ಸುಳ್ಯ: ಜಾಲ್ಸೂರು ಗ್ರಾಮದ ಅಡ್ಕಾರು ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ ಷಷ್ಠಿ ಮಹೋತ್ಸವ ವಿಜ್ರಂಭಣೆಯಿಂದ ನಡೆಯಿತು. ನೂರಾರು ಮಂದಿ ಭಕ್ತರು ಆಗಮಿಸಿದ್ದರು.
ನೂತನ ಪಾಕಶಾಲೆ ಪ್ರವೇಶೋತ್ಸವ: ಈ ಸಂದರ್ಭದಲ್ಲಿ ದೇವಸ್ಥಾನದಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಪಾಕಶಾಲೆಯ ಪ್ರವೇಶೋತ್ಸವ ಬ್ರಹ್ಮಶ್ರೀ ಕುಂಟಾರು ವಾಸುದೇವ ತಂತ್ರಿಗಳ ನೇತೃತ್ವದಲ್ಲಿ ನಡೆಯಿತು. ಗಣಪತಿ ಹವನ ನಡೆಯುವುದರ ಮೂಲಕ ನೂತನ ಪಾಕಶಾಲೆಯ ಪ್ರವೇಶೋತ್ಸವ ನಡೆಯಿತು. ನಂತರ ಉಷ:ಪೂಜೆ, ನವಕಪೂಜೆ ನಡೆಯಿತು. ಸ್ಥಳೀಯ ಕಲಾವಿದರಿಂದ ಸಾಂಸ್ಕೃತಿಕ ವೈಭವ ನಂತರ ಅಪರಾಹ್ನ ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವರಿಗೆ ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಿತು.
ಈ ಸಂದರ್ಭದಲ್ಲಿ ದೇವಸ್ಥಾನದ ಆಡಳಿತ ಮೊಕ್ತೇಸರ ಗುರುರಾಜ್ ಭಟ್, ಆಡಳಿತಾಧಿಕಾರಿ ಹೂವಪ್ಪ ಗೌಡ, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಸುಧಾಕರ ಕಾಮತ್, ಜಿರ್ಣೋದ್ಧಾರ ಸಮಿತಿ ಸದಸ್ಯರು, ಬೈಲುವಾರು ಸಮಿತಿಯವರು, ಭಕ್ತಾದಿಗಳು ಉಪಸ್ಥಿತರಿದ್ದರು.
ಮಿತಾಹಾರ, ಯಜ್ಞಸ್ವರೂಪ ಭೋಜನ ಹಾಗೂ ಆಹಾರದ ಶಾಸ್ತ್ರೋಕ್ತ ಮಹತ್ವವನ್ನು ಶ್ರೀ ರಾಘವೇಶ್ವರ ಭಾರತೀ…
ಎಥೆನಾಲ್ ನೀತಿಯಿಂದ ರೈತರಿಗೆ ಉತ್ತಮ ಬೆಲೆ ದೊರೆಯಲಿದ್ದು, ದೇಶದ ಇಂಧನ ಭದ್ರತೆಯೂ ಬಲಗೊಳ್ಳಲಿದೆ…
ಮಾನವ–ವನ್ಯಜೀವಿ ಸಂಘರ್ಷ ತಡೆ ಕುರಿತು ನಡೆದ ಸಂಸದೀಯ ಸಭೆಯಲ್ಲಿ ಕರ್ನಾಟಕದ AI ಆಧಾರಿತ…
ಅಕ್ರಮ ಅಡಿಕೆ ಆಮದು, ಜಿಎಸ್ಟಿ ತಾರತಮ್ಯ ಹಾಗೂ ಸಹಕಾರ ಸಂಘಗಳ ಸಮಸ್ಯೆಗಳ ಕುರಿತು…
ಆಗಸ್ಟ್ 8ರಿಂದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮಳೆಯ ಪ್ರಮಾಣ ಇಳಿಕೆಯಾಗುವ ಲಕ್ಷಣಗಳಿವೆ. ಆಗಸ್ಟ್…
ಮ್ಯಾನ್ಮಾರ್ನಿಂದ ಭಾರತಕ್ಕೆ ಅಕ್ರಮವಾಗಿ ಅಡಿಕೆ ಸಾಗಿಸುತ್ತಿದ್ದ ಮೂರು ಹಂತದ ಜಾಲವನ್ನು ಇಡಿ ತನಿಖೆಯಲ್ಲಿ…