Advertisement
ಕೃಷಿ

ಅಡಿಕೆ ಮರ ಏರುವ ಸುಲಭ ಉಪಾಯದ ಪ್ರಯತ್ನದಲ್ಲಿ ಪದವೀಧರ ಕೃಷಿಕ

Share

ಬೆಳ್ಳಾರೆ: ಇವರು ಸಿವಿಲ್ ಇಂಜಿನಿಯರ್. ಕೃಷಿ ಮಾಡುತ್ತಿರುವ ಯುವಕ. ಇಂಜಿನಿಯರಿಂಗ್ ಬಳಿಕ ಕೃಷಿಯಲ್ಲೇ ತೊಡಗಿಕೊಂಡು ಕೃಷಿ ಅಭಿವೃದ್ಧಿಗೆ ವಿವಿಧ ಪ್ರಯತ್ನ ಮಾಡಿದ್ದಾರೆ. ಇದೀಗ ಅಡಿಕೆ ಮರ ಏರಲು ಸುಲಭ ಉಪಾಯ ಕಂಡುಹಿಡಿಯುವ ಪ್ರಯತ್ನದಲ್ಲಿ ಇದ್ದಾರೆ. ಈ ಯುವ ಕೃಷಿಕ ಸುಳ್ಯ ತಾಲೂಕಿನ ಮುಪ್ಪೇರ್ಯ ಗ್ರಾಮದ ಕಲ್ಮಡ್ಕ ಬಳಿಯ ಲಾಲ್ ಕೃಷ್ಣ ಕೈಂತಜೆ.

Advertisement
Advertisement

 

Advertisement

 

Advertisement

ಅಡಿಕೆ ಬೆಳೆಗಾರರಿಗೆ ಸದಾ ಕಾಡುವ ಚಿಂತೆ, ಅಡಿಕೆ ಮರ ಏರುವುದು ಹೇಗೆ ? ಅದರ ಜೊತೆಗೆ ಕೊಳೆರೋಗಕ್ಕೆ ಔಷಧಿ ಸಿಂಪಡಣೆ , ಅಡಿಕೆ ಕೊಯ್ಲು ಇದೆರಡೂ ಈಗ ಬೆಳೆಗಾರರಿಗೆ ಕಾಡುವ ಬಹುದೊಡ್ಡ ಸಮಸ್ಯೆ. ಇದಕ್ಕಾಗಿ ವಿವಿಧ ಪ್ರಯತ್ನ ಆಗುತ್ತಿದೆ. ಒಂದು ಕಡೆ ಯಂತ್ರಗಳ ಆವಿಷ್ಕಾರ ನಡೆಯುತ್ತಿದ್ದರೆ ಮತ್ತೊಂದು ಕಡೆ ಸುಲಭದಲ್ಲಿ ಹಾಗೂ ರಕ್ಷಣಾತ್ಮಕವಾಗಿ ಹೇಗೆ ಮರ ಏರಬಹುದು ಎಂಬ ಬಗ್ಗೆಯೂ ಅಧ್ಯಯನ, ಪ್ರಯತ್ನ ನಡೆಯುತ್ತಿದೆ. ಇಂತಹ ಒಂದು ಪ್ರಯತ್ನ ಮುಪ್ಪೇರ್ಯ ಗ್ರಾಮದ ಕಲ್ಮಡ್ಕ ಬಳಿಯ ಲಾಲ್ ಕೃಷ್ಣ ಕೈಂತಜೆ ಮಾಡಿದ್ದಾರೆ.


