂಡಿಸಿದ ಫಲಿತಾಂಶ

ಮಾರುಕಟ್ಟೆಗೆ ಯೋಗ್ಯವಲ್ಲದ ತೆಂಗಿನಕಾಯಿಯಿಂದ ಪಡೆದ ತೆಂಗಿನ ಎಣ್ಣೆಯನ್ನು ಬಳಸಿ ಸುಸ್ಥಿರ ವಿಮಾನ ಇಂಧನ…

13 hours ago

ಕೃಷಿ ಇನ್ನು ಕೇವಲ ಬೆಳೆ ಬೆಳೆಯುವುದಲ್ಲ – ಯುವಕರಿಗೆ ಸ್ಟಾರ್ಟ್‌ಅಪ್ ಕ್ಷೇತ್ರ

ಕೃಷಿ ಮತ್ತು ಕೃಷಿ ಸಂಬಂಧಿತ ಕ್ಷೇತ್ರಗಳು ಯುವ ಉದ್ಯಮಶೀಲತೆಗೆ ಮುಂದಿನ ದೊಡ್ಡ ಅವಕಾಶಗಳಾಗಿದ್ದು,…

17 hours ago

ಬರಪೀಡಿತ ಪ್ರದೇಶಗಳ ರೈತರಿಗೆ ಗುಡ್‌ನ್ಯೂಸ್ ; ಬೆಳೆ ವಿಮೆ ನೋಂದಣಿ ಅವಧಿ ವಿಸ್ತರಣೆ

ಕರ್ನಾಟಕದ ಬರಪೀಡಿತ ಪ್ರದೇಶಗಳಲ್ಲಿ ಬೆಳೆ ವಿಮೆ ನೋಂದಣಿ ಹಾಗೂ ಪ್ರೀಮಿಯಂ ಕಡಿತದ ಅವಧಿಯನ್ನು…

1 day ago

ರಾಜ್ಯದ 102 ತಾಲೂಕುಗಳಲ್ಲಿ ಬರದ ಛಾಯೆ – ತಿಂಗಳಾಂತ್ಯಕ್ಕೆ ಕೇಂದ್ರಕ್ಕೆ ವರದಿ ಸಲ್ಲಿಕೆ

ಕರ್ನಾಟಕದ 102 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಈ ತಿಂಗಳಾಂತ್ಯಕ್ಕೆ ಕೇಂದ್ರ ಸರ್ಕಾರಕ್ಕೆ…

1 day ago

ಮಂಗಳೂರಿನ ಅಶ್ಮಿತ್ ಎ.ಜೆ. ಅವರಿಗೆ ‘ಸರಿಗಮಪ 2026’ರ ಕಿರೀಟ

ಮಂಗಳೂರಿನ ಅಶ್ಮಿತ್ ಎ.ಜೆ. ಅವರು ಝೀ ಕನ್ನಡದ ‘ಸರಿಗಮಪ 2026’ರ ವಿಜೇತರಾಗಿ ₹20…

1 day ago