Advertisement
ಸುದ್ದಿಗಳು

ಅಡ್ಡಮತದಾನದ ಇಫೆಕ್ಟ್ : ಬಿಜೆಪಿಯ ಪಕ್ಷ-ಸಂಘಟನೆಯ ಜವಾಬ್ದಾರಿಯಿಂದ 5 ಮಂದಿ ಮುಕ್ತ

Share

ಸುಳ್ಯ:  ಬಿಜಿಪಿ ಮಂಡಲ ಸಮಿತಿ ಪತ್ರಿಕಾ ಪ್ರಕಟಣೆಯೊಂದನ್ನು ನೀಡಿದ್ದು ಇದರಲ್ಲಿ ಒಟ್ಟು 5 ಮಂದಿಯನ್ನು ಪಕ್ಷ ಹಾಗೂ ಸಂಘಟನೆಯ ಎಲ್ಲಾ ರೀತಿಯ ಜವಾಬ್ದಾರಿಯಿಂದ ಮುಕ್ತಗೊಳಿಸಲಾಗಿದೆ ಎಂದು ಸಂಘಟನೆಯ ಎಲ್ಲಾ ಕಾರ್ಯಕರ್ತರಿಗೆ ಈ ಮೂಲಕ ತಿಳಿಯಪಡಿಸಲಾಗಿದೆ ಎಂದು ಮಂಡಲ ಅಧ್ಯಕ್ಷ ವೆಂಕಟ್ ವಳಲಂಬೆ, ಕಾರ್ಯದರ್ಶಿ ಸುಬೋದ್ ಮೇನಾಲ ಹಾಗೂ ಪ್ರಕಾಶ್ ಹೆಗ್ಡೆ ತಿಳಿಸಿದ್ದಾರೆ.

Advertisement
Advertisement
Advertisement
Advertisement

ಪತ್ರಿಕಾ ಪ್ರಕಟಣೆ ಹೀಗಿದೆ,

Advertisement

ಪಕ್ಷ ಹಾಗೂ ಸಂಘಟನೆಯ ಅಪೇಕ್ಷೆಯಂತೆ, ಸುಳ್ಯ ಮಂಡಲದ ವ್ಯಾಪ್ತಿಗೊಳಪಟ್ಟ ಪ್ರಾ.ಕೃ.ಪ.ಸ.ಸಂಘ ಅರಂತೋಡು ಇದರ ಅಧ್ಯಕ್ಷ ಸಂತೋಷ್ ಕುತ್ತಮೊಟ್ಟೆ,  ಸುಳ್ಯ ಸಿ.ಎ. ಬ್ಯಾಂಕ್ ಅಧ್ಯಕ್ಷ ಎಂ.ಬಾಲಗೋಪಾಲ ಸೇರ್ಕಜೆ,  ಮಂಡೆಕೋಲು ಪ್ರಾ.ಕೃ.ಪ.ಸ.ಸಂಘದ ಅಧ್ಯಕ್ಷ ಶಿವಪ್ರಸಾದ್ ಯು.ಎಂ.,  ಉಬರಡ್ಕ ಪ್ರಾ.ಕೃ.ಪ.ಸ.ಸಂಘದ ಅಧ್ಯಕ್ಷ ಹರೀಶ್ ರೈ ಉಬರಡ್ಕ, ಮರ್ಕಂಜ ಪ್ರಾ.ಕೃ.ಪ.ಸ.ಸಂಘದ ಅಧ್ಯಕ್ಷ ರುಕ್ಮಯ್ಯ ಗೌಡ,  ನೆಲ್ಲೂರುಕೆಮ್ರಾಜೆ ಪ್ರಾ.ಕೃ.ಪ.ಸ.ಸಂಘದ ಅಧ್ಯಕ್ಷ ವಿಷ್ಣು ಭಟ್,  ಗುತ್ತಿಗಾರು ಪ್ರಾ.ಕೃ.ಪ.ಸ.ಸಂಘದ ನಿರ್ದೇಶಕ ವೆಂಕಟ್ ದಂಬೆಕೋಡಿ,  ಚೊಕ್ಕಾಡಿ ಪ್ರಾ.ಕೃ.ಪ.ಸ.ಸಂಘದ ಅಧ್ಯಕ್ಷ ಸದಾಶಿವ ಮೂಕಮಲೆ,  ಐವರ್ನಾಡು ಪ್ರಾ.ಕೃ.ಪ.ಸ.ಸಂಘದ ಅಧ್ಯಕ್ಷ ಎಸ್.ಎನ್. ಮನ್ಮಥ, ಕಳಂಜ-ಬಾಳಿಲ
ಪ್ರಾ.ಕೃ.ಪ.ಸ.ಸಂಘದ ನಿರ್ದೇಶಕ ಅಜಿತ್ ರಾವ್ ಕಿಲಂಗೋಡಿ, ಮುರುಳ್ಯ ಪ್ರಾ.ಕೃ.ಪ.ಸ.ಸಂಘದ ನಿರ್ದೇಶಕ ಪ್ರಸನ್ನ ಎಣ್ಮೂರು, ಪಂಬೆತ್ತಾಡಿ ಪ್ರಾ.ಕೃ.ಪ.ಸ.ಸಂಘದ ಉಪಾಧ್ಯಕ್ಷ ಸಂತೋಷ್ ಜಾಕೆ, ಕನಕಮಜಲು ಪ್ರಾ.ಕೃ.ಪ.ಸ.ಸಂಘದ ಅಧ್ಯಕ್ಷರಾದ ಸತೀಶ್ ಕೆಮನಬಳ್ಳಿ ಮತ್ತು ಪಂಜ ಪ್ರಾ.ಕೃ.ಪ.ಸ.ಸಂಘದ ಅಧ್ಯಕ್ಷ ಚಂದ್ರಶೇಖರ ಶಾಸ್ತ್ರಿಯವರು ತಮ್ಮ ಸಹಕಾರಿ ಜವಾಬ್ದಾರಿಗೆ ರಾಜೀನಾಮೆ ನೀಡಿರುವುದಾಗಿ ಪಕ್ಷದ ಪ್ರಮುಖರಿಗೆ ಹಾಗೂ ಕಚೇರಿಗೆ ಮಾಹಿತಿ ನೀಡಿರುತ್ತಾರೆ.

