“ಅಡಿಕೆ ಹಾನಿಕಾರಕ”ವಲ್ಲ ಎಂದು ಮನವರಿಕೆ ಮಾಡಿದ ಅಡಿಕೆ ಬೆಳೆಗಾರ ಪ್ರದೇಶದ ಸಂಸದರು

July 18, 2019
8:00 AM

ಮಂಗಳೂರು: ಅಡಿಕೆ ಹಾನಿಕಾರಕವಲ್ಲ, ಅಡಿಕೆ ಮಾನವ ಆರೋಗ್ಯದ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ ಎಂಬ ಬಗ್ಗೆ ಅಡಿಕೆ ಬೆಳೆಗಾರರ ಪ್ರದೇಶದ ಸಂಸದರುಗಳು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾದ ಡಾ.ಹರ್ಷವರ್ಧನ್  ಅವರಿಗೆ ಮನವರಿಕೆ ಮಾಡಿದ್ದಾರೆ.

Advertisement
Advertisement

ಸಂಸದ ನಳಿನ್ ಕುಮಾರ್ ಕಟೀಲ್ ನೇತೃತ್ವದಲ್ಲಿ ಕರ್ನಾಟಕದ ಕರಾವಳಿ ಹಾಗೂ ಮಲೆನಾಡು ಭಾಗದ ಸಂಸದರು  ಆರೋಗ್ಯ ಸಚಿವರನ್ನು  ಭೇಟಿ ಮಾಡಿದರು. ಜುಲೈ 12, 2019 ರಂದು ಅಡಿಕೆ ಬಳಕೆಯ ಕುರಿತು ಚುಕ್ಕೆ ರಹಿತ ಪ್ರಶ್ನೆಗೆ ಸರಕಾರವು ಅಡಿಕೆಯು ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ ಎಂದು ಸುಪ್ರೀಂ ಕೋರ್ಟ್ ನಲ್ಲಿರುವ ಅಫಿಡವಿಟ್ ನ್ನು ಉಲ್ಲೇಖ ಮಾಡಿ ನೀಡಿದ ಉತ್ತರದ ಬಗ್ಗೆ  ಸಚಿವರನ್ನು ಭೇಟಿ ಮಾಡಿ ಅಡಿಕೆಯಿಂದ ಯಾವುದೇ ದುಷ್ಪರಿಣಾಮ ಇಲ್ಲ ಎಂಬುದರ ಬಗ್ಗೆ ಕೇಂದ್ರ ತೋಟ ಬೆಳೆಗಳ ಸಂಶೋಧನಾ ಸಂಸ್ಥೆಯು ಅಡಿಕೆ ಮತ್ತು ಮಾನವ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರಿರುವ ಯಾವುದೇ ಪುರಾವೆಗಳಿಲ್ಲ ಎಂದು ಹೇಳಲಾಗಿದೆ ಎಂಬುವುದು ಸಚಿವರಿಗೆ ಸಂಸದರು ತಿಳಿಸಿದರು.

ಈ ಬಗ್ಗೆ ಸ್ಪಂದಿಸಿದ ಸಚಿವರು ಅಡಿಕೆಯು ಆರೋಗ್ಯಕ್ಕೆ ಹಾನಿಕರ ಎಂದು ಹಿಂದಿನ ಯು.ಪಿ.ಎ ಸರಕಾರ ಸುಪ್ರೀಂ ಕೋರ್ಟ್ ಗೆ ಸಲ್ಲಿಸಿರುವುದರಿಂದ ಈ ಅಫಿಡವಿಟ್ ನ್ನು ಹಿಂದಕ್ಕೆ ಪಡೆದುಕೊಳ್ಳುವ ಬಗ್ಗೆ ಸಚಿವರು ಭರವಸೆ ನೀಡಿದರು ಮತ್ತು ಸುಪ್ರೀಂ ಕೋರ್ಟ್ ನಿಂದ ಅಫಿಡವಿಟ್ ನ್ನು ಹಿಂದಕ್ಕೆ ಪಡೆಯಲು ಈಗಾಗಲೇ 2-3 ಬಾರಿ ಸಭೆ ನಡೆಸಲಾಗಿದೆ ಎಂದು ಸಚಿವರು ತಿಳಿಸಿದರು.

ಸಂಸದರ ನಿಯೋಗದಲ್ಲಿ ಉಡುಪಿ – ಚಿಕ್ಕಮಗಳೂರು ಸಂಸದೆ ಕುಮಾರಿ ಶೋಭಾ ಕರಂದ್ಲಾಜೆ, ದಾವಣಗೆರೆ ಸಂಸದ ಹಾಗೂ ಮಾಜಿ ಸಚಿವ ಶ್ರೀ.ಜಿ.ಎಂ.ಸಿದ್ದೇಶ್ವರ್, ಚಿತ್ರದುರ್ಗ ಸಂಸದ ನಾರಾಯಣ ಸ್ವಾಮಿ ಮುಂತಾದವರಿದ್ದರು.

