Advertisement
ಕೃಷಿ

ಅಡಿಕೆ ಮರ ಏರುವ ಸುಲಭ ಉಪಾಯದ ಪ್ರಯತ್ನದಲ್ಲಿ ಪದವೀಧರ ಕೃಷಿಕ

Share

ಬೆಳ್ಳಾರೆ: ಇವರು ಸಿವಿಲ್ ಇಂಜಿನಿಯರ್. ಕೃಷಿ ಮಾಡುತ್ತಿರುವ ಯುವಕ. ಇಂಜಿನಿಯರಿಂಗ್ ಬಳಿಕ ಕೃಷಿಯಲ್ಲೇ ತೊಡಗಿಕೊಂಡು ಕೃಷಿ ಅಭಿವೃದ್ಧಿಗೆ ವಿವಿಧ ಪ್ರಯತ್ನ ಮಾಡಿದ್ದಾರೆ. ಇದೀಗ ಅಡಿಕೆ ಮರ ಏರಲು ಸುಲಭ ಉಪಾಯ ಕಂಡುಹಿಡಿಯುವ ಪ್ರಯತ್ನದಲ್ಲಿ ಇದ್ದಾರೆ. ಈ ಯುವ ಕೃಷಿಕ ಸುಳ್ಯ ತಾಲೂಕಿನ ಮುಪ್ಪೇರ್ಯ ಗ್ರಾಮದ ಕಲ್ಮಡ್ಕ ಬಳಿಯ ಲಾಲ್ ಕೃಷ್ಣ ಕೈಂತಜೆ.

 

 

ಅಡಿಕೆ ಬೆಳೆಗಾರರಿಗೆ ಸದಾ ಕಾಡುವ ಚಿಂತೆ, ಅಡಿಕೆ ಮರ ಏರುವುದು ಹೇಗೆ ? ಅದರ ಜೊತೆಗೆ ಕೊಳೆರೋಗಕ್ಕೆ ಔಷಧಿ ಸಿಂಪಡಣೆ , ಅಡಿಕೆ ಕೊಯ್ಲು ಇದೆರಡೂ ಈಗ ಬೆಳೆಗಾರರಿಗೆ ಕಾಡುವ ಬಹುದೊಡ್ಡ ಸಮಸ್ಯೆ. ಇದಕ್ಕಾಗಿ ವಿವಿಧ ಪ್ರಯತ್ನ ಆಗುತ್ತಿದೆ. ಒಂದು ಕಡೆ ಯಂತ್ರಗಳ ಆವಿಷ್ಕಾರ ನಡೆಯುತ್ತಿದ್ದರೆ ಮತ್ತೊಂದು ಕಡೆ ಸುಲಭದಲ್ಲಿ ಹಾಗೂ ರಕ್ಷಣಾತ್ಮಕವಾಗಿ ಹೇಗೆ ಮರ ಏರಬಹುದು ಎಂಬ ಬಗ್ಗೆಯೂ ಅಧ್ಯಯನ, ಪ್ರಯತ್ನ ನಡೆಯುತ್ತಿದೆ. ಇಂತಹ ಒಂದು ಪ್ರಯತ್ನ ಮುಪ್ಪೇರ್ಯ ಗ್ರಾಮದ ಕಲ್ಮಡ್ಕ ಬಳಿಯ ಲಾಲ್ ಕೃಷ್ಣ ಕೈಂತಜೆ ಮಾಡಿದ್ದಾರೆ.


