Advertisement
ಕೃಷಿ

ಅಡಿಕೆ ಮೇಲಿನ ಅಪಪ್ರಚಾರಕ್ಕೆ ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘ ಖಂಡನೆ

Share
ಮಂಚಿ ಶ್ರೀನಿವಾಸ ಆಚಾರ್

ಪುತ್ತೂರು: ಅಡಿಕೆ ಹಾನಿಕಾರಕವೆಂದು ಒಂದು ಲಾಬಿ ನಿರಂತರ ಅಪಪ್ರಚಾರ ನಡೆಸುತ್ತಿದೆ. ಕಳೆದ ಎರಡು ದಶಕಗಳಿಂದ ಇದು ನಡೆಯುತ್ತಿದೆ. ಮಾಧ್ಯಮಗಳಲ್ಲಿ, ಸೆಮಿನಾರ್ ಗಳಲ್ಲಿ ಈ ಬಗ್ಗೆ  ಪ್ರಯತ್ನಿಸಲಾಗುತ್ತಿದೆ. ಪಾರ್ಲಿಮೆಂಟ್‍ನಲ್ಲಿ ಕೂಡಾ ಪುನ: ಪುನ: ಪ್ರಶ್ನೆಗಳನ್ನು ಕೇಳಿಸುವ ಮೂಲಕ ಅದರ ದುರುದ್ದೇಶ ಸ್ಪಷ್ಟವಾಗಿ ಗೋಚರಿಸುತ್ತಿದೆ ಎಂದು ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘದ ಅಧ್ಯಕ್ಷ ಮಂಚಿ ಶ್ರೀನಿವಾಸ ಆಚಾರ್ ಹೇಳಿದ್ದಾರೆ.

ಅಧಿಕಾರಿಗಳ ಮೂಲಕ ನಡೆಯುವ ಇದು ಮಂತ್ರಿಗಳಿಗೂ ತಿಳಿಯುವುದಿಲ್ಲ. ಸಾಕಷ್ಟು ಅಧಿಕಾರಿಗಳು, ವಿಜ್ಞಾನಿಗಳು, ವೈದ್ಯರು ಹಾಗೂ ಬುದ್ಧಿಜೀವಿಗಳಂತೆ ನಟಿಸುವವರು ಇದರಲ್ಲಿ ಶಾಮೀಲಾಗಿರುತ್ತಾರೆ. ಬದಲಾಗಿ ಈವರೆಗೆ ಯಾವುದೇ ನೈಜ ಸಂಶೋಧನೆಯು ಅಡಿಕೆ ಹಾನಿಕಾರಕವೆಂದು ಹೇಳಿಲ್ಲ. ಬಹಳಷ್ಟು ವಿದೇಶಿ ಸಂಶೋಧನೆಗಳು ಅಡಿಕೆಯ ಉಪಯೋಗವು ಆರೋಗ್ಯಕ್ಕೆ ಪೂರಕವೆಂದೇ ಹೇಳಿವೆ. ಇತ್ತೀಚೆಗೆ ಸಿಪಿಸಿಆರ್ ಐ ಕಾಸರಗೋಡಿನಲ್ಲಿ ನಡೆದ ರಾಷ್ಟ್ರಮಟ್ಟದ ಸಮ್ಮೇಳನದಲ್ಲಿ ಕೂಡಾ ಅಡಿಕೆಯ ಬಗ್ಗೆ ಯಾವುದೇ ಋಣಾತ್ಮಕ ಪರಿಣಾಮಗಳ ಬಗ್ಗೆ ಉಲ್ಲೇಖ ಬಂದಿಲ್ಲ. ಆದರೆ ಈ ವಿಷಯಗಳು ಮಾಧ್ಯಮಗಳಲ್ಲಿ ಬೆಳಕಿಗೆ ಬರುವುದಿಲ್ಲ. ಇಂತಹ ಲಾಬಿಗಳು ಕೆಲಸ ಮಾಡುವುದು ಸರ್ವವಿದಿತ.