 


ಕಳೆದ ಬಾರಿಯೂ ಇದೇ ಮಾದರಿಯಲ್ಲಿ ಮನವಿ ಸಲ್ಲಿಸಲಾಗಿತ್ತು. ಆರೋಗ್ಯ ಸಚಿವರನ್ನು  ಎರಡು ಬಾರಿ ಭೇಟಿ ಮಾಡಿ ಮನವಿ ನೀಡಲಾಗಿತ್ತು. ಅದಾದ ನಂತರ ಯಾವುದೇ ಬೆಳವಣಿಗೆ ಆಗದೇ ಇರುವ ಕಾರಣದಿಂದ ಈ ಬಾರಿಯೂ ಅದೇ ಉತ್ತರವನ್ನು ಆರೋಗ್ಯ ಸಚಿವಾಲಯ ನೀಡಿದೆ. ಇಲ್ಲಿ ಈಗ ಆರೋಗ್ಯ ಸಚಿವರು ನೀಡಿದ ಹೇಳಿಕೆ ಕೂಡಾ ರಾಜಕೀಯದ ಹಿನ್ನೆಲೆಯಲ್ಲಿ ಕಾಣುತ್ತಿದೆ. ಏಕೆಂದರೆ ಯು ಪಿ ಎ ಸರಕಾರದ ಅವಧಿಯಲ್ಲಿ ಸುಪ್ರೀಂಕೋರ್ಟ್ ಗೆ ಅಫಿಡವಿತ್ ಸಲ್ಲಿಸಿರುವುದಾಗಿದ್ದರೆ ಆ ನಂತರ ಏಕೆ ಇದುವರೆಗೂ ಯಾವುದೇ ಪಕ್ಷಗಳು ಕ್ರಮ ಕೈಗೊಂಡಿಲ್ಲ ಎಂಬ ಪ್ರಶ್ನೆ ಒಂದು ಕಡೆಯಾದರೆ, ಎರಡೂ ಪಕ್ಷಗಳು ಅಡಿಕೆ ಬೆಳೆಗಾರ ಹಿತಕ್ಕಾಗಿ ಕೆಲಸ ಮಾಡುವುದಿಲ್ಲ, ಕೇವಲ ಅಡಿಕೆ ಹೆಸರಿನಲ್ಲಿ ಪಾದಯಾತ್ರೆ ಮಾಡಿ ಬೆಳೆಗಾರರನ್ನು  ಸೆಳೆಯುವ ತಂತ್ರವೇ ಎಂದು ಕೃಷಿ ಸಂಘಟನೆಗಳು ಈಗ ಚರ್ಚೆ ಮಾಡುತ್ತಿವೆ.

ಏನೇ ಆಗಲಿ ರಾಜಕೀಯ ರಹಿತವಾಗಿ ಇಲ್ಲಿ ಕೆಲಸವಾಗಬೇಕು. ಅಡಿಕೆ ಬೆಳೆಗಾರರ ಹಿತ ಕಾಯುವ ಕೆಲಸವಾಗಬೇಕು.

 

Advertisement
Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಕಡಲಾಮೆಗಳ ಸಂತಾನೋತ್ಪತ್ತಿಗೆ ಅರಣ್ಯ ಇಲಾಖೆ ರಕ್ಷಣೆ | ಬಾವಳ ಕಡಲತೀರದಲ್ಲಿ ಸಂತೋಷದ ಕ್ಷಣ
February 14, 2026
7:55 AM
by: ದ ರೂರಲ್ ಮಿರರ್.ಕಾಂ
ಮಂಗಳೂರಿನಲ್ಲಿ ಸಮುದ್ರ ಮೀನು ಮರಿ ಉತ್ಪಾದನಾ ಕೇಂದ್ರ ಸ್ಥಾಪನೆಗೆ ಸಂಸದರಿಂದ ಒತ್ತಾಯ
February 14, 2026
7:45 AM
by: ದ ರೂರಲ್ ಮಿರರ್.ಕಾಂ
ಕರಾವಳಿ ಅಭಿವೃದ್ಧಿಗೆ ವಿಶೇಷ ಪ್ಯಾಕೇಜ್ ಆಗ್ರಹ | ಕರಾವಳಿ ಜಿಲ್ಲೆಗಳ ಅಭಿವೃದ್ಧಿಗೆ ಸಮಗ್ರ ದೃಷ್ಟಿ ಅಗತ್ಯ
February 13, 2026
10:24 AM
by: ದ ರೂರಲ್ ಮಿರರ್.ಕಾಂ
ಅಡಿಕೆಯ ಬಗ್ಗೆ ಹೊಸ ಅಧ್ಯಯನ | ಕ್ಯಾನ್ಸರ್‌ ಅಷ್ಟೇ ಅಲ್ಲ… ಹೃದಯ ರೋಗ ಮತ್ತು ಮೆಟಾಬಾಲಿಕ್ ಸಮಸ್ಯೆಯೂ ಇದೆ…!
February 12, 2026
7:47 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror