Advertisement
ಕೃಷಿ

ಅಡಿಕೆ ಮೇಲಿನ ಅಪಪ್ರಚಾರಕ್ಕೆ ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘ ಖಂಡನೆ

Share
ಮಂಚಿ ಶ್ರೀನಿವಾಸ ಆಚಾರ್

ಪುತ್ತೂರು: ಅಡಿಕೆ ಹಾನಿಕಾರಕವೆಂದು ಒಂದು ಲಾಬಿ ನಿರಂತರ ಅಪಪ್ರಚಾರ ನಡೆಸುತ್ತಿದೆ. ಕಳೆದ ಎರಡು ದಶಕಗಳಿಂದ ಇದು ನಡೆಯುತ್ತಿದೆ. ಮಾಧ್ಯಮಗಳಲ್ಲಿ, ಸೆಮಿನಾರ್ ಗಳಲ್ಲಿ ಈ ಬಗ್ಗೆ  ಪ್ರಯತ್ನಿಸಲಾಗುತ್ತಿದೆ. ಪಾರ್ಲಿಮೆಂಟ್‍ನಲ್ಲಿ ಕೂಡಾ ಪುನ: ಪುನ: ಪ್ರಶ್ನೆಗಳನ್ನು ಕೇಳಿಸುವ ಮೂಲಕ ಅದರ ದುರುದ್ದೇಶ ಸ್ಪಷ್ಟವಾಗಿ ಗೋಚರಿಸುತ್ತಿದೆ ಎಂದು ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘದ ಅಧ್ಯಕ್ಷ ಮಂಚಿ ಶ್ರೀನಿವಾಸ ಆಚಾರ್ ಹೇಳಿದ್ದಾರೆ.

Advertisement
Advertisement

ಅಧಿಕಾರಿಗಳ ಮೂಲಕ ನಡೆಯುವ ಇದು ಮಂತ್ರಿಗಳಿಗೂ ತಿಳಿಯುವುದಿಲ್ಲ. ಸಾಕಷ್ಟು ಅಧಿಕಾರಿಗಳು, ವಿಜ್ಞಾನಿಗಳು, ವೈದ್ಯರು ಹಾಗೂ ಬುದ್ಧಿಜೀವಿಗಳಂತೆ ನಟಿಸುವವರು ಇದರಲ್ಲಿ ಶಾಮೀಲಾಗಿರುತ್ತಾರೆ. ಬದಲಾಗಿ ಈವರೆಗೆ ಯಾವುದೇ ನೈಜ ಸಂಶೋಧನೆಯು ಅಡಿಕೆ ಹಾನಿಕಾರಕವೆಂದು ಹೇಳಿಲ್ಲ. ಬಹಳಷ್ಟು ವಿದೇಶಿ ಸಂಶೋಧನೆಗಳು ಅಡಿಕೆಯ ಉಪಯೋಗವು ಆರೋಗ್ಯಕ್ಕೆ ಪೂರಕವೆಂದೇ ಹೇಳಿವೆ. ಇತ್ತೀಚೆಗೆ ಸಿಪಿಸಿಆರ್ ಐ ಕಾಸರಗೋಡಿನಲ್ಲಿ ನಡೆದ ರಾಷ್ಟ್ರಮಟ್ಟದ ಸಮ್ಮೇಳನದಲ್ಲಿ ಕೂಡಾ ಅಡಿಕೆಯ ಬಗ್ಗೆ ಯಾವುದೇ ಋಣಾತ್ಮಕ ಪರಿಣಾಮಗಳ ಬಗ್ಗೆ ಉಲ್ಲೇಖ ಬಂದಿಲ್ಲ. ಆದರೆ ಈ ವಿಷಯಗಳು ಮಾಧ್ಯಮಗಳಲ್ಲಿ ಬೆಳಕಿಗೆ ಬರುವುದಿಲ್ಲ. ಇಂತಹ ಲಾಬಿಗಳು ಕೆಲಸ ಮಾಡುವುದು ಸರ್ವವಿದಿತ.

ಉದಾಹರಣೆಗಾಗಿ

1) ತೆಂಗಿನ ಎಣ್ಣೆ ಹಾನಿಕಾರಕ ಎಂದು ಪ್ರಚುರಪಡಿಸಿ ಸಾಕಷ್ಟು ಹಾನಿ ಮಾಡಲಾಗಿದೆ.
2) ಕೊಲೆಸ್ಟರಾಲ್ ಬಗ್ಗೆ ಭಯ ಹುಟ್ಟಿಸಿ ಸಾಕಷ್ಟು ತೊಂದರೆ ಮಾಡಲಾಗಿದೆ. ಒಂದು ಅಂದಾಜಿನಂತೆ ಔಷಧ ಕಂಪೆನಿಗಳಿಗೆ Trillian Dollar (1000 Billions) ವ್ಯಾಪಾರ ಒದಗಿಸಿದೆ.
3) ಹಾಗೆಯೇ ಡಯಾಬೆಟಿಕ್ ಹಾಗೂ ರಕ್ತದೊತ್ತಡಗಳ ಬಗ್ಗೆ ಸುಳ್ಳು ಮಾಹಿತಿ ಸೃಷ್ಟಿಸಿ ಔಷಧ ಕಂಪೆನಿಗಳು ಕೋಟ್ಯಾಂತರ ಗಳಿಸುತ್ತಿವೆ.

