ಸುದ್ದಿಗಳು

ಅಡ್ಡಮತದಾನ ಪ್ರಕರಣ : “ಆಟಿಯಲ್ಲಿ” ಕ್ರಮವಾಗುತ್ತಾ ?

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಸುಳ್ಯ: ಡಿ ಸಿ ಸಿ ಬ್ಯಾಂಕ್ ನಿರ್ದೇಶಕ ಸ್ಥಾನಕ್ಕೆ ಸುಳ್ಯದಲ್ಲಿ ನಡೆದ ಅಡ್ಡಮತದಾನ  ಬಿಜೆಪಿ ಹಾಗೂ ಸಹಕಾರ ಭಾರತಿ, ಸಂಘಪರಿವಾರಕ್ಕೆ ಬಾರೀ ತಲೆನೋವು ತಂದಿದೆ. ಸುಳ್ಯದಂತಹ ಪ್ರದೇಶದಲ್ಲಿ ಅಡ್ಡಮತದಾನ ನಡೆದಿರುವುದು  ಪಕ್ಷಕ್ಕೆ ಹಾಗೂ ಸಂಘ ಪರಿವಾರಕ್ಕೆ ಮುಜುಗರ ತಂದಿತ್ತು. ಹೀಗಾಗಿ ಶಿಸ್ತು ಕ್ರಮ ಆಗಲೇಬೇಕು ಎಂಬ ಒತ್ತಾಯ ಕೇಳಿಬಂದಿತ್ತು. ಹಲವು ಬಾರಿ ಈ ಬಗ್ಗೆ ಪ್ರಯತ್ನ ನಡೆದರೂ ಆಗಿರಲಿಲ್ಲ. ಇದೀಗ ಆಟಿ ತಿಂಗಳಲ್ಲಿ ಈ ಪ್ರಕ್ರಿಯೆ ನಡೆಯುತ್ತಾ ? ಎಂಬುದನ್ನು ಬಿಜೆಪಿ ಕಾರ್ಯಕರ್ತರು ಪ್ರಶ್ನೆ ಮಾಡುತ್ತಾರೆ.

Advertisement
Advertisement

ಡಿಸಿಸಿ ಬ್ಯಾಂಕ್ ನಿರ್ದೇಶಕ ಸ್ಥಾನಕ್ಕೆ ಮತದಾನ ಮಾಡಿರುವ ಸಹಕಾರಿ ಸಂಘದ ನಿರ್ದೇಶಕರು ಹಾಗೂ ಅಧ್ಯಕ್ಷರು ಸೇರಿದಂತೆ ಎಲ್ಲಾ 17 ಮಂದಿ ರಾಜೀನಾಮೆ ನೀಡಬೇಕು ಎಂಬ ಸೂಚನೆ ಬಿಜೆಪಿ, ಸಂಘಪರಿವಾರ  ನೀಡಿದರೂ ಜಾರಿಯಾಗಿಲ್ಲ. ಯಾರೊಬ್ಬರೂ ರಾಜೀನಾಮೆ ನೀಡಿಲ್ಲ. ಇದೀಗ ಆಟಿ ತಿಂಗಳಲ್ಲಿ  ಈ ಪ್ರಕ್ರಿಯೆ ನಡೆಯುತ್ತಾ ? ಎಂಬ ಮತ್ತೊಂದು ಪ್ರಶ್ನೆ ಎದ್ದಿದೆ. ಹಲವು ಬಾರಿ ಮುಂದೂಡಿದ್ದ ಶಿಸ್ತು ಕ್ರಮ ಈ ಬಾರಿ ಆಗುತ್ತಾ ಎಂಬ ಪ್ರಶ್ನೆಗಳು ಕಾರ್ಯಕರ್ತರು ಕೇಳುತ್ತಾರೆ. ರಾಜೀನಾಮೆ ನೀಡದೇ ಇರುವವರನ್ನು ಪಕ್ಷದಿಂದ ಉಚ್ಛಾಟನೆ ಮಾಡಲಾಗುತ್ತದೆ ಎಂದು ಹೇಳಿದರೂ ಸೂಚನೆ ಜಾರಿಯಾಗಿಲ್ಲ.ಇಲ್ಲಿ 17 ಮಂದಿಯಲ್ಲಿ ಪಕ್ಷದ ಅಭ್ಯರ್ಥಿಗೆ ಮತ ಚಲಾವಣೆ ಮಾಡಿದವರಿಗೂ ಅಡ್ಡಮತದಾನ ಮಾಡಿದವರಿಗೂ ಒಂದೇ    ಮಾನದಂಡವೇ ಅಥವಾ ಬೇರೆ ಕ್ರಮಗಳು ಇವೆಯೇ ಎಂದೂ ಕಾರ್ಯಕರ್ತರೊಳಗೆ ಈ ಹಿಂದೆ ಚರ್ಚೆಯಾಗಿತ್ತು. ಇದೀಗ ಮತ್ತೆ ಅಡ್ಡಮತದಾನ ಪ್ರಕ್ರಿಯೆ ಚರ್ಚೆಯಾಗುತ್ತಿದೆ.

