ಗುತ್ತಿಗಾರು: ಮೋಟಾರ್ ಬೈಕ್ ಮಾದರಿಯ ಅಡಿಕೆ ಮರ ಏರುವ ಯಂತ್ರದ ಪ್ರಾತ್ಯಕ್ಷಿಕೆ ಗುತ್ತಿಗಾರು ಗ್ರಾಮದ ಕಮಿಲ ಬಳಿಯ ಪುಚ್ಚಪ್ಪಾಡಿ ಕೃಷ್ಣಮೂರ್ತಿ ಅವರ ಅಡಿಕೆ ತೋಟದಲ್ಲಿ ನಡೆಯಿತು. ಅಡಿಕೆ ಬೆಳೆಗಾರರು ಮರ ಏರುವ ಯಂತ್ರದ ಪ್ರಾತ್ಯಕ್ಷಿಕೆಯನ್ನು ವೀಕ್ಷಿಸಿದರು. ಭಾರತೀಯ ಕಿಸಾನ್ ಸಂಘ ಗುತ್ತಿಗಾರು-ನಾಲ್ಕುರು ಇದರ ಸಹಯೋಗದೊಂದಿಗೆ ನಡೆದ ಈ ಕಾರ್ಯಕ್ರಮದಲ್ಲಿ 100 ಕ್ಕೂ ಅಧಿಕ ಅಡಿಕೆ ಬೆಳೆಗಾರರು ಆಗಮಿಸಿದ್ದರು.
ಬಂಟ್ವಾಳದ ಸಜಿಪಮೂಡ ಗ್ರಾಮದ ಕೃಷಿಕ ಗಣಪತಿ ಭಟ್ ಅವರು ನಿರ್ಮಾಣ ಮಾಡಿರುವ ಮೋಟಾರು ಚಾಲಿತ ಅಡಿಕೆ ಮರ ಏರುವ ಯಂತ್ರದ ಪ್ರಾತ್ಯಕ್ಷಿಕೆ ನಡೆಯಿತು. ಈ ಸಂದರ್ಭ ರಾಜಾರಾಮ ಕಾಡೂರು ಮಾಹಿತಿ ನೀಡಿದರು. ಅಡಿಕೆ ಬೆಳೆಗಾರರು ಮರ ಏರಿ ಯಂತ್ರದ ಕ್ಷಮತೆ ಹಾಗೂ ಆವಿಷ್ಕಾರವನ್ನು ಕೊಂಡಾಡಿದರು.
ಕೃಷಿ ಯಂತ್ರದ ಅಭಿವೃದ್ಧಿ ಕಡೆಗೆ ಆಸಕ್ತರಾಗಿರುವ ಗಣಪತಿ ಭಟ್ ಅವರು ಈಗಾಗಲೇ ಸುಮಾರು 50 ಲಕ್ಷ ರೂಪಾಯಿಯಷ್ಟು ಖರ್ಚು ಮಾಡಿದ್ದಾರೆ. ಇದೀಗ ಅಡಿಕೆ ಮರ ಏರುವ ಯಂತ್ರ ಯಶಸ್ಸಾಗಿದೆ. ಅಡಿಕೆ ಬೆಳೆಗಾರರ ಮನ ಗೆದ್ದಿದೆ.
ಬಳಿಕ ಮಾತನಾಡಿದ ಗಣಪತಿ ಭಟ್,
ಕಳೆದ 2 ವರ್ಷಗಳ ನಿರಂತರ ಪ್ರಯತ್ನದಿಂದ ಈ ಮಾದರಿ ತಯಾರಾಗಿದೆ. ಈ ಹಿಂದೆ ಹಲವು ಯಂತ್ರಗಳ ರಚನೆ ಮಾಡಿದ್ದಾಗಿ ಹೇಳಿದ್ದಾರೆ. ಮುಂದೆ ತೆಂಗಿನ ಮರ ಏರುವ ಯಂತ್ರ ಹಾಗೂ ಅಡಿಕೆ ಮರ ಏರುವ ಈ ಮಾದರಿಯನ್ನು ಅಭಿವೃದ್ಧಿ ಪಡಿಸುವ ಉದ್ದೇಶ ಕೂಡಾ ಇದೆ ಎಂದು ಹೇಳುತ್ತಾರೆ.
ಅಡಿಕೆ ಮರ ಏರುವ ಯಂತ್ರದ ಪ್ರಾತ್ಯಕ್ಷಿಕೆಯ ವಿಡಿಯೋ ಇಲ್ಲಿದೆ….
ಅಡಿಕೆ ಎಲೆಚುಕ್ಕೆ ರೋಗ ನಿಯಂತ್ರಣಕ್ಕೆ ಸಮೂಹ ಕ್ರಮಗಳು ಫಲ ನೀಡುತ್ತಿವೆ. ಗುತ್ತಿಗಾರಿನಲ್ಲಿ ಸಂವಾದ…
2026ರಲ್ಲಿ ಎಲ್ ನಿನೊ ಪರಿಣಾಮದಿಂದ ಭಾರತ ಸೇರಿ ಏಷ್ಯಾದಲ್ಲಿ ಕಡಿಮೆ ಮಳೆ ಮತ್ತು…
ಹೆಚ್ಚುತ್ತಿರುವ ಉಷ್ಣತೆ ಕೃಷಿ, ಜಾನುವಾರು ಮತ್ತು ಕಾರ್ಮಿಕರ ಮೇಲೆ ತೀವ್ರ ಪರಿಣಾಮ ಬೀರುತ್ತಿದ್ದು,…
ರಾಜ್ಯದಲ್ಲಿ ಏಪ್ರಿಲ್ 26ರಿಂದ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆ ಆರಂಭವಾಗುವ ಸಾಧ್ಯತೆ ಇದೆ.…
ರಾಜ್ಯದಲ್ಲಿ ಬಿಸಿಲಿನ ನಡುವೆ ಏಪ್ರಿಲ್ 25-26ರಿಂದ ಮಳೆ ಆರಂಭವಾಗುವ ಸಾಧ್ಯತೆ ಇದೆ. ಕರಾವಳಿ,…
ಎಸ್.ಎಸ್.ಎಲ್.ಸಿ ಪಾಸಾದವರಿಗೆ ಮಂಗಳೂರಿನ ಜಿಟಿಟಿಸಿಯಲ್ಲಿ 100% ಉದ್ಯೋಗಾಧಾರಿತ ಡಿಪ್ಲೊಮಾ ಕೋರ್ಸ್ಗಳಿಗೆ ಪ್ರವೇಶ ಆರಂಭವಾಗಿದೆ.…