ಅಪರಾಧ

ಅಡುಗೆ ಸರಿ ಮಾಡಲಿಲ್ಲ ಎಂದು ಪತ್ನಿಯನ್ನು ಇರಿದು ಕೊಂದ ಪತಿ..!

Share

ಪುತ್ತೂರು:ಅಡುಗೆ ಸರಿಯಾಗಿ ಮಾಡಲಿಲ್ಲ ಎಂಬ ವಿಚಾರಕ್ಕೆ ಕೋಪಗೊಂಡು ಪತಿಯೇ ಪತ್ನಿಯನ್ನು  ಇರಿದು ಕೊಂಡ ಘಟನೆ ಪುತ್ತೂರು ತಾಲೂಕಿನ ಕಲ್ಲಪದವು ಎಂಬಲ್ಲಿ  ನಿನ್ನೆ ರಾತ್ರಿ ನಡೆದಿದೆ. ಗಣೇಶ್ ಎಂಬಾತ ಕೊಲೆ ಮಾಡಿದ ಆರೋಪಿ, ಅಕ್ಷತಾ ಮೃತ ಪಟ್ಟವರು.

Advertisement
Advertisement

ಪುತ್ತೂರು ತಾಲೂಕಿನ  ಕಲ್ಲಪದವು ಎಂಬಲ್ಲಿ ಗಣೇಶ್ ಎಂಬಾತನು ತನ್ನ ಮನೆಯಲ್ಲಿ ಪತ್ನಿ ಅಕ್ಷತಾ ಎಂಬಾಕೆಯನ್ನು ಕ್ಷುಲ್ಲಕ ಕಾರಣಕ್ಕಾಗಿ ಚೂರಿಯಿಂದ ಇರಿದು ಗಂಭೀರವಾಗಿ ಗಾಯಗೊಳಿಸಿದ್ದು, ಗಾಯಗೊಂಡ ಅಕ್ಷತಾ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ.

ಸಂಜೆ ವೇಳೆ ಅಡುಗೆ ಸರಿ ಮಾಡಲಿಲ್ಲ ಎಂಬ ಪತಿ-ಪತ್ನಿಗೆ ಮಾತು ಬೆಳೆದು ಚೂರಿಯಿಂದ ಗಣೇಶನು ಅಕ್ಷತಾಳಿಗೆ ಇರಿದಿದ್ದ. ಈ ಸಂದರ್ಭ ಗಾಯಗೊಂಡ ಅಕ್ಷತಾ ಪಕ್ಕದ ಮನೆಗೆ ತೆರಳಿದಾಗ ಅಲ್ಲಿಗೂ ಬಂದು  ಇರಿಯಲು ಯತ್ನಿಸಿದಾಗ ಅಲ್ಲಿದ್ದವರು ಆತನನ್ನು ತಡೆದಿರುತ್ತಾರೆ. ಆಗ ಆರೋಪಿಯು ಸ್ಥಳದಿಂದ ಓಡಿಹೋಗಿದ್ದ.

ಕುತ್ತಿಗೆ, ಮುಖ ಮತ್ತಿತರ ಕಡೆ ಗಂಭೀರ ಗಾಯಗೊಂಡು ಕುಸಿದು ಬಿದ್ದ ಅಕ್ಷತಾ ಅವರನ್ನು ಆಟೋರಿಕ್ಷಾದಲ್ಲಿ ಅಕ್ಷತಾ ಅವರ ತಾಯಿ ಹಾಗೂ ಗಣೇಶನ ಅಣ್ಣನಾದ ಬಾಲಕೃಷ್ಣ ಅವರು  ಚಿಕಿತ್ಸೆಗಾಗಿ ಪುತ್ತೂರು ಸರಕಾರಿ ಆಸ್ಪತ್ರೆಗೆ ಕರೆ  ಅಕ್ಷತಾ ಮೃತಪಟ್ಟಿದ್ದಾರೆ. ಪುತ್ತೂರು ತಾಲೂಕು  ನಿಡ್ಪಳ್ಳಿ ಗ್ರಾಮದ ದೊಂಬಟೆಬರಿ ಮನೆ ಕಮಲ ಎಂಬವರು ನೀಡಿದ ದೂರಿನಂತೆ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ  ಪ್ರಕರಣ ದಾಖಲಾಗಿದ್ದು , ತಲೆಮರೆಸಿಕೊಂಡಿದ್ದ ಆರೋಪಿ ಗಣೇಶ್ ಎಂಬಾತನನ್ನು ಬಂಧಿಸಲಾಗಿದೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ನಿಮ್ಮಲ್ಲಿ ಎಳೆ ಅಡಿಕೆ ಬೀಳ್ತಾ ಇದೆಯಾ…? ಕೇಳಲು ಶುರು ಮಾಡಿದ್ದಾರೆ ಅಡಿಕೆ ಬೆಳೆಗಾರರು..!

