Advertisement
ಸುದ್ದಿಗಳು

ಅಡ್ಡಮತದಾನ ಪ್ರಕರಣ : “ಆಟಿಯಲ್ಲಿ” ಕ್ರಮವಾಗುತ್ತಾ ?

Share

ಸುಳ್ಯ: ಡಿ ಸಿ ಸಿ ಬ್ಯಾಂಕ್ ನಿರ್ದೇಶಕ ಸ್ಥಾನಕ್ಕೆ ಸುಳ್ಯದಲ್ಲಿ ನಡೆದ ಅಡ್ಡಮತದಾನ  ಬಿಜೆಪಿ ಹಾಗೂ ಸಹಕಾರ ಭಾರತಿ, ಸಂಘಪರಿವಾರಕ್ಕೆ ಬಾರೀ ತಲೆನೋವು ತಂದಿದೆ. ಸುಳ್ಯದಂತಹ ಪ್ರದೇಶದಲ್ಲಿ ಅಡ್ಡಮತದಾನ ನಡೆದಿರುವುದು  ಪಕ್ಷಕ್ಕೆ ಹಾಗೂ ಸಂಘ ಪರಿವಾರಕ್ಕೆ ಮುಜುಗರ ತಂದಿತ್ತು. ಹೀಗಾಗಿ ಶಿಸ್ತು ಕ್ರಮ ಆಗಲೇಬೇಕು ಎಂಬ ಒತ್ತಾಯ ಕೇಳಿಬಂದಿತ್ತು. ಹಲವು ಬಾರಿ ಈ ಬಗ್ಗೆ ಪ್ರಯತ್ನ ನಡೆದರೂ ಆಗಿರಲಿಲ್ಲ. ಇದೀಗ ಆಟಿ ತಿಂಗಳಲ್ಲಿ ಈ ಪ್ರಕ್ರಿಯೆ ನಡೆಯುತ್ತಾ ? ಎಂಬುದನ್ನು ಬಿಜೆಪಿ ಕಾರ್ಯಕರ್ತರು ಪ್ರಶ್ನೆ ಮಾಡುತ್ತಾರೆ.

ಡಿಸಿಸಿ ಬ್ಯಾಂಕ್ ನಿರ್ದೇಶಕ ಸ್ಥಾನಕ್ಕೆ ಮತದಾನ ಮಾಡಿರುವ ಸಹಕಾರಿ ಸಂಘದ ನಿರ್ದೇಶಕರು ಹಾಗೂ ಅಧ್ಯಕ್ಷರು ಸೇರಿದಂತೆ ಎಲ್ಲಾ 17 ಮಂದಿ ರಾಜೀನಾಮೆ ನೀಡಬೇಕು ಎಂಬ ಸೂಚನೆ ಬಿಜೆಪಿ, ಸಂಘಪರಿವಾರ  ನೀಡಿದರೂ ಜಾರಿಯಾಗಿಲ್ಲ. ಯಾರೊಬ್ಬರೂ ರಾಜೀನಾಮೆ ನೀಡಿಲ್ಲ. ಇದೀಗ ಆಟಿ ತಿಂಗಳಲ್ಲಿ  ಈ ಪ್ರಕ್ರಿಯೆ ನಡೆಯುತ್ತಾ ? ಎಂಬ ಮತ್ತೊಂದು ಪ್ರಶ್ನೆ ಎದ್ದಿದೆ. ಹಲವು ಬಾರಿ ಮುಂದೂಡಿದ್ದ ಶಿಸ್ತು ಕ್ರಮ ಈ ಬಾರಿ ಆಗುತ್ತಾ ಎಂಬ ಪ್ರಶ್ನೆಗಳು ಕಾರ್ಯಕರ್ತರು ಕೇಳುತ್ತಾರೆ. ರಾಜೀನಾಮೆ ನೀಡದೇ ಇರುವವರನ್ನು ಪಕ್ಷದಿಂದ ಉಚ್ಛಾಟನೆ ಮಾಡಲಾಗುತ್ತದೆ ಎಂದು ಹೇಳಿದರೂ ಸೂಚನೆ ಜಾರಿಯಾಗಿಲ್ಲ.ಇಲ್ಲಿ 17 ಮಂದಿಯಲ್ಲಿ ಪಕ್ಷದ ಅಭ್ಯರ್ಥಿಗೆ ಮತ ಚಲಾವಣೆ ಮಾಡಿದವರಿಗೂ ಅಡ್ಡಮತದಾನ ಮಾಡಿದವರಿಗೂ ಒಂದೇ    ಮಾನದಂಡವೇ ಅಥವಾ ಬೇರೆ ಕ್ರಮಗಳು ಇವೆಯೇ ಎಂದೂ ಕಾರ್ಯಕರ್ತರೊಳಗೆ ಈ ಹಿಂದೆ ಚರ್ಚೆಯಾಗಿತ್ತು. ಇದೀಗ ಮತ್ತೆ ಅಡ್ಡಮತದಾನ ಪ್ರಕ್ರಿಯೆ ಚರ್ಚೆಯಾಗುತ್ತಿದೆ.

