Advertisement
ಸುದ್ದಿಗಳು

ಅಡ್ಡಮತದಾನ ಪ್ರಕರಣ : “ಆಟಿಯಲ್ಲಿ” ಕ್ರಮವಾಗುತ್ತಾ ?

Share

ಸುಳ್ಯ: ಡಿ ಸಿ ಸಿ ಬ್ಯಾಂಕ್ ನಿರ್ದೇಶಕ ಸ್ಥಾನಕ್ಕೆ ಸುಳ್ಯದಲ್ಲಿ ನಡೆದ ಅಡ್ಡಮತದಾನ  ಬಿಜೆಪಿ ಹಾಗೂ ಸಹಕಾರ ಭಾರತಿ, ಸಂಘಪರಿವಾರಕ್ಕೆ ಬಾರೀ ತಲೆನೋವು ತಂದಿದೆ. ಸುಳ್ಯದಂತಹ ಪ್ರದೇಶದಲ್ಲಿ ಅಡ್ಡಮತದಾನ ನಡೆದಿರುವುದು  ಪಕ್ಷಕ್ಕೆ ಹಾಗೂ ಸಂಘ ಪರಿವಾರಕ್ಕೆ ಮುಜುಗರ ತಂದಿತ್ತು. ಹೀಗಾಗಿ ಶಿಸ್ತು ಕ್ರಮ ಆಗಲೇಬೇಕು ಎಂಬ ಒತ್ತಾಯ ಕೇಳಿಬಂದಿತ್ತು. ಹಲವು ಬಾರಿ ಈ ಬಗ್ಗೆ ಪ್ರಯತ್ನ ನಡೆದರೂ ಆಗಿರಲಿಲ್ಲ. ಇದೀಗ ಆಟಿ ತಿಂಗಳಲ್ಲಿ ಈ ಪ್ರಕ್ರಿಯೆ ನಡೆಯುತ್ತಾ ? ಎಂಬುದನ್ನು ಬಿಜೆಪಿ ಕಾರ್ಯಕರ್ತರು ಪ್ರಶ್ನೆ ಮಾಡುತ್ತಾರೆ.

Advertisement
Advertisement

ಡಿಸಿಸಿ ಬ್ಯಾಂಕ್ ನಿರ್ದೇಶಕ ಸ್ಥಾನಕ್ಕೆ ಮತದಾನ ಮಾಡಿರುವ ಸಹಕಾರಿ ಸಂಘದ ನಿರ್ದೇಶಕರು ಹಾಗೂ ಅಧ್ಯಕ್ಷರು ಸೇರಿದಂತೆ ಎಲ್ಲಾ 17 ಮಂದಿ ರಾಜೀನಾಮೆ ನೀಡಬೇಕು ಎಂಬ ಸೂಚನೆ ಬಿಜೆಪಿ, ಸಂಘಪರಿವಾರ  ನೀಡಿದರೂ ಜಾರಿಯಾಗಿಲ್ಲ. ಯಾರೊಬ್ಬರೂ ರಾಜೀನಾಮೆ ನೀಡಿಲ್ಲ. ಇದೀಗ ಆಟಿ ತಿಂಗಳಲ್ಲಿ  ಈ ಪ್ರಕ್ರಿಯೆ ನಡೆಯುತ್ತಾ ? ಎಂಬ ಮತ್ತೊಂದು ಪ್ರಶ್ನೆ ಎದ್ದಿದೆ. ಹಲವು ಬಾರಿ ಮುಂದೂಡಿದ್ದ ಶಿಸ್ತು ಕ್ರಮ ಈ ಬಾರಿ ಆಗುತ್ತಾ ಎಂಬ ಪ್ರಶ್ನೆಗಳು ಕಾರ್ಯಕರ್ತರು ಕೇಳುತ್ತಾರೆ. ರಾಜೀನಾಮೆ ನೀಡದೇ ಇರುವವರನ್ನು ಪಕ್ಷದಿಂದ ಉಚ್ಛಾಟನೆ ಮಾಡಲಾಗುತ್ತದೆ ಎಂದು ಹೇಳಿದರೂ ಸೂಚನೆ ಜಾರಿಯಾಗಿಲ್ಲ.ಇಲ್ಲಿ 17 ಮಂದಿಯಲ್ಲಿ ಪಕ್ಷದ ಅಭ್ಯರ್ಥಿಗೆ ಮತ ಚಲಾವಣೆ ಮಾಡಿದವರಿಗೂ ಅಡ್ಡಮತದಾನ ಮಾಡಿದವರಿಗೂ ಒಂದೇ    ಮಾನದಂಡವೇ ಅಥವಾ ಬೇರೆ ಕ್ರಮಗಳು ಇವೆಯೇ ಎಂದೂ ಕಾರ್ಯಕರ್ತರೊಳಗೆ ಈ ಹಿಂದೆ ಚರ್ಚೆಯಾಗಿತ್ತು. ಇದೀಗ ಮತ್ತೆ ಅಡ್ಡಮತದಾನ ಪ್ರಕ್ರಿಯೆ ಚರ್ಚೆಯಾಗುತ್ತಿದೆ.

