Advertisement
ಕೃಷಿ

ಅಡಿಕೆ ಮೇಲಿನ ಅಪಪ್ರಚಾರಕ್ಕೆ ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘ ಖಂಡನೆ

Share
ಮಂಚಿ ಶ್ರೀನಿವಾಸ ಆಚಾರ್

ಪುತ್ತೂರು: ಅಡಿಕೆ ಹಾನಿಕಾರಕವೆಂದು ಒಂದು ಲಾಬಿ ನಿರಂತರ ಅಪಪ್ರಚಾರ ನಡೆಸುತ್ತಿದೆ. ಕಳೆದ ಎರಡು ದಶಕಗಳಿಂದ ಇದು ನಡೆಯುತ್ತಿದೆ. ಮಾಧ್ಯಮಗಳಲ್ಲಿ, ಸೆಮಿನಾರ್ ಗಳಲ್ಲಿ ಈ ಬಗ್ಗೆ  ಪ್ರಯತ್ನಿಸಲಾಗುತ್ತಿದೆ. ಪಾರ್ಲಿಮೆಂಟ್‍ನಲ್ಲಿ ಕೂಡಾ ಪುನ: ಪುನ: ಪ್ರಶ್ನೆಗಳನ್ನು ಕೇಳಿಸುವ ಮೂಲಕ ಅದರ ದುರುದ್ದೇಶ ಸ್ಪಷ್ಟವಾಗಿ ಗೋಚರಿಸುತ್ತಿದೆ ಎಂದು ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘದ ಅಧ್ಯಕ್ಷ ಮಂಚಿ ಶ್ರೀನಿವಾಸ ಆಚಾರ್ ಹೇಳಿದ್ದಾರೆ.

ಅಧಿಕಾರಿಗಳ ಮೂಲಕ ನಡೆಯುವ ಇದು ಮಂತ್ರಿಗಳಿಗೂ ತಿಳಿಯುವುದಿಲ್ಲ. ಸಾಕಷ್ಟು ಅಧಿಕಾರಿಗಳು, ವಿಜ್ಞಾನಿಗಳು, ವೈದ್ಯರು ಹಾಗೂ ಬುದ್ಧಿಜೀವಿಗಳಂತೆ ನಟಿಸುವವರು ಇದರಲ್ಲಿ ಶಾಮೀಲಾಗಿರುತ್ತಾರೆ. ಬದಲಾಗಿ ಈವರೆಗೆ ಯಾವುದೇ ನೈಜ ಸಂಶೋಧನೆಯು ಅಡಿಕೆ ಹಾನಿಕಾರಕವೆಂದು ಹೇಳಿಲ್ಲ. ಬಹಳಷ್ಟು ವಿದೇಶಿ ಸಂಶೋಧನೆಗಳು ಅಡಿಕೆಯ ಉಪಯೋಗವು ಆರೋಗ್ಯಕ್ಕೆ ಪೂರಕವೆಂದೇ ಹೇಳಿವೆ. ಇತ್ತೀಚೆಗೆ ಸಿಪಿಸಿಆರ್ ಐ ಕಾಸರಗೋಡಿನಲ್ಲಿ ನಡೆದ ರಾಷ್ಟ್ರಮಟ್ಟದ ಸಮ್ಮೇಳನದಲ್ಲಿ ಕೂಡಾ ಅಡಿಕೆಯ ಬಗ್ಗೆ ಯಾವುದೇ ಋಣಾತ್ಮಕ ಪರಿಣಾಮಗಳ ಬಗ್ಗೆ ಉಲ್ಲೇಖ ಬಂದಿಲ್ಲ. ಆದರೆ ಈ ವಿಷಯಗಳು ಮಾಧ್ಯಮಗಳಲ್ಲಿ ಬೆಳಕಿಗೆ ಬರುವುದಿಲ್ಲ. ಇಂತಹ ಲಾಬಿಗಳು ಕೆಲಸ ಮಾಡುವುದು ಸರ್ವವಿದಿತ.