ಇವೆಲ್ಲ ಒಂದು ಆಪತ್ಕಾರಿ ಬೆಳವಣಿಗೆ. ಕಾಣದ ಕೈಗಳ ಈ ಕೃತ್ಯ ಖಂಡನಾಕಾರಿ. ಆದರೆ ಇಂತಹ ಪ್ರಯತ್ನ ನೈಜ ಹಾನಿಕಾರಕ ವಸ್ತುಗಳ ಬಗ್ಗೆ ಇಲ್ಲ ಯಾಕೆ. ಉದಾ: ಮದ್ಯ, ತಂಬಾಕು ಹಾಗೂ ಮಾದಕವಸ್ತುಗಳು.
ಅಡಿಕೆಯ ಉಪಯೋಗ ನಿಜವಾಗಿ ಲಾಭದಾಯಕ. ಶುಭಕಾರ್ಯಗಳಲ್ಲಿ ಔಷಧವಾಗಿ ಶತಮಾನಗಳಿಂದ ಇದು ಬಳಕೆಯಲ್ಲಿದೆ. ಅಜೀರ್ಣ, ಚರ್ಮರೋಗ ಇವುಗಳಿಗೆ ವ್ಯಾಪಕವಾಗಿ ಬಳಕೆಯಲ್ಲಿದೆ. ಹಿತಮಿತ ಬಳಕೆ ಆರೋಗ್ಯವರ್ಧಕ. ಇಷ್ಟೆಲ್ಲ ತಿಳಿದೂ ಸರಕಾರದ ಸ್ಪಷ್ಟ ನಿರ್ದೆಶನದ ಹೊರತಾಗಿಯೂ ಬಹಳಷ್ಟು ಕಳಪೆ ಗುಣಮಟ್ಟದ ಅಡಿಕೆ ಆಮದು ಆಗುತ್ತಿದೆ. ಎಲ್ಲಾ ಅಡೆತಡೆಗಳನ್ನು ಮೀರಿ ಇದು ದೇಶದ ಒಳಗೆ ನುಸುಳುತ್ತಿದೆ. ಕೃಷಿಕರಿಗೆ ನ್ಯಾಯಬೇಕು. ನೀರಿನ ಕೊರತೆ, ನುರಿತ ಕಾರ್ಮಿಕರ ಕೊರತೆ, ಏರುತ್ತಿರುವ ಒಳಸುರಿಗಳ ಬೆಲೆ, ಕೊಳೆರೋಗ ಮೂಲಕ (ಪರಿಣಾಮಕಾರಿ ಔಷಧ ಲಭ್ಯವಿಲ್ಲದಿರುವುದು) ಕಂಗಾಲಾಗಿರುವ ಬೆಳೆಗಾರರಿಗೆ ಸೂಕ್ತ ಪರಿಹಾರ ಬೇಕು ಎಂದು ಮಂಚಿ ಶ್ರೀನಿವಾಸ ಆಚಾರ್ ಒತ್ತಾಯಿಸಿದ್ದಾರೆ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕಡಲಾಮೆಗಳ ಸಂತಾನೋತ್ಪತ್ತಿಗೆ ಅರಣ್ಯ ಇಲಾಖೆ ರಕ್ಷಣೆ | ಬಾವಳ ಕಡಲತೀರದಲ್ಲಿ ಸಂತೋಷದ ಕ್ಷಣ

ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಬಾವಳದಲ್ಲಿ ಕಡಲಾಮೆ ಮೊಟ್ಟೆಯಿಂದ ಹೊರ ಬಂದ…

2 hours ago

ಮಂಗಳೂರಿನಲ್ಲಿ ಸಮುದ್ರ ಮೀನು ಮರಿ ಉತ್ಪಾದನಾ ಕೇಂದ್ರ ಸ್ಥಾಪನೆಗೆ ಸಂಸದರಿಂದ ಒತ್ತಾಯ

ದಕ್ಷಿಣ ಕನ್ನಡದಲ್ಲಿ ಗುಣಮಟ್ಟದ ಮೀನು ಮರಿ ಕೊರತೆ ನೀಗಿಸಲು ಮಂಗಳೂರಿನಲ್ಲಿ Marine Finfish…

3 hours ago

ಕರಾವಳಿ ಅಭಿವೃದ್ಧಿಗೆ ವಿಶೇಷ ಪ್ಯಾಕೇಜ್ ಆಗ್ರಹ | ಕರಾವಳಿ ಜಿಲ್ಲೆಗಳ ಅಭಿವೃದ್ಧಿಗೆ ಸಮಗ್ರ ದೃಷ್ಟಿ ಅಗತ್ಯ

ಕರಾವಳಿ ಜಿಲ್ಲೆಗಳ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಅಗತ್ಯ ಅನುದಾನವನ್ನು ಮುಂದಿನ ಬಜೆಟ್‌ನಲ್ಲಿ ನೀಡಬೇಕೆಂದು…

24 hours ago

ಅಡಿಕೆಯ ಬಗ್ಗೆ ಹೊಸ ಅಧ್ಯಯನ | ಕ್ಯಾನ್ಸರ್‌ ಅಷ್ಟೇ ಅಲ್ಲ… ಹೃದಯ ರೋಗ ಮತ್ತು ಮೆಟಾಬಾಲಿಕ್ ಸಮಸ್ಯೆಯೂ ಇದೆ…!

ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ,  ಅದು ಗಂಭೀರ ಆರೋಗ್ಯ ಅಪಾಯಗಳಿಗೆ…

2 days ago

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ | ಶಾಶ್ವತ ಪರಿಹಾರಕ್ಕೆ ಕೇಂದ್ರದ ಗಮನ ಸೆಳೆದು ಕುಮಾರಸ್ವಾಮಿ ಮನವಿ

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…

2 days ago

ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರಿಗೆ ಲಾಭ

ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…

2 days ago