ಇದಕ್ಕೂ ಮುನ್ನ ಡಿಸಿಸಿ ಬ್ಯಾಂಕ್ ನಿರ್ದೇಶಕ ಸ್ಥಾನಕ್ಕೆ ಮತದಾನ ಮಾಡಿದ  ಎರಡು ಮಂದಿಯನ್ನು ಬಿಜೆಪಿಯು ಪಕ್ಷದ ಎಲ್ಲ ಹುದ್ದೆಗಳಿಂದ ಕೈ ಬಿಡಲಾಗಿದೆ ಎಂದು ಪ್ರಕಟಣೆ ನೀಡಲಾಗಿತ್ತು, ಆದರೆ ನಾವು ಬಿಜೆಪಿಯ ಯಾವುದೇ ಹುದ್ದೆಯಲ್ಲಿ ಇಲ್ಲ ಎನ್ನುವ ಮೂಲಕ ಮತ್ತೊಂದು ತಿರುವನ್ನು  ನೀಡಿದ್ದರು.

ಇದೀಗ ಅಡ್ಡ ಮತದಾನ ಮಾಡಿದ ಹಾಗೂ ಪಕ್ಷದ ಅಭ್ಯರ್ಥಿಗೆ ಮತದಾನ ಮಾಡಿದ ಎಲ್ಲರನ್ನೂ ಬಿಜೆಪಿಯು, ಸಂಘಪರಿವಾರವು  ಪಕ್ಷದಿಂದ, ಸಂಘಟನೆಯಿಂದ ಉಚ್ಛಾಟನೆ  ಯಾವಾಗ ಮಾಡುತ್ತದೆ, ಏನು ಕ್ರಮವಾಗುತ್ತದೆ ಎಂಬುದು ಕುತೂಹಲ ಹಾಗೂ ಪ್ರಶ್ನೆಯಾಗಿಯೇ ಉಳಿದಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಪಿಎಂ ಕಿಸಾನ್‌ 22ನೇ ಕಂತು ಬಿಡುಗಡೆಗೆ ಸಿದ್ಧತೆ | 9.32 ಕೋಟಿ ರೈತರಿಗೆ ₹18,640 ಕೋಟಿ ನೇರ ನಗದು

ಪಿಎಂ ಕಿಸಾನ್ ಯೋಜನೆಯ 22ನೇ ಕಂತಿನ ಹಣವನ್ನು ಪ್ರಧಾನಿ ಮೋದಿ ಬಿಡುಗಡೆ ಮಾಡಲಿದ್ದಾರೆ.…

13 hours ago

ಮಹಿಳಾ ಕೃಷಿಕರ ಪಾತ್ರ ಬಲಪಡಿಸಲು ಜಾಗತಿಕ ಸಮ್ಮೇಳನ | ದೆಹಲಿಯಲ್ಲಿ GCWAS-2026 ಆರಂಭ

ನವದೆಹಲಿಯಲ್ಲಿ ಮಹಿಳಾ ಕೃಷಿಕರ ಪಾತ್ರ ಬಲಪಡಿಸಲು ಜಾಗತಿಕ ಸಮ್ಮೇಳನ GCWAS-2026 ಆರಂಭವಾಗಿದೆ. ನೀತಿ,…

13 hours ago

ಗೇರುಹಣ್ಣಿನ ಮೌಲ್ಯವರ್ಧನೆಗೆ ಕೈಗಾರಿಕಾ ಸಂಪರ್ಕ ಸಭೆ : ವ್ಯಾಪಾರೀಕರಣಕ್ಕೆ ಹೊಸ ವೇದಿಕೆ

ದೇಶದಲ್ಲಿ ಉತ್ಪಾದನೆಯಾಗುವ ಗೇರುಹಣ್ಣಿನ ಕೇವಲ 1% ಮಾತ್ರ ಮೌಲ್ಯವರ್ಧನೆಗೆ ಬಳಸಲಾಗುತ್ತಿರುವ ಹಿನ್ನೆಲೆ ಪುತ್ತೂರಿನಲ್ಲಿ…

22 hours ago

ದಕ್ಷಿಣ ಕನ್ನಡದಲ್ಲಿ ಹೆಚ್ಚುತ್ತಿರುವ ಕಡಲ್ಕೊರೆತ ಗಂಭೀರತೆ : ಲೋಕಸಭೆಯಲ್ಲಿ ಧ್ವನಿಯೆತ್ತಿದ ಸಂಸದ

ದಕ್ಷಿಣ ಕನ್ನಡದಲ್ಲಿ ಶೇ.48ಕ್ಕೂ ಹೆಚ್ಚು ಕರಾವಳಿ ಕಡಲ್ಕೊರೆತಕ್ಕೆ ಒಳಗಾಗುತ್ತಿರುವ ಹಿನ್ನೆಲೆಯಲ್ಲಿ ಸಂಸದ ಲೋಕಸಭೆಯಲ್ಲಿ…

23 hours ago

ಭಾರತೀಯ ಕೊಕ್ಕೋಗೆ ಜಾಗತಿಕ ಮಟ್ಟದ ಮಾನ್ಯತೆ | ಈಗ ಮೌಲ್ಯವರ್ಧನೆಯೇ ರೈತರಿಗೆ ಹೊಸ ದಾರಿ

ಅಡಿಕೆ ತೋಟಗಳಲ್ಲಿ ಉಪಬೆಳೆಯಾಗಿ ಬೆಳೆಯುತ್ತಿರುವ ಕೊಕ್ಕೋಗೆ ಬೆಲೆ ಕುಸಿತ ದೊಡ್ಡ ಸವಾಲಾಗಿದೆ. ಮೌಲ್ಯವರ್ಧನೆ…

23 hours ago