ಆಲೆಟ್ಟಿ ಪ್ರಾ.ಕೃ.ಪ.ಸ.ಸಂಘದ ಅಧ್ಯಕ್ಷರಾದ ಕೃಪಾಶಂಕರ ತುದಿಯಡ್ಕ ಹಾಗೂ ಬಿಳಿನೆಲೆ ಪ್ರಾ.ಕೃ.ಪ.ಸ.ಸಂಘದ ಅಧ್ಯಕ್ಷರಾದ ಬಾಲಕೃ ಷ್ಣ  ಗೌಡ ವಾಲ್ತಾಜೆ ಇವರು ಯಾವುದೇ ರೀತಿಯಲ್ಲಿ ಸ್ಪಂದಿಸದ ಕಾರಣ, ಇವರನ್ನು ಪಕ್ಷ-ಸಂಘಟನೆಯ ಎಲ್ಲಾ ರೀತಿಯ ಜವಾಬ್ದಾರಿಯಿಂದ ಮುಕ್ತಗೊಳಿಸಲಾಗಿದೆ ಎಂದು ಸಂಘಟನೆಯ ಎಲ್ಲಾ ಕಾರ್ಯಕರ್ತರಿಗೆ ಈ ಮೂಲಕ ತಿಳಿಯಪಡಿಸಲಾಗಿದೆ.

Advertisement

ಇದಲ್ಲದೆ ಪಕ್ಷದ ಹಾಗೂ ಸಂಘಟನೆಯ ಅಪೇಕ್ಷೆಯನ್ನು ಮತ್ತು ತೀರ್ಮಾನವನ್ನು ಉಲ್ಲಂಘಿಸಿ ನಡೆದುಕೊಂಡ ಸುಳ್ಯ ಸಿ.ಎ. ಬ್ಯಾಂಕ್ ಮಾಜಿ ನಿರ್ದೇಶಕ ಕರುಣಾಕರ ಎ.ಎಸ್. ಅಡ್ಪಂಗಾಯ, ಕನಕಮಜಲು ಪ್ರಾ.ಕೃ.ಪ.ಸ.ಸಂಘದ ಉಪಾಧ್ಯಕ್ಷರಾದ  ಗೀತಾ ಗೋಪಿನಾಥ ಬೊಳುಬೈಲು ಹಾಗೂ ಬೆಳ್ಳಾರೆ ಪ್ರಾ.ಕೃ.ಪ.ಸ.ಸಂಘದ ನಿರ್ದೇಶಕರಾದ ಕೆ. ಕೂಸಪ್ಪ ನಾಯ್ಕ ಕೊಡಿಯಾಲ ಇವರನ್ನು ಕೂಡಾ ಸಂಘಟನೆಯ ವಿವಿಧ ಜವಾಬ್ದಾರಿಗಳಿಂದ ಮುಕ್ತಗೊಳಿಸಲಾಗಿದೆ.

