ಗುತ್ತಿಗಾರು: ಮೋಟಾರ್ ಬೈಕ್ ಮಾದರಿಯ ಅಡಿಕೆ ಮರ ಏರುವ ಯಂತ್ರದ ಪ್ರಾತ್ಯಕ್ಷಿಕೆ ಗುತ್ತಿಗಾರು ಗ್ರಾಮದ ಕಮಿಲ ಬಳಿಯ ಪುಚ್ಚಪ್ಪಾಡಿ ಕೃಷ್ಣಮೂರ್ತಿ ಅವರ ಅಡಿಕೆ ತೋಟದಲ್ಲಿ ನಡೆಯಿತು. ಅಡಿಕೆ ಬೆಳೆಗಾರರು ಮರ ಏರುವ ಯಂತ್ರದ ಪ್ರಾತ್ಯಕ್ಷಿಕೆಯನ್ನು ವೀಕ್ಷಿಸಿದರು. ಭಾರತೀಯ ಕಿಸಾನ್ ಸಂಘ ಗುತ್ತಿಗಾರು-ನಾಲ್ಕುರು ಇದರ ಸಹಯೋಗದೊಂದಿಗೆ ನಡೆದ ಈ ಕಾರ್ಯಕ್ರಮದಲ್ಲಿ 100 ಕ್ಕೂ ಅಧಿಕ ಅಡಿಕೆ ಬೆಳೆಗಾರರು ಆಗಮಿಸಿದ್ದರು.
ಬಂಟ್ವಾಳದ ಸಜಿಪಮೂಡ ಗ್ರಾಮದ ಕೃಷಿಕ ಗಣಪತಿ ಭಟ್ ಅವರು ನಿರ್ಮಾಣ ಮಾಡಿರುವ ಮೋಟಾರು ಚಾಲಿತ ಅಡಿಕೆ ಮರ ಏರುವ ಯಂತ್ರದ ಪ್ರಾತ್ಯಕ್ಷಿಕೆ ನಡೆಯಿತು. ಈ ಸಂದರ್ಭ ರಾಜಾರಾಮ ಕಾಡೂರು ಮಾಹಿತಿ ನೀಡಿದರು. ಅಡಿಕೆ ಬೆಳೆಗಾರರು ಮರ ಏರಿ ಯಂತ್ರದ ಕ್ಷಮತೆ ಹಾಗೂ ಆವಿಷ್ಕಾರವನ್ನು ಕೊಂಡಾಡಿದರು.
ಕೃಷಿ ಯಂತ್ರದ ಅಭಿವೃದ್ಧಿ ಕಡೆಗೆ ಆಸಕ್ತರಾಗಿರುವ ಗಣಪತಿ ಭಟ್ ಅವರು ಈಗಾಗಲೇ ಸುಮಾರು 50 ಲಕ್ಷ ರೂಪಾಯಿಯಷ್ಟು ಖರ್ಚು ಮಾಡಿದ್ದಾರೆ. ಇದೀಗ ಅಡಿಕೆ ಮರ ಏರುವ ಯಂತ್ರ ಯಶಸ್ಸಾಗಿದೆ. ಅಡಿಕೆ ಬೆಳೆಗಾರರ ಮನ ಗೆದ್ದಿದೆ.
ಬಳಿಕ ಮಾತನಾಡಿದ ಗಣಪತಿ ಭಟ್,
ಕಳೆದ 2 ವರ್ಷಗಳ ನಿರಂತರ ಪ್ರಯತ್ನದಿಂದ ಈ ಮಾದರಿ ತಯಾರಾಗಿದೆ. ಈ ಹಿಂದೆ ಹಲವು ಯಂತ್ರಗಳ ರಚನೆ ಮಾಡಿದ್ದಾಗಿ ಹೇಳಿದ್ದಾರೆ. ಮುಂದೆ ತೆಂಗಿನ ಮರ ಏರುವ ಯಂತ್ರ ಹಾಗೂ ಅಡಿಕೆ ಮರ ಏರುವ ಈ ಮಾದರಿಯನ್ನು ಅಭಿವೃದ್ಧಿ ಪಡಿಸುವ ಉದ್ದೇಶ ಕೂಡಾ ಇದೆ ಎಂದು ಹೇಳುತ್ತಾರೆ.
ಅಡಿಕೆ ಮರ ಏರುವ ಯಂತ್ರದ ಪ್ರಾತ್ಯಕ್ಷಿಕೆಯ ವಿಡಿಯೋ ಇಲ್ಲಿದೆ….
ರಾಷ್ಟ್ರೀಯ ಸ್ವಯಂಸೇವಕ ಸಂಘದ ಹಿರಿಯ ಕಾರ್ಯಕರ್ತ ಧನಂಜಯ ವಾಗ್ಲೆ ಅವರು ಈಚೆಗೆ ನಿಧನರಾದರು.…
ಬಾಂಗ್ಲಾ ದೇಶದ ಕರಾವಳಿಯಲ್ಲಿ ಉಂಟಾಗಿರುವ ತಿರುವಿಕೆಯ ಪರಿಣಾಮದಿಂದ ನಮ್ಮ ಕರಾವಳಿಯಲ್ಲಿ ಮಳೆಯ ಪ್ರಮಾಣ…
ಮೊಬೈಲ್ ಎಷ್ಟು ಅಪಾಯಕಾರಿ ಸ್ಥಿತಿಗೆ ಮಕ್ಕಳನ್ನು ದೂಡುತ್ತದೆ ಎಂದರೆ, ಕಣ್ಣು ಮಾತ್ರವಲ್ಲ ಮನಸ್ಸುಗಳನ್ನೂ…
ಶರಧಿ.ಡಿ.ಎಸ್, 3 ನೇ ತರಗತಿ, ಶ್ರೀ ಭಾರತೀ ವಿದ್ಯಾ ಪೀಠ, ಮುಜುಂಗಾವು ಎಡನಾಡು,…
ಕೃತಿಕಾ, 9 ನೇ ತರಗತಿ, ಸೈಂಟ್ ಆನ್ಸ್ ಇಂಗ್ಲಿಷ್ ಮೀಡಿಯಂ ಶಾಲೆ, ಕಡಬ…
ಧರ್ಮಸ್ಥಳ ಮತ್ತು ಕುಂದಾಪುರ ಪ್ರಾದೇಶಿಕ ಅರಣ್ಯ ವಿಭಾಗ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ…