Advertisement
MIRROR FOCUS

ಅಡಿಕೆ ಮರ ಏರಲು ಬೈಕ್ ಯಂತ್ರ…! , ಯಂತ್ರ ಸಿದ್ಧಪಡಿಸಿದ ಅಡಿಕೆ ಬೆಳೆಗಾರ

Share
ಅಡಿಕೆ ಮರ ಏರಲು ವಿವಿಧ ಪ್ರಯತ್ನವಾಗುತ್ತಿದೆ. ಅಡಿಕೆ ಬೆಳೆಗಾರರ ಬಹುದೊಡ್ಡ ಸಮಸ್ಯೆ ಹಾಗೂ ಪರಿಹಾರಕ್ಕಾಗಿ ಕಾತರದಿಂದ ಕಾಯುವ ಸ್ಥಿತಿ ಇದೆ. ಇದೀಗ ಅಡಿಕೆ ಬೆಳೆಗಾರ  ಗಣಪತಿ ಭಟ್ ಅವರು ಹೊಸದೊಂದು ಯಂತ್ರವನ್ನು ಅಭಿವೃದ್ಧಿಪಡಿಸಿದ್ದಾರೆ. ಅದು ಬೈಕ್ ಮಾದರಿಯ ಯಂತ್ರ.  ಇದರ ಮೇಲೆ ಕುಳಿತ ವ್ಯಕ್ತಿ ಅತ್ಯಂತ ಸುಲಭವಾಗಿ ಅಡಿಕೆ ಮರದ ತುದಿಯನ್ನು ತಲುಪಿ ಅಡಿಕೆ ಕೊಯ್ಯಬಹುದು ಹಾಗೂ ಔಷಧಿಯನ್ನು ಸಿಂಪಡಿಸಬಹುದು.
ಮಳೆಗಾದಲ್ಲಿ ಅಡಿಕೆ ಮರಕ್ಕೆ ಔಷಧಿ ಸಿಂಪಡಣೆ ಮಾಡಲು ಮತ್ತು ವರ್ಷದ ಅಂತ್ಯದಲ್ಲಿ ಅಡಿಕೆ ಕೊಯ್ಯಲು ಅಡಿಕೆ ಮರವನ್ನು ಹತ್ತುವುದು ಅನಿವಾರ್ಯ ಕೆಲಸ.  ಕಾರ್ಮಿಕರು ತಮ್ಮ ಕಾಲಿನ ಸುತ್ತ ಹಗ್ಗವನ್ನು ಕಟ್ಟಿ ಮತ್ತು ಕೈಯಲ್ಲಿ ಒಂದು ತುಂಡು ಬಟ್ಟೆ ಸುತ್ತಿದ ಹಗ್ಗವನ್ನು ಹಿಡಿದುಕೊಂಡು ತೆಂಗಿನ ಮರ ಅಥವಾ ಅಡಿಕೆ ಮರವನ್ನು ಹತ್ತುತ್ತಾರೆ. ಅವರಿಗೆ ಯಾವುದೇ ರಕ್ಷಾ ಕವಚ ಇರುವುದಿಲ್ಲ.  ಕೈತಪ್ಪಿದರೆ ಕೆಳಕ್ಕೆ ಬೀಳುವ ಅಪಾಯ ಅಪಾರ ಪ್ರಮಾಣದಲ್ಲಿದೆ. ಈ ರೀತಿ ಬಿದ್ದವರು ಮತ್ತೆ ಏಳಲಾಗದ ಸ್ಥಿತಿ ತಲುಪಿದ ಉದಾಹರಣೆಯೂ ಸಾಕಷ್ಟಿದೆ. ಇದಕ್ಕಾಗಿ ವಿವಿಧ ಪ್ರಯತ್ನ ನಡೆಯುತ್ತಿದೆ.ಅಡಿಕೆ ಮರ ಬೆಳೆಸಲು ರೈತರು ಹಾಕುವ ಶ್ರಮವೆಲ್ಲಾ ಮಳೆಗಾಲದಲ್ಲಿ ಅತ್ಯಧಿಕ ಮಳೆಯ ಕಾರಣದಿಂದಾಗಿ ಕೊಳೆರೋಗ ಬಾಧಿಸಿ ನಾಶವಾಗುತ್ತದೆ, ಜೊತೆಗೆ ನುರಿತ ಕಾರ್ಮಿಕರ ಕೊರತೆಯಿಂದ ಬೆಳೆ ನಾಶವಾಗುತ್ತದೆ.
ಇದೀಗ ಬಂಟ್ವಾಳ ತಾಲೂಕಿನ ಸಜೀಪಮೂಡ ಗ್ರಾಮದ ಗಣಪತಿ ಭಟ್ ಮೋಟಾರ್ ಮಾದರಿಯ ಯಂತ್ರವನ್ನು ಅಭಿವೃದ್ಧಿಪಡಿಸಿದ್ದಾರೆ. ಈ ಯಂತ್ರದ ಮೂಲಕ ಅಡಿಕೆ ಮರ ಹತ್ತುವ ದೃಶ್ಯವುಳ್ಳ ವೀಡಿಯೋ ಈಗಾಗಲೇ ಸಾಮಾಜಿಕ ಜಾಲತಾಣಗಳಲ್ಲಿ  ವೈರಲ್ ಆಗಿದೆ. ಬೆಳೆಗಾರರಲ್ಲಿ  ಹೊಸ ಭರವಸೆ ಮೂಡಿಸಿದೆ.
ಸಹಕಾರ : news13.in
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ದೇಹ–ಮನಸ್ಸು–ಆತ್ಮದ ಸಮತೋಲನವೇ ನಿಜವಾದ ಆರೋಗ್ಯ: ಆಯುರ್ವೇದದ ಪರಮ ಗುರಿ ಆತ್ಮಜ್ಞಾನ – ರಾಘವೇಶ್ವರ ಶ್ರೀ

