Advertisement
ಕೃಷಿ

ಅಡಿಕೆ ಮರ ಏರುವ ಸುಲಭ ಉಪಾಯದ ಪ್ರಯತ್ನದಲ್ಲಿ ಪದವೀಧರ ಕೃಷಿಕ

Share

ಬೆಳ್ಳಾರೆ: ಇವರು ಸಿವಿಲ್ ಇಂಜಿನಿಯರ್. ಕೃಷಿ ಮಾಡುತ್ತಿರುವ ಯುವಕ. ಇಂಜಿನಿಯರಿಂಗ್ ಬಳಿಕ ಕೃಷಿಯಲ್ಲೇ ತೊಡಗಿಕೊಂಡು ಕೃಷಿ ಅಭಿವೃದ್ಧಿಗೆ ವಿವಿಧ ಪ್ರಯತ್ನ ಮಾಡಿದ್ದಾರೆ. ಇದೀಗ ಅಡಿಕೆ ಮರ ಏರಲು ಸುಲಭ ಉಪಾಯ ಕಂಡುಹಿಡಿಯುವ ಪ್ರಯತ್ನದಲ್ಲಿ ಇದ್ದಾರೆ. ಈ ಯುವ ಕೃಷಿಕ ಸುಳ್ಯ ತಾಲೂಕಿನ ಮುಪ್ಪೇರ್ಯ ಗ್ರಾಮದ ಕಲ್ಮಡ್ಕ ಬಳಿಯ ಲಾಲ್ ಕೃಷ್ಣ ಕೈಂತಜೆ.

 

 

ಅಡಿಕೆ ಬೆಳೆಗಾರರಿಗೆ ಸದಾ ಕಾಡುವ ಚಿಂತೆ, ಅಡಿಕೆ ಮರ ಏರುವುದು ಹೇಗೆ ? ಅದರ ಜೊತೆಗೆ ಕೊಳೆರೋಗಕ್ಕೆ ಔಷಧಿ ಸಿಂಪಡಣೆ , ಅಡಿಕೆ ಕೊಯ್ಲು ಇದೆರಡೂ ಈಗ ಬೆಳೆಗಾರರಿಗೆ ಕಾಡುವ ಬಹುದೊಡ್ಡ ಸಮಸ್ಯೆ. ಇದಕ್ಕಾಗಿ ವಿವಿಧ ಪ್ರಯತ್ನ ಆಗುತ್ತಿದೆ. ಒಂದು ಕಡೆ ಯಂತ್ರಗಳ ಆವಿಷ್ಕಾರ ನಡೆಯುತ್ತಿದ್ದರೆ ಮತ್ತೊಂದು ಕಡೆ ಸುಲಭದಲ್ಲಿ ಹಾಗೂ ರಕ್ಷಣಾತ್ಮಕವಾಗಿ ಹೇಗೆ ಮರ ಏರಬಹುದು ಎಂಬ ಬಗ್ಗೆಯೂ ಅಧ್ಯಯನ, ಪ್ರಯತ್ನ ನಡೆಯುತ್ತಿದೆ. ಇಂತಹ ಒಂದು ಪ್ರಯತ್ನ ಮುಪ್ಪೇರ್ಯ ಗ್ರಾಮದ ಕಲ್ಮಡ್ಕ ಬಳಿಯ ಲಾಲ್ ಕೃಷ್ಣ ಕೈಂತಜೆ ಮಾಡಿದ್ದಾರೆ.


ಲಾಲ್ ಕೃಷ್ಣ್ ಅವರು ಮರ ಏರುವ ಯಂತ್ರಗಳ ಬಗ್ಗೆ , ಸುಲಭ ಉಪಾಯಗಳ ಬಗ್ಗೆ ಹುಡುಕುತ್ತಿದ್ದಾಗ ಬ್ರೆಜಿಲ್ ನಲ್ಲಿ ಕೃಷಿಕರು ಬಳ್ಳಿಯ ಸಹಾಯದಿಂದ ಮರ ಏರುವ ಉಪಾಯವನ್ನು ನೋಡಿದರು. ಅಲ್ಲಿ ತೆಂಗಿನ ಮರಕ್ಕೆ ಈ ಬಳ್ಳಿಯ ಸಹಾಯದಿಂದ ಏರುತ್ತಿದ್ದರು. ಅದೇ ಮಾದರಿಯಲ್ಲಿ ಅಡಿಕೆ ಮರ ಏರಲು ಬೇಕಾದ ವಿನ್ಯಾಸ ಮಾಡಿದರು. ಎರಡು ಬಳ್ಳಿ ಹಾಗೂ ಬೈಕ್, ಸ್ಕೂಟರ್ ಟಯರ್ ಇದ್ದರೆ ಈ ಪ್ರಯತ್ನ ಸಾಧ್ಯವಾಗುತ್ತದೆ. ಬಳ್ಳಿಯ ಒಂದು ತುದಿಗೆ ಟಯರ್ ಕಟ್ಟಿ, ಇನ್ನೊಂದು ತುದಿಯನ್ನು ಅಡಿಕೆ ಮರಕ್ಕೆ ಸಿಕ್ಕಿಸಿಕೊಂಡು ಏರುವ ಐಡಿಯಾ ಇದು. ಇದರಲ್ಲಿ ಇನ್ನಷ್ಟು ಸುಧಾರಣೆಗಳು ಇವೆ. ಈ ಮೂಲಕ ಸುಲಭದಲ್ಲಿ ಮರ ಏರಲು ಸಾಧ್ಯವಾಗುತ್ತದೆ, ಹಾಗೂ ಆಯಾಸ ಕಡಿಮೆಯಾಗುತ್ತದೆ ಎನ್ನುವುದು ಅವರ ಅಭಿಪ್ರಾಯ. ಇನ್ನೂ ಸುಧಾರಣೆಗಳು ಇವೆ. ಇದು ಆರಂಭವಷ್ಟೇ ಎನ್ನುವ ಲಾಲ್ ಕೃಷ್ಣ, ಇದರಲ್ಲಿ ಇನ್ನಷ್ಟು ರಕ್ಷಣಾ ವ್ಯವಸ್ಥೆಗಳನ್ನೂ ಮರ ಏರುವವರು ಮಾಡಿಕೊಳ್ಳಬಹುದು ಎನ್ನುತ್ತಾರೆ.