Advertisement

ಉದಾಹರಣೆಗಾಗಿ

1) ತೆಂಗಿನ ಎಣ್ಣೆ ಹಾನಿಕಾರಕ ಎಂದು ಪ್ರಚುರಪಡಿಸಿ ಸಾಕಷ್ಟು ಹಾನಿ ಮಾಡಲಾಗಿದೆ.
2) ಕೊಲೆಸ್ಟರಾಲ್ ಬಗ್ಗೆ ಭಯ ಹುಟ್ಟಿಸಿ ಸಾಕಷ್ಟು ತೊಂದರೆ ಮಾಡಲಾಗಿದೆ. ಒಂದು ಅಂದಾಜಿನಂತೆ ಔಷಧ ಕಂಪೆನಿಗಳಿಗೆ Trillian Dollar (1000 Billions) ವ್ಯಾಪಾರ ಒದಗಿಸಿದೆ.
3) ಹಾಗೆಯೇ ಡಯಾಬೆಟಿಕ್ ಹಾಗೂ ರಕ್ತದೊತ್ತಡಗಳ ಬಗ್ಗೆ ಸುಳ್ಳು ಮಾಹಿತಿ ಸೃಷ್ಟಿಸಿ ಔಷಧ ಕಂಪೆನಿಗಳು ಕೋಟ್ಯಾಂತರ ಗಳಿಸುತ್ತಿವೆ.

Advertisement

ಇವೆಲ್ಲ ಒಂದು ಆಪತ್ಕಾರಿ ಬೆಳವಣಿಗೆ. ಕಾಣದ ಕೈಗಳ ಈ ಕೃತ್ಯ ಖಂಡನಾಕಾರಿ. ಆದರೆ ಇಂತಹ ಪ್ರಯತ್ನ ನೈಜ ಹಾನಿಕಾರಕ ವಸ್ತುಗಳ ಬಗ್ಗೆ ಇಲ್ಲ ಯಾಕೆ. ಉದಾ: ಮದ್ಯ, ತಂಬಾಕು ಹಾಗೂ ಮಾದಕವಸ್ತುಗಳು.
ಅಡಿಕೆಯ ಉಪಯೋಗ ನಿಜವಾಗಿ ಲಾಭದಾಯಕ. ಶುಭಕಾರ್ಯಗಳಲ್ಲಿ ಔಷಧವಾಗಿ ಶತಮಾನಗಳಿಂದ ಇದು ಬಳಕೆಯಲ್ಲಿದೆ. ಅಜೀರ್ಣ, ಚರ್ಮರೋಗ ಇವುಗಳಿಗೆ ವ್ಯಾಪಕವಾಗಿ ಬಳಕೆಯಲ್ಲಿದೆ. ಹಿತಮಿತ ಬಳಕೆ ಆರೋಗ್ಯವರ್ಧಕ. ಇಷ್ಟೆಲ್ಲ ತಿಳಿದೂ ಸರಕಾರದ ಸ್ಪಷ್ಟ ನಿರ್ದೆಶನದ ಹೊರತಾಗಿಯೂ ಬಹಳಷ್ಟು ಕಳಪೆ ಗುಣಮಟ್ಟದ ಅಡಿಕೆ ಆಮದು ಆಗುತ್ತಿದೆ. ಎಲ್ಲಾ ಅಡೆತಡೆಗಳನ್ನು ಮೀರಿ ಇದು ದೇಶದ ಒಳಗೆ ನುಸುಳುತ್ತಿದೆ. ಕೃಷಿಕರಿಗೆ ನ್ಯಾಯಬೇಕು. ನೀರಿನ ಕೊರತೆ, ನುರಿತ ಕಾರ್ಮಿಕರ ಕೊರತೆ, ಏರುತ್ತಿರುವ ಒಳಸುರಿಗಳ ಬೆಲೆ, ಕೊಳೆರೋಗ ಮೂಲಕ (ಪರಿಣಾಮಕಾರಿ ಔಷಧ ಲಭ್ಯವಿಲ್ಲದಿರುವುದು) ಕಂಗಾಲಾಗಿರುವ ಬೆಳೆಗಾರರಿಗೆ ಸೂಕ್ತ ಪರಿಹಾರ ಬೇಕು ಎಂದು ಮಂಚಿ ಶ್ರೀನಿವಾಸ ಆಚಾರ್ ಒತ್ತಾಯಿಸಿದ್ದಾರೆ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹಲಸು ಈಗ ಕೇವಲ ಹಣ್ಣು ಅಲ್ಲ… ಸೂಪರ್ ಫುಡ್..!‌ ಹಲಸಿನ ಹಣ್ಣಿನ ಔಷಧೀಯ ಗುಣಗಳಿಗೆ ಕೇರಳದಲ್ಲಿ ಪ್ರಚಾರ ಅಭಿಯಾನ

