ಕೃಷಿ

ಅಡಿಕೆ ಮೇಲಿನ ಅಪಪ್ರಚಾರಕ್ಕೆ ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘ ಖಂಡನೆ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail
ಮಂಚಿ ಶ್ರೀನಿವಾಸ ಆಚಾರ್

ಪುತ್ತೂರು: ಅಡಿಕೆ ಹಾನಿಕಾರಕವೆಂದು ಒಂದು ಲಾಬಿ ನಿರಂತರ ಅಪಪ್ರಚಾರ ನಡೆಸುತ್ತಿದೆ. ಕಳೆದ ಎರಡು ದಶಕಗಳಿಂದ ಇದು ನಡೆಯುತ್ತಿದೆ. ಮಾಧ್ಯಮಗಳಲ್ಲಿ, ಸೆಮಿನಾರ್ ಗಳಲ್ಲಿ ಈ ಬಗ್ಗೆ  ಪ್ರಯತ್ನಿಸಲಾಗುತ್ತಿದೆ. ಪಾರ್ಲಿಮೆಂಟ್‍ನಲ್ಲಿ ಕೂಡಾ ಪುನ: ಪುನ: ಪ್ರಶ್ನೆಗಳನ್ನು ಕೇಳಿಸುವ ಮೂಲಕ ಅದರ ದುರುದ್ದೇಶ ಸ್ಪಷ್ಟವಾಗಿ ಗೋಚರಿಸುತ್ತಿದೆ ಎಂದು ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘದ ಅಧ್ಯಕ್ಷ ಮಂಚಿ ಶ್ರೀನಿವಾಸ ಆಚಾರ್ ಹೇಳಿದ್ದಾರೆ.

Advertisement
Advertisement

ಅಧಿಕಾರಿಗಳ ಮೂಲಕ ನಡೆಯುವ ಇದು ಮಂತ್ರಿಗಳಿಗೂ ತಿಳಿಯುವುದಿಲ್ಲ. ಸಾಕಷ್ಟು ಅಧಿಕಾರಿಗಳು, ವಿಜ್ಞಾನಿಗಳು, ವೈದ್ಯರು ಹಾಗೂ ಬುದ್ಧಿಜೀವಿಗಳಂತೆ ನಟಿಸುವವರು ಇದರಲ್ಲಿ ಶಾಮೀಲಾಗಿರುತ್ತಾರೆ. ಬದಲಾಗಿ ಈವರೆಗೆ ಯಾವುದೇ ನೈಜ ಸಂಶೋಧನೆಯು ಅಡಿಕೆ ಹಾನಿಕಾರಕವೆಂದು ಹೇಳಿಲ್ಲ. ಬಹಳಷ್ಟು ವಿದೇಶಿ ಸಂಶೋಧನೆಗಳು ಅಡಿಕೆಯ ಉಪಯೋಗವು ಆರೋಗ್ಯಕ್ಕೆ ಪೂರಕವೆಂದೇ ಹೇಳಿವೆ. ಇತ್ತೀಚೆಗೆ ಸಿಪಿಸಿಆರ್ ಐ ಕಾಸರಗೋಡಿನಲ್ಲಿ ನಡೆದ ರಾಷ್ಟ್ರಮಟ್ಟದ ಸಮ್ಮೇಳನದಲ್ಲಿ ಕೂಡಾ ಅಡಿಕೆಯ ಬಗ್ಗೆ ಯಾವುದೇ ಋಣಾತ್ಮಕ ಪರಿಣಾಮಗಳ ಬಗ್ಗೆ ಉಲ್ಲೇಖ ಬಂದಿಲ್ಲ. ಆದರೆ ಈ ವಿಷಯಗಳು ಮಾಧ್ಯಮಗಳಲ್ಲಿ ಬೆಳಕಿಗೆ ಬರುವುದಿಲ್ಲ. ಇಂತಹ ಲಾಬಿಗಳು ಕೆಲಸ ಮಾಡುವುದು ಸರ್ವವಿದಿತ.