ಲಾಲ್ ಕೃಷ್ಣ್ ಅವರು ಮರ ಏರುವ ಯಂತ್ರಗಳ ಬಗ್ಗೆ , ಸುಲಭ ಉಪಾಯಗಳ ಬಗ್ಗೆ ಹುಡುಕುತ್ತಿದ್ದಾಗ ಬ್ರೆಜಿಲ್ ನಲ್ಲಿ ಕೃಷಿಕರು ಬಳ್ಳಿಯ ಸಹಾಯದಿಂದ ಮರ ಏರುವ ಉಪಾಯವನ್ನು ನೋಡಿದರು. ಅಲ್ಲಿ ತೆಂಗಿನ ಮರಕ್ಕೆ ಈ ಬಳ್ಳಿಯ ಸಹಾಯದಿಂದ ಏರುತ್ತಿದ್ದರು. ಅದೇ ಮಾದರಿಯಲ್ಲಿ ಅಡಿಕೆ ಮರ ಏರಲು ಬೇಕಾದ ವಿನ್ಯಾಸ ಮಾಡಿದರು. ಎರಡು ಬಳ್ಳಿ ಹಾಗೂ ಬೈಕ್, ಸ್ಕೂಟರ್ ಟಯರ್ ಇದ್ದರೆ ಈ ಪ್ರಯತ್ನ ಸಾಧ್ಯವಾಗುತ್ತದೆ. ಬಳ್ಳಿಯ ಒಂದು ತುದಿಗೆ ಟಯರ್ ಕಟ್ಟಿ, ಇನ್ನೊಂದು ತುದಿಯನ್ನು ಅಡಿಕೆ ಮರಕ್ಕೆ ಸಿಕ್ಕಿಸಿಕೊಂಡು ಏರುವ ಐಡಿಯಾ ಇದು. ಇದರಲ್ಲಿ ಇನ್ನಷ್ಟು ಸುಧಾರಣೆಗಳು ಇವೆ. ಈ ಮೂಲಕ ಸುಲಭದಲ್ಲಿ ಮರ ಏರಲು ಸಾಧ್ಯವಾಗುತ್ತದೆ, ಹಾಗೂ ಆಯಾಸ ಕಡಿಮೆಯಾಗುತ್ತದೆ ಎನ್ನುವುದು ಅವರ ಅಭಿಪ್ರಾಯ. ಇನ್ನೂ ಸುಧಾರಣೆಗಳು ಇವೆ. ಇದು ಆರಂಭವಷ್ಟೇ ಎನ್ನುವ ಲಾಲ್ ಕೃಷ್ಣ, ಇದರಲ್ಲಿ ಇನ್ನಷ್ಟು ರಕ್ಷಣಾ ವ್ಯವಸ್ಥೆಗಳನ್ನೂ ಮರ ಏರುವವರು ಮಾಡಿಕೊಳ್ಳಬಹುದು ಎನ್ನುತ್ತಾರೆ.

Advertisement

ಕೃಷಿಕರ ಬೆಳವಣಿಗೆಗೆ ಹಾಗೂ ಕೃಷಿ ಸುಲಭಕ್ಕೆ ಲಾಲ್ ಕೃಷ್ಣ ಹಾಗೂ ಅವರ ಕುಟುಂಬ ವಿವಿಧ ಪ್ರಯೋಗ ಮಾಡುತ್ತಲೇ ಇದ್ದಾರೆ. ಯುವಕರ ಯೋಚನೆಗಳಿಗೆ ತಕ್ಕಂತೆ ಲಾಲ್ ಕೃಷ್ಣ ಯುವ ಕೃಷಿಕರಾಗಿ ಹೊಸ ಹೊಸ ಐಡಿಯಾ ಹೊಂದಿರುವುದು ಕೃಷಿ ಬೆಳವಣಿಗೆಗೆ ಭರವಸೆ ಮೂಡಿಸುತ್ತಾರೆ.

