ಸುಳ್ಯ: ಕೆಲವು ದಿನಗಳ ಹಿಂದೆ ಸರಣಿ ಅಪಘಾತದಿಂದಾಗಿ ಏಳು ಜೀವಗಳು ಬಲಿಯಾಗಿದ್ದ ರಾಷ್ಟ್ರೀಯ ಹೆದ್ದಾರಿ 275ರ ಸುಳ್ಯ ಸಮೀಪದ ಆಡ್ಕಾರ್ ಮಾವಿನಕಟ್ಟೆಯಲ್ಲಿ ಗುರುವಾರ ರಾತ್ರಿ ಮತ್ತೆ ಅಪಘಾತ ನಡೆದಿದೆ. ಕಾರು ಮತ್ತು ಲಾರಿ ನಡುವಿನ ಅಪಘಾತ ಉಂಟಾಗಿ ಕಾರು ನುಜ್ಜು ಗುಜ್ಜಾಗಿದೆ ಎಂದು ತಿಳಿದು ಬಂದಿದೆ. ಸುಳ್ಯ ಕಡೆಯಿಂದ ಕಾಸರಗೋಡು ಕಡೆಗೆ ಹೋಗುತ್ತಿದ್ದ ಕಾರು ಮತ್ತು ಸುಳ್ಯ ಕಡೆಗೆ ಬರುತ್ತಿದ್ದ ಲಾರಿ ಮಧ್ಯೆ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಯಾರಿಗೂ ಅಪಾಯ ಸಂಭವಿಸಿಲ್ಲ. ಅಡ್ಕಾರ್ ನಲ್ಲಿ ಕಳೆದ 15 ದಿನದಲ್ಲಿ ಉಂಟಾದ ಎರಡು ಪ್ರತ್ಯೇಕ ಅಪಘಾತದಲ್ಲಿ ಏಳು ಮಂದಿ ಮೃತಪಟ್ಟಿದ್ದರು. ಬಳಿಕ ಅಲ್ಲಿ ಪೊಲೀಸರು ಬ್ಯಾರಿಕೇಡ್ ಅಳವಡಿಸಿದ್ದರೂ ಮತ್ತೆ ಅಪಘಾತ ಉಂಟಾಗಿದೆ.
ಕರ್ನಾಟಕದಲ್ಲಿ 14.05.2026ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚನೆಯ ಪ್ರಕಾರ ಕರಾವಳಿ, ಮಲೆನಾಡು…
ರಾಜ್ಯದ ಬಹುತೇಕ ಭಾಗಗಳಲ್ಲಿ ಬಿಸಿಲು ಮುಂದುವರಿದರೂ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ…
‘ರೋಸ್ಟೆಡ್ ಅಡಿಕೆ’ ವರ್ಗೀಕರಣ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಅಲಹಾಬಾದ್ ಹೈಕೋರ್ಟ್ ಆದೇಶಕ್ಕೆ ತಾತ್ಕಾಲಿಕ…
ರಾಜ್ಯದ ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಸಂಜೆ ಮತ್ತು ರಾತ್ರಿ ಗುಡುಗು ಸಹಿತ…
ಕರ್ನಾಟಕದಲ್ಲಿ ಮುಂದಿನ 24 ಗಂಟೆಗಳ ಅವಧಿಯಲ್ಲಿ ಕರಾವಳಿ ಹಾಗೂ ಮಲೆನಾಡಿನ ಕೆಲವು ಭಾಗಗಳಲ್ಲಿ…
ಮೈಸೂರು ಜಿಲ್ಲೆಯ ಮೇಲ್ಸೇತುವೆ ಕಾಮಗಾರಿಗಳ ವೇಳೆ ಯಾವುದೇ ಮರಗಳನ್ನು ಕಡಿಯುವುದಿಲ್ಲ ಎಂದು ಸಂಸದ…