ದೇಹ, ಮನಸ್ಸು ಮತ್ತು ಆತ್ಮದ ಸಮತೋಲನವೇ ನಿಜವಾದ ಆರೋಗ್ಯ ಎಂದು ರಾಮಚಂದ್ರಾಪುರ ಶ್ರೀ…

21 hours ago

2050 ರ ವೇಳೆಗೆ ಭೂಕುಸಿತದ ಅಪಾಯ ಮತ್ತಷ್ಟು ಹೆಚ್ಚಳ : ಮಳೆ ತೀವ್ರತೆ, ನಗರೀಕರಣವೇ ಪ್ರಮುಖ ಕಾರಣ – ಅಧ್ಯಯನ

2050ರ ವೇಳೆಗೆ ಮಳೆಯ ತೀವ್ರತೆ ಮತ್ತು ನಗರೀಕರಣದ ಪರಿಣಾಮವಾಗಿ ಭಾರತದ ಹಲವು ಗುಡ್ಡ…

1 day ago

ಅಕಾಲದ ಹಸಿವು, ಅಸಮಯದ ನಿದ್ದೆ ದೇಹದ ಯಂತ್ರ ಕೆಟ್ಟಿರುವ ಸಂಕೇತ : ರಾಘವೇಶ್ವರ ಶ್ರೀ

ಅಕಾಲದ ಹಸಿವು ಮತ್ತು ಅಸಮಯದ ನಿದ್ದೆ ದೇಹದ ಯಂತ್ರದಲ್ಲಿ ಸಮಸ್ಯೆಯ ಸಂಕೇತ ಎಂದು…

1 day ago

ಮತ್ತೆ ಚುರುಕುಗೊಂಡ ಮಳೆ | ಸುಳ್ಯ ಮಲೆನಾಡು ಭಾಗದಲ್ಲಿ ಬೆಳಗ್ಗಿನಿಂದ ಧಾರಾಕಾರ ಮಳೆ

ಸುಳ್ಯ ತಾಲೂಕಿನ ಮಲೆನಾಡು ಭಾಗದಲ್ಲಿ ಎರಡು ದಿನಗಳ ವಿರಾಮದ ಬಳಿಕ ಮತ್ತೆ ಭಾರೀ…

1 day ago

ದೇಶದ ಅಡಿಕೆ ಉತ್ಪಾದನೆಯಲ್ಲಿ ಕರ್ನಾಟಕದ ಮೊದಲು – 75.47% ಉತ್ಪಾದನೆ, 71.56% ವಿಸ್ತೀರ್ಣದಲ್ಲಿ ಅಡಿಕೆ ಬೆಳೆ

ದೇಶದ ಅಡಿಕೆ ಉತ್ಪಾದನೆ ಹಾಗೂ ಬೆಳೆ ವಿಸ್ತೀರ್ಣದಲ್ಲಿ ಕರ್ನಾಟಕವೇ ಅಗ್ರಸ್ಥಾನದಲ್ಲಿದೆ ಎಂದು ಕೇಂದ್ರ…

2 days ago