Advertisement
ಸುದ್ದಿಗಳು

ಅಡಿಕೆ ಹಾನಿಕಾರಕವಲ್ಲ – ಸರಕಾರ ಈಗಲೇ ಸೂಕ್ತ ಕ್ರಮಕೈಗೊಳ್ಳಲು ಒತ್ತಾಯ

Share

ಪುತ್ತೂರು: ಅಡಿಕೆಯನ್ನು ಅನೇಕ ವರ್ಷಗಳಿಂದ ಉಪಯೋಗಿಸಲಾಗುತ್ತಿದೆ. ಆರೋಗ್ಯದ ಮೇಲೆ ಯಾವುದೇ ಪರಿಣಾಮ ಬೀರಿಲ್ಲ. ಹೀಗಾಗಿ ಸರಕಾರಗಳು ಈ ಬಗ್ಗೆ ಸೂಕ್ತ ಕ್ರಮ ಕೈಗೊಂಡು ಶಾಶ್ವತ ಪರಿಹಾರಗಳನ್ನು ಕೈಗೊಳ್ಳಬೇಕು ಎಂದು ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘ ಸರಕಾರವನ್ನು ಒತ್ತಾಯಿಸಿದೆ.

Advertisement
Advertisement
Advertisement
Advertisement

ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘದ ಸಭೆಯು ಪುತ್ತೂರಿನ ಎಳ್ಮುಡಿಯಲ್ಲಿರುವ ಸಂಘದ ಕಚೇರಿಯಲ್ಲಿ ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘದ ಅಧ್ಯಕ್ಷ ಅಶೋಕ್ ಕಿನಿಲ ಅಧ್ಯಕ್ಷತೆಯಲ್ಲಿ ನಡೆಯಿತು. ಈ ಸಂದರ್ಭ ಅಡಿಕೆ ಬೆಳೆಗಾರರ ವಿವಿಧ ಸಮಸ್ಯೆಗಳು ಹಾಗೂ ಬೆಳೆಗಾರರಿಗೆ ಅನುಕೂಲವಾಗುವ ವಿವಿಧ ಕಾರ್ಯಯೋಜನೆಗಳ ಬಗ್ಗೆ ಚರ್ಚಿಸಲಾಯಿತು.

Advertisement

ಕಳೆದ ಕೆಲವು ವರ್ಷಗಳಿಂದ ಅಡಿಕೆ ಹಾನಿಕಾರಕ ಎಂಬ ಗುಮ್ಮನನ್ನು ಬಿಟ್ಟು ಬೆಳೆಗಾರರನ್ನು ಭಯಗೊಳಿಸಿ ಮಾರುಕಟ್ಟೆ ಮೇಲೆ ಪರಿಣಾಮ ಉಂಟು ಮಾಡಲಾಗುತ್ತಿದೆ. ಆದರೆ ಹಲವಾರು ವರ್ಷಗಳಿಂದ ವಿವಿದೆಡೆ ಅಡಿಕೆ ಬಳಕೆಯಾಗುತ್ತಿದೆ. ಪೂಜೆಯಿಂದ ತೊಡಗಿ ಬೀಡಾ ತಿನ್ನುವವರೆಗೆ ಉಪಯೋಗವಾಗುತ್ತಿದೆ. ಈಚೆಗೆ ಅಡಿಕೆಯ ವಿವಿಧ ಉತ್ಪನ್ನಗಳೂ ತಯಾರಾಗುತ್ತಿದೆ. ಚಹಾದಂತಹ ಉತ್ಪನ್ನಗಳಿಗೆ ವಿದೇಶದಲ್ಲೂ ಬೇಡಿಕೆ ವ್ಯಕ್ತವಾಗುತ್ತಿದೆ. ಹೀಗಾಗಿ ಅಡಿಕೆ ಆರೋಗ್ಯದ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ ಎಂಬುದು ಸಾಬೀತಾಗುತ್ತದೆ. ಆದ್ದರಿಂದ ಸರಕಾರಗಳು ಅಡಿಕೆ ಬೆಳೆಗಾರರ ಹಿತ ಕಾಯಲು ಮುಂದಾಗಬೇಕು ಎಂದು ಒತ್ತಾಯಿಸಲಾಯಿತು.