ಉದಾಹರಣೆಗಾಗಿ

1) ತೆಂಗಿನ ಎಣ್ಣೆ ಹಾನಿಕಾರಕ ಎಂದು ಪ್ರಚುರಪಡಿಸಿ ಸಾಕಷ್ಟು ಹಾನಿ ಮಾಡಲಾಗಿದೆ.
2) ಕೊಲೆಸ್ಟರಾಲ್ ಬಗ್ಗೆ ಭಯ ಹುಟ್ಟಿಸಿ ಸಾಕಷ್ಟು ತೊಂದರೆ ಮಾಡಲಾಗಿದೆ. ಒಂದು ಅಂದಾಜಿನಂತೆ ಔಷಧ ಕಂಪೆನಿಗಳಿಗೆ Trillian Dollar (1000 Billions) ವ್ಯಾಪಾರ ಒದಗಿಸಿದೆ.
3) ಹಾಗೆಯೇ ಡಯಾಬೆಟಿಕ್ ಹಾಗೂ ರಕ್ತದೊತ್ತಡಗಳ ಬಗ್ಗೆ ಸುಳ್ಳು ಮಾಹಿತಿ ಸೃಷ್ಟಿಸಿ ಔಷಧ ಕಂಪೆನಿಗಳು ಕೋಟ್ಯಾಂತರ ಗಳಿಸುತ್ತಿವೆ.

ಇವೆಲ್ಲ ಒಂದು ಆಪತ್ಕಾರಿ ಬೆಳವಣಿಗೆ. ಕಾಣದ ಕೈಗಳ ಈ ಕೃತ್ಯ ಖಂಡನಾಕಾರಿ. ಆದರೆ ಇಂತಹ ಪ್ರಯತ್ನ ನೈಜ ಹಾನಿಕಾರಕ ವಸ್ತುಗಳ ಬಗ್ಗೆ ಇಲ್ಲ ಯಾಕೆ. ಉದಾ: ಮದ್ಯ, ತಂಬಾಕು ಹಾಗೂ ಮಾದಕವಸ್ತುಗಳು.
ಅಡಿಕೆಯ ಉಪಯೋಗ ನಿಜವಾಗಿ ಲಾಭದಾಯಕ. ಶುಭಕಾರ್ಯಗಳಲ್ಲಿ ಔಷಧವಾಗಿ ಶತಮಾನಗಳಿಂದ ಇದು ಬಳಕೆಯಲ್ಲಿದೆ. ಅಜೀರ್ಣ, ಚರ್ಮರೋಗ ಇವುಗಳಿಗೆ ವ್ಯಾಪಕವಾಗಿ ಬಳಕೆಯಲ್ಲಿದೆ. ಹಿತಮಿತ ಬಳಕೆ ಆರೋಗ್ಯವರ್ಧಕ. ಇಷ್ಟೆಲ್ಲ ತಿಳಿದೂ ಸರಕಾರದ ಸ್ಪಷ್ಟ ನಿರ್ದೆಶನದ ಹೊರತಾಗಿಯೂ ಬಹಳಷ್ಟು ಕಳಪೆ ಗುಣಮಟ್ಟದ ಅಡಿಕೆ ಆಮದು ಆಗುತ್ತಿದೆ. ಎಲ್ಲಾ ಅಡೆತಡೆಗಳನ್ನು ಮೀರಿ ಇದು ದೇಶದ ಒಳಗೆ ನುಸುಳುತ್ತಿದೆ. ಕೃಷಿಕರಿಗೆ ನ್ಯಾಯಬೇಕು. ನೀರಿನ ಕೊರತೆ, ನುರಿತ ಕಾರ್ಮಿಕರ ಕೊರತೆ, ಏರುತ್ತಿರುವ ಒಳಸುರಿಗಳ ಬೆಲೆ, ಕೊಳೆರೋಗ ಮೂಲಕ (ಪರಿಣಾಮಕಾರಿ ಔಷಧ ಲಭ್ಯವಿಲ್ಲದಿರುವುದು) ಕಂಗಾಲಾಗಿರುವ ಬೆಳೆಗಾರರಿಗೆ ಸೂಕ್ತ ಪರಿಹಾರ ಬೇಕು ಎಂದು ಮಂಚಿ ಶ್ರೀನಿವಾಸ ಆಚಾರ್ ಒತ್ತಾಯಿಸಿದ್ದಾರೆ.