ಒಂದು ಕಾಲದಲ್ಲಿ ಬಡವರ ಹಣ್ಣು ಎಂದೇ ಕರೆಯಲ್ಪಟ್ಟ ಹಲಸು ಈಗ ಆರೋಗ್ಯಕರ ಆಹಾರ…

9 hours ago

ಧರ್ಮಸ್ಥಳದಲ್ಲಿ ವಿಜಯೇಂದ್ರ ಪ್ರಾರ್ಥನೆ: “ರೈತರಿಗೆ ಉತ್ತಮ ಬೆಲೆ, ಬಿಜೆಪಿ ಸರ್ಕಾರ ಮತ್ತೆ ಅಧಿಕಾರಕ್ಕೆ ಬರಲಿ”

ಧರ್ಮಸ್ಥಳದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ರೈತರಿಗೆ ಉತ್ತಮ…

10 hours ago

ಅಡಿಕೆ ಕನಿಷ್ಠ ಆಮದು ಬೆಲೆ (MIP) ಪರಿಷ್ಕರಣೆ – ರೈತರ ಹಿತಾಸಕ್ತಿಗೆ ಕೇಂದ್ರ ಸರ್ಕಾರದ ತ್ವರಿತ ನೀತಿ ನಿರ್ಧಾರ ಅನಿವಾರ್ಯ

ಅಡಿಕೆ ಉತ್ಪಾದನಾ ವೆಚ್ಚ ಭಾರೀ ಏರಿಕೆಯಾಗಿರುವ ಹಿನ್ನೆಲೆಯಲ್ಲಿ ಕನಿಷ್ಠ ಆಮದು ಬೆಲೆ (MIP)ಯನ್ನು…

1 day ago

ಮುಂಗಾರು ಬೆಳೆ ವಿಮೆ ನೋಂದಣಿಗೆ ಆಗಸ್ಟ್‌ 14 ಕೊನೆಯ ದಿನ – ಭತ್ತ ಬೆಳೆಗಾರರು ತಪ್ಪದೇ ಹೆಸರು ನೋಂದಾಯಿಸಿ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುಂಗಾರು ಭತ್ತದ ಬೆಳೆ ವಿಮೆ ನೋಂದಣಿ ಆರಂಭವಾಗಿದ್ದು, ಆಗಸ್ಟ್‌…

1 day ago

ಎಲ್ ನಿನೋ ಎಚ್ಚರಿಕೆ – ದೇಶದಲ್ಲಿ 43% ಮಳೆ ಕೊರತೆ, ಕರ್ನಾಟಕ ಸೇರಿ 12 ರಾಜ್ಯಗಳ 315 ಜಿಲ್ಲೆಗಳಿಗೆ ಕೇಂದ್ರದ ವಿಶೇಷ ಕೃಷಿ ಯೋಜನೆ

ದೇಶದಲ್ಲಿ 43% ಮಳೆ ಕೊರತೆ ದಾಖಲಾಗಿರುವ ಹಿನ್ನೆಲೆ ಎಲ್ ನಿನೋ ಪರಿಣಾಮ ಎದುರಿಸಲು…

2 days ago

ತೆಂಗು ಬೆಳೆಗೂ ಏರಿದ ಉತ್ಪಾದನಾ ವೆಚ್ಚ, ರೈತರು ಸಂಕಷ್ಟದಲ್ಲಿ – ತಮಿಳುನಾಡಿನಲ್ಲಿ ತೆಂಗು ಬೆಳೆಗಾರರಿಗೆ ಕಾರ್ಮಿಕರ ಕೊರತೆ

ತೆಂಗು ಬೆಳೆಗಾರರು ಕಾರ್ಮಿಕ ಕೊರತೆ ಮತ್ತು ಹೆಚ್ಚುತ್ತಿರುವ ಕೂಲಿ ವೆಚ್ಚದಿಂದ ಸಂಕಷ್ಟ ಎದುರಿಸುತ್ತಿದ್ದಾರೆ.…

2 days ago