Advertisement
ಸುದ್ದಿಗಳು

ಅಡ್ಡಮತದಾನ ಪ್ರಕರಣ : “ಆಟಿಯಲ್ಲಿ” ಕ್ರಮವಾಗುತ್ತಾ ?

Share

ಸುಳ್ಯ: ಡಿ ಸಿ ಸಿ ಬ್ಯಾಂಕ್ ನಿರ್ದೇಶಕ ಸ್ಥಾನಕ್ಕೆ ಸುಳ್ಯದಲ್ಲಿ ನಡೆದ ಅಡ್ಡಮತದಾನ  ಬಿಜೆಪಿ ಹಾಗೂ ಸಹಕಾರ ಭಾರತಿ, ಸಂಘಪರಿವಾರಕ್ಕೆ ಬಾರೀ ತಲೆನೋವು ತಂದಿದೆ. ಸುಳ್ಯದಂತಹ ಪ್ರದೇಶದಲ್ಲಿ ಅಡ್ಡಮತದಾನ ನಡೆದಿರುವುದು  ಪಕ್ಷಕ್ಕೆ ಹಾಗೂ ಸಂಘ ಪರಿವಾರಕ್ಕೆ ಮುಜುಗರ ತಂದಿತ್ತು. ಹೀಗಾಗಿ ಶಿಸ್ತು ಕ್ರಮ ಆಗಲೇಬೇಕು ಎಂಬ ಒತ್ತಾಯ ಕೇಳಿಬಂದಿತ್ತು. ಹಲವು ಬಾರಿ ಈ ಬಗ್ಗೆ ಪ್ರಯತ್ನ ನಡೆದರೂ ಆಗಿರಲಿಲ್ಲ. ಇದೀಗ ಆಟಿ ತಿಂಗಳಲ್ಲಿ ಈ ಪ್ರಕ್ರಿಯೆ ನಡೆಯುತ್ತಾ ? ಎಂಬುದನ್ನು ಬಿಜೆಪಿ ಕಾರ್ಯಕರ್ತರು ಪ್ರಶ್ನೆ ಮಾಡುತ್ತಾರೆ.

Advertisement

ಡಿಸಿಸಿ ಬ್ಯಾಂಕ್ ನಿರ್ದೇಶಕ ಸ್ಥಾನಕ್ಕೆ ಮತದಾನ ಮಾಡಿರುವ ಸಹಕಾರಿ ಸಂಘದ ನಿರ್ದೇಶಕರು ಹಾಗೂ ಅಧ್ಯಕ್ಷರು ಸೇರಿದಂತೆ ಎಲ್ಲಾ 17 ಮಂದಿ ರಾಜೀನಾಮೆ ನೀಡಬೇಕು ಎಂಬ ಸೂಚನೆ ಬಿಜೆಪಿ, ಸಂಘಪರಿವಾರ  ನೀಡಿದರೂ ಜಾರಿಯಾಗಿಲ್ಲ. ಯಾರೊಬ್ಬರೂ ರಾಜೀನಾಮೆ ನೀಡಿಲ್ಲ. ಇದೀಗ ಆಟಿ ತಿಂಗಳಲ್ಲಿ  ಈ ಪ್ರಕ್ರಿಯೆ ನಡೆಯುತ್ತಾ ? ಎಂಬ ಮತ್ತೊಂದು ಪ್ರಶ್ನೆ ಎದ್ದಿದೆ. ಹಲವು ಬಾರಿ ಮುಂದೂಡಿದ್ದ ಶಿಸ್ತು ಕ್ರಮ ಈ ಬಾರಿ ಆಗುತ್ತಾ ಎಂಬ ಪ್ರಶ್ನೆಗಳು ಕಾರ್ಯಕರ್ತರು ಕೇಳುತ್ತಾರೆ. ರಾಜೀನಾಮೆ ನೀಡದೇ ಇರುವವರನ್ನು ಪಕ್ಷದಿಂದ ಉಚ್ಛಾಟನೆ ಮಾಡಲಾಗುತ್ತದೆ ಎಂದು ಹೇಳಿದರೂ ಸೂಚನೆ ಜಾರಿಯಾಗಿಲ್ಲ.ಇಲ್ಲಿ 17 ಮಂದಿಯಲ್ಲಿ ಪಕ್ಷದ ಅಭ್ಯರ್ಥಿಗೆ ಮತ ಚಲಾವಣೆ ಮಾಡಿದವರಿಗೂ ಅಡ್ಡಮತದಾನ ಮಾಡಿದವರಿಗೂ ಒಂದೇ    ಮಾನದಂಡವೇ ಅಥವಾ ಬೇರೆ ಕ್ರಮಗಳು ಇವೆಯೇ ಎಂದೂ ಕಾರ್ಯಕರ್ತರೊಳಗೆ ಈ ಹಿಂದೆ ಚರ್ಚೆಯಾಗಿತ್ತು. ಇದೀಗ ಮತ್ತೆ ಅಡ್ಡಮತದಾನ ಪ್ರಕ್ರಿಯೆ ಚರ್ಚೆಯಾಗುತ್ತಿದೆ.

