ಗುತ್ತಿಗಾರು: ಮೋಟಾರ್ ಬೈಕ್ ಮಾದರಿಯ ಅಡಿಕೆ ಮರ ಏರುವ ಯಂತ್ರದ ಪ್ರಾತ್ಯಕ್ಷಿಕೆ ಗುತ್ತಿಗಾರು ಗ್ರಾಮದ ಕಮಿಲ ಬಳಿಯ ಪುಚ್ಚಪ್ಪಾಡಿ ಕೃಷ್ಣಮೂರ್ತಿ ಅವರ ಅಡಿಕೆ ತೋಟದಲ್ಲಿ ನಡೆಯಿತು. ಅಡಿಕೆ ಬೆಳೆಗಾರರು ಮರ ಏರುವ ಯಂತ್ರದ ಪ್ರಾತ್ಯಕ್ಷಿಕೆಯನ್ನು ವೀಕ್ಷಿಸಿದರು. ಭಾರತೀಯ ಕಿಸಾನ್ ಸಂಘ ಗುತ್ತಿಗಾರು-ನಾಲ್ಕುರು ಇದರ ಸಹಯೋಗದೊಂದಿಗೆ ನಡೆದ ಈ ಕಾರ್ಯಕ್ರಮದಲ್ಲಿ 100 ಕ್ಕೂ ಅಧಿಕ ಅಡಿಕೆ ಬೆಳೆಗಾರರು ಆಗಮಿಸಿದ್ದರು.
ಬಂಟ್ವಾಳದ ಸಜಿಪಮೂಡ ಗ್ರಾಮದ ಕೃಷಿಕ ಗಣಪತಿ ಭಟ್ ಅವರು ನಿರ್ಮಾಣ ಮಾಡಿರುವ ಮೋಟಾರು ಚಾಲಿತ ಅಡಿಕೆ ಮರ ಏರುವ ಯಂತ್ರದ ಪ್ರಾತ್ಯಕ್ಷಿಕೆ ನಡೆಯಿತು. ಈ ಸಂದರ್ಭ ರಾಜಾರಾಮ ಕಾಡೂರು ಮಾಹಿತಿ ನೀಡಿದರು. ಅಡಿಕೆ ಬೆಳೆಗಾರರು ಮರ ಏರಿ ಯಂತ್ರದ ಕ್ಷಮತೆ ಹಾಗೂ ಆವಿಷ್ಕಾರವನ್ನು ಕೊಂಡಾಡಿದರು.
ಕೃಷಿ ಯಂತ್ರದ ಅಭಿವೃದ್ಧಿ ಕಡೆಗೆ ಆಸಕ್ತರಾಗಿರುವ ಗಣಪತಿ ಭಟ್ ಅವರು ಈಗಾಗಲೇ ಸುಮಾರು 50 ಲಕ್ಷ ರೂಪಾಯಿಯಷ್ಟು ಖರ್ಚು ಮಾಡಿದ್ದಾರೆ. ಇದೀಗ ಅಡಿಕೆ ಮರ ಏರುವ ಯಂತ್ರ ಯಶಸ್ಸಾಗಿದೆ. ಅಡಿಕೆ ಬೆಳೆಗಾರರ ಮನ ಗೆದ್ದಿದೆ.
ಬಳಿಕ ಮಾತನಾಡಿದ ಗಣಪತಿ ಭಟ್,
ಕಳೆದ 2 ವರ್ಷಗಳ ನಿರಂತರ ಪ್ರಯತ್ನದಿಂದ ಈ ಮಾದರಿ ತಯಾರಾಗಿದೆ. ಈ ಹಿಂದೆ ಹಲವು ಯಂತ್ರಗಳ ರಚನೆ ಮಾಡಿದ್ದಾಗಿ ಹೇಳಿದ್ದಾರೆ. ಮುಂದೆ ತೆಂಗಿನ ಮರ ಏರುವ ಯಂತ್ರ ಹಾಗೂ ಅಡಿಕೆ ಮರ ಏರುವ ಈ ಮಾದರಿಯನ್ನು ಅಭಿವೃದ್ಧಿ ಪಡಿಸುವ ಉದ್ದೇಶ ಕೂಡಾ ಇದೆ ಎಂದು ಹೇಳುತ್ತಾರೆ.
ಅಡಿಕೆ ಮರ ಏರುವ ಯಂತ್ರದ ಪ್ರಾತ್ಯಕ್ಷಿಕೆಯ ವಿಡಿಯೋ ಇಲ್ಲಿದೆ….
ಒಂದು ಕಾಲದಲ್ಲಿ ಬಡವರ ಹಣ್ಣು ಎಂದೇ ಕರೆಯಲ್ಪಟ್ಟ ಹಲಸು ಈಗ ಆರೋಗ್ಯಕರ ಆಹಾರ…
ಧರ್ಮಸ್ಥಳದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ರೈತರಿಗೆ ಉತ್ತಮ…
ಅಡಿಕೆ ಉತ್ಪಾದನಾ ವೆಚ್ಚ ಭಾರೀ ಏರಿಕೆಯಾಗಿರುವ ಹಿನ್ನೆಲೆಯಲ್ಲಿ ಕನಿಷ್ಠ ಆಮದು ಬೆಲೆ (MIP)ಯನ್ನು…
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುಂಗಾರು ಭತ್ತದ ಬೆಳೆ ವಿಮೆ ನೋಂದಣಿ ಆರಂಭವಾಗಿದ್ದು, ಆಗಸ್ಟ್…
ದೇಶದಲ್ಲಿ 43% ಮಳೆ ಕೊರತೆ ದಾಖಲಾಗಿರುವ ಹಿನ್ನೆಲೆ ಎಲ್ ನಿನೋ ಪರಿಣಾಮ ಎದುರಿಸಲು…
ತೆಂಗು ಬೆಳೆಗಾರರು ಕಾರ್ಮಿಕ ಕೊರತೆ ಮತ್ತು ಹೆಚ್ಚುತ್ತಿರುವ ಕೂಲಿ ವೆಚ್ಚದಿಂದ ಸಂಕಷ್ಟ ಎದುರಿಸುತ್ತಿದ್ದಾರೆ.…