Advertisement

(ಲಾಲ್ ಕೃಷ್ಣ ಸಂಪರ್ಕ – 9449568502)

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮೈಸೂರು – ಚಾಮರಾಜನಗರ ಭಾಗದ ಪ್ರಭಾವಿ ದಲಿತ ನಾಯಕ : ಬಿಜೆಪಿ ಸಂಸದ ವಿ. ಶ್ರೀನಿವಾಸ್‌ ಪ್ರಸಾದ್‌ ಇನ್ನಿಲ್ಲ

ಚಾಮರಾಜನಗರ ಕ್ಷೇತ್ರದ ಬಿಜೆಪಿ ಸಂಸದ, ಮೈಸೂರು – ಚಾಮರಾಜನಗರ ಭಾಗದ ಪ್ರಭಾವಿ ದಲಿತ…

26 mins ago

ದಿಢೀರಾಗಿ ಬೆಳೆಯುವುದು , ಫಸಲು ನೀಡುವುದು ಅವಸರವೇ ಅಪಘಾತಕ್ಕೆ ಕಾರಣ | ಬೇಗ ಫಸಲು ಬಂದ ಸಸ್ಯ ಬೇಗನೇ ಸಾಯುತ್ತದೆ |

ದಶಕಗಳ ಹಿಂದೆ ವಿಮಾ ಸಂಸ್ಥೆಯೊಂದು ಸಾಗವಾನಿ ಬೆಳೆಯಲು ರೈತರ ಷೇರು ಪಡೆದುಕೊಂಡು ಹತ್ತೊ…

15 hours ago

ಮಾವು ಮಾಂತ್ರಿಕ ಹಾಗೂ ಸುಬ್ರಾಯ ಭಟ್ಟರ 200ಕ್ಕೂ ಹೆಚ್ಚು ನಾಡು ಮಾವು ಹಾಗೂ ಹಲಸು ತಳಿ ಸಂರಕ್ಷಣೆ

ನಾಡು ಮಾವು ಸಂರಕ್ಷಣೆ ಕೆಲಸದ ಮೊದಲ ದಿನವದು. ನವೆಂಬರ್ 2022. ಕಸಿ ಕಡ್ಡಿಗಳನ್ನು…

15 hours ago

ಭಾರತದಲ್ಲಿ ಏರಿದ ತಾಪಮಾನ | ಅತ್ತ ತಾಂಜೇನಿಯಾದಲ್ಲಿ ಭಾರೀ ಮಳೆ, ಪ್ರವಾಹ | 155 ಮಂದಿ ಸಾವು |

ಭಾರತದಲ್ಲಿ(India) ಉರಿ ಬಿಸಿಲಿನ ತಾಪ(Heat) ಏರುತ್ತಿದ್ದರೆ ತಾಂಜೇನಿಯಾದಲ್ಲಿ (Tanzania) ಕಳೆದ ವಾರದಿಂದ ಭಾರೀ…

20 hours ago

ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿಯೂ ಮುಂದಿನ ವಾರ ಕಾಡಲಿದೆ ರಣ ಬಿಸಿಲು | ದೂರ ಸಾಗಿದ ಮಳೆ | ಬಿಸಿ ಗಾಳಿಯ ಮುನ್ಸೂಚನೆ |

ಮಳೆ ಬರುವ ಕುರುಹೇ ಇಲ್ಲ. ಎಲ್ಲೆಲ್ಲೂ ಬಿಸಿಗಾಳಿಯ ಅಬ್ಬರ, ನೆತ್ತಿ ಸುಡುವ ಸೂರ್ಯ. ರಾಜ್ಯಾದ್ಯಂತ…

20 hours ago

ಹವಾಮಾನ ವೈಪರೀತ್ಯ | ಕೃಷಿ ಕಾರ್ಮಿಕರಿಗೆ ಈಗ ಬಿಸಿಗಾಳಿ ಸಂಕಷ್ಟ | ಕೃಷಿಗೂ ಸಮಸ್ಯೆ-ಕೃಷಿ ಬೆಳವಣಿಗೆ ಕುಂಠಿತ |

ತಾಪಮಾನ ಏರಿಕೆಯಿಂದ ಹಲವು ಕಡೆ ಸಮಸ್ಯೆಯಾಗುತ್ತಿದೆ. ಕೃಷಿ ನಷ್ಟದ ಜೊತೆಗೆ ಗ್ರಾಮೀಣ ಭಾಗದಲ್ಲಿ…

21 hours ago