ಉದಾಹರಣೆಗಾಗಿ

1) ತೆಂಗಿನ ಎಣ್ಣೆ ಹಾನಿಕಾರಕ ಎಂದು ಪ್ರಚುರಪಡಿಸಿ ಸಾಕಷ್ಟು ಹಾನಿ ಮಾಡಲಾಗಿದೆ.
2) ಕೊಲೆಸ್ಟರಾಲ್ ಬಗ್ಗೆ ಭಯ ಹುಟ್ಟಿಸಿ ಸಾಕಷ್ಟು ತೊಂದರೆ ಮಾಡಲಾಗಿದೆ. ಒಂದು ಅಂದಾಜಿನಂತೆ ಔಷಧ ಕಂಪೆನಿಗಳಿಗೆ Trillian Dollar (1000 Billions) ವ್ಯಾಪಾರ ಒದಗಿಸಿದೆ.
3) ಹಾಗೆಯೇ ಡಯಾಬೆಟಿಕ್ ಹಾಗೂ ರಕ್ತದೊತ್ತಡಗಳ ಬಗ್ಗೆ ಸುಳ್ಳು ಮಾಹಿತಿ ಸೃಷ್ಟಿಸಿ ಔಷಧ ಕಂಪೆನಿಗಳು ಕೋಟ್ಯಾಂತರ ಗಳಿಸುತ್ತಿವೆ.

ಇವೆಲ್ಲ ಒಂದು ಆಪತ್ಕಾರಿ ಬೆಳವಣಿಗೆ. ಕಾಣದ ಕೈಗಳ ಈ ಕೃತ್ಯ ಖಂಡನಾಕಾರಿ. ಆದರೆ ಇಂತಹ ಪ್ರಯತ್ನ ನೈಜ ಹಾನಿಕಾರಕ ವಸ್ತುಗಳ ಬಗ್ಗೆ ಇಲ್ಲ ಯಾಕೆ. ಉದಾ: ಮದ್ಯ, ತಂಬಾಕು ಹಾಗೂ ಮಾದಕವಸ್ತುಗಳು.
ಅಡಿಕೆಯ ಉಪಯೋಗ ನಿಜವಾಗಿ ಲಾಭದಾಯಕ. ಶುಭಕಾರ್ಯಗಳಲ್ಲಿ ಔಷಧವಾಗಿ ಶತಮಾನಗಳಿಂದ ಇದು ಬಳಕೆಯಲ್ಲಿದೆ. ಅಜೀರ್ಣ, ಚರ್ಮರೋಗ ಇವುಗಳಿಗೆ ವ್ಯಾಪಕವಾಗಿ ಬಳಕೆಯಲ್ಲಿದೆ. ಹಿತಮಿತ ಬಳಕೆ ಆರೋಗ್ಯವರ್ಧಕ. ಇಷ್ಟೆಲ್ಲ ತಿಳಿದೂ ಸರಕಾರದ ಸ್ಪಷ್ಟ ನಿರ್ದೆಶನದ ಹೊರತಾಗಿಯೂ ಬಹಳಷ್ಟು ಕಳಪೆ ಗುಣಮಟ್ಟದ ಅಡಿಕೆ ಆಮದು ಆಗುತ್ತಿದೆ. ಎಲ್ಲಾ ಅಡೆತಡೆಗಳನ್ನು ಮೀರಿ ಇದು ದೇಶದ ಒಳಗೆ ನುಸುಳುತ್ತಿದೆ. ಕೃಷಿಕರಿಗೆ ನ್ಯಾಯಬೇಕು. ನೀರಿನ ಕೊರತೆ, ನುರಿತ ಕಾರ್ಮಿಕರ ಕೊರತೆ, ಏರುತ್ತಿರುವ ಒಳಸುರಿಗಳ ಬೆಲೆ, ಕೊಳೆರೋಗ ಮೂಲಕ (ಪರಿಣಾಮಕಾರಿ ಔಷಧ ಲಭ್ಯವಿಲ್ಲದಿರುವುದು) ಕಂಗಾಲಾಗಿರುವ ಬೆಳೆಗಾರರಿಗೆ ಸೂಕ್ತ ಪರಿಹಾರ ಬೇಕು ಎಂದು ಮಂಚಿ ಶ್ರೀನಿವಾಸ ಆಚಾರ್ ಒತ್ತಾಯಿಸಿದ್ದಾರೆ.