ಕೃಷಿಕರ ಬೆಳವಣಿಗೆಗೆ ಹಾಗೂ ಕೃಷಿ ಸುಲಭಕ್ಕೆ ಲಾಲ್ ಕೃಷ್ಣ ಹಾಗೂ ಅವರ ಕುಟುಂಬ ವಿವಿಧ ಪ್ರಯೋಗ ಮಾಡುತ್ತಲೇ ಇದ್ದಾರೆ. ಯುವಕರ ಯೋಚನೆಗಳಿಗೆ ತಕ್ಕಂತೆ ಲಾಲ್ ಕೃಷ್ಣ ಯುವ ಕೃಷಿಕರಾಗಿ ಹೊಸ ಹೊಸ ಐಡಿಯಾ ಹೊಂದಿರುವುದು ಕೃಷಿ ಬೆಳವಣಿಗೆಗೆ ಭರವಸೆ ಮೂಡಿಸುತ್ತಾರೆ.

(ಲಾಲ್ ಕೃಷ್ಣ ಸಂಪರ್ಕ – 9449568502)

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಚಂಡಮಾರುತಗಳು ಏಕೆ ಕಡಿಮೆಯಾಗುತ್ತಿವೆ? ಎಲ್ ನಿನೋದಿಂದ ಮಳೆ–ಬಿಸಿಲಿನ ಚಿತ್ರಣ ಬದಲಾಗುತ್ತಿದೆಯೇ?

ವಾಯುಭಾರ ಕುಸಿತಗಳು ಚಂಡಮಾರುತವಾಗಿ ಬಲಗೊಳ್ಳಲು ಸಮುದ್ರದ ಉಷ್ಣತೆ ಮಾತ್ರವಲ್ಲದೆ ತೇವಾಂಶ, ವಿಂಡ್ ಶಿಯರ್…

2 hours ago

ಹವಾಮಾನ ವರದಿ | 11-09-2026 | ಸೆ.12ರಿಂದ ಬಿಸಿಲು ಹೆಚ್ಚಳ, ಕೆಲವೆಡೆ ಮಳೆ ಸಾಧ್ಯತೆ

ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮುಂದಿನ ಕೆಲವು ದಿನ ಬಿಸಿಲಿನ ವಾತಾವರಣ ಹೆಚ್ಚಾಗುವ…

7 hours ago

ಕ್ಯಾಂಪ್ಕೊ ದಾಖಲೆ ಸಾಧನೆ – ₹3,735 ಕೋಟಿ ವಹಿವಾಟು, ₹49.62 ಕೋಟಿ ಲಾಭ – 14% ಡಿವಿಡೆಂಡ್ ಶಿಫಾರಸು

2025-26ರಲ್ಲಿ ಕ್ಯಾಂಪ್ಕೊ ₹3,735 ಕೋಟಿ ವಹಿವಾಟು ಮತ್ತು ₹49.62 ಕೋಟಿ ಲಾಭ ದಾಖಲಿಸಿದ್ದು,…

12 hours ago

ಸಂಪತ್ತು ಹೆಚ್ಚಾದರೆ ಬದುಕು ಶ್ರೀಮಂತವಾಗುತ್ತದೆಯೇ..?

ಸಂಪತ್ತು ಮತ್ತು ಸೌಲಭ್ಯಗಳು ಹೆಚ್ಚಿರುವುದೇ ನಿಜವಾದ ಶ್ರೀಮಂತಿಕೆಯಲ್ಲ; ಅವುಗಳನ್ನು ವಿವೇಕದಿಂದ ಬಳಸುವ ಮನಸ್ಸು…

24 hours ago

ಹವಾಮಾನ ವರದಿ | 10-09-2026 | ಕರ್ನಾಟಕದಲ್ಲಿ ಮಳೆ ಏಕೆ ಇಳಿಮುಖವಾಗುತ್ತಿದೆ..?

ಸೆ.11ರಿಂದ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಕಡಿಮೆಯಾಗಲಿದ್ದು, ಬಿಸಿಲು ಹೆಚ್ಚಾಗುವ ಲಕ್ಷಣಗಳಿವೆ.…

1 day ago

ರಾಜ್ಯದಲ್ಲಿ ವಿದ್ಯುತ್‌ ಸಂಕಷ್ಟದ ಸುಳಿವು – ರಾತ್ರಿ 6.30 ರಿಂದ 9ರವರೆಗೆ ಪೂರೈಕೆ ವ್ಯತ್ಯಯ ಸಾಧ್ಯತೆ

ದುರ್ಬಲ ಮುಂಗಾರು ಮತ್ತು ಜಲ–ಪವನ ವಿದ್ಯುತ್‌ ಉತ್ಪಾದನೆ ಕುಸಿತದಿಂದ ರಾಜ್ಯದಲ್ಲಿ ವಿದ್ಯುತ್‌ ಪೂರೈಕೆಯ…

1 day ago