Advertisement

ಇದಕ್ಕೂ ಮುನ್ನ ಡಿಸಿಸಿ ಬ್ಯಾಂಕ್ ನಿರ್ದೇಶಕ ಸ್ಥಾನಕ್ಕೆ ಮತದಾನ ಮಾಡಿದ  ಎರಡು ಮಂದಿಯನ್ನು ಬಿಜೆಪಿಯು ಪಕ್ಷದ ಎಲ್ಲ ಹುದ್ದೆಗಳಿಂದ ಕೈ ಬಿಡಲಾಗಿದೆ ಎಂದು ಪ್ರಕಟಣೆ ನೀಡಲಾಗಿತ್ತು, ಆದರೆ ನಾವು ಬಿಜೆಪಿಯ ಯಾವುದೇ ಹುದ್ದೆಯಲ್ಲಿ ಇಲ್ಲ ಎನ್ನುವ ಮೂಲಕ ಮತ್ತೊಂದು ತಿರುವನ್ನು  ನೀಡಿದ್ದರು.

ಇದೀಗ ಅಡ್ಡ ಮತದಾನ ಮಾಡಿದ ಹಾಗೂ ಪಕ್ಷದ ಅಭ್ಯರ್ಥಿಗೆ ಮತದಾನ ಮಾಡಿದ ಎಲ್ಲರನ್ನೂ ಬಿಜೆಪಿಯು, ಸಂಘಪರಿವಾರವು  ಪಕ್ಷದಿಂದ, ಸಂಘಟನೆಯಿಂದ ಉಚ್ಛಾಟನೆ  ಯಾವಾಗ ಮಾಡುತ್ತದೆ, ಏನು ಕ್ರಮವಾಗುತ್ತದೆ ಎಂಬುದು ಕುತೂಹಲ ಹಾಗೂ ಪ್ರಶ್ನೆಯಾಗಿಯೇ ಉಳಿದಿದೆ.

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಛಾತಿ ಇಲ್ಲದ ನಾಗರಿಕರನ್ನು ರೂಪಿಸುತ್ತಿರುವ ಶಿಕ್ಷಣ

ನಮ್ಮ ಮುಂದಿನ ಮಕ್ಕಳನ್ನು ಸ್ವಾವಲಂಬಿಗಳಾಗಿ ಮಾಡಬೇಕೇ ಹೊರತು ಪರಾವಲಂಬಿಗಳಾಗಿ ಮಾಡಬಾರದು. ಜನರು ಆತ್ಮಾಭಿಮಾನದಿಂದ…

5 hours ago

ಮೇ.11 ವಳಲಂಬೆಯಲ್ಲಿ ಯಕ್ಷಗಾನ ಬಯಲಾಟ | ಕಲಾವಿದ ಉಬರಡ್ಕ ಉಮೇಶ್‌ ಶೆಟ್ಟಿಯವರಿಗೆ ಗೌರವಾರ್ಪಣೆ |

ಯಕ್ಷ ಕಲಾಭಿಮಾನಿ ಮಿತ್ರರು ಎಲಿಮಲೆ-ಗುತ್ತಿಗಾರು ಇವರ ವತಿಯಿಂದ ಯಕ್ಷಗಾನ ಕಲಾವಿದ ಉಬರಡ್ಕ ಉಮೇಶ್‌…

5 hours ago

ಮಲೆನಾಡು ಕಳೆದು ಹೋಗಿದೆ….! | ಯಾರಾದರೂ “ಮಲೆನಾಡಿಗೆ” ಈ ಮೊದಲಿನ “ಮಳೆಗಾಲ” ತಂದು ಕೊಡುವಿರಾ…. !

ಮಲೆನಾಡಿನ ಸೊಗಬು ಕಣ್ಮರೆಯಾಗುತ್ತಿರುವುದು ಏಕೆ? ಈ ಬಗ್ಗೆ ಬರೆದಿದ್ದಾರೆ ಪ್ರಬಂಧ ಅಂಬುತೀರ್ಥ.

9 hours ago

Karnataka Weather | 07-05-2024 | ಮಳೆಯ ಸೂಚನೆ ಬಂದೇ ಬಿಟ್ಟಿದೆ |ಹಲವು ಕಡೆ ಗುಡುಗು-ಸಿಡಿಲು ಇರಬಹುದು, ಇರಲಿ ಎಚ್ಚರಿಕೆ |

ಮೇ 9ರಿಂದ ಉತ್ತರ ಒಳನಾಡು ಭಾಗಗಳಲ್ಲಿಯೂ ಮಳೆಯಾಗುವ ಲಕ್ಷಣಗಳಿವೆ.ಕರಾವಳಿ ಭಾಗಗಳಲ್ಲಿ ಈಗಾಗಲೇ ಮಳೆ…

9 hours ago

ಆಹಾರ ಬದಲಾವಣೆಯಿಂದ ವಾತಾವರಣದ ತಾಪಮಾನ ಏರಿಕೆಯ ಸಮಸ್ಯೆಗೂ ಪರಿಹಾರ…! | ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಡಾ.ಖಾದರ್ ಪ್ರತಿಪಾದನೆ |

ಆಹಾರ ಬದಲಾವಣೆಯ ಕಾರಣದಿಂದ ವಾತಾವರಣದ ತಾಪಮಾನ ನಿಯಂತ್ರಣ ಸಾಧ್ಯ..ಹೀಗೆಂದು ಹೇಳಿದಾಗ, ಎಲ್ಲರೂ ಅಚ್ಚರಿ…

14 hours ago

Karnataka Weather | 06-05-2024 | ಮೋಡದ ವಾತಾವರಣ | ಅಲ್ಲಲ್ಲಿ ಮಳೆ ಹತ್ತಿರವಾಯ್ತು… |

ಮೇ 7 ರಿಂದ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಗುಡುಗು ಸಹಿತ ಮಳೆ…

1 day ago