Advertisement
MIRROR FOCUS

ಅಡಿಕೆ ಮರ ಏರಲು ಬೈಕ್ ಯಂತ್ರ…! , ಯಂತ್ರ ಸಿದ್ಧಪಡಿಸಿದ ಅಡಿಕೆ ಬೆಳೆಗಾರ

Share
ಅಡಿಕೆ ಮರ ಏರಲು ವಿವಿಧ ಪ್ರಯತ್ನವಾಗುತ್ತಿದೆ. ಅಡಿಕೆ ಬೆಳೆಗಾರರ ಬಹುದೊಡ್ಡ ಸಮಸ್ಯೆ ಹಾಗೂ ಪರಿಹಾರಕ್ಕಾಗಿ ಕಾತರದಿಂದ ಕಾಯುವ ಸ್ಥಿತಿ ಇದೆ. ಇದೀಗ ಅಡಿಕೆ ಬೆಳೆಗಾರ  ಗಣಪತಿ ಭಟ್ ಅವರು ಹೊಸದೊಂದು ಯಂತ್ರವನ್ನು ಅಭಿವೃದ್ಧಿಪಡಿಸಿದ್ದಾರೆ. ಅದು ಬೈಕ್ ಮಾದರಿಯ ಯಂತ್ರ.  ಇದರ ಮೇಲೆ ಕುಳಿತ ವ್ಯಕ್ತಿ ಅತ್ಯಂತ ಸುಲಭವಾಗಿ ಅಡಿಕೆ ಮರದ ತುದಿಯನ್ನು ತಲುಪಿ ಅಡಿಕೆ ಕೊಯ್ಯಬಹುದು ಹಾಗೂ ಔಷಧಿಯನ್ನು ಸಿಂಪಡಿಸಬಹುದು.
ಮಳೆಗಾದಲ್ಲಿ ಅಡಿಕೆ ಮರಕ್ಕೆ ಔಷಧಿ ಸಿಂಪಡಣೆ ಮಾಡಲು ಮತ್ತು ವರ್ಷದ ಅಂತ್ಯದಲ್ಲಿ ಅಡಿಕೆ ಕೊಯ್ಯಲು ಅಡಿಕೆ ಮರವನ್ನು ಹತ್ತುವುದು ಅನಿವಾರ್ಯ ಕೆಲಸ.  ಕಾರ್ಮಿಕರು ತಮ್ಮ ಕಾಲಿನ ಸುತ್ತ ಹಗ್ಗವನ್ನು ಕಟ್ಟಿ ಮತ್ತು ಕೈಯಲ್ಲಿ ಒಂದು ತುಂಡು ಬಟ್ಟೆ ಸುತ್ತಿದ ಹಗ್ಗವನ್ನು ಹಿಡಿದುಕೊಂಡು ತೆಂಗಿನ ಮರ ಅಥವಾ ಅಡಿಕೆ ಮರವನ್ನು ಹತ್ತುತ್ತಾರೆ. ಅವರಿಗೆ ಯಾವುದೇ ರಕ್ಷಾ ಕವಚ ಇರುವುದಿಲ್ಲ.  ಕೈತಪ್ಪಿದರೆ ಕೆಳಕ್ಕೆ ಬೀಳುವ ಅಪಾಯ ಅಪಾರ ಪ್ರಮಾಣದಲ್ಲಿದೆ. ಈ ರೀತಿ ಬಿದ್ದವರು ಮತ್ತೆ ಏಳಲಾಗದ ಸ್ಥಿತಿ ತಲುಪಿದ ಉದಾಹರಣೆಯೂ ಸಾಕಷ್ಟಿದೆ. ಇದಕ್ಕಾಗಿ ವಿವಿಧ ಪ್ರಯತ್ನ ನಡೆಯುತ್ತಿದೆ.ಅಡಿಕೆ ಮರ ಬೆಳೆಸಲು ರೈತರು ಹಾಕುವ ಶ್ರಮವೆಲ್ಲಾ ಮಳೆಗಾಲದಲ್ಲಿ ಅತ್ಯಧಿಕ ಮಳೆಯ ಕಾರಣದಿಂದಾಗಿ ಕೊಳೆರೋಗ ಬಾಧಿಸಿ ನಾಶವಾಗುತ್ತದೆ, ಜೊತೆಗೆ ನುರಿತ ಕಾರ್ಮಿಕರ ಕೊರತೆಯಿಂದ ಬೆಳೆ ನಾಶವಾಗುತ್ತದೆ.
ಇದೀಗ ಬಂಟ್ವಾಳ ತಾಲೂಕಿನ ಸಜೀಪಮೂಡ ಗ್ರಾಮದ ಗಣಪತಿ ಭಟ್ ಮೋಟಾರ್ ಮಾದರಿಯ ಯಂತ್ರವನ್ನು ಅಭಿವೃದ್ಧಿಪಡಿಸಿದ್ದಾರೆ. ಈ ಯಂತ್ರದ ಮೂಲಕ ಅಡಿಕೆ ಮರ ಹತ್ತುವ ದೃಶ್ಯವುಳ್ಳ ವೀಡಿಯೋ ಈಗಾಗಲೇ ಸಾಮಾಜಿಕ ಜಾಲತಾಣಗಳಲ್ಲಿ  ವೈರಲ್ ಆಗಿದೆ. ಬೆಳೆಗಾರರಲ್ಲಿ  ಹೊಸ ಭರವಸೆ ಮೂಡಿಸಿದೆ.
ಸಹಕಾರ : news13.in
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಛಾತಿ ಇಲ್ಲದ ನಾಗರಿಕರನ್ನು ರೂಪಿಸುತ್ತಿರುವ ಶಿಕ್ಷಣ