Advertisement

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 28-05-2025 | ಮೇ. 31ರಿಂದ ಕಡಿಮೆಯಾಗಿ ಜೂನ್ 3 ರ ತನಕ ಸಾಮಾನ್ಯ ಮಳೆ |

ಬಂಗಾಳಕೊಲ್ಲಿಯ ಪಶ್ಚಿಮ ಬಂಗಾಳ ಕರಾವಳಿಯಲ್ಲಿ ಉಂಟಾಗಲಿರುವ ವಾಯುಭಾರ ಕುಸಿತವು ನಾಳೆ ಬಂಗ್ಲಾ ದೇಶದ…

2 hours ago

ಶಶಿ ಆದಿತ್ಯ ಯೋಗ, ಈ 5 ರಾಶಿಗೆ ಬೇಡವೆಂದರೂ ಲಾಭ..!

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷ್ಗಳನ್ನು ಸಂಪರ್ಕಿಸಿ 9535156490  

5 hours ago

ಪ್ರವಾಸಿಗರು ಚಾರಣ, ನದಿ ತೀರ ಹೋಗದಂತೆ  ಸೂಚನೆ

ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ…

17 hours ago

ಕೇರಳದಾದ್ಯಂತ ತೀವ್ರಗೊಂಡ ನೈಋತ್ಯ ಮಾನ್ಸೂನ್ | ಪೆರಿಯಾರ್ ನದಿಯ ನೀರಿನ ಮಟ್ಟ ಏರಿಕೆ | ಆಲುವಾ ಶಿವ ದೇವಾಲಯದಲ್ಲಿ ನೀರು |

ಮಳೆಯ ಕಾರಣದಿಂದ ಪೆರಿಯಾರ್ ನದಿಯ ನೀರಿನ ಮಟ್ಟ ಏರಿಕೆಯಾಗಿದೆ. ಹೀಗಾಗಿ ಆಲುವಾ ಶಿವ ದೇವಾಲಯದ…

1 day ago

ಹವಾಮಾನ ವರದಿ | 27-05-2025 | ಜೂ.3 ರವರೆಗೂ ಮಳೆ | ಮೇ.28 ರಿಂದ ಮತ್ತೆ ಮಳೆ ಚುರುಕು | ಮಳೆಯ ತೀವ್ರತೆ ಕಡಿಮೆ |

ಬಂಗಾಳಕೊಲ್ಲಿಯ ಪಶ್ಚಿಮ ಬಂಗಾಳ ಕರಾವಳಿಯಲ್ಲಿ ಉಂಟಗಿರುವ ವಾಯುಭಾರ ಕುಸಿತವು ಮುಂದಿನ 3 ಅಥವಾ…

1 day ago

ಭಾರತದಲ್ಲಿ ಅಡಿಕೆಯ ಬಳಕೆ ಹೇಗೆ..? ಯಾವುದೆಲ್ಲಾ ವಿಭಾಗಗಳು ಇವೆ..? ಮಾರುಕಟ್ಟೆ ಹೇಗೆ..?

ಅಡಿಕೆಯ ಬಹು ಪಾಲು ಬೀಡ, ಸಿಹಿ ಸುಪಾರಿ, ಗುಟ್ಕಾ,ಪಾನ್ ಮಸಾಲ ಇತ್ಯಾದಿಗಳ ತಯಾರಿಯಲ್ಲಿ…

1 day ago