ಅಡಿಕೆ ಮಾರಾಟ ಮಾಡಿ ಬಿಲ್ ಪಡೆಯುವುದು ಸೂಕ್ತ :

Advertisement

ಅಡಿಕೆ ಬೆಳೆಗಾರರು ಅಡಿಕೆ ಮಾರಾಟ ಮಾಡಿ ಬಿಲ್ ಪಡೆಯುವುದು ಸೂಕ್ತ ಎಂಬ ಅಭಿಪ್ರಾಯ ಸಭೆಯಲ್ಲಿ ವ್ಯಕ್ತವಾಯಿತು. ಇತ್ತೀಚೆಗೆ ತೆರಿಗೆ ಪಾವತಿಸದೇ ಅಡಿಕೆ ಸಾಗಾಟವಾಗುತ್ತಿರುವುದರ ಬಗ್ಗೆ ತೆರಿಗೆ ಇಲಾಖೆ ಕ್ರಮ ಕೈಗೊಳ್ಳುತ್ತಿದೆ. ಇದು ಅಡಿಕೆ ಮಾರುಕಟ್ಟೆ ಹಾಗೂ ಧಾರಣೆ ಮೇಲೆ ಯಾವುದೇ ಪರಿಣಾಮ ಬೀರಲಾರದು. ಆದರೆ ಬೆಳೆಗಾರರ ಭವಿಷ್ಯದ ದೃಷ್ಟಿಯಿಂದ, ಮಾರುಕಟ್ಟೆ ಸ್ಥಿರೀಕರಣ ಹಾಗೂ ಸರಕಾರದಿಂದ ಬೆಳೆಗಾರರಿಗೆ ಹೆಚ್ಚಿನ ಸೌಲಭ್ಯ ದೊರೆಯುವ ದೃಷ್ಟಿಯಿಂದ ಬೆಳೆಗಾರರು ಎಲ್ಲೇ ಅಡಿಕೆ ಮಾರಾಟ ಮಾಡಿದರೂ ಬಿಲ್ ಪಡೆಯುವುದು ಸೂಕ್ತ ಎಂಬ ಸಲಹೆ ವ್ಯಕ್ತವಾಯಿತು.

ಮುಂದಿನ ದಿನಗಳಲ್ಲಿ ಅಡಿಕೆ ಬೆಳೆಗಾರರಿಗೆ ಅನುಕೂಲವಾಗುವ ಹಾಗೂ ಅಡಿಕೆ ಗುಣಮಟ್ಟ ಕಾಪಾಡುವ ನಿಟ್ಟಿನಲ್ಲಿ ಕೈಗೊಳ್ಳಬಹುದಾದ ಕ್ರಮಗಳ ಬಗ್ಗೆ ಬೆಳೆಗಾರರಿಗೆ ಮಾಹಿತಿ ನೀಡುವ , ಬೆಳೆಗಾರರ ಹಿತ ಕಾಪಾಡುವ ನಿಟ್ಟಿನಲ್ಲಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಬಗ್ಗೆ ನಿರ್ಧರಿಸಲಾಯಿತು.
ವೇದಿಕೆಯಲ್ಲಿ ಸಂಘದ ಸಂಘದ ನಿಕಟಪೂರ್ವ ಅದ್ಯಕ್ಷ ಮಂಚಿ ಶ್ರೀನಿವಾಸ ಆಚಾರ್, ಉಪಾಧ್ಯಕ್ಷ ಎಂ ಜಿ ಸತ್ಯನಾರಾಯಣ, ಕಾರ್ಯದರ್ಶಿ ಮಹೇಶ್ ಪುಚ್ಚಪ್ಪಾಡಿ ಉಪಸ್ಥಿತರಿದ್ದರು.

Advertisement

ಈ ಸಂದರ್ಭ ಸಂಘದ ಸದಸ್ಯರಾದ ಬಿ ಟಿ ನಾರಾಯಣ ಭಟ್, ಮಹಾಲಿಂಗ ಭಟ್ ವಾಟೆ, ದಯಾನಂದ ಕೋಟೆ, ಶಂಕರ ಸಾರಡ್ಕ, ರಾಮಕಿಶೋರ್ ಮಂಚಿ, ರಾಧಾಕೃಷ್ಣ ಕೋಟೆ, ಸಾಯಿಶೇಖರ್ ಕರಿಕಳ, ಎ ಪಿ ಸುಬ್ರಹ್ಮಣ್ಯ ಮರಿಕೆ, ಅಡಿಕೆ ಪತ್ರಿಕೆ ಸಹಾಯಕ ಸಂಪಾದಕ ನಾ.ಕಾರಂತ ಪೆರಾಜೆ ಮೊದಲಾದವರು ಸಲಹೆ ಸೂಚನೆ ನೀಡಿದರು.