 

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ತೆಂಗಿನ ಎಣ್ಣೆಯಿಂದ ವಿಮಾನದ ಇಂಧನ ? ಜೆಟ್‌ ಎಂಜಿನ್‌ ಪರೀಕ್ಷೆಯಲ್ಲಿ ಕುತೂಹಲ ಮೂಡಿಸಿದ ಫಲಿತಾಂಶ

ಮಾರುಕಟ್ಟೆಗೆ ಯೋಗ್ಯವಲ್ಲದ ತೆಂಗಿನಕಾಯಿಯಿಂದ ಪಡೆದ ತೆಂಗಿನ ಎಣ್ಣೆಯನ್ನು ಬಳಸಿ ಸುಸ್ಥಿರ ವಿಮಾನ ಇಂಧನ…

1 hour ago

ಕೃಷಿ ಇನ್ನು ಕೇವಲ ಬೆಳೆ ಬೆಳೆಯುವುದಲ್ಲ – ಯುವಕರಿಗೆ ಸ್ಟಾರ್ಟ್‌ಅಪ್ ಕ್ಷೇತ್ರ

ಕೃಷಿ ಮತ್ತು ಕೃಷಿ ಸಂಬಂಧಿತ ಕ್ಷೇತ್ರಗಳು ಯುವ ಉದ್ಯಮಶೀಲತೆಗೆ ಮುಂದಿನ ದೊಡ್ಡ ಅವಕಾಶಗಳಾಗಿದ್ದು,…

5 hours ago

ಬರಪೀಡಿತ ಪ್ರದೇಶಗಳ ರೈತರಿಗೆ ಗುಡ್‌ನ್ಯೂಸ್ ; ಬೆಳೆ ವಿಮೆ ನೋಂದಣಿ ಅವಧಿ ವಿಸ್ತರಣೆ

ಕರ್ನಾಟಕದ ಬರಪೀಡಿತ ಪ್ರದೇಶಗಳಲ್ಲಿ ಬೆಳೆ ವಿಮೆ ನೋಂದಣಿ ಹಾಗೂ ಪ್ರೀಮಿಯಂ ಕಡಿತದ ಅವಧಿಯನ್ನು…

14 hours ago

ರಾಜ್ಯದ 102 ತಾಲೂಕುಗಳಲ್ಲಿ ಬರದ ಛಾಯೆ – ತಿಂಗಳಾಂತ್ಯಕ್ಕೆ ಕೇಂದ್ರಕ್ಕೆ ವರದಿ ಸಲ್ಲಿಕೆ

ಕರ್ನಾಟಕದ 102 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಈ ತಿಂಗಳಾಂತ್ಯಕ್ಕೆ ಕೇಂದ್ರ ಸರ್ಕಾರಕ್ಕೆ…

14 hours ago

ಮಂಗಳೂರಿನ ಅಶ್ಮಿತ್ ಎ.ಜೆ. ಅವರಿಗೆ ‘ಸರಿಗಮಪ 2026’ರ ಕಿರೀಟ

ಮಂಗಳೂರಿನ ಅಶ್ಮಿತ್ ಎ.ಜೆ. ಅವರು ಝೀ ಕನ್ನಡದ ‘ಸರಿಗಮಪ 2026’ರ ವಿಜೇತರಾಗಿ ₹20…

15 hours ago

ಮಲೆನಾಡು ತಪ್ಪಲಲ್ಲಿ ಧಾರಾಕಾರ ಮಳೆ – ಹಲವು ಕಡೆ ಕೆಲವೇ ಗಂಟೆಯಲ್ಲಿ 100 ಮಿಮೀ ದಾಟಿದ ಮಳೆ

ದಕ್ಷಿಣ ಕನ್ನಡದ ಮಲೆನಾಡು ತಪ್ಪಲಿನ ಸುಬ್ರಹ್ಮಣ್ಯ, ಸುಳ್ಯ, ಕಡಬ ಸೇರಿದಂತೆ ಹಲವು ಪ್ರದೇಶಗಳಲ್ಲಿ…

22 hours ago