ಈ ಬಾರಿ ಮೇ ತಿಂಗಳಿನಿಂದಲೇ ಮಳೆ ಆರಂಭವಾಗಿದೆ. ಜೂನ್.‌10 ಕಳೆಯುವ ಹೊತ್ತಿಗೆ ವಾತಾವರಣ…

22 minutes ago

ಹವಾಮಾನ ವರದಿ | 11-06-2025 | ಮುಂದಿನ 2 ದಿವಸಗಳ ಕಾಲ ಮಲೆನಾಡು ಭಾಗಗಳಲ್ಲಿ ಉತ್ತಮ ಮಳೆ | ಮುನ್ಸೂಚನೆಯಂತೆ ನಿರೀಕ್ಷಿತ ಪ್ರಮಾಣದಲ್ಲಿ ಮಳೆ ಇಲ್ಲ |

ಈಗಿನಂತೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದ್ದರೂ ನಿರೀಕ್ಷಿತ ಪ್ರಮಾಣದಲ್ಲಿ…

2 hours ago

ಒಂದೇ ರಾಶಿಯಲ್ಲಿ 3 ಗ್ರಹ…..| ತ್ರಿಗ್ರಾಹಿ ಯೋಗವು 50 ವರ್ಷಗಳ ನಂತರ ಸಂಭವಿಸುತ್ತಿದೆ | 5 ರಾಶಿಯವರಿಗೆ ಬಂಪರ್‌ ಲಾಟರಿ..!

ಜೂನ್ 2025ರಲ್ಲಿ ಮಿಥುನ ರಾಶಿಯಲ್ಲಿ ಸೂರ್ಯ, ಬುಧ ಮತ್ತು ಗುರು ಗ್ರಹಗಳ ತ್ರಿಗ್ರಾಹಿ…

8 hours ago

ಕೋಲಾರ ಜಿಲ್ಲೆಯಲ್ಲಿ ನಾಳೆ ಮಾವು ಬೆಳೆಗಾರರಿಂದ ಬಂದ್ ಕರೆ |

ಕೋಲಾರ ಜಿಲ್ಲೆಯ ಶ್ರೀನಿವಾಸಪುರ ಎ.ಪಿ.ಎಂ.ಸಿ ಮಾರುಕಟ್ಟೆಯಲ್ಲಿ ಪ್ರತಿನಿತ್ಯ ಅಂದಾಜು 800 ರಿಂದ 900…

17 hours ago

ಕೃಷಿ ಜೊತೆಗೆ ತೋಟಗಾರಿಕಾ ಬೆಳೆಗಳಿಗೆ ಆದ್ಯತೆ ನೀಡಿ

ದೇಶದ ಆರ್ಥಿಕತೆಯಲ್ಲಿ ತೋಟಗಾರಿಕೆಯಿಂದ ಹೆಚ್ಚಿನ ಜಿಡಿಪಿ ಬರುತ್ತಿದ್ದು, ಹೂ ಮತ್ತು ಔಷಧಿ ಸಸ್ಯಗಳಿಗೆ…

18 hours ago

ಚಾಮರಾಜನಗರದ ಬೇಡುಗುಳಿ ಬಳಿ ಹುಲಿ ದಾಳಿಗೆ ಮೃತಪಟ್ಟ ಮಹಿಳೆ

ಚಾಮರಾಜನಗರ ತಾಲೂಕು ಬೇಡುಗುಳಿ ಸಮೀಪದ ರಾಮಯ್ಯನ ಪೋಡುವಿನಲ್ಲಿ ಹುಲಿ ದಾಳಿಗೆ ರಂಗಮ್ಮ ಎಂಬ…

18 hours ago