ಸುಳ್ಯ: ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಚುನಾವಣೆಯಲ್ಲಿ ನಡೆದ ಅಡ್ಡ ಮತದಾನ ನಗರ ಪಂಚಾಯತ್ ಚುನಾವಣೆಯಲ್ಲಿ ಯಾವುದೇ ಪರಿಣಾಮ ಬೀರುವುದಿಲ್ಲ ಎಂದು ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.
ಸುಳ್ಯ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಸುದ್ದಿಗಾರರ ಪ್ರಶ್ನೆಗೆ ಅವರು ಉತ್ತರಿಸಿದರು. ಅಡ್ಡಮತದಾನ ಸೇರಿದಂತೆ ಪಕ್ಷ ವಿರೋಧಿ ಕೆಲಸದ ಸಂದರ್ಭ ಕಾಲ ಕಾಲಕ್ಕೆ ಸ್ಥಳೀಯ ಮಂಡಲ ಸಮಿತಿ ಕ್ರಮ ಕೈಗೊಳ್ಳಲಿದೆ ಎಂದು ಪ್ರತಿಕ್ರಿಯಿಸಿದರು. ನಗರ ಪಂಚಾಯತ್ ಚುನಾವಣೆ ಪಕ್ಷದ ನೆಲೆಯಲ್ಲಿ ನಡೆಯುತ್ತದೆ. ಸ್ಥಳೀಯ ಅಭಿವೃದ್ಧಿ ಕಾರ್ಯ ಹಾಗೂ ಸರಕಾರವು ಸ್ಥಳೀಯಾಡಳಿತವನ್ನು ನಡೆಸಿದ ಹಿನ್ನೆಲೆಯಲ್ಲಿ ನಡೆಯುತ್ತದೆ ಎಂದು ಪ್ರತಿಕ್ರಿಯೆ ನೀಡಿದರು.
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Rural Mirror Special |
Subscribe Our Channel