ಎಂದು ಪ್ರಕಟಣೆ ತಿಳಿಸಿದೆ.

Advertisement

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ವಾಡಿಕೆಗಿಂತ  2.5 ಡಿಗ್ರಿ ಸೆಲ್ಸಿಯಸ್ ನಷ್ಟು ಬಿಸಿಲು ಅಧಿಕ

ಈ ಬಾರಿ ಫೆಬ್ರವರಿ ತಿಂಗಳಲ್ಲಿ ವಾಡಿಕೆಗಿಂತ  2.5 ಡಿಗ್ರಿ ಸೆಲ್ಸಿಯಸ್ ನಷ್ಟು ಬಿಸಿಲು…

2 hours ago

ಸರ್ಕಾರಿ ಬಸ್ ನಿರ್ವಾಹಕರಿಗೆ ಸೂಕ್ತ ಭದ್ರತೆ ಒದಗಿಸುವಂತೆ ಮನವಿ

ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಚಾಲಕ ಮತ್ತು ನಿರ್ವಾಹಕರ ಮೇಲೆ ಪ್ರಯಾಣಿಕರು…

2 hours ago

ಕೃಷಿ ವಿಶ್ವವಿದ್ಯಾಲಯಗಳು ಸಂಶೋಧನೆಗೆ ಹೆಚ್ಚಿನ ಆದ್ಯತೆ ನೀಡಬೇಕು

ಕೃಷಿ ಹಾಗೂ ರೈತರ ಅಭ್ಯುದಯವೇ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯಗಳ ಮೂಲ ಆಶಯವಾಗಿದೆ…

2 hours ago

ಏರುತ್ತಿರುವ ತಾಪಮಾನ | 2030 ರ ವೇಳೆಗೆ ಕೃಷಿ ಕ್ಷೇತ್ರದ ಮೇಲೆ ಗಂಭೀರ ಪರಿಣಾಮ | ಕೃಷಿ ಸಾಲ ಮರುಪಾವತಿ ಮೇಲೆ ಹೊಡೆತ..? |

ಏರುತ್ತಿರುವ ತಾಪಮಾನ ಮತ್ತು ಹವಾಮಾನ ಬದಲಾವಣೆಯು ಮುಂದಿನ ಐದು ವರ್ಷಗಳಲ್ಲಿ ಕೃಷಿ ಮೇಲೆ…

10 hours ago

ದೇಶಾದ್ಯಂತ ಸ್ಥೂಲಕಾಯದ ವಿರುದ್ಧ ಅಭಿಯಾನ | ರಾಜ್ಯಸಭಾ ಸಂಸದೆ ಸುಧಾಮೂರ್ತಿ ಸೇರಿದಂತೆ 10 ಮಂದಿ ನಾಮನಿರ್ದೇಶನ

ದೇಶಾದ್ಯಂತ ಸ್ಥೂಲಕಾಯದ ವಿರುದ್ಧ ಹೋರಾಡಲು ಪ್ರಧಾನಿ ನರೇಂದ್ರ ಮೋದಿ ಅವರು ಹತ್ತು ಮಂದಿಯನ್ನು…

11 hours ago

ಸಹಕಾರಿ ಪಾಠ | ಆರ್ಥಿಕ ಶಿಸ್ತು ಹಾಗೂ ಸಣ್ಣ ಸಣ್ಣ ಮೊತ್ತವೂ ಬ್ಯಾಂಕಿಗೆ ಏಕೆ ಬರಬೇಕು…?

ತೀರಾ ಸಣ್ಣ ಮಟ್ಟಿನ‌ ಆದಾಯವನ್ನೂ ಬ್ಯಾಂಕ್ ಖಾತೆಗೆ ಏಕೆ ತುಂಬಬೇಕು..?

12 hours ago