ಇದಕ್ಕೂ ಮುನ್ನ ಡಿಸಿಸಿ ಬ್ಯಾಂಕ್ ನಿರ್ದೇಶಕ ಸ್ಥಾನಕ್ಕೆ ಮತದಾನ ಮಾಡಿದ  ಎರಡು ಮಂದಿಯನ್ನು ಬಿಜೆಪಿಯು ಪಕ್ಷದ ಎಲ್ಲ ಹುದ್ದೆಗಳಿಂದ ಕೈ ಬಿಡಲಾಗಿದೆ ಎಂದು ಪ್ರಕಟಣೆ ನೀಡಲಾಗಿತ್ತು, ಆದರೆ ನಾವು ಬಿಜೆಪಿಯ ಯಾವುದೇ ಹುದ್ದೆಯಲ್ಲಿ ಇಲ್ಲ ಎನ್ನುವ ಮೂಲಕ ಮತ್ತೊಂದು ತಿರುವನ್ನು  ನೀಡಿದ್ದರು.

ಇದೀಗ ಅಡ್ಡ ಮತದಾನ ಮಾಡಿದ ಹಾಗೂ ಪಕ್ಷದ ಅಭ್ಯರ್ಥಿಗೆ ಮತದಾನ ಮಾಡಿದ ಎಲ್ಲರನ್ನೂ ಬಿಜೆಪಿಯು, ಸಂಘಪರಿವಾರವು  ಪಕ್ಷದಿಂದ, ಸಂಘಟನೆಯಿಂದ ಉಚ್ಛಾಟನೆ  ಯಾವಾಗ ಮಾಡುತ್ತದೆ, ಏನು ಕ್ರಮವಾಗುತ್ತದೆ ಎಂಬುದು ಕುತೂಹಲ ಹಾಗೂ ಪ್ರಶ್ನೆಯಾಗಿಯೇ ಉಳಿದಿದೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 02-06-2025 | ಸಾಮಾನ್ಯ ಮಳೆ ಮುಂದುವರಿಕೆ | ಜೂನ್ ತಿಂಗಳಲ್ಲಿ ದುರ್ಬಲ ಮುಂಗಾರು ಸಾಧ್ಯತೆ |

ಮುಂಗಾರು ದುರ್ಬಲಗೊಂಡಿದ್ದು, ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಂತಹ ಚಟುವಟಿಕೆಗಳು ಉಂಟಾದರೆ ಮಾತ್ರ ಮುಂಗಾರು ಸ್ವಲ್ಪ…

1 hour ago

ಕೊರೊನಾ ಬಗ್ಗೆ ಮುನ್ನೆಚ್ಚರಿಕೆಯ ಹೊರತು ಭಯಭೀತರಾಗುವ ಅವಶ್ಯಕತೆಯಿಲ್ಲ

ರಾಜ್ಯದಲ್ಲಿ  ಕೊರೋನ ವಿಚಾರದಲ್ಲಿ ಹೆಚ್ಚಿನ ಬದಲಾವಣೆ ಏನೂ ಇಲ್ಲ ಎಂದು  ಆರೋಗ್ಯ ಸಚಿವ…

4 hours ago

ಭೂಕುಸಿತ ಹಿನ್ನೆಲೆ | ಪಶ್ಚಿಮಘಟ್ಟ ಧಾರಣ ಸಾಮರ್ಥ್ಯದ ಅಧ್ಯಯನಕ್ಕೆ ಸಚಿವ  ಈಶ್ವರ್ ಖಂಡ್ರೆ ಸೂಚನೆ

ದಕ್ಷಿಣ ಕನ್ನಡ, ಕೊಡಗು ಮೊದಲಾದ ಭಾಗದಲ್ಲಿ ಮಳೆಗೆ ಭೂಕುಸಿತಗಳು ಸಂಭವಿಸುತ್ತಿರುವ ಹಿನ್ನೆಲೆಯಲ್ಲಿ ಪಶ್ಚಿಮಘಟ್ಟದ…

8 hours ago

ರಾಜ್ಯದ ಹಲವೆಡೆ ಗುಡುಗು ಮಿಂಚು ಸಹಿತ ಮಳೆ ಸಾಧ್ಯತೆ | ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ

ರಾಜ್ಯದ ಹಲವೆಡೆ  ಗುಡುಗು ಮಿಂಚು ಸಹಿತ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ…

8 hours ago

ಸಿಂಹ ರಾಶಿಯನ್ನು ಪ್ರವೇಶಿಸಲಿರುವ ಮಂಗಳ | ಜೂನ್ 7 ರಿಂದ 3 ರಾಶಿಯವರಿಗೆ ಶುಭ ಫಲ

2025ರ ಜೂನ್ 7 ರಿಂದ ಮಂಗಳ ಗ್ರಹವು ಸಿಂಹ ರಾಶಿಗೆ ಪ್ರವೇಶ ಮಾಡಲಿರುವುದು…

8 hours ago

ಜೂನ್ 15 ರಂದು ಮಿಥುನ ರಾಶಿಗೆ ಸೂರ್ಯ | 12 ರಾಶಿಗಳ ಫಲಾಫಲ ಹೀಗಿದೆ….

ಹೆಚ್ಚಿನ ವಿವರಗಳನ್ನು ಪಡೆಯಲು ಜ್ಯೋತಿಷ್ಯರೊಂದಿಗೆ ಸಂಪರ್ಕಿಸಬಹುದು. 9535156490

1 day ago