ಸುಳ್ಯ: ಕೆಲವು ದಿನಗಳ ಹಿಂದೆ ಸರಣಿ ಅಪಘಾತದಿಂದಾಗಿ ಏಳು ಜೀವಗಳು ಬಲಿಯಾಗಿದ್ದ ರಾಷ್ಟ್ರೀಯ ಹೆದ್ದಾರಿ 275ರ ಸುಳ್ಯ ಸಮೀಪದ ಆಡ್ಕಾರ್ ಮಾವಿನಕಟ್ಟೆಯಲ್ಲಿ ಗುರುವಾರ ರಾತ್ರಿ ಮತ್ತೆ ಅಪಘಾತ ನಡೆದಿದೆ. ಕಾರು ಮತ್ತು ಲಾರಿ ನಡುವಿನ ಅಪಘಾತ ಉಂಟಾಗಿ ಕಾರು ನುಜ್ಜು ಗುಜ್ಜಾಗಿದೆ ಎಂದು ತಿಳಿದು ಬಂದಿದೆ. ಸುಳ್ಯ ಕಡೆಯಿಂದ ಕಾಸರಗೋಡು ಕಡೆಗೆ ಹೋಗುತ್ತಿದ್ದ ಕಾರು ಮತ್ತು ಸುಳ್ಯ ಕಡೆಗೆ ಬರುತ್ತಿದ್ದ ಲಾರಿ ಮಧ್ಯೆ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಯಾರಿಗೂ ಅಪಾಯ ಸಂಭವಿಸಿಲ್ಲ. ಅಡ್ಕಾರ್ ನಲ್ಲಿ ಕಳೆದ 15 ದಿನದಲ್ಲಿ ಉಂಟಾದ ಎರಡು ಪ್ರತ್ಯೇಕ ಅಪಘಾತದಲ್ಲಿ ಏಳು ಮಂದಿ ಮೃತಪಟ್ಟಿದ್ದರು. ಬಳಿಕ ಅಲ್ಲಿ ಪೊಲೀಸರು ಬ್ಯಾರಿಕೇಡ್ ಅಳವಡಿಸಿದ್ದರೂ ಮತ್ತೆ ಅಪಘಾತ ಉಂಟಾಗಿದೆ.
ಭಾರತದ ರಾಷ್ಟ್ರೀಯ ಕೀಟ ಕಣ್ಗಾವಲು ವ್ಯವಸ್ಥೆ ಈಗ 73 ಬೆಳೆಗಳು ಮತ್ತು 436…
ICAR 16 ಹೊಸ ಜಾನುವಾರು ಮತ್ತು ನಾಯಿ ತಳಿಗಳಿಗೆ ರಾಷ್ಟ್ರೀಯ ನೋಂದಣಿ ನೀಡಿದ್ದು,…
ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಆಗಸ್ಟ್ 26ರವರೆಗೆ ಮೋಡ ಮತ್ತು ಅಲ್ಲಲ್ಲಿ ಬಿಟ್ಟುಬಿಟ್ಟು…
ಭಾರತದಲ್ಲಿ ಸಮಸ್ಯೆ ಕೇವಲ ಉದ್ಯೋಗಗಳ ಕೊರತೆಯಲ್ಲ, ಉದ್ಯೋಗಕ್ಕೆ ಅಗತ್ಯವಾದ ಕೌಶಲ್ಯ ಹೊಂದಿದ ಅಭ್ಯರ್ಥಿಗಳ…
ಕರಾವಳಿ ಮತ್ತು ಮಲೆನಾಡಿನ ಅಡಿಕೆ ತೋಟಗಳಲ್ಲಿ ಕಾಣಿಸಿಕೊಳ್ಳುತ್ತಿರುವ ಎಲೆಚುಕ್ಕೆ, ಹಳದಿ ಎಲೆ ಹಾಗೂ…
ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕಾಗಿದ್ದು, ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 25ರವರೆಗೆ ಮಳೆ…