ನಮ್ಮ ಮುಂದಿನ ಮಕ್ಕಳನ್ನು ಸ್ವಾವಲಂಬಿಗಳಾಗಿ ಮಾಡಬೇಕೇ ಹೊರತು ಪರಾವಲಂಬಿಗಳಾಗಿ ಮಾಡಬಾರದು. ಜನರು ಆತ್ಮಾಭಿಮಾನದಿಂದ…

13 hours ago

ಮೇ.11 ವಳಲಂಬೆಯಲ್ಲಿ ಯಕ್ಷಗಾನ ಬಯಲಾಟ | ಕಲಾವಿದ ಉಬರಡ್ಕ ಉಮೇಶ್‌ ಶೆಟ್ಟಿಯವರಿಗೆ ಗೌರವಾರ್ಪಣೆ |

ಯಕ್ಷ ಕಲಾಭಿಮಾನಿ ಮಿತ್ರರು ಎಲಿಮಲೆ-ಗುತ್ತಿಗಾರು ಇವರ ವತಿಯಿಂದ ಯಕ್ಷಗಾನ ಕಲಾವಿದ ಉಬರಡ್ಕ ಉಮೇಶ್‌…

14 hours ago

ಮಲೆನಾಡು ಕಳೆದು ಹೋಗಿದೆ….! | ಯಾರಾದರೂ “ಮಲೆನಾಡಿಗೆ” ಈ ಮೊದಲಿನ “ಮಳೆಗಾಲ” ತಂದು ಕೊಡುವಿರಾ…. !

ಮಲೆನಾಡಿನ ಸೊಗಬು ಕಣ್ಮರೆಯಾಗುತ್ತಿರುವುದು ಏಕೆ? ಈ ಬಗ್ಗೆ ಬರೆದಿದ್ದಾರೆ ಪ್ರಬಂಧ ಅಂಬುತೀರ್ಥ.

17 hours ago

Karnataka Weather | 07-05-2024 | ಮಳೆಯ ಸೂಚನೆ ಬಂದೇ ಬಿಟ್ಟಿದೆ |ಹಲವು ಕಡೆ ಗುಡುಗು-ಸಿಡಿಲು ಇರಬಹುದು, ಇರಲಿ ಎಚ್ಚರಿಕೆ |

ಮೇ 9ರಿಂದ ಉತ್ತರ ಒಳನಾಡು ಭಾಗಗಳಲ್ಲಿಯೂ ಮಳೆಯಾಗುವ ಲಕ್ಷಣಗಳಿವೆ.ಕರಾವಳಿ ಭಾಗಗಳಲ್ಲಿ ಈಗಾಗಲೇ ಮಳೆ…

18 hours ago

ಆಹಾರ ಬದಲಾವಣೆಯಿಂದ ವಾತಾವರಣದ ತಾಪಮಾನ ಏರಿಕೆಯ ಸಮಸ್ಯೆಗೂ ಪರಿಹಾರ…! | ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಡಾ.ಖಾದರ್ ಪ್ರತಿಪಾದನೆ |

ಆಹಾರ ಬದಲಾವಣೆಯ ಕಾರಣದಿಂದ ವಾತಾವರಣದ ತಾಪಮಾನ ನಿಯಂತ್ರಣ ಸಾಧ್ಯ..ಹೀಗೆಂದು ಹೇಳಿದಾಗ, ಎಲ್ಲರೂ ಅಚ್ಚರಿ…

22 hours ago

Karnataka Weather | 06-05-2024 | ಮೋಡದ ವಾತಾವರಣ | ಅಲ್ಲಲ್ಲಿ ಮಳೆ ಹತ್ತಿರವಾಯ್ತು… |

ಮೇ 7 ರಿಂದ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಗುಡುಗು ಸಹಿತ ಮಳೆ…

2 days ago