ಸಂಘದ ನಿಕಟಪೂರ್ವ ಅದ್ಯಕ್ಷ ಮಂಚಿ ಶ್ರೀನಿವಾಸ ಆಚಾರ್ ಸ್ವಾಗತಿಸಿ ಕಾರ್ಯದರ್ಶಿ ಮಹೇಶ್ ಪುಚ್ಚಪ್ಪಾಡಿ ವಂದಿಸಿದರು.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಏರುತ್ತಿರುವ ತಾಪಮಾನ | 2030 ರ ವೇಳೆಗೆ ಕೃಷಿ ಕ್ಷೇತ್ರದ ಮೇಲೆ ಗಂಭೀರ ಪರಿಣಾಮ | ಕೃಷಿ ಸಾಲ ಮರುಪಾವತಿ ಮೇಲೆ ಹೊಡೆತ..? |

ಏರುತ್ತಿರುವ ತಾಪಮಾನ ಮತ್ತು ಹವಾಮಾನ ಬದಲಾವಣೆಯು ಮುಂದಿನ ಐದು ವರ್ಷಗಳಲ್ಲಿ ಕೃಷಿ ಮೇಲೆ…

5 hours ago

ದೇಶಾದ್ಯಂತ ಸ್ಥೂಲಕಾಯದ ವಿರುದ್ಧ ಅಭಿಯಾನ | ರಾಜ್ಯಸಭಾ ಸಂಸದೆ ಸುಧಾಮೂರ್ತಿ ಸೇರಿದಂತೆ 10 ಮಂದಿ ನಾಮನಿರ್ದೇಶನ

ದೇಶಾದ್ಯಂತ ಸ್ಥೂಲಕಾಯದ ವಿರುದ್ಧ ಹೋರಾಡಲು ಪ್ರಧಾನಿ ನರೇಂದ್ರ ಮೋದಿ ಅವರು ಹತ್ತು ಮಂದಿಯನ್ನು…

5 hours ago

ಸಹಕಾರಿ ಪಾಠ | ಆರ್ಥಿಕ ಶಿಸ್ತು ಹಾಗೂ ಸಣ್ಣ ಸಣ್ಣ ಮೊತ್ತವೂ ಬ್ಯಾಂಕಿಗೆ ಏಕೆ ಬರಬೇಕು…?

ತೀರಾ ಸಣ್ಣ ಮಟ್ಟಿನ‌ ಆದಾಯವನ್ನೂ ಬ್ಯಾಂಕ್ ಖಾತೆಗೆ ಏಕೆ ತುಂಬಬೇಕು..?

6 hours ago

ಯುವಕರಲ್ಲಿ ಹೆಚ್ಚುತ್ತಿರುವ ಸ್ಥೂಲ ಕಾಯ | ಮನ್ ಕಿ ಬಾತ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಕಳವಳ

ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಸ್ಥೂಲಕಾಯತೆ ಗಂಭೀರತೆ ಕುರಿತು ಪ್ರಸ್ತಾಪಿಸಿ, ಆರೋಗ್ಯಪೂರ್ಣ ಮತ್ತು…

15 hours ago

ತುಮಕೂರು ಜಿಲ್ಲೆಯ ಚಿಂಕಾರ ಅರಣ್ಯ ಪ್ರದೇಶ ಗಣಿಗಾರಿಕೆಗೆ ಸೂಕ್ತವಲ್ಲ

ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿಯ ಚಿಂಕಾರ ಅರಣ್ಯ ಪ್ರದೇಶ ಗಣಿಗಾರಿಕೆಗೆ ಸೂಕ್ತವಲ್ಲ ಎಂದು ರಾಜ್ಯ…

15 hours ago

ಹವಾಮಾನ ವರದಿ | 24-02-2025 | ಫೆ.28 ರಂದು ಅಲ್ಲಲ್ಲಿ ಮಳೆಯ ಸಾಧ್ಯತೆ ಇದೆ |

ಈಗಿನಂತೆ ಫೆಬ್ರವರಿ 28ರಿಂದ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.

15 hours ago