ಲಾಲ್ ಕೃಷ್ಣ್ ಅವರು ಮರ ಏರುವ ಯಂತ್ರಗಳ ಬಗ್ಗೆ , ಸುಲಭ ಉಪಾಯಗಳ ಬಗ್ಗೆ ಹುಡುಕುತ್ತಿದ್ದಾಗ ಬ್ರೆಜಿಲ್ ನಲ್ಲಿ ಕೃಷಿಕರು ಬಳ್ಳಿಯ ಸಹಾಯದಿಂದ ಮರ ಏರುವ ಉಪಾಯವನ್ನು ನೋಡಿದರು. ಅಲ್ಲಿ ತೆಂಗಿನ ಮರಕ್ಕೆ ಈ ಬಳ್ಳಿಯ ಸಹಾಯದಿಂದ ಏರುತ್ತಿದ್ದರು. ಅದೇ ಮಾದರಿಯಲ್ಲಿ ಅಡಿಕೆ ಮರ ಏರಲು ಬೇಕಾದ ವಿನ್ಯಾಸ ಮಾಡಿದರು. ಎರಡು ಬಳ್ಳಿ ಹಾಗೂ ಬೈಕ್, ಸ್ಕೂಟರ್ ಟಯರ್ ಇದ್ದರೆ ಈ ಪ್ರಯತ್ನ ಸಾಧ್ಯವಾಗುತ್ತದೆ. ಬಳ್ಳಿಯ ಒಂದು ತುದಿಗೆ ಟಯರ್ ಕಟ್ಟಿ, ಇನ್ನೊಂದು ತುದಿಯನ್ನು ಅಡಿಕೆ ಮರಕ್ಕೆ ಸಿಕ್ಕಿಸಿಕೊಂಡು ಏರುವ ಐಡಿಯಾ ಇದು. ಇದರಲ್ಲಿ ಇನ್ನಷ್ಟು ಸುಧಾರಣೆಗಳು ಇವೆ. ಈ ಮೂಲಕ ಸುಲಭದಲ್ಲಿ ಮರ ಏರಲು ಸಾಧ್ಯವಾಗುತ್ತದೆ, ಹಾಗೂ ಆಯಾಸ ಕಡಿಮೆಯಾಗುತ್ತದೆ ಎನ್ನುವುದು ಅವರ ಅಭಿಪ್ರಾಯ. ಇನ್ನೂ ಸುಧಾರಣೆಗಳು ಇವೆ. ಇದು ಆರಂಭವಷ್ಟೇ ಎನ್ನುವ ಲಾಲ್ ಕೃಷ್ಣ, ಇದರಲ್ಲಿ ಇನ್ನಷ್ಟು ರಕ್ಷಣಾ ವ್ಯವಸ್ಥೆಗಳನ್ನೂ ಮರ ಏರುವವರು ಮಾಡಿಕೊಳ್ಳಬಹುದು ಎನ್ನುತ್ತಾರೆ.

ಕೃಷಿಕರ ಬೆಳವಣಿಗೆಗೆ ಹಾಗೂ ಕೃಷಿ ಸುಲಭಕ್ಕೆ ಲಾಲ್ ಕೃಷ್ಣ ಹಾಗೂ ಅವರ ಕುಟುಂಬ ವಿವಿಧ ಪ್ರಯೋಗ ಮಾಡುತ್ತಲೇ ಇದ್ದಾರೆ. ಯುವಕರ ಯೋಚನೆಗಳಿಗೆ ತಕ್ಕಂತೆ ಲಾಲ್ ಕೃಷ್ಣ ಯುವ ಕೃಷಿಕರಾಗಿ ಹೊಸ ಹೊಸ ಐಡಿಯಾ ಹೊಂದಿರುವುದು ಕೃಷಿ ಬೆಳವಣಿಗೆಗೆ ಭರವಸೆ ಮೂಡಿಸುತ್ತಾರೆ.

