ಸುಳ್ಯ: ಜಾಲ್ಸೂರು ಗ್ರಾಮದ ಅಡ್ಕಾರು ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ ಷಷ್ಠಿ ಮಹೋತ್ಸವ ವಿಜ್ರಂಭಣೆಯಿಂದ ನಡೆಯಿತು. ನೂರಾರು ಮಂದಿ ಭಕ್ತರು ಆಗಮಿಸಿದ್ದರು.
ನೂತನ ಪಾಕಶಾಲೆ ಪ್ರವೇಶೋತ್ಸವ: ಈ ಸಂದರ್ಭದಲ್ಲಿ ದೇವಸ್ಥಾನದಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಪಾಕಶಾಲೆಯ ಪ್ರವೇಶೋತ್ಸವ ಬ್ರಹ್ಮಶ್ರೀ ಕುಂಟಾರು ವಾಸುದೇವ ತಂತ್ರಿಗಳ ನೇತೃತ್ವದಲ್ಲಿ ನಡೆಯಿತು. ಗಣಪತಿ ಹವನ ನಡೆಯುವುದರ ಮೂಲಕ ನೂತನ ಪಾಕಶಾಲೆಯ ಪ್ರವೇಶೋತ್ಸವ ನಡೆಯಿತು. ನಂತರ ಉಷ:ಪೂಜೆ, ನವಕಪೂಜೆ ನಡೆಯಿತು. ಸ್ಥಳೀಯ ಕಲಾವಿದರಿಂದ ಸಾಂಸ್ಕೃತಿಕ ವೈಭವ ನಂತರ ಅಪರಾಹ್ನ ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವರಿಗೆ ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಿತು.
ಈ ಸಂದರ್ಭದಲ್ಲಿ ದೇವಸ್ಥಾನದ ಆಡಳಿತ ಮೊಕ್ತೇಸರ ಗುರುರಾಜ್ ಭಟ್, ಆಡಳಿತಾಧಿಕಾರಿ ಹೂವಪ್ಪ ಗೌಡ, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಸುಧಾಕರ ಕಾಮತ್, ಜಿರ್ಣೋದ್ಧಾರ ಸಮಿತಿ ಸದಸ್ಯರು, ಬೈಲುವಾರು ಸಮಿತಿಯವರು, ಭಕ್ತಾದಿಗಳು ಉಪಸ್ಥಿತರಿದ್ದರು.
ಕರ್ನಾಟಕದಲ್ಲಿ ಮುಂಗಾರು ಚಟುವಟಿಕೆಗಳು ಜೂ. 8ರಿಂದ ಮತ್ತಷ್ಟು ಚುರುಕುಗೊಳ್ಳುವ ಲಕ್ಷಣಗಳು ಕಂಡುಬಂದಿದ್ದು, ಕರಾವಳಿ…
ಜೋಯಿಡಾದಲ್ಲಿ ನಡೆದ ಹಲಸು ಉತ್ಸವದಲ್ಲಿ 50ಕ್ಕೂ ಹೆಚ್ಚು ಮೌಲ್ಯವರ್ಧಿತ ಹಲಸಿನ ಉತ್ಪನ್ನಗಳು ಪ್ರದರ್ಶನಗೊಂಡು…
ಕ್ಯಾಂಪ್ಕೋ ಸಂಸ್ಥಾಪಕ ವಾರಣಾಶಿ ಸುಬ್ರಾಯ ಭಟ್ ಅವರ ಜನ್ಮಕ್ಕೆ 99 ವರ್ಷಗಳು ಪೂರ್ಣಗೊಂಡಿದ್ದು,…
ರಾಜ್ಯಕ್ಕೆ ಮುಂಗಾರು ಪ್ರವೇಶಿಸಿದರೂ ಅದರ ಬಲ ಇನ್ನೂ ದುರ್ಬಲವಾಗಿದೆ. ಕರಾವಳಿಯಲ್ಲಿ ಜೂನ್ 8ರಿಂದ…
ನಾರ್ವೆ ಚೆಸ್ 2026 ಟೂರ್ನಿಯನ್ನು ಗೆದ್ದ ಮೊದಲ ಭಾರತೀಯ ಆಟಗಾರ ಎಂಬ ಇತಿಹಾಸವನ್ನು…
ಆಸ್ಟ್ರೇಲಿಯಾದಲ್ಲಿ ವರೋವಾ ಮೈಟ್ ಹಾವಳಿಯಿಂದ ಜೇನುನೊಣಗಳ ಸಂಖ್ಯೆ ತೀವ್ರವಾಗಿ ಕುಸಿಯುತ್ತಿದ್ದು, ಆಹಾರ ಬೆಳೆಗಳ…