ಸುಳ್ಯ: ಕೆಲವು ದಿನಗಳ ಹಿಂದೆ ಸರಣಿ ಅಪಘಾತದಿಂದಾಗಿ ಏಳು ಜೀವಗಳು ಬಲಿಯಾಗಿದ್ದ ರಾಷ್ಟ್ರೀಯ ಹೆದ್ದಾರಿ 275ರ ಸುಳ್ಯ ಸಮೀಪದ ಆಡ್ಕಾರ್ ಮಾವಿನಕಟ್ಟೆಯಲ್ಲಿ ಗುರುವಾರ ರಾತ್ರಿ ಮತ್ತೆ ಅಪಘಾತ ನಡೆದಿದೆ. ಕಾರು ಮತ್ತು ಲಾರಿ ನಡುವಿನ ಅಪಘಾತ ಉಂಟಾಗಿ ಕಾರು ನುಜ್ಜು ಗುಜ್ಜಾಗಿದೆ ಎಂದು ತಿಳಿದು ಬಂದಿದೆ. ಸುಳ್ಯ ಕಡೆಯಿಂದ ಕಾಸರಗೋಡು ಕಡೆಗೆ ಹೋಗುತ್ತಿದ್ದ ಕಾರು ಮತ್ತು ಸುಳ್ಯ ಕಡೆಗೆ ಬರುತ್ತಿದ್ದ ಲಾರಿ ಮಧ್ಯೆ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಯಾರಿಗೂ ಅಪಾಯ ಸಂಭವಿಸಿಲ್ಲ. ಅಡ್ಕಾರ್ ನಲ್ಲಿ ಕಳೆದ 15 ದಿನದಲ್ಲಿ ಉಂಟಾದ ಎರಡು ಪ್ರತ್ಯೇಕ ಅಪಘಾತದಲ್ಲಿ ಏಳು ಮಂದಿ ಮೃತಪಟ್ಟಿದ್ದರು. ಬಳಿಕ ಅಲ್ಲಿ ಪೊಲೀಸರು ಬ್ಯಾರಿಕೇಡ್ ಅಳವಡಿಸಿದ್ದರೂ ಮತ್ತೆ ಅಪಘಾತ ಉಂಟಾಗಿದೆ.
ಸರಿಗಮಪ ಲಿಟಲ್ ಚಾಂಪ್ಸ್ 2026ರ ವಿಜೇತ ಅಶ್ಮಿತ್ ಎ. ಜೆ. ಅವರನ್ನು ಮಂಗಳೂರಿನ…
ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.18ರಿಂದ ಮಳೆಯ ವ್ಯಾಪ್ತಿ ಹೆಚ್ಚಾಗುವ ಸೂಚನೆಗಳಿವೆ. ಸೆ.19ರಿಂದ…
ಬಣ್ಣಗಳ ಮೂಲಕ ಅರಳಿದ ಗಣೇಶ - ಕುಕ್ಕೆ ಸುಬ್ರಹ್ಮಣ್ಯದ ಕುಮಾರಸ್ವಾಮಿ ವಿದ್ಯಾಲಯದ 8…
ನನ್ನ ಚಿತ್ರ – ನನ್ನ ಖುಷಿ | ಗಣೇಶನನ್ನು ಬಣ್ಣಗಳಲ್ಲಿ ಅರಳಿಸಿದ ಪುಟಾಣಿ…
ಗಣೇಶ ಚತುರ್ಥಿಯನ್ನು ಕೇವಲ ಧಾರ್ಮಿಕ ಆಚರಣೆಯಾಗಿ ನೋಡುವುದಕ್ಕಿಂತ, ಗಣೇಶನ ರೂಪಲಕ್ಷಣಗಳಲ್ಲಿರುವ ಜೀವನದ ಸಂದೇಶಗಳನ್ನು…
ಮೂರು ದಿನಗಳ ರಜೆ ಮುಗಿಯುತ್ತಿರುವ ಹಿನ್ನೆಲೆಯಲ್ಲಿ ಸೋಮವಾರ ಮಧ್ಯಾಹ್ನದ ಬಳಿಕ ಶಿರಾಡಿ ಘಾಟ್ನಲ್ಲಿ…