ಗುತ್ತಿಗಾರು: ಮೋಟಾರ್ ಬೈಕ್ ಮಾದರಿಯ ಅಡಿಕೆ ಮರ ಏರುವ ಯಂತ್ರದ ಪ್ರಾತ್ಯಕ್ಷಿಕೆ ಗುತ್ತಿಗಾರು ಗ್ರಾಮದ ಕಮಿಲ ಬಳಿಯ ಪುಚ್ಚಪ್ಪಾಡಿ ಕೃಷ್ಣಮೂರ್ತಿ ಅವರ ಅಡಿಕೆ ತೋಟದಲ್ಲಿ ನಡೆಯಿತು. ಅಡಿಕೆ ಬೆಳೆಗಾರರು ಮರ ಏರುವ ಯಂತ್ರದ ಪ್ರಾತ್ಯಕ್ಷಿಕೆಯನ್ನು ವೀಕ್ಷಿಸಿದರು. ಭಾರತೀಯ ಕಿಸಾನ್ ಸಂಘ ಗುತ್ತಿಗಾರು-ನಾಲ್ಕುರು ಇದರ ಸಹಯೋಗದೊಂದಿಗೆ ನಡೆದ ಈ ಕಾರ್ಯಕ್ರಮದಲ್ಲಿ 100 ಕ್ಕೂ ಅಧಿಕ ಅಡಿಕೆ ಬೆಳೆಗಾರರು ಆಗಮಿಸಿದ್ದರು.
ಬಂಟ್ವಾಳದ ಸಜಿಪಮೂಡ ಗ್ರಾಮದ ಕೃಷಿಕ ಗಣಪತಿ ಭಟ್ ಅವರು ನಿರ್ಮಾಣ ಮಾಡಿರುವ ಮೋಟಾರು ಚಾಲಿತ ಅಡಿಕೆ ಮರ ಏರುವ ಯಂತ್ರದ ಪ್ರಾತ್ಯಕ್ಷಿಕೆ ನಡೆಯಿತು. ಈ ಸಂದರ್ಭ ರಾಜಾರಾಮ ಕಾಡೂರು ಮಾಹಿತಿ ನೀಡಿದರು. ಅಡಿಕೆ ಬೆಳೆಗಾರರು ಮರ ಏರಿ ಯಂತ್ರದ ಕ್ಷಮತೆ ಹಾಗೂ ಆವಿಷ್ಕಾರವನ್ನು ಕೊಂಡಾಡಿದರು.
ಕೃಷಿ ಯಂತ್ರದ ಅಭಿವೃದ್ಧಿ ಕಡೆಗೆ ಆಸಕ್ತರಾಗಿರುವ ಗಣಪತಿ ಭಟ್ ಅವರು ಈಗಾಗಲೇ ಸುಮಾರು 50 ಲಕ್ಷ ರೂಪಾಯಿಯಷ್ಟು ಖರ್ಚು ಮಾಡಿದ್ದಾರೆ. ಇದೀಗ ಅಡಿಕೆ ಮರ ಏರುವ ಯಂತ್ರ ಯಶಸ್ಸಾಗಿದೆ. ಅಡಿಕೆ ಬೆಳೆಗಾರರ ಮನ ಗೆದ್ದಿದೆ.
ಬಳಿಕ ಮಾತನಾಡಿದ ಗಣಪತಿ ಭಟ್,
ಕಳೆದ 2 ವರ್ಷಗಳ ನಿರಂತರ ಪ್ರಯತ್ನದಿಂದ ಈ ಮಾದರಿ ತಯಾರಾಗಿದೆ. ಈ ಹಿಂದೆ ಹಲವು ಯಂತ್ರಗಳ ರಚನೆ ಮಾಡಿದ್ದಾಗಿ ಹೇಳಿದ್ದಾರೆ. ಮುಂದೆ ತೆಂಗಿನ ಮರ ಏರುವ ಯಂತ್ರ ಹಾಗೂ ಅಡಿಕೆ ಮರ ಏರುವ ಈ ಮಾದರಿಯನ್ನು ಅಭಿವೃದ್ಧಿ ಪಡಿಸುವ ಉದ್ದೇಶ ಕೂಡಾ ಇದೆ ಎಂದು ಹೇಳುತ್ತಾರೆ.
ಅಡಿಕೆ ಮರ ಏರುವ ಯಂತ್ರದ ಪ್ರಾತ್ಯಕ್ಷಿಕೆಯ ವಿಡಿಯೋ ಇಲ್ಲಿದೆ….
ಗೋಕರ್ಣದಲ್ಲಿ ನಡೆದ 'ಅನ್ನಂ ಬ್ರಹ್ಮ' ಪ್ರವಚನದಲ್ಲಿ ರಾಘವೇಶ್ವರ ಭಾರತೀ ಶ್ರೀಗಳು ಭೋಜನವೇ ಅದ್ವೈತ…
ಕೃಷಿ ಅಧಿಕಾರಿ ನೇಮಕಾತಿ ಪರೀಕ್ಷೆಯನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ. ಪ್ರತಿಭಟನಾನಿರತ ಕೃಷಿ ವಿದ್ಯಾರ್ಥಿಗಳಿಗೆ ಸರ್ಕಾರ…
ಉಪಗ್ರಹ, ಡ್ರೋನ್, GIS, AI ಮತ್ತು ಮಷಿನ್ ಲರ್ನಿಂಗ್ ತಂತ್ರಜ್ಞಾನ ಬಳಸಿ ರಾಜ್ಯ…
ಬರ್ಮಾ ಅಡಿಕೆ ಕಳ್ಳಸಾಗಣೆ ಮತ್ತು ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿ ಇಡಿ ಸಿಲ್ಚಾರ್ನ…
ಕರಾವಳಿ ಹಾಗೂ ಮಲೆನಾಡಿನಲ್ಲಿ ಆಗಸ್ಟ್ 10ರಿಂದ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳು ಗೋಚರಿಸಿವೆ.…
ದೇಹ, ಮನಸ್ಸು ಮತ್ತು ಆತ್ಮದ ಸಮತೋಲನವೇ ನಿಜವಾದ ಆರೋಗ್ಯ ಎಂದು ರಾಮಚಂದ್ರಾಪುರ ಶ್ರೀ…