ಇದಕ್ಕೂ ಮುನ್ನ ಡಿಸಿಸಿ ಬ್ಯಾಂಕ್ ನಿರ್ದೇಶಕ ಸ್ಥಾನಕ್ಕೆ ಮತದಾನ ಮಾಡಿದ  ಎರಡು ಮಂದಿಯನ್ನು ಬಿಜೆಪಿಯು ಪಕ್ಷದ ಎಲ್ಲ ಹುದ್ದೆಗಳಿಂದ ಕೈ ಬಿಡಲಾಗಿದೆ ಎಂದು ಪ್ರಕಟಣೆ ನೀಡಲಾಗಿತ್ತು, ಆದರೆ ನಾವು ಬಿಜೆಪಿಯ ಯಾವುದೇ ಹುದ್ದೆಯಲ್ಲಿ ಇಲ್ಲ ಎನ್ನುವ ಮೂಲಕ ಮತ್ತೊಂದು ತಿರುವನ್ನು  ನೀಡಿದ್ದರು.

ಇದೀಗ ಅಡ್ಡ ಮತದಾನ ಮಾಡಿದ ಹಾಗೂ ಪಕ್ಷದ ಅಭ್ಯರ್ಥಿಗೆ ಮತದಾನ ಮಾಡಿದ ಎಲ್ಲರನ್ನೂ ಬಿಜೆಪಿಯು, ಸಂಘಪರಿವಾರವು  ಪಕ್ಷದಿಂದ, ಸಂಘಟನೆಯಿಂದ ಉಚ್ಛಾಟನೆ  ಯಾವಾಗ ಮಾಡುತ್ತದೆ, ಏನು ಕ್ರಮವಾಗುತ್ತದೆ ಎಂಬುದು ಕುತೂಹಲ ಹಾಗೂ ಪ್ರಶ್ನೆಯಾಗಿಯೇ ಉಳಿದಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ರಾಜ್ಯದಲ್ಲಿ ಬಿಸಿಲು ಬಿಸಿ ತೀವ್ರ : ಮೈಸೂರಿನಲ್ಲಿ ಸನ್ ಸ್ಟ್ರೋಕ್ ವಾರ್ಡ್ ಆರಂಭಿಸಿದ ಆಸ್ಪತ್ರೆ

ತಾಪಮಾನ ಏರಿಕೆಯಿಂದ ಮೈಸೂರಿನ ಕೆ.ಆರ್. ಆಸ್ಪತ್ರೆಯಲ್ಲಿ 30 ಹಾಸಿಗೆಗಳ ಸನ್ ಸ್ಟ್ರೋಕ್ ವಾರ್ಡ್…

9 hours ago

ರೈತರು ಇಂಧನದಾತರಾಗಬೇಕು – ಭೂಮಿ ಉಳಿಸಿ ಸಮ್ಮೇಳನದಲ್ಲಿ ಸಂದೇಶ

ಭೂಮಿ ಉಳಿಸಿ ಸಮ್ಮೇಳನದಲ್ಲಿ ನಿತಿನ್ ಗಡ್ಕರಿ, ರೈತರು ಇಂಧನ ಉತ್ಪಾದನೆಗೆ ಕೈಜೋಡಿಸಿದರೆ ಮಾಲಿನ್ಯ…

9 hours ago

ರೈತರ ಆದಾಯ ಹೆಚ್ಚಿಸಲು ಸಮಗ್ರ ಕೃಷಿ ಮಾದರಿ ಅಗತ್ಯ

ರೈತರಿಗೆ ಸರಳ ಹಣಕಾಸು ವ್ಯವಸ್ಥೆ ಅಗತ್ಯವಿದ್ದು, ಸಮಗ್ರ ಕೃಷಿ ಮಾದರಿಯಿಂದ ಆದಾಯ ಹೆಚ್ಚಿಸಬಹುದು…

9 hours ago

ಹವಾಮಾನ ವರದಿ | 23-04-2026 | ಏಪ್ರಿಲ್ 25 ರಿಂದ ಮಳೆಯ ಸಾಧ್ಯತೆ ಹೆಚ್ಚು

ರಾಜ್ಯದಲ್ಲಿ ಬಿಸಿಲು ಮುಂದುವರಿದರೂ, ಏಪ್ರಿಲ್ 25ರಿಂದ ಮಳೆಯ ಚಟುವಟಿಕೆ ಹೆಚ್ಚಾಗುವ ಸೂಚನೆ ಇದೆ.…

9 hours ago

ಹವಾಮಾನ ವರದಿ | 22-04-2026 | ಎ.25ರಿಂದ ಮತ್ತೆ ಮಳೆ – ಯಾವ ಭಾಗಕ್ಕೆ ಏನು ಮುನ್ಸೂಚನೆ?

ರಾಜ್ಯದಲ್ಲಿ ಮುಂದಿನ ಎರಡು ದಿನ ಮಳೆಯ ಪ್ರಮಾಣ ಕಡಿಮೆ ಇರಲಿದ್ದು, ಏಪ್ರಿಲ್ 25ರಿಂದ…

1 day ago

ಹವಾಮಾನ ವರದಿ | 21-04-2026 | ಕರಾವಳಿ-ಮಲೆನಾಡಿನಲ್ಲಿ ಮಳೆ ಜೋರಾಗಲಿದೆ, ಉತ್ತರ ಒಳನಾಡಿಗೂ ಗುಡುಗು ಮಳೆ..!

ರಾಜ್ಯದ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆ ಮುಂದುವರಿಯಲಿದ್ದು, ಉತ್ತರ ಒಳನಾಡಿನಲ್ಲಿ ಏಪ್ರಿಲ್ 25ರವರೆಗೆ…

2 days ago