(ಲಾಲ್ ಕೃಷ್ಣ ಸಂಪರ್ಕ – 9449568502)

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮುಂಗಾರು ದುರ್ಬಲ – ದೇಶದಲ್ಲಿ 40% ಮಳೆ ಕೊರತೆ, ಕರಾವಳಿ ಕರ್ನಾಟಕಕ್ಕೆ ಜೂನ್ 25ರ ಬಳಿಕ ಮಳೆ ನಿರೀಕ್ಷೆ

ದೇಶದಲ್ಲಿ ಮುಂಗಾರು ಚಟುವಟಿಕೆ ದುರ್ಬಲವಾಗಿದ್ದು, ಜೂನ್ 18ರವರೆಗೆ ಮಳೆ ಕೊರತೆ ಶೇ.40ಕ್ಕೆ ಏರಿಕೆಯಾಗಿದೆ.…

1 hour ago

ಇ-ವೇ ಬಿಲ್ ಹಾಗೂ ಸಾರಿಗೆ ದಾಖಲೆಗಳ ಕೊರತೆ – 33.6 ಟನ್ ಅಡಿಕೆ ಜಪ್ತಿ ಕ್ರಮವನ್ನು ಎತ್ತಿಹಿಡಿದ ನ್ಯಾಯಾಲಯ

ಇ-ವೇ ಬಿಲ್ ಮತ್ತು ಸಾರಿಗೆ ದಾಖಲೆಗಳ ಕೊರತೆಯಿಂದ ₹2.22 ಕೋಟಿ ಮೌಲ್ಯದ 33.6…

2 hours ago

PM-KISAN 23ನೇ ಕಂತು ಬಿಡುಗಡೆಗೆ ಸಿದ್ಧತೆ – ಕರ್ನಾಟಕದ 41.54 ಲಕ್ಷ ರೈತರಿಗೆ ₹830.83 ಕೋಟಿ ಜಮೆ

PM-KISAN ಯೋಜನೆಯ 23ನೇ ಕಂತಿನ ಹಣವನ್ನು ಜೂನ್ 20ರಂದು ರೈತರ ಖಾತೆಗಳಿಗೆ ಜಮೆ…

2 hours ago

ನಾಳೆ ನೀಟ್ ಪರೀಕ್ಷೆ- ದ.ಕ. ಜಿಲ್ಲೆಯಲ್ಲಿ 5570 ಅಭ್ಯರ್ಥಿಗಳು – ದ.ಕ. ಜಿಲ್ಲೆಯಲ್ಲಿ ಬಿಗು ಭದ್ರತೆ, 12 ಕೇಂದ್ರಗಳಲ್ಲಿ ಪರೀಕ್ಷೆ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 5,570 ಅಭ್ಯರ್ಥಿಗಳು ನೀಟ್ ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದು, ಮಂಗಳೂರಿನ 12…

2 hours ago

ಮಧ್ಯಪ್ರಾಚ್ಯ ಸಂಘರ್ಷ ಪರಿಣಾಮ – ಗೋಮಯ ಗೊಬ್ಬರದತ್ತ ಭಾರತದ ರೈತರು – ರಾಸಾಯನಿಕ ಗೊಬ್ಬರ ಕೊರತೆ ಭೀತಿ..!

ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಸಂಘರ್ಷದಿಂದ ಜಾಗತಿಕ ಗೊಬ್ಬರ ಸರಬರಾಜು ವ್ಯವಸ್ಥೆಯಲ್ಲಿ ಅನಿಶ್ಚಿತತೆ ಉಂಟಾಗಿದ್ದು, ಭಾರತದಲ್ಲಿ…

12 hours ago

ಕೇರಳದಲ್ಲಿ ಕೊಬ್ಬರಿ ಬೆಲೆ MSP ಗಿಂತಲೂ ಕಡಿಮೆ – ₹130 ಕನಿಷ್ಠ ಬೆಂಬಲ ಬೆಲೆಗೆ ರೈತರ ಆಗ್ರಹ

ಕೇರಳದಲ್ಲಿ ಕೊಬ್ಬರಿ ದರ MSP ಗಿಂತ ಕೆಳಗೆ ಇಳಿದಿದ್ದು, ರೈತರು ಪ್ರತಿ ಕೆ.ಜಿಗೆ…

13 hours ago