ಆರೋಪಿ ಗಣೇಶ್
ಪುತ್ತೂರು:ಅಡುಗೆ ಸರಿಯಾಗಿ ಮಾಡಲಿಲ್ಲ ಎಂಬ ವಿಚಾರಕ್ಕೆ ಕೋಪಗೊಂಡು ಪತಿಯೇ ಪತ್ನಿಯನ್ನು ಇರಿದು ಕೊಂಡ ಘಟನೆ ಪುತ್ತೂರು ತಾಲೂಕಿನ ಕಲ್ಲಪದವು ಎಂಬಲ್ಲಿ ನಿನ್ನೆ ರಾತ್ರಿ ನಡೆದಿದೆ. ಗಣೇಶ್ ಎಂಬಾತ ಕೊಲೆ ಮಾಡಿದ ಆರೋಪಿ, ಅಕ್ಷತಾ ಮೃತ ಪಟ್ಟವರು.
ಪುತ್ತೂರು ತಾಲೂಕಿನ ಕಲ್ಲಪದವು ಎಂಬಲ್ಲಿ ಗಣೇಶ್ ಎಂಬಾತನು ತನ್ನ ಮನೆಯಲ್ಲಿ ಪತ್ನಿ ಅಕ್ಷತಾ ಎಂಬಾಕೆಯನ್ನು ಕ್ಷುಲ್ಲಕ ಕಾರಣಕ್ಕಾಗಿ ಚೂರಿಯಿಂದ ಇರಿದು ಗಂಭೀರವಾಗಿ ಗಾಯಗೊಳಿಸಿದ್ದು, ಗಾಯಗೊಂಡ ಅಕ್ಷತಾ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ.
ಸಂಜೆ ವೇಳೆ ಅಡುಗೆ ಸರಿ ಮಾಡಲಿಲ್ಲ ಎಂಬ ಪತಿ-ಪತ್ನಿಗೆ ಮಾತು ಬೆಳೆದು ಚೂರಿಯಿಂದ ಗಣೇಶನು ಅಕ್ಷತಾಳಿಗೆ ಇರಿದಿದ್ದ. ಈ ಸಂದರ್ಭ ಗಾಯಗೊಂಡ ಅಕ್ಷತಾ ಪಕ್ಕದ ಮನೆಗೆ ತೆರಳಿದಾಗ ಅಲ್ಲಿಗೂ ಬಂದು ಇರಿಯಲು ಯತ್ನಿಸಿದಾಗ ಅಲ್ಲಿದ್ದವರು ಆತನನ್ನು ತಡೆದಿರುತ್ತಾರೆ. ಆಗ ಆರೋಪಿಯು ಸ್ಥಳದಿಂದ ಓಡಿಹೋಗಿದ್ದ.
ಕುತ್ತಿಗೆ, ಮುಖ ಮತ್ತಿತರ ಕಡೆ ಗಂಭೀರ ಗಾಯಗೊಂಡು ಕುಸಿದು ಬಿದ್ದ ಅಕ್ಷತಾ ಅವರನ್ನು ಆಟೋರಿಕ್ಷಾದಲ್ಲಿ ಅಕ್ಷತಾ ಅವರ ತಾಯಿ ಹಾಗೂ ಗಣೇಶನ ಅಣ್ಣನಾದ ಬಾಲಕೃಷ್ಣ ಅವರು ಚಿಕಿತ್ಸೆಗಾಗಿ ಪುತ್ತೂರು ಸರಕಾರಿ ಆಸ್ಪತ್ರೆಗೆ ಕರೆ ಅಕ್ಷತಾ ಮೃತಪಟ್ಟಿದ್ದಾರೆ. ಪುತ್ತೂರು ತಾಲೂಕು ನಿಡ್ಪಳ್ಳಿ ಗ್ರಾಮದ ದೊಂಬಟೆಬರಿ ಮನೆ ಕಮಲ ಎಂಬವರು ನೀಡಿದ ದೂರಿನಂತೆ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು , ತಲೆಮರೆಸಿಕೊಂಡಿದ್ದ ಆರೋಪಿ ಗಣೇಶ್ ಎಂಬಾತನನ್ನು ಬಂಧಿಸಲಾಗಿದೆ.
ತಂದೆಯ ನೆನಪಿಗಾಗಿ ಇಂದೋರ್ನ ವ್ಯಕ್ತಿಯೊಬ್ಬರು ಗೋಮಯದಿಂದ ಪರಿಸರ ಸ್ನೇಹಿ ಗಣೇಶ ಮೂರ್ತಿಗಳನ್ನು ತಯಾರಿಸಿ…
ಸೆ.18ರಿಂದ ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಚುರುಕಾಗುವ ಸೂಚನೆ ಇದ್ದು, ಸೆ.19ರಿಂದ ಉತ್ತರ…
ಬರಪೀಡಿತ ಎಂದು ಘೋಷಿಸಿರುವ ರಾಜ್ಯದ 101 ತಾಲೂಕುಗಳ ರೈತರಿಗೆ ಸಾಲ ಮರುಪಾವತಿ ಅವಧಿಯನ್ನು…
ಇಂಡೋನೇಷ್ಯಾದ ಸುಲವೆಸಿಯಲ್ಲಿ ಪತ್ತೆಯಾದ ಸುಮಾರು 25,000 ವರ್ಷಗಳ ಹಿಂದಿನ ಮಾನವ ಹಲ್ಲುಗಳಲ್ಲಿ ಅಡಿಕೆ…
‘ಹನುಮಾನ್ ಅಂಶ್’ ಸಿನಿಮಾ 40ನೇ ದಿನವೂ ₹8.25 ಕೋಟಿ ಗಳಿಸಿ ಬಾಕ್ಸ್ ಆಫೀಸ್ನಲ್ಲಿ…
ನೈಋತ್ಯ ಮುಂಗಾರು ಹಿಂದೆ ಸರಿಯಲು ಪೂರಕ ಪರಿಸ್ಥಿತಿಗಳು ನಿರ್ಮಾಣವಾಗುತ್ತಿದ್ದು, ಸೆ.17ರ ವೇಳೆಗೆ ಪಶ್ಚಿಮ…